Homeಕರ್ನಾಟಕಕರ್ನಾಟಕ ಪೊಲೀಸರ ಬದಲಾದ ಸಮವಸ್ತ್ರ: ತೀವ್ರ ಖಂಡನೆ, ಆತಂಕ

ಕರ್ನಾಟಕ ಪೊಲೀಸರ ಬದಲಾದ ಸಮವಸ್ತ್ರ: ತೀವ್ರ ಖಂಡನೆ, ಆತಂಕ

ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಯೋಗಿ ಆದಿತ್ಯನಾಥ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ: ಸಿದ್ದರಾಮಯ್ಯ

- Advertisement -
- Advertisement -

“ಕರ್ನಾಟಕ ಪೊಲೀಸರ ಸಮವಸ್ತ್ರ ಬದಲಾಗಿದೆ. ಕೇಸರಿಧಾರಿಗಳಾಗಲು ಪೊಲೀಸರು ಸಿದ್ಧವಾಗಿದ್ದಾರೆ” ಎಂದು ಟೀಕೆಗಳು ವ್ಯಕ್ತವಾಗಿವೆ.

ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣೆಯ ಪೊಲೀಸರು ಕೇಸರಿ ಶಾಲು ಧರಿಸಿ, ಬಿಳಿ ಟೋಪಿ, ಕುರ್ತಾ ಧರಿಸಿ ಆಯುಧಪೂಜೆ ಆಚರಿಸಿ, ಗ್ರೂಪ್‌ ಫೋಟೋ ತೆಗೆಸಿಕೊಂಡಿದ್ದಾರೆ. ಹಿಂದೂಗಳ ಹೆಸರಲ್ಲಿ ಮತೀಯವಾದ, ಮತೀಯ ಗೂಂಡಾಗಿರಿ ನಡೆಸುತ್ತಿರುವವರು ಹೆಚ್ಚಾಗುತ್ತಿರುವ ಈ ದಿನಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರೇ ಕೇಸರಿ ಸಮವಸ್ತ್ರ ಧರಿಸಿ ತಮ್ಮ ಅಂತರಂಗವನ್ನು ಹೊರಹಾಕಿದ್ದಾರೆ ಎಂದು ಪ್ರಜ್ಞಾವಂತರು ಆತಂಕ ವ್ಯಕ್ತಪಡಿಸಿದ್ದಾರೆ.

ಇಂತಹದ್ದೇ ಸಮವಸ್ತ್ರವನ್ನು ಉಡುಪಿ ಜಿಲ್ಲೆಯ ಕಾಪು ಪೊಲೀಸ್‌ ಠಾಣೆಯ ಪೊಲೀಸರೂ ಧರಿಸಿ ಹಬ್ಬ ಆಚರಿಸಿದ್ದಾರೆ. ‘ಕನ್ಯ್ಪೂಜ್ ಆಗಬೇಡಿ…! ಇದು ಹಿಂದೂ ಸಂಘಟನೆ ಬೈಟಕ್ ಅಲ್ಲ. ಇದು ನಮ್ಮ ಪೊಲೀಸರ ತಂಡ. ಜೈ ಶ್ರೀರಾಮ್…’ ಎಂದು ಜನರು ಟೀಕೆಗೆ ಒಳಪಡಿಸಿದ್ದಾರೆ.

ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ್‌ ಸೇರಿದಂತೆ ಇತರೆ ಪೊಲೀಸ್ ಸಿಬ್ಬಂದಿ ಹಿಂದೂ ಸಂಘಟನೆಯ ಮುಖಂಡರಂತೆ ಧಿರಿಸು ತೊಟ್ಟಿರುವುದು ಸಾಕಷ್ಟು ಟೀಕೆಗೆ ಕಾರಣವಾಗಿದೆ. “ಆಯುಧಪೂಜೆ ಅಂಗವಾಗಿ ಪೊಲೀಸ್ ಠಾಣೆಗಳಲ್ಲಿ ಮೊದಲಿನಿಂದಲೂ ಶಸ್ತ್ರಾಸ್ತ್ರ ಗಳಿಗೆ ಪೂಜೆ ಸಲ್ಲಿಸುವುದು ಸಂಪ್ರದಾಯ. ಆ ಪ್ರಕಾರ ಅಂದು ಗ್ರಾಮೀಣ ಠಾಣೆಯಲ್ಲೂ ಪೂಜೆ ನಡೆಯಿತು. ಈ ಕಾರ್ಯಕ್ರಮದಲ್ಲಿ ನಾನೂ ಪಾಲ್ಗೊಂಡಿದ್ದೇನೆ. ಇದರಲ್ಲಿ ತಪ್ಪೇನಿಲ್ಲ. ನಾಳೆ ಮುಸ್ಲಿಮರು ಕರೆದರೂ ಹೋಗುವೆ, ನಮಾಜ್ ಮಾಡುವೆ” ಎಂದು ಎಚ್.ಡಿ.ಆನಂದಕುಮಾರ್‌ ಸಮರ್ಥಿಸಿಕೊಂಡಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಸರಣಿ ಟ್ವೀಟ್‌

ಸರಣಿ ಟ್ವೀಟ್‌ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪೊಲೀಸರ ಹೊಸ ಅವತಾರವನ್ನು ಸರಣಿ ಟ್ವೀಟ್‌ಗಳ ಮೂಲಕ ಖಂಡಿಸಿದ್ದಾರೆ.

“ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಮುಖ್ಯಮಂತ್ರಿಯವರೇ, ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ‌ ಕನಸು ನನಸಾಗಬಹುದು” ಎಂದಿದ್ದಾರೆ.

ಪೊಲೀಸರು ಕೇಸರಿಧಾರಿಗಳಾಗಿರುವ ಫೋಟೋಗಳೊಂದಿಗೆ ಟ್ವೀಟ್ ಮಾಡಿರುವ ಅವರು, “ಒಂದೆಡೆ ಅಮಾಯಕ ಯುವಕ-ಯುವತಿಯರ ಮೇಲೆ ಅನೈತಿಕ‌ ಪೊಲೀಸ್‌ಗಿರಿಯ ದೌರ್ಜನ್ಯ…. ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ… ಮತ್ತೊಂದೆಡೆ ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ…. ಇದಕ್ಕೆಲ್ಲ ರಾಜ್ಯದ ಮುಖ್ಯಮಂತ್ರಿಯವರ ಬಹಿರಂಗ ಬೆಂಬಲ.. ರಾಜ್ಯದಲ್ಲಿ ಸರ್ಕಾರ ಇದೆಯೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ‘ಮುಖ್ಯಮಂತ್ರಿಯವರೇ ಮತೀಯ ಗೂಂಡಾಗಿರಿ ಸಮರ್ಥಿಸುವುದು ಅಪಾಯಕಾರಿ ಬೆಳವಣಿಗೆ’

“ಗೂಂಡಾಗಿರಿಯನ್ನು ‘ಕ್ರಿಯೆಗೆ ಪ್ರತಿಕ್ರಿಯೆ’ ಎಂದು ಸಮರ್ಥಿಸಿದ ರಾಜ್ಯದ ಮುಖ್ಯಮಂತ್ರಿಯವರ ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ ಕಾಡಿನ‌ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ. ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ” ಎಂದು ಎಚ್ಚರಿಸಿದ್ದಾರೆ.

“ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಯೋಗಿ ಆದಿತ್ಯನಾಥ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ. ಬೊಮ್ಮಾಯಿಯವರೇ, ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ” ಎಂದು ಆಗ್ರಹಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಖಂಡನೆ

ಲೇಖಕ ನಾಗೇಗೌಡ ಕೀಲಾರ ಶಿವಲಿಂಗಯ್ಯ ಅವರು, “ಪೊಲೀಸ್‌‌ ಸ್ಟೇಷನ್ ಮುಂದೆ ಹಿಂಗೇ ಫೋಟೋ ತೆಗೆಸಿಕೊಂಡಿರುವ ಈ ಗುಂಪಿನಲ್ಲಿ ಪೊಲೀಸಿನವರು ಇದ್ದರೆ ಅಂತಹ ಪೋಲಿಸರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಬೇಕು ಅಲ್ಲವೇ, ಕಾರ್ಯಾಂಗದೊಳಗೆ ಈ ರೀತಿಯ symbolism ಮತ್ತು ಮತಾಂಧತೆ ಇರುವುದು ಸಂವಿಧಾನಕ್ಕೆ ಮಾಡುವ ದ್ರೋಹ ಅಲ್ಲವೇ” ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಅವರ ಪೋಸ್ಟ್‌ಗೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ.

“ಮುಖ್ಯಮಂತ್ರಿಗಳೇ ನೈತಿಕ ಪೊಲೀಸ್ ಗಿರಿ ಪರ ಇರುವಾಗ, ಪೊಲೀಸರು ಭಜರಂಗಿ ಯೂನಿಫಾರಂ ಹಾಕೋದರಲ್ಲಿ ತಪ್ಪೇನಿದೆ. ‘ಫಾಲೋ ದ ಬಾಸ್’ ಅಂದಿದಾರೆ ಅವರು ಅಷ್ಟೇ‌” ಎಂದು ಪತ್ರಕರ್ತ ಶಶಿ ಸಂಪಳ್ಳಿ ಕಮೆಂಟ್ ಮಾಡಿದ್ದಾರೆ.

“ನಾನೂ ಶೇಷಾದ್ರಿಪುರಂ ಪೋಲೀಸ್ ಸ್ಟೇಷನ್, ಉಪ್ಪಾರಪೇಟೆ ಮತ್ತು ಶ್ರೀ ರಾಂಪುರ ಪೋಲೀಸ್ ಸ್ಟೇಷನ್ ಮುಂದೆ ಹಾದು ಹೋಗುವಾಗ ಹೆಚ್ಚು ಕಡಿಮೆ ಇದೇ ಸಂಭ್ರಮ ಇತ್ತು ಅದರಲ್ಲೂ ಲೇಡಿ ಪೋಲಿಸಮ್ಮಂದಿರು ಸಾಕ್ಷಾತ್ ನವದುರ್ಗೆಯರ ಅವತಾರದಲ್ಲಿ ಕಂಗೊಳಿಸುತ್ತಿದ್ದರು…” ಎಂದು ಅನಿಲ್‌ಕುಮಾರ್‌ ಎಂ.ಎನ್. ಎಂಬವರು ಪ್ರತಿಕ್ರಿಯಿಸಿದ್ದಾರೆ.

“ಹಾಗೆಯೇ ರಮ್ಝಾನ್ ಬಕ್ರೀದ್ ಕ್ರಿಸ್ಮಸ್ ಹಬ್ಬಗಳು ಸರ್ಕಾರದ ಇಲಾಖೆಯಲ್ಲಿ ಆಚರಿಸೋಕೆ ಬಿಡ್ತಾರಾ?” ಎಂದು ಅಮಾನ್‌ ಸಾಗರ್‌ ಪ್ರಶ್ನಿಸಿದ್ದಾರೆ.

“ಇಷ್ಟು ದಿನ ಮನಸಿನಲ್ಲಿ ಮಾತ್ರ ಇತ್ತು. ಈಗ ದಿರಿಸಿನಲ್ಲೂ ಬಂತು. ಜೈ ಕರ್ನಾಟಕ ಪೊಲೀಸ್” ಎಂದು ಚಿಂತಕ ಶ್ರೀನಿವಾಸ ಕಾರ್ಕಳ ಅವರು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಗುಂಪಿನ ಮೇಲೆ ಕಾರು ಹತ್ತಿಸಿ ಅಪರಿಚಿತ ಪರಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪೊಲೀಸರು ಈ ರೀತಿಯಲ್ಲಿ ಕೇಸರೀಕರಣಗೊಳ್ಳುತ್ತಿರುವುದು ಕಂಡನಾರ್ಹ.

  2. ಜಾತಿ, ಮತ-ಪಂತ ಮೀರಿ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಕಾರ್ಯಾಂಗದ ಅಚ್ಚುಕಟ್ಟಿನ ಸ್ಥಳದಲ್ಲಿರುವ ಪೋಲಿಸರಿಗೆ ಹೀಗಿರಲು ಅವಕಾಶ ಇದೆಯೆ? ಇಲ್ಲ ಎಂದಾದರೆ ಸರ್ಕಾರ ಏನು ಕ್ರಮ ಕೈಗೊಳ್ಳುತ್ತದೆ? ಅಥವಾ ಇದು ಕೇಸರಿಬಾನ್ ಸರ್ಕಾರವೆ?

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...