Homeಕರ್ನಾಟಕಕರ್ನಾಟಕ ಪೊಲೀಸರ ಬದಲಾದ ಸಮವಸ್ತ್ರ: ತೀವ್ರ ಖಂಡನೆ, ಆತಂಕ

ಕರ್ನಾಟಕ ಪೊಲೀಸರ ಬದಲಾದ ಸಮವಸ್ತ್ರ: ತೀವ್ರ ಖಂಡನೆ, ಆತಂಕ

ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಯೋಗಿ ಆದಿತ್ಯನಾಥ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ: ಸಿದ್ದರಾಮಯ್ಯ

- Advertisement -
- Advertisement -

“ಕರ್ನಾಟಕ ಪೊಲೀಸರ ಸಮವಸ್ತ್ರ ಬದಲಾಗಿದೆ. ಕೇಸರಿಧಾರಿಗಳಾಗಲು ಪೊಲೀಸರು ಸಿದ್ಧವಾಗಿದ್ದಾರೆ” ಎಂದು ಟೀಕೆಗಳು ವ್ಯಕ್ತವಾಗಿವೆ.

ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣೆಯ ಪೊಲೀಸರು ಕೇಸರಿ ಶಾಲು ಧರಿಸಿ, ಬಿಳಿ ಟೋಪಿ, ಕುರ್ತಾ ಧರಿಸಿ ಆಯುಧಪೂಜೆ ಆಚರಿಸಿ, ಗ್ರೂಪ್‌ ಫೋಟೋ ತೆಗೆಸಿಕೊಂಡಿದ್ದಾರೆ. ಹಿಂದೂಗಳ ಹೆಸರಲ್ಲಿ ಮತೀಯವಾದ, ಮತೀಯ ಗೂಂಡಾಗಿರಿ ನಡೆಸುತ್ತಿರುವವರು ಹೆಚ್ಚಾಗುತ್ತಿರುವ ಈ ದಿನಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರೇ ಕೇಸರಿ ಸಮವಸ್ತ್ರ ಧರಿಸಿ ತಮ್ಮ ಅಂತರಂಗವನ್ನು ಹೊರಹಾಕಿದ್ದಾರೆ ಎಂದು ಪ್ರಜ್ಞಾವಂತರು ಆತಂಕ ವ್ಯಕ್ತಪಡಿಸಿದ್ದಾರೆ.

ಇಂತಹದ್ದೇ ಸಮವಸ್ತ್ರವನ್ನು ಉಡುಪಿ ಜಿಲ್ಲೆಯ ಕಾಪು ಪೊಲೀಸ್‌ ಠಾಣೆಯ ಪೊಲೀಸರೂ ಧರಿಸಿ ಹಬ್ಬ ಆಚರಿಸಿದ್ದಾರೆ. ‘ಕನ್ಯ್ಪೂಜ್ ಆಗಬೇಡಿ…! ಇದು ಹಿಂದೂ ಸಂಘಟನೆ ಬೈಟಕ್ ಅಲ್ಲ. ಇದು ನಮ್ಮ ಪೊಲೀಸರ ತಂಡ. ಜೈ ಶ್ರೀರಾಮ್…’ ಎಂದು ಜನರು ಟೀಕೆಗೆ ಒಳಪಡಿಸಿದ್ದಾರೆ.

ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ್‌ ಸೇರಿದಂತೆ ಇತರೆ ಪೊಲೀಸ್ ಸಿಬ್ಬಂದಿ ಹಿಂದೂ ಸಂಘಟನೆಯ ಮುಖಂಡರಂತೆ ಧಿರಿಸು ತೊಟ್ಟಿರುವುದು ಸಾಕಷ್ಟು ಟೀಕೆಗೆ ಕಾರಣವಾಗಿದೆ. “ಆಯುಧಪೂಜೆ ಅಂಗವಾಗಿ ಪೊಲೀಸ್ ಠಾಣೆಗಳಲ್ಲಿ ಮೊದಲಿನಿಂದಲೂ ಶಸ್ತ್ರಾಸ್ತ್ರ ಗಳಿಗೆ ಪೂಜೆ ಸಲ್ಲಿಸುವುದು ಸಂಪ್ರದಾಯ. ಆ ಪ್ರಕಾರ ಅಂದು ಗ್ರಾಮೀಣ ಠಾಣೆಯಲ್ಲೂ ಪೂಜೆ ನಡೆಯಿತು. ಈ ಕಾರ್ಯಕ್ರಮದಲ್ಲಿ ನಾನೂ ಪಾಲ್ಗೊಂಡಿದ್ದೇನೆ. ಇದರಲ್ಲಿ ತಪ್ಪೇನಿಲ್ಲ. ನಾಳೆ ಮುಸ್ಲಿಮರು ಕರೆದರೂ ಹೋಗುವೆ, ನಮಾಜ್ ಮಾಡುವೆ” ಎಂದು ಎಚ್.ಡಿ.ಆನಂದಕುಮಾರ್‌ ಸಮರ್ಥಿಸಿಕೊಂಡಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಸರಣಿ ಟ್ವೀಟ್‌

ಸರಣಿ ಟ್ವೀಟ್‌ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪೊಲೀಸರ ಹೊಸ ಅವತಾರವನ್ನು ಸರಣಿ ಟ್ವೀಟ್‌ಗಳ ಮೂಲಕ ಖಂಡಿಸಿದ್ದಾರೆ.

“ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಮುಖ್ಯಮಂತ್ರಿಯವರೇ, ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ‌ ಕನಸು ನನಸಾಗಬಹುದು” ಎಂದಿದ್ದಾರೆ.

ಪೊಲೀಸರು ಕೇಸರಿಧಾರಿಗಳಾಗಿರುವ ಫೋಟೋಗಳೊಂದಿಗೆ ಟ್ವೀಟ್ ಮಾಡಿರುವ ಅವರು, “ಒಂದೆಡೆ ಅಮಾಯಕ ಯುವಕ-ಯುವತಿಯರ ಮೇಲೆ ಅನೈತಿಕ‌ ಪೊಲೀಸ್‌ಗಿರಿಯ ದೌರ್ಜನ್ಯ…. ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ… ಮತ್ತೊಂದೆಡೆ ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ…. ಇದಕ್ಕೆಲ್ಲ ರಾಜ್ಯದ ಮುಖ್ಯಮಂತ್ರಿಯವರ ಬಹಿರಂಗ ಬೆಂಬಲ.. ರಾಜ್ಯದಲ್ಲಿ ಸರ್ಕಾರ ಇದೆಯೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ‘ಮುಖ್ಯಮಂತ್ರಿಯವರೇ ಮತೀಯ ಗೂಂಡಾಗಿರಿ ಸಮರ್ಥಿಸುವುದು ಅಪಾಯಕಾರಿ ಬೆಳವಣಿಗೆ’

“ಗೂಂಡಾಗಿರಿಯನ್ನು ‘ಕ್ರಿಯೆಗೆ ಪ್ರತಿಕ್ರಿಯೆ’ ಎಂದು ಸಮರ್ಥಿಸಿದ ರಾಜ್ಯದ ಮುಖ್ಯಮಂತ್ರಿಯವರ ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ ಕಾಡಿನ‌ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ. ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ” ಎಂದು ಎಚ್ಚರಿಸಿದ್ದಾರೆ.

“ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಯೋಗಿ ಆದಿತ್ಯನಾಥ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ. ಬೊಮ್ಮಾಯಿಯವರೇ, ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ” ಎಂದು ಆಗ್ರಹಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಖಂಡನೆ

ಲೇಖಕ ನಾಗೇಗೌಡ ಕೀಲಾರ ಶಿವಲಿಂಗಯ್ಯ ಅವರು, “ಪೊಲೀಸ್‌‌ ಸ್ಟೇಷನ್ ಮುಂದೆ ಹಿಂಗೇ ಫೋಟೋ ತೆಗೆಸಿಕೊಂಡಿರುವ ಈ ಗುಂಪಿನಲ್ಲಿ ಪೊಲೀಸಿನವರು ಇದ್ದರೆ ಅಂತಹ ಪೋಲಿಸರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಬೇಕು ಅಲ್ಲವೇ, ಕಾರ್ಯಾಂಗದೊಳಗೆ ಈ ರೀತಿಯ symbolism ಮತ್ತು ಮತಾಂಧತೆ ಇರುವುದು ಸಂವಿಧಾನಕ್ಕೆ ಮಾಡುವ ದ್ರೋಹ ಅಲ್ಲವೇ” ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಅವರ ಪೋಸ್ಟ್‌ಗೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ.

“ಮುಖ್ಯಮಂತ್ರಿಗಳೇ ನೈತಿಕ ಪೊಲೀಸ್ ಗಿರಿ ಪರ ಇರುವಾಗ, ಪೊಲೀಸರು ಭಜರಂಗಿ ಯೂನಿಫಾರಂ ಹಾಕೋದರಲ್ಲಿ ತಪ್ಪೇನಿದೆ. ‘ಫಾಲೋ ದ ಬಾಸ್’ ಅಂದಿದಾರೆ ಅವರು ಅಷ್ಟೇ‌” ಎಂದು ಪತ್ರಕರ್ತ ಶಶಿ ಸಂಪಳ್ಳಿ ಕಮೆಂಟ್ ಮಾಡಿದ್ದಾರೆ.

“ನಾನೂ ಶೇಷಾದ್ರಿಪುರಂ ಪೋಲೀಸ್ ಸ್ಟೇಷನ್, ಉಪ್ಪಾರಪೇಟೆ ಮತ್ತು ಶ್ರೀ ರಾಂಪುರ ಪೋಲೀಸ್ ಸ್ಟೇಷನ್ ಮುಂದೆ ಹಾದು ಹೋಗುವಾಗ ಹೆಚ್ಚು ಕಡಿಮೆ ಇದೇ ಸಂಭ್ರಮ ಇತ್ತು ಅದರಲ್ಲೂ ಲೇಡಿ ಪೋಲಿಸಮ್ಮಂದಿರು ಸಾಕ್ಷಾತ್ ನವದುರ್ಗೆಯರ ಅವತಾರದಲ್ಲಿ ಕಂಗೊಳಿಸುತ್ತಿದ್ದರು…” ಎಂದು ಅನಿಲ್‌ಕುಮಾರ್‌ ಎಂ.ಎನ್. ಎಂಬವರು ಪ್ರತಿಕ್ರಿಯಿಸಿದ್ದಾರೆ.

“ಹಾಗೆಯೇ ರಮ್ಝಾನ್ ಬಕ್ರೀದ್ ಕ್ರಿಸ್ಮಸ್ ಹಬ್ಬಗಳು ಸರ್ಕಾರದ ಇಲಾಖೆಯಲ್ಲಿ ಆಚರಿಸೋಕೆ ಬಿಡ್ತಾರಾ?” ಎಂದು ಅಮಾನ್‌ ಸಾಗರ್‌ ಪ್ರಶ್ನಿಸಿದ್ದಾರೆ.

“ಇಷ್ಟು ದಿನ ಮನಸಿನಲ್ಲಿ ಮಾತ್ರ ಇತ್ತು. ಈಗ ದಿರಿಸಿನಲ್ಲೂ ಬಂತು. ಜೈ ಕರ್ನಾಟಕ ಪೊಲೀಸ್” ಎಂದು ಚಿಂತಕ ಶ್ರೀನಿವಾಸ ಕಾರ್ಕಳ ಅವರು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಗುಂಪಿನ ಮೇಲೆ ಕಾರು ಹತ್ತಿಸಿ ಅಪರಿಚಿತ ಪರಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪೊಲೀಸರು ಈ ರೀತಿಯಲ್ಲಿ ಕೇಸರೀಕರಣಗೊಳ್ಳುತ್ತಿರುವುದು ಕಂಡನಾರ್ಹ.

  2. ಜಾತಿ, ಮತ-ಪಂತ ಮೀರಿ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಕಾರ್ಯಾಂಗದ ಅಚ್ಚುಕಟ್ಟಿನ ಸ್ಥಳದಲ್ಲಿರುವ ಪೋಲಿಸರಿಗೆ ಹೀಗಿರಲು ಅವಕಾಶ ಇದೆಯೆ? ಇಲ್ಲ ಎಂದಾದರೆ ಸರ್ಕಾರ ಏನು ಕ್ರಮ ಕೈಗೊಳ್ಳುತ್ತದೆ? ಅಥವಾ ಇದು ಕೇಸರಿಬಾನ್ ಸರ್ಕಾರವೆ?

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...