Homeಕರ್ನಾಟಕಕರ್ನಾಟಕ ಪೊಲೀಸರ ಬದಲಾದ ಸಮವಸ್ತ್ರ: ತೀವ್ರ ಖಂಡನೆ, ಆತಂಕ

ಕರ್ನಾಟಕ ಪೊಲೀಸರ ಬದಲಾದ ಸಮವಸ್ತ್ರ: ತೀವ್ರ ಖಂಡನೆ, ಆತಂಕ

ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಯೋಗಿ ಆದಿತ್ಯನಾಥ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ: ಸಿದ್ದರಾಮಯ್ಯ

- Advertisement -
- Advertisement -

“ಕರ್ನಾಟಕ ಪೊಲೀಸರ ಸಮವಸ್ತ್ರ ಬದಲಾಗಿದೆ. ಕೇಸರಿಧಾರಿಗಳಾಗಲು ಪೊಲೀಸರು ಸಿದ್ಧವಾಗಿದ್ದಾರೆ” ಎಂದು ಟೀಕೆಗಳು ವ್ಯಕ್ತವಾಗಿವೆ.

ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣೆಯ ಪೊಲೀಸರು ಕೇಸರಿ ಶಾಲು ಧರಿಸಿ, ಬಿಳಿ ಟೋಪಿ, ಕುರ್ತಾ ಧರಿಸಿ ಆಯುಧಪೂಜೆ ಆಚರಿಸಿ, ಗ್ರೂಪ್‌ ಫೋಟೋ ತೆಗೆಸಿಕೊಂಡಿದ್ದಾರೆ. ಹಿಂದೂಗಳ ಹೆಸರಲ್ಲಿ ಮತೀಯವಾದ, ಮತೀಯ ಗೂಂಡಾಗಿರಿ ನಡೆಸುತ್ತಿರುವವರು ಹೆಚ್ಚಾಗುತ್ತಿರುವ ಈ ದಿನಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರೇ ಕೇಸರಿ ಸಮವಸ್ತ್ರ ಧರಿಸಿ ತಮ್ಮ ಅಂತರಂಗವನ್ನು ಹೊರಹಾಕಿದ್ದಾರೆ ಎಂದು ಪ್ರಜ್ಞಾವಂತರು ಆತಂಕ ವ್ಯಕ್ತಪಡಿಸಿದ್ದಾರೆ.

ಇಂತಹದ್ದೇ ಸಮವಸ್ತ್ರವನ್ನು ಉಡುಪಿ ಜಿಲ್ಲೆಯ ಕಾಪು ಪೊಲೀಸ್‌ ಠಾಣೆಯ ಪೊಲೀಸರೂ ಧರಿಸಿ ಹಬ್ಬ ಆಚರಿಸಿದ್ದಾರೆ. ‘ಕನ್ಯ್ಪೂಜ್ ಆಗಬೇಡಿ…! ಇದು ಹಿಂದೂ ಸಂಘಟನೆ ಬೈಟಕ್ ಅಲ್ಲ. ಇದು ನಮ್ಮ ಪೊಲೀಸರ ತಂಡ. ಜೈ ಶ್ರೀರಾಮ್…’ ಎಂದು ಜನರು ಟೀಕೆಗೆ ಒಳಪಡಿಸಿದ್ದಾರೆ.

ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ್‌ ಸೇರಿದಂತೆ ಇತರೆ ಪೊಲೀಸ್ ಸಿಬ್ಬಂದಿ ಹಿಂದೂ ಸಂಘಟನೆಯ ಮುಖಂಡರಂತೆ ಧಿರಿಸು ತೊಟ್ಟಿರುವುದು ಸಾಕಷ್ಟು ಟೀಕೆಗೆ ಕಾರಣವಾಗಿದೆ. “ಆಯುಧಪೂಜೆ ಅಂಗವಾಗಿ ಪೊಲೀಸ್ ಠಾಣೆಗಳಲ್ಲಿ ಮೊದಲಿನಿಂದಲೂ ಶಸ್ತ್ರಾಸ್ತ್ರ ಗಳಿಗೆ ಪೂಜೆ ಸಲ್ಲಿಸುವುದು ಸಂಪ್ರದಾಯ. ಆ ಪ್ರಕಾರ ಅಂದು ಗ್ರಾಮೀಣ ಠಾಣೆಯಲ್ಲೂ ಪೂಜೆ ನಡೆಯಿತು. ಈ ಕಾರ್ಯಕ್ರಮದಲ್ಲಿ ನಾನೂ ಪಾಲ್ಗೊಂಡಿದ್ದೇನೆ. ಇದರಲ್ಲಿ ತಪ್ಪೇನಿಲ್ಲ. ನಾಳೆ ಮುಸ್ಲಿಮರು ಕರೆದರೂ ಹೋಗುವೆ, ನಮಾಜ್ ಮಾಡುವೆ” ಎಂದು ಎಚ್.ಡಿ.ಆನಂದಕುಮಾರ್‌ ಸಮರ್ಥಿಸಿಕೊಂಡಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಸರಣಿ ಟ್ವೀಟ್‌

ಸರಣಿ ಟ್ವೀಟ್‌ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪೊಲೀಸರ ಹೊಸ ಅವತಾರವನ್ನು ಸರಣಿ ಟ್ವೀಟ್‌ಗಳ ಮೂಲಕ ಖಂಡಿಸಿದ್ದಾರೆ.

“ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಮುಖ್ಯಮಂತ್ರಿಯವರೇ, ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ‌ ಕನಸು ನನಸಾಗಬಹುದು” ಎಂದಿದ್ದಾರೆ.

ಪೊಲೀಸರು ಕೇಸರಿಧಾರಿಗಳಾಗಿರುವ ಫೋಟೋಗಳೊಂದಿಗೆ ಟ್ವೀಟ್ ಮಾಡಿರುವ ಅವರು, “ಒಂದೆಡೆ ಅಮಾಯಕ ಯುವಕ-ಯುವತಿಯರ ಮೇಲೆ ಅನೈತಿಕ‌ ಪೊಲೀಸ್‌ಗಿರಿಯ ದೌರ್ಜನ್ಯ…. ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ… ಮತ್ತೊಂದೆಡೆ ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ…. ಇದಕ್ಕೆಲ್ಲ ರಾಜ್ಯದ ಮುಖ್ಯಮಂತ್ರಿಯವರ ಬಹಿರಂಗ ಬೆಂಬಲ.. ರಾಜ್ಯದಲ್ಲಿ ಸರ್ಕಾರ ಇದೆಯೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ‘ಮುಖ್ಯಮಂತ್ರಿಯವರೇ ಮತೀಯ ಗೂಂಡಾಗಿರಿ ಸಮರ್ಥಿಸುವುದು ಅಪಾಯಕಾರಿ ಬೆಳವಣಿಗೆ’

“ಗೂಂಡಾಗಿರಿಯನ್ನು ‘ಕ್ರಿಯೆಗೆ ಪ್ರತಿಕ್ರಿಯೆ’ ಎಂದು ಸಮರ್ಥಿಸಿದ ರಾಜ್ಯದ ಮುಖ್ಯಮಂತ್ರಿಯವರ ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ ಕಾಡಿನ‌ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ. ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ” ಎಂದು ಎಚ್ಚರಿಸಿದ್ದಾರೆ.

“ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಯೋಗಿ ಆದಿತ್ಯನಾಥ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ. ಬೊಮ್ಮಾಯಿಯವರೇ, ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ” ಎಂದು ಆಗ್ರಹಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಖಂಡನೆ

ಲೇಖಕ ನಾಗೇಗೌಡ ಕೀಲಾರ ಶಿವಲಿಂಗಯ್ಯ ಅವರು, “ಪೊಲೀಸ್‌‌ ಸ್ಟೇಷನ್ ಮುಂದೆ ಹಿಂಗೇ ಫೋಟೋ ತೆಗೆಸಿಕೊಂಡಿರುವ ಈ ಗುಂಪಿನಲ್ಲಿ ಪೊಲೀಸಿನವರು ಇದ್ದರೆ ಅಂತಹ ಪೋಲಿಸರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಬೇಕು ಅಲ್ಲವೇ, ಕಾರ್ಯಾಂಗದೊಳಗೆ ಈ ರೀತಿಯ symbolism ಮತ್ತು ಮತಾಂಧತೆ ಇರುವುದು ಸಂವಿಧಾನಕ್ಕೆ ಮಾಡುವ ದ್ರೋಹ ಅಲ್ಲವೇ” ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಅವರ ಪೋಸ್ಟ್‌ಗೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ.

“ಮುಖ್ಯಮಂತ್ರಿಗಳೇ ನೈತಿಕ ಪೊಲೀಸ್ ಗಿರಿ ಪರ ಇರುವಾಗ, ಪೊಲೀಸರು ಭಜರಂಗಿ ಯೂನಿಫಾರಂ ಹಾಕೋದರಲ್ಲಿ ತಪ್ಪೇನಿದೆ. ‘ಫಾಲೋ ದ ಬಾಸ್’ ಅಂದಿದಾರೆ ಅವರು ಅಷ್ಟೇ‌” ಎಂದು ಪತ್ರಕರ್ತ ಶಶಿ ಸಂಪಳ್ಳಿ ಕಮೆಂಟ್ ಮಾಡಿದ್ದಾರೆ.

“ನಾನೂ ಶೇಷಾದ್ರಿಪುರಂ ಪೋಲೀಸ್ ಸ್ಟೇಷನ್, ಉಪ್ಪಾರಪೇಟೆ ಮತ್ತು ಶ್ರೀ ರಾಂಪುರ ಪೋಲೀಸ್ ಸ್ಟೇಷನ್ ಮುಂದೆ ಹಾದು ಹೋಗುವಾಗ ಹೆಚ್ಚು ಕಡಿಮೆ ಇದೇ ಸಂಭ್ರಮ ಇತ್ತು ಅದರಲ್ಲೂ ಲೇಡಿ ಪೋಲಿಸಮ್ಮಂದಿರು ಸಾಕ್ಷಾತ್ ನವದುರ್ಗೆಯರ ಅವತಾರದಲ್ಲಿ ಕಂಗೊಳಿಸುತ್ತಿದ್ದರು…” ಎಂದು ಅನಿಲ್‌ಕುಮಾರ್‌ ಎಂ.ಎನ್. ಎಂಬವರು ಪ್ರತಿಕ್ರಿಯಿಸಿದ್ದಾರೆ.

“ಹಾಗೆಯೇ ರಮ್ಝಾನ್ ಬಕ್ರೀದ್ ಕ್ರಿಸ್ಮಸ್ ಹಬ್ಬಗಳು ಸರ್ಕಾರದ ಇಲಾಖೆಯಲ್ಲಿ ಆಚರಿಸೋಕೆ ಬಿಡ್ತಾರಾ?” ಎಂದು ಅಮಾನ್‌ ಸಾಗರ್‌ ಪ್ರಶ್ನಿಸಿದ್ದಾರೆ.

“ಇಷ್ಟು ದಿನ ಮನಸಿನಲ್ಲಿ ಮಾತ್ರ ಇತ್ತು. ಈಗ ದಿರಿಸಿನಲ್ಲೂ ಬಂತು. ಜೈ ಕರ್ನಾಟಕ ಪೊಲೀಸ್” ಎಂದು ಚಿಂತಕ ಶ್ರೀನಿವಾಸ ಕಾರ್ಕಳ ಅವರು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಗುಂಪಿನ ಮೇಲೆ ಕಾರು ಹತ್ತಿಸಿ ಅಪರಿಚಿತ ಪರಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪೊಲೀಸರು ಈ ರೀತಿಯಲ್ಲಿ ಕೇಸರೀಕರಣಗೊಳ್ಳುತ್ತಿರುವುದು ಕಂಡನಾರ್ಹ.

  2. ಜಾತಿ, ಮತ-ಪಂತ ಮೀರಿ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಕಾರ್ಯಾಂಗದ ಅಚ್ಚುಕಟ್ಟಿನ ಸ್ಥಳದಲ್ಲಿರುವ ಪೋಲಿಸರಿಗೆ ಹೀಗಿರಲು ಅವಕಾಶ ಇದೆಯೆ? ಇಲ್ಲ ಎಂದಾದರೆ ಸರ್ಕಾರ ಏನು ಕ್ರಮ ಕೈಗೊಳ್ಳುತ್ತದೆ? ಅಥವಾ ಇದು ಕೇಸರಿಬಾನ್ ಸರ್ಕಾರವೆ?

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...