Homeಕರೋನಾ ತಲ್ಲಣ10 ಲಕ್ಷ ಭಾರತೀಯರು ಈಗಾಗಲೇ ಕೋವಿಡ್‌ಗೆ ಬಲಿಯಾಗಿದ್ದಾರೆ, ಶೇ. 80ರಷ್ಟು ಸಾವು ದಾಖಲಾಗುತ್ತಿಲ್ಲ: ಗಣಿತ ತಜ್ಞ...

10 ಲಕ್ಷ ಭಾರತೀಯರು ಈಗಾಗಲೇ ಕೋವಿಡ್‌ಗೆ ಬಲಿಯಾಗಿದ್ದಾರೆ, ಶೇ. 80ರಷ್ಟು ಸಾವು ದಾಖಲಾಗುತ್ತಿಲ್ಲ: ಗಣಿತ ತಜ್ಞ ಮುರಾದ್ ಬನಾಜಿ

- Advertisement -
- Advertisement -

ಲಂಡನ್‌ನ ಮಿಡಲ್‌ಸೆಕ್ಸ್ ವಿಶ್ವವಿದ್ಯಾಲಯದ ಹಿರಿಯ ಗಣಿತ ಉಪನ್ಯಾಸಕರೊಬ್ಬರು, ಕರಣ್ ಥಾಪರ್‌ಗೆ ನೀಡಿದ ಸಂದರ್ಶನದಲ್ಲಿ, ಭಾರತದ ಶೇ.80ರಷ್ಟು ಕೋವಿಡ್ ಸಾವುಗಳು ದಾಖಲಾಗಿಲ್ಲ ಅಥವಾ ಅವನ್ನು ಸರ್ಕಾರಗಳು ಮುಚ್ಚಿ ಹಾಕಿವೆ ಎಂದು ಹೇಳಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಮಾರ್ಚ್ 2020ರಿಂದ ಭಾರತದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ಪಥವನ್ನು (ಟ್ರಾಜೆಕ್ಟರಿ) ಸೂಕ್ಷ್ಮವಾಗಿ ಗಮನಿಸುತ್ತಿರುವ ಲಂಡನ್‌ನ ಮಿಡಲ್‌ಸೆಕ್ಸ್ ವಿಶ್ವವಿದ್ಯಾಲಯದ ಗಣಿತಶಾಸ್ತ್ರದ ಹಿರಿಯ ಉಪನ್ಯಾಸಕ, ಭಾರತೀಯ ಮೂಲದ ಮುರಾದ್ ಬನಾಜಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

2021ರ ಮೇ 8 ರ ಹೊತ್ತಿಗೆ, ಸರ್ಕಾರದ ಆರೋಗ್ಯ ಇಲಾಖೆಯ ಅಧಿಕೃತ ಸಾವಿನ ಸಂಖ್ಯೆ 2,38,000 ಕ್ಕಿಂತ ಹೆಚ್ಚಿದೆ. ಮುರಾದ್ ಬನಾಜಿ ಹೇಳುವಂತೆ, ದಾಖಲಾಗದ ಸಾವುಗಳು ಐದು ಪಟ್ಟು ಹೆಚ್ಚಿರುವ ಸಾಧ್ಯತೆ ಇದ್ದೇ ಇದೆ, ಒಟ್ಟು ಕೋವಿಡ್ ಸಾವಿನ ಸಂಖ್ಯೆ (ಅಧಿಕೃತ ಮತ್ತು ದಾಖಲೆಯಿಲ್ಲದ ಸಾವುಗಳುನ್ನು ಸೇರಿಸಿ) ಒಂದು ಮಿಲಿಯನ್ (ಹತ್ತು ಲಕ್ಷ) ದಾಟಿದೆ ಎಂದಿದ್ದಾರೆ.

ದಿ ವೈರ್‌ಗಾಗಿ ಕರಣ್ ಥಾಪರ್‌ಗೆ ನೀಡಿದ 33 ನಿಮಿಷಗಳ ಸಂದರ್ಶನದಲ್ಲಿ, ಬನಾಜಿ ಮುಂಬರುವ ತಿಂಗಳುಗಳಲ್ಲಿ ಸಾವಿನ ಸಂಖ್ಯೆ ಹೇಗೆ ಹೆಚ್ಚಾಗುತ್ತದೆ ಎಂಬುದರ ಕುರಿತು ಭಾರತೀಯ ಮತ್ತು ವಿದೇಶಿ ಸಂಸ್ಥೆಗಳ ಅಂದಾಜುಗಳ ಬಗ್ಗೆ ಮಾತನಾಡಿದ್ದಾರೆ.

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನ ಅಂದಾಜಿನ ಪ್ರಕಾರ, ಜೂನ್ ಮಧ್ಯದ ವೇಳೆಗೆ 4,04,000 ಅಧಿಕೃತ ದಾಖಲಾದ ಸಾವುಗಳು ಸಂಭವಿಸಬಹುದು ಎನ್ನುವ ಅವರು, ಇದನ್ನು ಉತ್ಪ್ರೇಕ್ಷೆ ಎಂದು ತಿಳಿಯಬೇಡಿ ಎಂದಿದ್ದಾರೆ.

ವಾಷಿಂಗ್ಟನ್‌ನ ಇನ್‌ಸ್ಟಿಟ್ಯೂಟ್ ಫಾರ್ ಹೆಲ್ತ್ ಮೆಟ್ರಿಕ್ಸ್ ಅಂಡ್ ಎವಾಲ್ಯುಯೇಷನ್ (ಐಎಚ್‌ಎಂಇ) ಮಾಡಿದ ಎರಡು ಅಂದಾಜುಗಳ ಕುರಿತು ಬನಾಜಿ ಪ್ರತಿಕ್ರಿಯಿಸಿದ್ದು, ಜುಲೈ ಅಂತ್ಯದ ವೇಳೆಗೆ 10,18,879 (10 ಲಕ್ಷಕ್ಕೂ ಹೆಚ್ಚು) ಕೋವಿಡ್ ಸಾವುಗಳು ಸಂಭವಿಸಬಹುದು ಎಂದು ಮೊದಲಿನ ವರದಿ ಹೇಳುತ್ತದೆ ಮತ್ತು ಇತ್ತೀಚಿನ ಎರಡನೆ ವರದಿ ಪ್ರಕಾರ ಸೆಪ್ಟೆಂಬರ್ ವೇಳೆಗೆ 1.4 ಮಿಲಿಯನ್ ( 14 ಲಕ್ಷ) ಕೋವಿಡ್ ಸಾವು ಸಂಭವಿಸಬಹುದು ಎಂದಿದ್ದಾರೆ.

‘ಐಎಚ್‌ಎಂಇ ಅಧ್ಯಯನದ ಅಂದಾಜಿನ ಪ್ರಕಾರ ಅಧಿಕೃತ ಮತ್ತು ದಾಖಲೆಯಿಲ್ಲದ ಸಾವುಗಳು ಇದರಲ್ಲಿ ಸೇರಿವೆ. ಎರಡನೆಯದಾಗಿ, ದಾಖಲಾದ ಸಾವುಗಳಿಗಿಂತ ದಾಖಲೆಯಿಲ್ಲದ ಸಾವುಗಳು ಮೂರು ಪಟ್ಟು ಹೆಚ್ಚಾಗುತ್ತದೆ ಎಂದು ಅಧ್ಯಯನದ ಅಂದಾಜು ಹೇಳುತ್ತಿದೆ’ ಎಂದು ಬನಾಜಿ ತಿಳಿಸಿದ್ದಾರೆ.

ಸೆಪ್ಟೆಂಬರ್ ವೇಳೆಗೆ, ಭಾರತದ ಸಾವಿನ ಸಂಖ್ಯೆ 1.4 ಮಿಲಿಯನ್ ಎಂದು ನಿರೀಕ್ಷಿಸಿದಾಗ, ಅದು ಯುಎಸ್ ಸಾವಿನ ಸಂಖ್ಯೆ ಆ ಸಮಯದಲ್ಲಿ ಆಗುವುದಕ್ಕಿಂತ ಸುಮಾರು 5 ಲಕ್ಷ ಹೆಚ್ಚಾಗುತ್ತದೆ ಎಂದು ಐಎಚ್‌ಎಂಇ ಹೇಳಿದೆ. ಸೆಪ್ಟೆಂಬರ್ ವೇಳೆಗೆ, ಯುಎಸ್ ಸಾವಿನ ಸಂಖ್ಯೆ 9,49,000 ತಲುಪಲಿದೆ ಎಂದು ಈ ಸಂಸ್ಥೆ ಅಂದಾಜು ಮಾಡಿದೆ.

ದಿ ವೈರ್‌ಗಾಗಿ ಕರಣ್ ಥಾಪರ್ ಮುರಾದ್ ಬನಾಜಿ ಅವರೊಂದಿಗೆ ನಡೆಸಿದ ಸಂದರ್ಶನದ ಪೂರ್ಣ ವಿವರಕ್ಕಾಗಿ ಈ ವಿಡಿಯೋ ನೋಡಿ….

(ಇಲ್ಲಿ ಪ್ರಕಟಿಸಿದ ವಿವರಗಳು ಗಣಿತ ತಜ್ಞ ಬನಾಜಿಯವರ ಅನಿಸಿಕೆಗಳು. ನಾನುಗೌರಿ.ಕಾಂ ಸಂಪಾದಕೀಯದ ಅಭಿಪ್ರಾಯಗಳಲ್ಲ.)


ಇದನ್ನೂ ಓದಿ: ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ: ನರೇಂದ್ರ ಮೋದಿ ಜನಪ್ರಿಯತೆ ದಿಢೀರ್ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...