Homeಮುಖಪುಟಕನ್ಹಯ್ಯಾ ಜೊತೆಗೆ ದೇಶದಾದ್ಯಂತ ಆಡಳಿತ ವಿರೋಧಿ ಚಳವಳಿ ಕಟ್ಟುತ್ತೇನೆ: ಜಿಗ್ನೇಶ್ ಮೆವಾನಿ

ಕನ್ಹಯ್ಯಾ ಜೊತೆಗೆ ದೇಶದಾದ್ಯಂತ ಆಡಳಿತ ವಿರೋಧಿ ಚಳವಳಿ ಕಟ್ಟುತ್ತೇನೆ: ಜಿಗ್ನೇಶ್ ಮೆವಾನಿ

- Advertisement -
- Advertisement -

ಕಾಂಗ್ರೆಸ್‌ಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಸ್ವತಂತ್ರ ಶಾಸಕ ಜಿಗ್ನೇಶ್ ಮೇವಾನಿ ಹೇಳಿದ್ದು, ಇತ್ತೀಚೆಗೆ ಪಕ್ಷ ಸೇರಿದ ಕನ್ಹಯ್ಯಾ ಕುಮಾರ್ ಜೊತೆಗೆ ದೇಶದ ವಿವಿಧ ಭಾಗಗಳಲ್ಲಿ ಆಡಳಿತ ವಿರೋಧಿ ಚಳವಳಿಯನ್ನು ಕಟ್ಟಲು ತಳಮಟ್ಟದಲ್ಲಿ ಯುವಕರೊಂದಿಗೆ ತೊಡಗಿಸಿಕೊಳ್ಳುವುದಾಗಿ ಹೇಳಿದ್ದಾರೆ.

“2022ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ನಿಂದ ಸ್ಪರ್ಧಿಸುತ್ತೇನೆ. ನಾವು ರಾಜ್ಯದ ಜನರನ್ನು ತಲುಪುತ್ತೇವೆ ಮತ್ತು ಅವರೊಂದಿಗೆ ತೊಡಗಿಸಿಕೊಳ್ಳುತ್ತೇವೆ. ಗುಜರಾತ್‌ನಲ್ಲಿ ಒಂದು ಸಾಮೂಹಿಕ ಚಳುವಳಿಯನ್ನು ಕಟ್ಟುವುದು ನಮ್ಮ ಗುರಿಯಾಗಿದೆ. ಈ ಚಳುವಳಿಯು ಬಿಜೆಪಿ ಆಡಳಿತದಲ್ಲಿ ದೇಶವನ್ನು ಹಾಳಾಗದಂತೆ ರಕ್ಷಿಸಲು ಸಹಾಯ ಮಾಡುತ್ತದೆ. ನಾವು ನೀರು, ಆರೋಗ್ಯ, ನೈರ್ಮಲ್ಯ, ಶಿಕ್ಷಣ ಮತ್ತು ಮಾನವ ಹಕ್ಕುಗಳ ವಿಷಯಗಳ ಕುರಿತು ಮಾತನಾಡುತ್ತೇವೆ” ಎಂದು ಮೇವಾನಿ ಹೇಳಿದ್ದಾರೆ.

ಇದನ್ನೂ ಓದಿ: ಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರದ ಕೋವಿಡ್ ದುರಾಡಳಿತವು ರಾಜ್ಯದ ಆರೋಗ್ಯ ಮೂಲಸೌಕರ್ಯಗಳ ಇರುವ ಕಳಪೆ ಪರಿಸ್ಥಿತಿಯನ್ನು ಬಹಿರಂಗಪಡಿಸಿದೆ. ನೋಟು ರದ್ದತಿ, ಲಾಕ್‌ಡೌನ್ ಮತ್ತು ಜಿಎಸ್‌ಟಿಯಿಂದಾಗಿ ರಾಜ್ಯದ ಸಣ್ಣ ಉದ್ಯಮಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಷ್ಟೇ ಅಲ್ಲದೆ, ಗುಜರಾತ್‌ನಲ್ಲಿ ಭಾರೀ ಒಳಜಗಳ ಮತ್ತು ದುರಾಡಳಿತದ ನಡುವೆ ಬಿಜೆಪಿ ಹೆಣಗಾಡುತ್ತಿದೆ. ಪ್ರಧಾನಿಯವರ ತವರು ರಾಜ್ಯದಲ್ಲಿಯೇ ಬಿಜೆಪಿ  ಭಾರೀ ಗೊಂದಲದಲ್ಲಿದೆ. ಇದರಿಂದ ಬಿಜೆಪಿ ಭಾರೀ ಹಿನ್ನಡೆ ಅನುಭವಿಸುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

1998 ರಿಂದ ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಆದರೆ, ಅಂತಿಮವಾಗಿ ಬಿಜೆಪಿಯನ್ನು ಕಾಂಗ್ರೆಸ್‌ನಿಂದ ತೊಡೆದು ಹಾಕುವಲ್ಲಿ ಯಶಸ್ವಿಯಾಗುತ್ತದೆ. 2017ರ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಾಧನೆ ಅದ್ಭುತವಾಗಿದೆ. ನಾವು ಬಿಜೆಪಿಗಿಂತ ಕೇವಲ 19 ಸ್ಥಾನ ಕಡಿಮೆ ಗೆದ್ದಿದ್ದೇವೆ. ನಾವು ಈಗ ಸರಿದೂಗಿಸಬೇಕಾದ ಅಂತರವು ಒಂದು ಸಣ್ಣ ಸಂಖ್ಯೆಯಾಗಿದೆ. ಇದು ನಮಗೆ ಆತ್ಮವಿಶ್ವಾಸವನ್ನು ನೀಡುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2017 ರ ರಾಜ್ಯ -ವಿಧಾನಸಭಾ ಚುನಾವಣೆಯಲ್ಲಿ, ಒಟ್ಟು 182 ಸ್ಥಾನಗಳ ಪೈಕಿ ಬಿಜೆಪಿ 99 ಸ್ಥಾನಗಳನ್ನು ಗೆದ್ದಿದೆ. ಇದು ಸದನದಲ್ಲಿ ಸರಳ ಬಹುಮತಕ್ಕೆ ಬೇಕಾಗಿರುವುದಕ್ಕಿಂತ ಕೇವಲ ಏಳು ಸ್ಥಾನಗಳಷ್ಟೆ ಗೆದ್ದಿದೆ. ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳು 80 ಸ್ಥಾನಗಳನ್ನು ಗೆದ್ದಿವೆ. 2012ಕ್ಕೆ ಹೋಲಿಸಿದರೆ ಬಿಜೆಪಿ ಶೇಕಡಾ 49.1 ರಷ್ಟು ಮತಗಳನ್ನು ಪಡೆದುಕೊಂಡಿದೆ, ಆದರೆ 16 ಸ್ಥಾನಗಳನ್ನು ಕಳೆದುಕೊಂಡಿದೆ. ಕಾಂಗ್ರೆಸ್‌ 16 ಸ್ಥಾನಗಳಲ್ಲಿ ಜಿಗಿತ ಸಾಧಿಸಿದೆ

ಇದನ್ನೂ ಓದಿ: ಉತ್ತರ ಪ್ರದೇಶ: ಗರ್ಭಪಾತದ ವೇಳೆ ಅತ್ಯಾಚಾರ ಸಂತ್ರಸ್ತೆ ಸಾವು, ವೈದ್ಯ ಸೇರಿ ನಾಲ್ವರ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...