Homeಕರೋನಾ ತಲ್ಲಣ10 ಲಕ್ಷ ಭಾರತೀಯರು ಈಗಾಗಲೇ ಕೋವಿಡ್‌ಗೆ ಬಲಿಯಾಗಿದ್ದಾರೆ, ಶೇ. 80ರಷ್ಟು ಸಾವು ದಾಖಲಾಗುತ್ತಿಲ್ಲ: ಗಣಿತ ತಜ್ಞ...

10 ಲಕ್ಷ ಭಾರತೀಯರು ಈಗಾಗಲೇ ಕೋವಿಡ್‌ಗೆ ಬಲಿಯಾಗಿದ್ದಾರೆ, ಶೇ. 80ರಷ್ಟು ಸಾವು ದಾಖಲಾಗುತ್ತಿಲ್ಲ: ಗಣಿತ ತಜ್ಞ ಮುರಾದ್ ಬನಾಜಿ

- Advertisement -
- Advertisement -

ಲಂಡನ್‌ನ ಮಿಡಲ್‌ಸೆಕ್ಸ್ ವಿಶ್ವವಿದ್ಯಾಲಯದ ಹಿರಿಯ ಗಣಿತ ಉಪನ್ಯಾಸಕರೊಬ್ಬರು, ಕರಣ್ ಥಾಪರ್‌ಗೆ ನೀಡಿದ ಸಂದರ್ಶನದಲ್ಲಿ, ಭಾರತದ ಶೇ.80ರಷ್ಟು ಕೋವಿಡ್ ಸಾವುಗಳು ದಾಖಲಾಗಿಲ್ಲ ಅಥವಾ ಅವನ್ನು ಸರ್ಕಾರಗಳು ಮುಚ್ಚಿ ಹಾಕಿವೆ ಎಂದು ಹೇಳಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಮಾರ್ಚ್ 2020ರಿಂದ ಭಾರತದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ಪಥವನ್ನು (ಟ್ರಾಜೆಕ್ಟರಿ) ಸೂಕ್ಷ್ಮವಾಗಿ ಗಮನಿಸುತ್ತಿರುವ ಲಂಡನ್‌ನ ಮಿಡಲ್‌ಸೆಕ್ಸ್ ವಿಶ್ವವಿದ್ಯಾಲಯದ ಗಣಿತಶಾಸ್ತ್ರದ ಹಿರಿಯ ಉಪನ್ಯಾಸಕ, ಭಾರತೀಯ ಮೂಲದ ಮುರಾದ್ ಬನಾಜಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

2021ರ ಮೇ 8 ರ ಹೊತ್ತಿಗೆ, ಸರ್ಕಾರದ ಆರೋಗ್ಯ ಇಲಾಖೆಯ ಅಧಿಕೃತ ಸಾವಿನ ಸಂಖ್ಯೆ 2,38,000 ಕ್ಕಿಂತ ಹೆಚ್ಚಿದೆ. ಮುರಾದ್ ಬನಾಜಿ ಹೇಳುವಂತೆ, ದಾಖಲಾಗದ ಸಾವುಗಳು ಐದು ಪಟ್ಟು ಹೆಚ್ಚಿರುವ ಸಾಧ್ಯತೆ ಇದ್ದೇ ಇದೆ, ಒಟ್ಟು ಕೋವಿಡ್ ಸಾವಿನ ಸಂಖ್ಯೆ (ಅಧಿಕೃತ ಮತ್ತು ದಾಖಲೆಯಿಲ್ಲದ ಸಾವುಗಳುನ್ನು ಸೇರಿಸಿ) ಒಂದು ಮಿಲಿಯನ್ (ಹತ್ತು ಲಕ್ಷ) ದಾಟಿದೆ ಎಂದಿದ್ದಾರೆ.

ದಿ ವೈರ್‌ಗಾಗಿ ಕರಣ್ ಥಾಪರ್‌ಗೆ ನೀಡಿದ 33 ನಿಮಿಷಗಳ ಸಂದರ್ಶನದಲ್ಲಿ, ಬನಾಜಿ ಮುಂಬರುವ ತಿಂಗಳುಗಳಲ್ಲಿ ಸಾವಿನ ಸಂಖ್ಯೆ ಹೇಗೆ ಹೆಚ್ಚಾಗುತ್ತದೆ ಎಂಬುದರ ಕುರಿತು ಭಾರತೀಯ ಮತ್ತು ವಿದೇಶಿ ಸಂಸ್ಥೆಗಳ ಅಂದಾಜುಗಳ ಬಗ್ಗೆ ಮಾತನಾಡಿದ್ದಾರೆ.

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನ ಅಂದಾಜಿನ ಪ್ರಕಾರ, ಜೂನ್ ಮಧ್ಯದ ವೇಳೆಗೆ 4,04,000 ಅಧಿಕೃತ ದಾಖಲಾದ ಸಾವುಗಳು ಸಂಭವಿಸಬಹುದು ಎನ್ನುವ ಅವರು, ಇದನ್ನು ಉತ್ಪ್ರೇಕ್ಷೆ ಎಂದು ತಿಳಿಯಬೇಡಿ ಎಂದಿದ್ದಾರೆ.

ವಾಷಿಂಗ್ಟನ್‌ನ ಇನ್‌ಸ್ಟಿಟ್ಯೂಟ್ ಫಾರ್ ಹೆಲ್ತ್ ಮೆಟ್ರಿಕ್ಸ್ ಅಂಡ್ ಎವಾಲ್ಯುಯೇಷನ್ (ಐಎಚ್‌ಎಂಇ) ಮಾಡಿದ ಎರಡು ಅಂದಾಜುಗಳ ಕುರಿತು ಬನಾಜಿ ಪ್ರತಿಕ್ರಿಯಿಸಿದ್ದು, ಜುಲೈ ಅಂತ್ಯದ ವೇಳೆಗೆ 10,18,879 (10 ಲಕ್ಷಕ್ಕೂ ಹೆಚ್ಚು) ಕೋವಿಡ್ ಸಾವುಗಳು ಸಂಭವಿಸಬಹುದು ಎಂದು ಮೊದಲಿನ ವರದಿ ಹೇಳುತ್ತದೆ ಮತ್ತು ಇತ್ತೀಚಿನ ಎರಡನೆ ವರದಿ ಪ್ರಕಾರ ಸೆಪ್ಟೆಂಬರ್ ವೇಳೆಗೆ 1.4 ಮಿಲಿಯನ್ ( 14 ಲಕ್ಷ) ಕೋವಿಡ್ ಸಾವು ಸಂಭವಿಸಬಹುದು ಎಂದಿದ್ದಾರೆ.

‘ಐಎಚ್‌ಎಂಇ ಅಧ್ಯಯನದ ಅಂದಾಜಿನ ಪ್ರಕಾರ ಅಧಿಕೃತ ಮತ್ತು ದಾಖಲೆಯಿಲ್ಲದ ಸಾವುಗಳು ಇದರಲ್ಲಿ ಸೇರಿವೆ. ಎರಡನೆಯದಾಗಿ, ದಾಖಲಾದ ಸಾವುಗಳಿಗಿಂತ ದಾಖಲೆಯಿಲ್ಲದ ಸಾವುಗಳು ಮೂರು ಪಟ್ಟು ಹೆಚ್ಚಾಗುತ್ತದೆ ಎಂದು ಅಧ್ಯಯನದ ಅಂದಾಜು ಹೇಳುತ್ತಿದೆ’ ಎಂದು ಬನಾಜಿ ತಿಳಿಸಿದ್ದಾರೆ.

ಸೆಪ್ಟೆಂಬರ್ ವೇಳೆಗೆ, ಭಾರತದ ಸಾವಿನ ಸಂಖ್ಯೆ 1.4 ಮಿಲಿಯನ್ ಎಂದು ನಿರೀಕ್ಷಿಸಿದಾಗ, ಅದು ಯುಎಸ್ ಸಾವಿನ ಸಂಖ್ಯೆ ಆ ಸಮಯದಲ್ಲಿ ಆಗುವುದಕ್ಕಿಂತ ಸುಮಾರು 5 ಲಕ್ಷ ಹೆಚ್ಚಾಗುತ್ತದೆ ಎಂದು ಐಎಚ್‌ಎಂಇ ಹೇಳಿದೆ. ಸೆಪ್ಟೆಂಬರ್ ವೇಳೆಗೆ, ಯುಎಸ್ ಸಾವಿನ ಸಂಖ್ಯೆ 9,49,000 ತಲುಪಲಿದೆ ಎಂದು ಈ ಸಂಸ್ಥೆ ಅಂದಾಜು ಮಾಡಿದೆ.

ದಿ ವೈರ್‌ಗಾಗಿ ಕರಣ್ ಥಾಪರ್ ಮುರಾದ್ ಬನಾಜಿ ಅವರೊಂದಿಗೆ ನಡೆಸಿದ ಸಂದರ್ಶನದ ಪೂರ್ಣ ವಿವರಕ್ಕಾಗಿ ಈ ವಿಡಿಯೋ ನೋಡಿ….

(ಇಲ್ಲಿ ಪ್ರಕಟಿಸಿದ ವಿವರಗಳು ಗಣಿತ ತಜ್ಞ ಬನಾಜಿಯವರ ಅನಿಸಿಕೆಗಳು. ನಾನುಗೌರಿ.ಕಾಂ ಸಂಪಾದಕೀಯದ ಅಭಿಪ್ರಾಯಗಳಲ್ಲ.)


ಇದನ್ನೂ ಓದಿ: ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ: ನರೇಂದ್ರ ಮೋದಿ ಜನಪ್ರಿಯತೆ ದಿಢೀರ್ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...