Homeಕರ್ನಾಟಕಕರ್ನಾಟಕ ಪೊಲೀಸರ ಬದಲಾದ ಸಮವಸ್ತ್ರ: ತೀವ್ರ ಖಂಡನೆ, ಆತಂಕ

ಕರ್ನಾಟಕ ಪೊಲೀಸರ ಬದಲಾದ ಸಮವಸ್ತ್ರ: ತೀವ್ರ ಖಂಡನೆ, ಆತಂಕ

ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಯೋಗಿ ಆದಿತ್ಯನಾಥ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ: ಸಿದ್ದರಾಮಯ್ಯ

- Advertisement -
- Advertisement -

“ಕರ್ನಾಟಕ ಪೊಲೀಸರ ಸಮವಸ್ತ್ರ ಬದಲಾಗಿದೆ. ಕೇಸರಿಧಾರಿಗಳಾಗಲು ಪೊಲೀಸರು ಸಿದ್ಧವಾಗಿದ್ದಾರೆ” ಎಂದು ಟೀಕೆಗಳು ವ್ಯಕ್ತವಾಗಿವೆ.

ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣೆಯ ಪೊಲೀಸರು ಕೇಸರಿ ಶಾಲು ಧರಿಸಿ, ಬಿಳಿ ಟೋಪಿ, ಕುರ್ತಾ ಧರಿಸಿ ಆಯುಧಪೂಜೆ ಆಚರಿಸಿ, ಗ್ರೂಪ್‌ ಫೋಟೋ ತೆಗೆಸಿಕೊಂಡಿದ್ದಾರೆ. ಹಿಂದೂಗಳ ಹೆಸರಲ್ಲಿ ಮತೀಯವಾದ, ಮತೀಯ ಗೂಂಡಾಗಿರಿ ನಡೆಸುತ್ತಿರುವವರು ಹೆಚ್ಚಾಗುತ್ತಿರುವ ಈ ದಿನಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರೇ ಕೇಸರಿ ಸಮವಸ್ತ್ರ ಧರಿಸಿ ತಮ್ಮ ಅಂತರಂಗವನ್ನು ಹೊರಹಾಕಿದ್ದಾರೆ ಎಂದು ಪ್ರಜ್ಞಾವಂತರು ಆತಂಕ ವ್ಯಕ್ತಪಡಿಸಿದ್ದಾರೆ.

ಇಂತಹದ್ದೇ ಸಮವಸ್ತ್ರವನ್ನು ಉಡುಪಿ ಜಿಲ್ಲೆಯ ಕಾಪು ಪೊಲೀಸ್‌ ಠಾಣೆಯ ಪೊಲೀಸರೂ ಧರಿಸಿ ಹಬ್ಬ ಆಚರಿಸಿದ್ದಾರೆ. ‘ಕನ್ಯ್ಪೂಜ್ ಆಗಬೇಡಿ…! ಇದು ಹಿಂದೂ ಸಂಘಟನೆ ಬೈಟಕ್ ಅಲ್ಲ. ಇದು ನಮ್ಮ ಪೊಲೀಸರ ತಂಡ. ಜೈ ಶ್ರೀರಾಮ್…’ ಎಂದು ಜನರು ಟೀಕೆಗೆ ಒಳಪಡಿಸಿದ್ದಾರೆ.

ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ್‌ ಸೇರಿದಂತೆ ಇತರೆ ಪೊಲೀಸ್ ಸಿಬ್ಬಂದಿ ಹಿಂದೂ ಸಂಘಟನೆಯ ಮುಖಂಡರಂತೆ ಧಿರಿಸು ತೊಟ್ಟಿರುವುದು ಸಾಕಷ್ಟು ಟೀಕೆಗೆ ಕಾರಣವಾಗಿದೆ. “ಆಯುಧಪೂಜೆ ಅಂಗವಾಗಿ ಪೊಲೀಸ್ ಠಾಣೆಗಳಲ್ಲಿ ಮೊದಲಿನಿಂದಲೂ ಶಸ್ತ್ರಾಸ್ತ್ರ ಗಳಿಗೆ ಪೂಜೆ ಸಲ್ಲಿಸುವುದು ಸಂಪ್ರದಾಯ. ಆ ಪ್ರಕಾರ ಅಂದು ಗ್ರಾಮೀಣ ಠಾಣೆಯಲ್ಲೂ ಪೂಜೆ ನಡೆಯಿತು. ಈ ಕಾರ್ಯಕ್ರಮದಲ್ಲಿ ನಾನೂ ಪಾಲ್ಗೊಂಡಿದ್ದೇನೆ. ಇದರಲ್ಲಿ ತಪ್ಪೇನಿಲ್ಲ. ನಾಳೆ ಮುಸ್ಲಿಮರು ಕರೆದರೂ ಹೋಗುವೆ, ನಮಾಜ್ ಮಾಡುವೆ” ಎಂದು ಎಚ್.ಡಿ.ಆನಂದಕುಮಾರ್‌ ಸಮರ್ಥಿಸಿಕೊಂಡಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಸರಣಿ ಟ್ವೀಟ್‌

ಸರಣಿ ಟ್ವೀಟ್‌ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪೊಲೀಸರ ಹೊಸ ಅವತಾರವನ್ನು ಸರಣಿ ಟ್ವೀಟ್‌ಗಳ ಮೂಲಕ ಖಂಡಿಸಿದ್ದಾರೆ.

“ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಮುಖ್ಯಮಂತ್ರಿಯವರೇ, ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ‌ ಕನಸು ನನಸಾಗಬಹುದು” ಎಂದಿದ್ದಾರೆ.

ಪೊಲೀಸರು ಕೇಸರಿಧಾರಿಗಳಾಗಿರುವ ಫೋಟೋಗಳೊಂದಿಗೆ ಟ್ವೀಟ್ ಮಾಡಿರುವ ಅವರು, “ಒಂದೆಡೆ ಅಮಾಯಕ ಯುವಕ-ಯುವತಿಯರ ಮೇಲೆ ಅನೈತಿಕ‌ ಪೊಲೀಸ್‌ಗಿರಿಯ ದೌರ್ಜನ್ಯ…. ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ… ಮತ್ತೊಂದೆಡೆ ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ…. ಇದಕ್ಕೆಲ್ಲ ರಾಜ್ಯದ ಮುಖ್ಯಮಂತ್ರಿಯವರ ಬಹಿರಂಗ ಬೆಂಬಲ.. ರಾಜ್ಯದಲ್ಲಿ ಸರ್ಕಾರ ಇದೆಯೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ‘ಮುಖ್ಯಮಂತ್ರಿಯವರೇ ಮತೀಯ ಗೂಂಡಾಗಿರಿ ಸಮರ್ಥಿಸುವುದು ಅಪಾಯಕಾರಿ ಬೆಳವಣಿಗೆ’

“ಗೂಂಡಾಗಿರಿಯನ್ನು ‘ಕ್ರಿಯೆಗೆ ಪ್ರತಿಕ್ರಿಯೆ’ ಎಂದು ಸಮರ್ಥಿಸಿದ ರಾಜ್ಯದ ಮುಖ್ಯಮಂತ್ರಿಯವರ ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ ಕಾಡಿನ‌ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ. ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ” ಎಂದು ಎಚ್ಚರಿಸಿದ್ದಾರೆ.

“ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಯೋಗಿ ಆದಿತ್ಯನಾಥ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ. ಬೊಮ್ಮಾಯಿಯವರೇ, ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ” ಎಂದು ಆಗ್ರಹಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಖಂಡನೆ

ಲೇಖಕ ನಾಗೇಗೌಡ ಕೀಲಾರ ಶಿವಲಿಂಗಯ್ಯ ಅವರು, “ಪೊಲೀಸ್‌‌ ಸ್ಟೇಷನ್ ಮುಂದೆ ಹಿಂಗೇ ಫೋಟೋ ತೆಗೆಸಿಕೊಂಡಿರುವ ಈ ಗುಂಪಿನಲ್ಲಿ ಪೊಲೀಸಿನವರು ಇದ್ದರೆ ಅಂತಹ ಪೋಲಿಸರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಬೇಕು ಅಲ್ಲವೇ, ಕಾರ್ಯಾಂಗದೊಳಗೆ ಈ ರೀತಿಯ symbolism ಮತ್ತು ಮತಾಂಧತೆ ಇರುವುದು ಸಂವಿಧಾನಕ್ಕೆ ಮಾಡುವ ದ್ರೋಹ ಅಲ್ಲವೇ” ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಅವರ ಪೋಸ್ಟ್‌ಗೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ.

“ಮುಖ್ಯಮಂತ್ರಿಗಳೇ ನೈತಿಕ ಪೊಲೀಸ್ ಗಿರಿ ಪರ ಇರುವಾಗ, ಪೊಲೀಸರು ಭಜರಂಗಿ ಯೂನಿಫಾರಂ ಹಾಕೋದರಲ್ಲಿ ತಪ್ಪೇನಿದೆ. ‘ಫಾಲೋ ದ ಬಾಸ್’ ಅಂದಿದಾರೆ ಅವರು ಅಷ್ಟೇ‌” ಎಂದು ಪತ್ರಕರ್ತ ಶಶಿ ಸಂಪಳ್ಳಿ ಕಮೆಂಟ್ ಮಾಡಿದ್ದಾರೆ.

“ನಾನೂ ಶೇಷಾದ್ರಿಪುರಂ ಪೋಲೀಸ್ ಸ್ಟೇಷನ್, ಉಪ್ಪಾರಪೇಟೆ ಮತ್ತು ಶ್ರೀ ರಾಂಪುರ ಪೋಲೀಸ್ ಸ್ಟೇಷನ್ ಮುಂದೆ ಹಾದು ಹೋಗುವಾಗ ಹೆಚ್ಚು ಕಡಿಮೆ ಇದೇ ಸಂಭ್ರಮ ಇತ್ತು ಅದರಲ್ಲೂ ಲೇಡಿ ಪೋಲಿಸಮ್ಮಂದಿರು ಸಾಕ್ಷಾತ್ ನವದುರ್ಗೆಯರ ಅವತಾರದಲ್ಲಿ ಕಂಗೊಳಿಸುತ್ತಿದ್ದರು…” ಎಂದು ಅನಿಲ್‌ಕುಮಾರ್‌ ಎಂ.ಎನ್. ಎಂಬವರು ಪ್ರತಿಕ್ರಿಯಿಸಿದ್ದಾರೆ.

“ಹಾಗೆಯೇ ರಮ್ಝಾನ್ ಬಕ್ರೀದ್ ಕ್ರಿಸ್ಮಸ್ ಹಬ್ಬಗಳು ಸರ್ಕಾರದ ಇಲಾಖೆಯಲ್ಲಿ ಆಚರಿಸೋಕೆ ಬಿಡ್ತಾರಾ?” ಎಂದು ಅಮಾನ್‌ ಸಾಗರ್‌ ಪ್ರಶ್ನಿಸಿದ್ದಾರೆ.

“ಇಷ್ಟು ದಿನ ಮನಸಿನಲ್ಲಿ ಮಾತ್ರ ಇತ್ತು. ಈಗ ದಿರಿಸಿನಲ್ಲೂ ಬಂತು. ಜೈ ಕರ್ನಾಟಕ ಪೊಲೀಸ್” ಎಂದು ಚಿಂತಕ ಶ್ರೀನಿವಾಸ ಕಾರ್ಕಳ ಅವರು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಗುಂಪಿನ ಮೇಲೆ ಕಾರು ಹತ್ತಿಸಿ ಅಪರಿಚಿತ ಪರಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪೊಲೀಸರು ಈ ರೀತಿಯಲ್ಲಿ ಕೇಸರೀಕರಣಗೊಳ್ಳುತ್ತಿರುವುದು ಕಂಡನಾರ್ಹ.

  2. ಜಾತಿ, ಮತ-ಪಂತ ಮೀರಿ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಕಾರ್ಯಾಂಗದ ಅಚ್ಚುಕಟ್ಟಿನ ಸ್ಥಳದಲ್ಲಿರುವ ಪೋಲಿಸರಿಗೆ ಹೀಗಿರಲು ಅವಕಾಶ ಇದೆಯೆ? ಇಲ್ಲ ಎಂದಾದರೆ ಸರ್ಕಾರ ಏನು ಕ್ರಮ ಕೈಗೊಳ್ಳುತ್ತದೆ? ಅಥವಾ ಇದು ಕೇಸರಿಬಾನ್ ಸರ್ಕಾರವೆ?

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...