Homeಮುಖಪುಟಆಲ್ಟ್‌ ನ್ಯೂಸ್‌ ವಿದೇಶಿ ದೇಣಿಗೆ ಸ್ವೀಕರಿಸಿಲ್ಲ: ರೋಜರ್‌ಪೇ ಸ್ಪಷ್ಟನೆ

ಆಲ್ಟ್‌ ನ್ಯೂಸ್‌ ವಿದೇಶಿ ದೇಣಿಗೆ ಸ್ವೀಕರಿಸಿಲ್ಲ: ರೋಜರ್‌ಪೇ ಸ್ಪಷ್ಟನೆ

- Advertisement -
- Advertisement -

ದೇಣಿಗೆಗಳನ್ನು ಸ್ವೀಕರಿಸಲು ಆಲ್ಟ್ ನ್ಯೂಸ್ ಬಳಸುವ ಪೇಮೆಂಟ್‌ ಗೇಟ್‌ವೇ ಆಗಿರುವ ರೇಜರ್‌ಪೇ ಸಂಸ್ಥೆಯು ಶುಕ್ರವಾರ ಪ್ರತಿಕ್ರಿಯೆ ನೀಡಿದ್ದು, “ಕೇವಲ ದೇಶೀಯ ಪಾವತಿಗಳನ್ನು ಫ್ಯಾಕ್ಟ್-ಚೆಕಿಂಗ್ ವೆಬ್‌ಸೈಟ್‌ಗೆ ಸಕ್ರಿಯಗೊಳಿಸಲಾಗಿದೆ. ಎಫ್‌ಸಿಆರ್‌ಎ ಅನುಮೋದನೆಯಿಲ್ಲದೆ ವಿದೇಶಿ ವಹಿವಾಟುಗಳನ್ನು ಅನುಮತಿಸಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದೆ.

ಆಲ್ಟ್ ನ್ಯೂಸ್‌ನಿಂದ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ (ಎಫ್‌ಸಿಆರ್‌ಎ) ಉಲ್ಲಂಘನೆಯಾಗಿದ್ದು, ಈ ಸಂಬಂಧ ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ ಮೊಹಮ್ಮದ್‌ ಜುಬೇರ್‌ ಅವರನ್ನು ವಿಚಾರಣೆ ನಡೆಸುತ್ತಿದ್ದೇವೆ ಎಂದು ದೆಹಲಿ ಪೊಲೀಸರು ಕಳೆದ ವಾರ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದ್ದರು.

ರೇಜರ್‌ಪೇ ಸಹ-ಸಂಸ್ಥಾಪಕ ಮತ್ತು ಸಿಇಒ ಹರ್ಷಿಲ್ ಮಾಥುರ್ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ, “ತನಿಖೆಯ ವ್ಯಾಪ್ತಿಯಲ್ಲಿ ನಿರ್ದಿಷ್ಟ ಡೇಟಾವನ್ನು ಮಾತ್ರ ತನಿಖಾ ಅಧಿಕಾರಿಗಳೊಂದಿಗೆ ರೋಜರ್‌ ಪೇ ಹಂಚಿಕೊಂಡಿದೆ” ಎಂದಿದ್ದಾರೆ.

“ದೇಣಿಗೆಗಳಿಗೆ ಎಸ್‌ಸಿಆರ್‌ಎ ಅನುಮೋದನೆಯಿಲ್ಲದೆ ಅಂತರರಾಷ್ಟ್ರೀಯ ವಹಿವಾಟುಗಳನ್ನು ಅನುಮತಿಸುವುದಿಲ್ಲ. ನಮ್ಮ ನೀತಿಗೆ ಅನುಗುಣವಾಗಿ ದೇಶೀಯ ಪಾವತಿಗಳನ್ನು ಸ್ವೀಕರಿಸಲು ಸಂಬಂಧಿಸಿದ ವ್ಯವಹಾರವನ್ನು ಮಾತ್ರ ಸಕ್ರಿಯಗೊಳಿಸಲಾಗಿದೆ” ಎಂದು ಆಲ್‌ನ್ಯೂಸ್ ಹೆಸರು ಪ್ರಸ್ತಾಪಿಸದೆ ಅವರು ಹೇಳಿದ್ದಾರೆ.

“ತನಿಖಾ ಸಂಸ್ಥೆಗಳ ವಿನಂತಿಯ ನಿರ್ದಿಷ್ಟ ವ್ಯಾಪ್ತಿಯು ಯಾವುದೇ ವಿದೇಶಿ ದೇಣಿಗೆಳಿವೆಯೇ ಎಂದು ನಿರ್ಧರಿಸಲು ಮಾತ್ರ ಸೀಮಿತವಾಗಿದೆ” ಎಂದು ರೋಜರ್‌ ಪೇ ತಿಳಿಸಿದೆ.

“ಹಾಗಾಗಿ ದಾನಿಗಳ ಪ್ಯಾನ್, ವಿಳಾಸ, ಪಿನ್ ಕೋಡ್ ಇತ್ಯಾದಿಗಳನ್ನು ಹಂಚಿಕೊಳ್ಳಲಾಗಿಲ್ಲ. ಇದು ತನಿಖೆಯ ವ್ಯಾಪ್ತಿಯಿಂದ ಹೊರಗಿದೆ ಎಂದು ನಾವು ನಂಬಿದ್ದೇವೆ” ಎಂದು ಅವರು ಹೇಳಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ಸಿನಿಮಾ ದೃಶ್ಯವೊಂದನ್ನು ಹಂಚಿಕೊಂಡ ಕಾರಣ ಜುಬೈರ್‌ ಅವರು ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆಂದು ಟ್ವಿಟರ್‌ ಖಾತೆಯೊಂದು ಆರೋಪಿಸಿತ್ತು. ಈಗ ಅಸ್ತಿತ್ವದಲ್ಲೇ ಇರದ ಖಾತೆಯ ಆರೋಪದ ಮೇರೆಗೆ ಜುಬೈರ್‌ ಅವರನ್ನು ಬಂಧಿಸಲಾಯಿತು. ಇದರ ಜೊತೆಗೆ ಜುಬೇರ್‌ ಮೇಲೆ ಇತರ ಆರೋಪಗಳನ್ನು ಹೊರಿಸಲಾಗಿದೆ.

ಒಂದು ಪ್ರಕರಣದಲ್ಲಿ ಜಾಮೀನು

ಜುಬೇರ್‌ ಮೇಲೆ ಉತ್ತರ ಪ್ರದೇಶದ ಸೀತಾಪುರದಲ್ಲಿ ದಾಖಲಾಗಿದ್ದ ದ್ವೇಷ ಭಾಷಣದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ಜುಬೇರ್ ತನ್ನ ಟ್ವೀಟ್‌ನಲ್ಲಿ ಯತಿ ನರಸಿಂಗಾನಂದ ಸರಸ್ವತಿ, ಭಜರಂಗ ಮುನಿ ಮತ್ತು ಆನಂದ್ ಸ್ವರೂಪ್ ಎಂಬ 3 ಹಿಂದೂ ಧರ್ಮೀಯರನ್ನು ‘ದ್ವೇಷ ಪ್ರಚೋದಕರು’ ಎಂದು ಕರೆದ ಆರೋಪದ ಮೇಲೆ ಅವರ ವಿರುದ್ಧ FIR ದಾಖಲಾಗಿತ್ತು. ಐಪಿಸಿ ಸೆಕ್ಷನ್ 295-ಎ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 67 ರ ಅಡಿಯಲ್ಲಿ ಉತ್ತರ ಪ್ರದೇಶ ಪೊಲೀಸರು ಜೂನ್ 1 ರಂದು ಜುಬೈರ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿರಿ: ಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

‘ತಮ್ಮ ಟ್ವೀಟ್‌ನಲ್ಲಿ ಒಂದು ವರ್ಗದ ಧಾರ್ಮಿಕ ನಂಬಿಕೆಯನ್ನು ಅವಮಾನಿಸಿಲ್ಲ ಅಥವಾ ಅವಮಾನಿಸುವ ಪ್ರಯತ್ನ ಮಾಡಿಲ್ಲ. ದುಷ್ಟ ಉದ್ದೇಶದಿಂದ ಕಿರುಕುಳ ನೀಡುವುದಕ್ಕಾಗಿಯೇ ನನ್ನ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ. ಹಾಗಾಗಿ ಅದನ್ನು ರದ್ದುಗೊಳಿಸಬೇಕೆಂದು’ ಜುಬೇರ್ ಅಹಲಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ತನಿಖೆಯು ಪ್ರಾಥಮಿಕ ಹಂತದಲ್ಲಿರುವುದರಿಂದ ಹಾಗೆ ಮಾಡಲು ಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದ ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ಅಜಯ್ ಕುಮಾರ್ ಶ್ರೀವಾಸ್ತವ ಅವರ ಪೀಠವು ಜೂನ್ 10ರಂದು ಜುಬೇರ್ ಮನವಿಯನ್ನು ವಜಾಗೊಳಿಸಿತ್ತು.

ತಮ್ಮ ಮೇಲೆ ಕೊಲೆ ಬೆದರಿಕೆಯನ್ನು ಉಲ್ಲೇಖಿಸಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದನ್ನು ಸುಪ್ರೀಂ ಪುರಸ್ಕರಿಸಿ ಮಧ್ಯಂತರ ಜಾಮೀನು ನೀಡಿದೆ. ಆದರೆ ದೆಹಲಿ ಪೊಲೀಸರು 2018ರ ಟ್ವೀಟ್ ಗೆ ಸಂಬಂಧಿಸಿ ಪ್ರಕರಣ ದಾಖಲಿಸಿರುವುದರಿಂದ ಅವರಿನ್ನು ಬಂಧನದಲ್ಲಿಯೇ ಮುಂದುವರಿಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದುಷ್ಟರು ಒಳ್ಳೆತನವನ್ನು, ಸತ್ಯವನ್ನು ಸ್ವಲ್ಪ ಸಮಯ ತಡೀಬಹುದೇ ಹೊರತು ಅದನ್ನು ನಾಶಪಡಿಸಲು ಅವರ ಅಪ್ಪಂದಿr8ನಂದಾನು ಸಾಧ್ಯವಿಲ್ಲ.. ಯಾಕೋ ಒಂದು ನಾಯಿ ಬೊಗಳಬೇಕಿತ್ತು…!

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...