Homeಮುಖಪುಟಕನ್ಹಯ್ಯಾ ಜೊತೆಗೆ ದೇಶದಾದ್ಯಂತ ಆಡಳಿತ ವಿರೋಧಿ ಚಳವಳಿ ಕಟ್ಟುತ್ತೇನೆ: ಜಿಗ್ನೇಶ್ ಮೆವಾನಿ

ಕನ್ಹಯ್ಯಾ ಜೊತೆಗೆ ದೇಶದಾದ್ಯಂತ ಆಡಳಿತ ವಿರೋಧಿ ಚಳವಳಿ ಕಟ್ಟುತ್ತೇನೆ: ಜಿಗ್ನೇಶ್ ಮೆವಾನಿ

- Advertisement -
- Advertisement -

ಕಾಂಗ್ರೆಸ್‌ಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಸ್ವತಂತ್ರ ಶಾಸಕ ಜಿಗ್ನೇಶ್ ಮೇವಾನಿ ಹೇಳಿದ್ದು, ಇತ್ತೀಚೆಗೆ ಪಕ್ಷ ಸೇರಿದ ಕನ್ಹಯ್ಯಾ ಕುಮಾರ್ ಜೊತೆಗೆ ದೇಶದ ವಿವಿಧ ಭಾಗಗಳಲ್ಲಿ ಆಡಳಿತ ವಿರೋಧಿ ಚಳವಳಿಯನ್ನು ಕಟ್ಟಲು ತಳಮಟ್ಟದಲ್ಲಿ ಯುವಕರೊಂದಿಗೆ ತೊಡಗಿಸಿಕೊಳ್ಳುವುದಾಗಿ ಹೇಳಿದ್ದಾರೆ.

“2022ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ನಿಂದ ಸ್ಪರ್ಧಿಸುತ್ತೇನೆ. ನಾವು ರಾಜ್ಯದ ಜನರನ್ನು ತಲುಪುತ್ತೇವೆ ಮತ್ತು ಅವರೊಂದಿಗೆ ತೊಡಗಿಸಿಕೊಳ್ಳುತ್ತೇವೆ. ಗುಜರಾತ್‌ನಲ್ಲಿ ಒಂದು ಸಾಮೂಹಿಕ ಚಳುವಳಿಯನ್ನು ಕಟ್ಟುವುದು ನಮ್ಮ ಗುರಿಯಾಗಿದೆ. ಈ ಚಳುವಳಿಯು ಬಿಜೆಪಿ ಆಡಳಿತದಲ್ಲಿ ದೇಶವನ್ನು ಹಾಳಾಗದಂತೆ ರಕ್ಷಿಸಲು ಸಹಾಯ ಮಾಡುತ್ತದೆ. ನಾವು ನೀರು, ಆರೋಗ್ಯ, ನೈರ್ಮಲ್ಯ, ಶಿಕ್ಷಣ ಮತ್ತು ಮಾನವ ಹಕ್ಕುಗಳ ವಿಷಯಗಳ ಕುರಿತು ಮಾತನಾಡುತ್ತೇವೆ” ಎಂದು ಮೇವಾನಿ ಹೇಳಿದ್ದಾರೆ.

ಇದನ್ನೂ ಓದಿ: ಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರದ ಕೋವಿಡ್ ದುರಾಡಳಿತವು ರಾಜ್ಯದ ಆರೋಗ್ಯ ಮೂಲಸೌಕರ್ಯಗಳ ಇರುವ ಕಳಪೆ ಪರಿಸ್ಥಿತಿಯನ್ನು ಬಹಿರಂಗಪಡಿಸಿದೆ. ನೋಟು ರದ್ದತಿ, ಲಾಕ್‌ಡೌನ್ ಮತ್ತು ಜಿಎಸ್‌ಟಿಯಿಂದಾಗಿ ರಾಜ್ಯದ ಸಣ್ಣ ಉದ್ಯಮಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಷ್ಟೇ ಅಲ್ಲದೆ, ಗುಜರಾತ್‌ನಲ್ಲಿ ಭಾರೀ ಒಳಜಗಳ ಮತ್ತು ದುರಾಡಳಿತದ ನಡುವೆ ಬಿಜೆಪಿ ಹೆಣಗಾಡುತ್ತಿದೆ. ಪ್ರಧಾನಿಯವರ ತವರು ರಾಜ್ಯದಲ್ಲಿಯೇ ಬಿಜೆಪಿ  ಭಾರೀ ಗೊಂದಲದಲ್ಲಿದೆ. ಇದರಿಂದ ಬಿಜೆಪಿ ಭಾರೀ ಹಿನ್ನಡೆ ಅನುಭವಿಸುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

1998 ರಿಂದ ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಆದರೆ, ಅಂತಿಮವಾಗಿ ಬಿಜೆಪಿಯನ್ನು ಕಾಂಗ್ರೆಸ್‌ನಿಂದ ತೊಡೆದು ಹಾಕುವಲ್ಲಿ ಯಶಸ್ವಿಯಾಗುತ್ತದೆ. 2017ರ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಾಧನೆ ಅದ್ಭುತವಾಗಿದೆ. ನಾವು ಬಿಜೆಪಿಗಿಂತ ಕೇವಲ 19 ಸ್ಥಾನ ಕಡಿಮೆ ಗೆದ್ದಿದ್ದೇವೆ. ನಾವು ಈಗ ಸರಿದೂಗಿಸಬೇಕಾದ ಅಂತರವು ಒಂದು ಸಣ್ಣ ಸಂಖ್ಯೆಯಾಗಿದೆ. ಇದು ನಮಗೆ ಆತ್ಮವಿಶ್ವಾಸವನ್ನು ನೀಡುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2017 ರ ರಾಜ್ಯ -ವಿಧಾನಸಭಾ ಚುನಾವಣೆಯಲ್ಲಿ, ಒಟ್ಟು 182 ಸ್ಥಾನಗಳ ಪೈಕಿ ಬಿಜೆಪಿ 99 ಸ್ಥಾನಗಳನ್ನು ಗೆದ್ದಿದೆ. ಇದು ಸದನದಲ್ಲಿ ಸರಳ ಬಹುಮತಕ್ಕೆ ಬೇಕಾಗಿರುವುದಕ್ಕಿಂತ ಕೇವಲ ಏಳು ಸ್ಥಾನಗಳಷ್ಟೆ ಗೆದ್ದಿದೆ. ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳು 80 ಸ್ಥಾನಗಳನ್ನು ಗೆದ್ದಿವೆ. 2012ಕ್ಕೆ ಹೋಲಿಸಿದರೆ ಬಿಜೆಪಿ ಶೇಕಡಾ 49.1 ರಷ್ಟು ಮತಗಳನ್ನು ಪಡೆದುಕೊಂಡಿದೆ, ಆದರೆ 16 ಸ್ಥಾನಗಳನ್ನು ಕಳೆದುಕೊಂಡಿದೆ. ಕಾಂಗ್ರೆಸ್‌ 16 ಸ್ಥಾನಗಳಲ್ಲಿ ಜಿಗಿತ ಸಾಧಿಸಿದೆ

ಇದನ್ನೂ ಓದಿ: ಉತ್ತರ ಪ್ರದೇಶ: ಗರ್ಭಪಾತದ ವೇಳೆ ಅತ್ಯಾಚಾರ ಸಂತ್ರಸ್ತೆ ಸಾವು, ವೈದ್ಯ ಸೇರಿ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...