Homeಮುಖಪುಟಆಲ್ಟ್‌ ನ್ಯೂಸ್‌ ವಿದೇಶಿ ದೇಣಿಗೆ ಸ್ವೀಕರಿಸಿಲ್ಲ: ರೋಜರ್‌ಪೇ ಸ್ಪಷ್ಟನೆ

ಆಲ್ಟ್‌ ನ್ಯೂಸ್‌ ವಿದೇಶಿ ದೇಣಿಗೆ ಸ್ವೀಕರಿಸಿಲ್ಲ: ರೋಜರ್‌ಪೇ ಸ್ಪಷ್ಟನೆ

- Advertisement -
- Advertisement -

ದೇಣಿಗೆಗಳನ್ನು ಸ್ವೀಕರಿಸಲು ಆಲ್ಟ್ ನ್ಯೂಸ್ ಬಳಸುವ ಪೇಮೆಂಟ್‌ ಗೇಟ್‌ವೇ ಆಗಿರುವ ರೇಜರ್‌ಪೇ ಸಂಸ್ಥೆಯು ಶುಕ್ರವಾರ ಪ್ರತಿಕ್ರಿಯೆ ನೀಡಿದ್ದು, “ಕೇವಲ ದೇಶೀಯ ಪಾವತಿಗಳನ್ನು ಫ್ಯಾಕ್ಟ್-ಚೆಕಿಂಗ್ ವೆಬ್‌ಸೈಟ್‌ಗೆ ಸಕ್ರಿಯಗೊಳಿಸಲಾಗಿದೆ. ಎಫ್‌ಸಿಆರ್‌ಎ ಅನುಮೋದನೆಯಿಲ್ಲದೆ ವಿದೇಶಿ ವಹಿವಾಟುಗಳನ್ನು ಅನುಮತಿಸಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದೆ.

ಆಲ್ಟ್ ನ್ಯೂಸ್‌ನಿಂದ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ (ಎಫ್‌ಸಿಆರ್‌ಎ) ಉಲ್ಲಂಘನೆಯಾಗಿದ್ದು, ಈ ಸಂಬಂಧ ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ ಮೊಹಮ್ಮದ್‌ ಜುಬೇರ್‌ ಅವರನ್ನು ವಿಚಾರಣೆ ನಡೆಸುತ್ತಿದ್ದೇವೆ ಎಂದು ದೆಹಲಿ ಪೊಲೀಸರು ಕಳೆದ ವಾರ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದ್ದರು.

ರೇಜರ್‌ಪೇ ಸಹ-ಸಂಸ್ಥಾಪಕ ಮತ್ತು ಸಿಇಒ ಹರ್ಷಿಲ್ ಮಾಥುರ್ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ, “ತನಿಖೆಯ ವ್ಯಾಪ್ತಿಯಲ್ಲಿ ನಿರ್ದಿಷ್ಟ ಡೇಟಾವನ್ನು ಮಾತ್ರ ತನಿಖಾ ಅಧಿಕಾರಿಗಳೊಂದಿಗೆ ರೋಜರ್‌ ಪೇ ಹಂಚಿಕೊಂಡಿದೆ” ಎಂದಿದ್ದಾರೆ.

“ದೇಣಿಗೆಗಳಿಗೆ ಎಸ್‌ಸಿಆರ್‌ಎ ಅನುಮೋದನೆಯಿಲ್ಲದೆ ಅಂತರರಾಷ್ಟ್ರೀಯ ವಹಿವಾಟುಗಳನ್ನು ಅನುಮತಿಸುವುದಿಲ್ಲ. ನಮ್ಮ ನೀತಿಗೆ ಅನುಗುಣವಾಗಿ ದೇಶೀಯ ಪಾವತಿಗಳನ್ನು ಸ್ವೀಕರಿಸಲು ಸಂಬಂಧಿಸಿದ ವ್ಯವಹಾರವನ್ನು ಮಾತ್ರ ಸಕ್ರಿಯಗೊಳಿಸಲಾಗಿದೆ” ಎಂದು ಆಲ್‌ನ್ಯೂಸ್ ಹೆಸರು ಪ್ರಸ್ತಾಪಿಸದೆ ಅವರು ಹೇಳಿದ್ದಾರೆ.

“ತನಿಖಾ ಸಂಸ್ಥೆಗಳ ವಿನಂತಿಯ ನಿರ್ದಿಷ್ಟ ವ್ಯಾಪ್ತಿಯು ಯಾವುದೇ ವಿದೇಶಿ ದೇಣಿಗೆಳಿವೆಯೇ ಎಂದು ನಿರ್ಧರಿಸಲು ಮಾತ್ರ ಸೀಮಿತವಾಗಿದೆ” ಎಂದು ರೋಜರ್‌ ಪೇ ತಿಳಿಸಿದೆ.

“ಹಾಗಾಗಿ ದಾನಿಗಳ ಪ್ಯಾನ್, ವಿಳಾಸ, ಪಿನ್ ಕೋಡ್ ಇತ್ಯಾದಿಗಳನ್ನು ಹಂಚಿಕೊಳ್ಳಲಾಗಿಲ್ಲ. ಇದು ತನಿಖೆಯ ವ್ಯಾಪ್ತಿಯಿಂದ ಹೊರಗಿದೆ ಎಂದು ನಾವು ನಂಬಿದ್ದೇವೆ” ಎಂದು ಅವರು ಹೇಳಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ಸಿನಿಮಾ ದೃಶ್ಯವೊಂದನ್ನು ಹಂಚಿಕೊಂಡ ಕಾರಣ ಜುಬೈರ್‌ ಅವರು ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆಂದು ಟ್ವಿಟರ್‌ ಖಾತೆಯೊಂದು ಆರೋಪಿಸಿತ್ತು. ಈಗ ಅಸ್ತಿತ್ವದಲ್ಲೇ ಇರದ ಖಾತೆಯ ಆರೋಪದ ಮೇರೆಗೆ ಜುಬೈರ್‌ ಅವರನ್ನು ಬಂಧಿಸಲಾಯಿತು. ಇದರ ಜೊತೆಗೆ ಜುಬೇರ್‌ ಮೇಲೆ ಇತರ ಆರೋಪಗಳನ್ನು ಹೊರಿಸಲಾಗಿದೆ.

ಒಂದು ಪ್ರಕರಣದಲ್ಲಿ ಜಾಮೀನು

ಜುಬೇರ್‌ ಮೇಲೆ ಉತ್ತರ ಪ್ರದೇಶದ ಸೀತಾಪುರದಲ್ಲಿ ದಾಖಲಾಗಿದ್ದ ದ್ವೇಷ ಭಾಷಣದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ಜುಬೇರ್ ತನ್ನ ಟ್ವೀಟ್‌ನಲ್ಲಿ ಯತಿ ನರಸಿಂಗಾನಂದ ಸರಸ್ವತಿ, ಭಜರಂಗ ಮುನಿ ಮತ್ತು ಆನಂದ್ ಸ್ವರೂಪ್ ಎಂಬ 3 ಹಿಂದೂ ಧರ್ಮೀಯರನ್ನು ‘ದ್ವೇಷ ಪ್ರಚೋದಕರು’ ಎಂದು ಕರೆದ ಆರೋಪದ ಮೇಲೆ ಅವರ ವಿರುದ್ಧ FIR ದಾಖಲಾಗಿತ್ತು. ಐಪಿಸಿ ಸೆಕ್ಷನ್ 295-ಎ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 67 ರ ಅಡಿಯಲ್ಲಿ ಉತ್ತರ ಪ್ರದೇಶ ಪೊಲೀಸರು ಜೂನ್ 1 ರಂದು ಜುಬೈರ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿರಿ: ಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

‘ತಮ್ಮ ಟ್ವೀಟ್‌ನಲ್ಲಿ ಒಂದು ವರ್ಗದ ಧಾರ್ಮಿಕ ನಂಬಿಕೆಯನ್ನು ಅವಮಾನಿಸಿಲ್ಲ ಅಥವಾ ಅವಮಾನಿಸುವ ಪ್ರಯತ್ನ ಮಾಡಿಲ್ಲ. ದುಷ್ಟ ಉದ್ದೇಶದಿಂದ ಕಿರುಕುಳ ನೀಡುವುದಕ್ಕಾಗಿಯೇ ನನ್ನ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ. ಹಾಗಾಗಿ ಅದನ್ನು ರದ್ದುಗೊಳಿಸಬೇಕೆಂದು’ ಜುಬೇರ್ ಅಹಲಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ತನಿಖೆಯು ಪ್ರಾಥಮಿಕ ಹಂತದಲ್ಲಿರುವುದರಿಂದ ಹಾಗೆ ಮಾಡಲು ಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದ ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ಅಜಯ್ ಕುಮಾರ್ ಶ್ರೀವಾಸ್ತವ ಅವರ ಪೀಠವು ಜೂನ್ 10ರಂದು ಜುಬೇರ್ ಮನವಿಯನ್ನು ವಜಾಗೊಳಿಸಿತ್ತು.

ತಮ್ಮ ಮೇಲೆ ಕೊಲೆ ಬೆದರಿಕೆಯನ್ನು ಉಲ್ಲೇಖಿಸಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದನ್ನು ಸುಪ್ರೀಂ ಪುರಸ್ಕರಿಸಿ ಮಧ್ಯಂತರ ಜಾಮೀನು ನೀಡಿದೆ. ಆದರೆ ದೆಹಲಿ ಪೊಲೀಸರು 2018ರ ಟ್ವೀಟ್ ಗೆ ಸಂಬಂಧಿಸಿ ಪ್ರಕರಣ ದಾಖಲಿಸಿರುವುದರಿಂದ ಅವರಿನ್ನು ಬಂಧನದಲ್ಲಿಯೇ ಮುಂದುವರಿಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದುಷ್ಟರು ಒಳ್ಳೆತನವನ್ನು, ಸತ್ಯವನ್ನು ಸ್ವಲ್ಪ ಸಮಯ ತಡೀಬಹುದೇ ಹೊರತು ಅದನ್ನು ನಾಶಪಡಿಸಲು ಅವರ ಅಪ್ಪಂದಿr8ನಂದಾನು ಸಾಧ್ಯವಿಲ್ಲ.. ಯಾಕೋ ಒಂದು ನಾಯಿ ಬೊಗಳಬೇಕಿತ್ತು…!

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...