Homeಕರೋನಾ ತಲ್ಲಣ10 ಲಕ್ಷ ಭಾರತೀಯರು ಈಗಾಗಲೇ ಕೋವಿಡ್‌ಗೆ ಬಲಿಯಾಗಿದ್ದಾರೆ, ಶೇ. 80ರಷ್ಟು ಸಾವು ದಾಖಲಾಗುತ್ತಿಲ್ಲ: ಗಣಿತ ತಜ್ಞ...

10 ಲಕ್ಷ ಭಾರತೀಯರು ಈಗಾಗಲೇ ಕೋವಿಡ್‌ಗೆ ಬಲಿಯಾಗಿದ್ದಾರೆ, ಶೇ. 80ರಷ್ಟು ಸಾವು ದಾಖಲಾಗುತ್ತಿಲ್ಲ: ಗಣಿತ ತಜ್ಞ ಮುರಾದ್ ಬನಾಜಿ

- Advertisement -
- Advertisement -

ಲಂಡನ್‌ನ ಮಿಡಲ್‌ಸೆಕ್ಸ್ ವಿಶ್ವವಿದ್ಯಾಲಯದ ಹಿರಿಯ ಗಣಿತ ಉಪನ್ಯಾಸಕರೊಬ್ಬರು, ಕರಣ್ ಥಾಪರ್‌ಗೆ ನೀಡಿದ ಸಂದರ್ಶನದಲ್ಲಿ, ಭಾರತದ ಶೇ.80ರಷ್ಟು ಕೋವಿಡ್ ಸಾವುಗಳು ದಾಖಲಾಗಿಲ್ಲ ಅಥವಾ ಅವನ್ನು ಸರ್ಕಾರಗಳು ಮುಚ್ಚಿ ಹಾಕಿವೆ ಎಂದು ಹೇಳಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಮಾರ್ಚ್ 2020ರಿಂದ ಭಾರತದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ಪಥವನ್ನು (ಟ್ರಾಜೆಕ್ಟರಿ) ಸೂಕ್ಷ್ಮವಾಗಿ ಗಮನಿಸುತ್ತಿರುವ ಲಂಡನ್‌ನ ಮಿಡಲ್‌ಸೆಕ್ಸ್ ವಿಶ್ವವಿದ್ಯಾಲಯದ ಗಣಿತಶಾಸ್ತ್ರದ ಹಿರಿಯ ಉಪನ್ಯಾಸಕ, ಭಾರತೀಯ ಮೂಲದ ಮುರಾದ್ ಬನಾಜಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

2021ರ ಮೇ 8 ರ ಹೊತ್ತಿಗೆ, ಸರ್ಕಾರದ ಆರೋಗ್ಯ ಇಲಾಖೆಯ ಅಧಿಕೃತ ಸಾವಿನ ಸಂಖ್ಯೆ 2,38,000 ಕ್ಕಿಂತ ಹೆಚ್ಚಿದೆ. ಮುರಾದ್ ಬನಾಜಿ ಹೇಳುವಂತೆ, ದಾಖಲಾಗದ ಸಾವುಗಳು ಐದು ಪಟ್ಟು ಹೆಚ್ಚಿರುವ ಸಾಧ್ಯತೆ ಇದ್ದೇ ಇದೆ, ಒಟ್ಟು ಕೋವಿಡ್ ಸಾವಿನ ಸಂಖ್ಯೆ (ಅಧಿಕೃತ ಮತ್ತು ದಾಖಲೆಯಿಲ್ಲದ ಸಾವುಗಳುನ್ನು ಸೇರಿಸಿ) ಒಂದು ಮಿಲಿಯನ್ (ಹತ್ತು ಲಕ್ಷ) ದಾಟಿದೆ ಎಂದಿದ್ದಾರೆ.

ದಿ ವೈರ್‌ಗಾಗಿ ಕರಣ್ ಥಾಪರ್‌ಗೆ ನೀಡಿದ 33 ನಿಮಿಷಗಳ ಸಂದರ್ಶನದಲ್ಲಿ, ಬನಾಜಿ ಮುಂಬರುವ ತಿಂಗಳುಗಳಲ್ಲಿ ಸಾವಿನ ಸಂಖ್ಯೆ ಹೇಗೆ ಹೆಚ್ಚಾಗುತ್ತದೆ ಎಂಬುದರ ಕುರಿತು ಭಾರತೀಯ ಮತ್ತು ವಿದೇಶಿ ಸಂಸ್ಥೆಗಳ ಅಂದಾಜುಗಳ ಬಗ್ಗೆ ಮಾತನಾಡಿದ್ದಾರೆ.

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನ ಅಂದಾಜಿನ ಪ್ರಕಾರ, ಜೂನ್ ಮಧ್ಯದ ವೇಳೆಗೆ 4,04,000 ಅಧಿಕೃತ ದಾಖಲಾದ ಸಾವುಗಳು ಸಂಭವಿಸಬಹುದು ಎನ್ನುವ ಅವರು, ಇದನ್ನು ಉತ್ಪ್ರೇಕ್ಷೆ ಎಂದು ತಿಳಿಯಬೇಡಿ ಎಂದಿದ್ದಾರೆ.

ವಾಷಿಂಗ್ಟನ್‌ನ ಇನ್‌ಸ್ಟಿಟ್ಯೂಟ್ ಫಾರ್ ಹೆಲ್ತ್ ಮೆಟ್ರಿಕ್ಸ್ ಅಂಡ್ ಎವಾಲ್ಯುಯೇಷನ್ (ಐಎಚ್‌ಎಂಇ) ಮಾಡಿದ ಎರಡು ಅಂದಾಜುಗಳ ಕುರಿತು ಬನಾಜಿ ಪ್ರತಿಕ್ರಿಯಿಸಿದ್ದು, ಜುಲೈ ಅಂತ್ಯದ ವೇಳೆಗೆ 10,18,879 (10 ಲಕ್ಷಕ್ಕೂ ಹೆಚ್ಚು) ಕೋವಿಡ್ ಸಾವುಗಳು ಸಂಭವಿಸಬಹುದು ಎಂದು ಮೊದಲಿನ ವರದಿ ಹೇಳುತ್ತದೆ ಮತ್ತು ಇತ್ತೀಚಿನ ಎರಡನೆ ವರದಿ ಪ್ರಕಾರ ಸೆಪ್ಟೆಂಬರ್ ವೇಳೆಗೆ 1.4 ಮಿಲಿಯನ್ ( 14 ಲಕ್ಷ) ಕೋವಿಡ್ ಸಾವು ಸಂಭವಿಸಬಹುದು ಎಂದಿದ್ದಾರೆ.

‘ಐಎಚ್‌ಎಂಇ ಅಧ್ಯಯನದ ಅಂದಾಜಿನ ಪ್ರಕಾರ ಅಧಿಕೃತ ಮತ್ತು ದಾಖಲೆಯಿಲ್ಲದ ಸಾವುಗಳು ಇದರಲ್ಲಿ ಸೇರಿವೆ. ಎರಡನೆಯದಾಗಿ, ದಾಖಲಾದ ಸಾವುಗಳಿಗಿಂತ ದಾಖಲೆಯಿಲ್ಲದ ಸಾವುಗಳು ಮೂರು ಪಟ್ಟು ಹೆಚ್ಚಾಗುತ್ತದೆ ಎಂದು ಅಧ್ಯಯನದ ಅಂದಾಜು ಹೇಳುತ್ತಿದೆ’ ಎಂದು ಬನಾಜಿ ತಿಳಿಸಿದ್ದಾರೆ.

ಸೆಪ್ಟೆಂಬರ್ ವೇಳೆಗೆ, ಭಾರತದ ಸಾವಿನ ಸಂಖ್ಯೆ 1.4 ಮಿಲಿಯನ್ ಎಂದು ನಿರೀಕ್ಷಿಸಿದಾಗ, ಅದು ಯುಎಸ್ ಸಾವಿನ ಸಂಖ್ಯೆ ಆ ಸಮಯದಲ್ಲಿ ಆಗುವುದಕ್ಕಿಂತ ಸುಮಾರು 5 ಲಕ್ಷ ಹೆಚ್ಚಾಗುತ್ತದೆ ಎಂದು ಐಎಚ್‌ಎಂಇ ಹೇಳಿದೆ. ಸೆಪ್ಟೆಂಬರ್ ವೇಳೆಗೆ, ಯುಎಸ್ ಸಾವಿನ ಸಂಖ್ಯೆ 9,49,000 ತಲುಪಲಿದೆ ಎಂದು ಈ ಸಂಸ್ಥೆ ಅಂದಾಜು ಮಾಡಿದೆ.

ದಿ ವೈರ್‌ಗಾಗಿ ಕರಣ್ ಥಾಪರ್ ಮುರಾದ್ ಬನಾಜಿ ಅವರೊಂದಿಗೆ ನಡೆಸಿದ ಸಂದರ್ಶನದ ಪೂರ್ಣ ವಿವರಕ್ಕಾಗಿ ಈ ವಿಡಿಯೋ ನೋಡಿ….

(ಇಲ್ಲಿ ಪ್ರಕಟಿಸಿದ ವಿವರಗಳು ಗಣಿತ ತಜ್ಞ ಬನಾಜಿಯವರ ಅನಿಸಿಕೆಗಳು. ನಾನುಗೌರಿ.ಕಾಂ ಸಂಪಾದಕೀಯದ ಅಭಿಪ್ರಾಯಗಳಲ್ಲ.)


ಇದನ್ನೂ ಓದಿ: ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ: ನರೇಂದ್ರ ಮೋದಿ ಜನಪ್ರಿಯತೆ ದಿಢೀರ್ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...