Homeಕರ್ನಾಟಕಕರ್ನಾಟಕ ಪೊಲೀಸರ ಬದಲಾದ ಸಮವಸ್ತ್ರ: ತೀವ್ರ ಖಂಡನೆ, ಆತಂಕ

ಕರ್ನಾಟಕ ಪೊಲೀಸರ ಬದಲಾದ ಸಮವಸ್ತ್ರ: ತೀವ್ರ ಖಂಡನೆ, ಆತಂಕ

ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಯೋಗಿ ಆದಿತ್ಯನಾಥ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ: ಸಿದ್ದರಾಮಯ್ಯ

- Advertisement -
- Advertisement -

“ಕರ್ನಾಟಕ ಪೊಲೀಸರ ಸಮವಸ್ತ್ರ ಬದಲಾಗಿದೆ. ಕೇಸರಿಧಾರಿಗಳಾಗಲು ಪೊಲೀಸರು ಸಿದ್ಧವಾಗಿದ್ದಾರೆ” ಎಂದು ಟೀಕೆಗಳು ವ್ಯಕ್ತವಾಗಿವೆ.

ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣೆಯ ಪೊಲೀಸರು ಕೇಸರಿ ಶಾಲು ಧರಿಸಿ, ಬಿಳಿ ಟೋಪಿ, ಕುರ್ತಾ ಧರಿಸಿ ಆಯುಧಪೂಜೆ ಆಚರಿಸಿ, ಗ್ರೂಪ್‌ ಫೋಟೋ ತೆಗೆಸಿಕೊಂಡಿದ್ದಾರೆ. ಹಿಂದೂಗಳ ಹೆಸರಲ್ಲಿ ಮತೀಯವಾದ, ಮತೀಯ ಗೂಂಡಾಗಿರಿ ನಡೆಸುತ್ತಿರುವವರು ಹೆಚ್ಚಾಗುತ್ತಿರುವ ಈ ದಿನಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರೇ ಕೇಸರಿ ಸಮವಸ್ತ್ರ ಧರಿಸಿ ತಮ್ಮ ಅಂತರಂಗವನ್ನು ಹೊರಹಾಕಿದ್ದಾರೆ ಎಂದು ಪ್ರಜ್ಞಾವಂತರು ಆತಂಕ ವ್ಯಕ್ತಪಡಿಸಿದ್ದಾರೆ.

ಇಂತಹದ್ದೇ ಸಮವಸ್ತ್ರವನ್ನು ಉಡುಪಿ ಜಿಲ್ಲೆಯ ಕಾಪು ಪೊಲೀಸ್‌ ಠಾಣೆಯ ಪೊಲೀಸರೂ ಧರಿಸಿ ಹಬ್ಬ ಆಚರಿಸಿದ್ದಾರೆ. ‘ಕನ್ಯ್ಪೂಜ್ ಆಗಬೇಡಿ…! ಇದು ಹಿಂದೂ ಸಂಘಟನೆ ಬೈಟಕ್ ಅಲ್ಲ. ಇದು ನಮ್ಮ ಪೊಲೀಸರ ತಂಡ. ಜೈ ಶ್ರೀರಾಮ್…’ ಎಂದು ಜನರು ಟೀಕೆಗೆ ಒಳಪಡಿಸಿದ್ದಾರೆ.

ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ್‌ ಸೇರಿದಂತೆ ಇತರೆ ಪೊಲೀಸ್ ಸಿಬ್ಬಂದಿ ಹಿಂದೂ ಸಂಘಟನೆಯ ಮುಖಂಡರಂತೆ ಧಿರಿಸು ತೊಟ್ಟಿರುವುದು ಸಾಕಷ್ಟು ಟೀಕೆಗೆ ಕಾರಣವಾಗಿದೆ. “ಆಯುಧಪೂಜೆ ಅಂಗವಾಗಿ ಪೊಲೀಸ್ ಠಾಣೆಗಳಲ್ಲಿ ಮೊದಲಿನಿಂದಲೂ ಶಸ್ತ್ರಾಸ್ತ್ರ ಗಳಿಗೆ ಪೂಜೆ ಸಲ್ಲಿಸುವುದು ಸಂಪ್ರದಾಯ. ಆ ಪ್ರಕಾರ ಅಂದು ಗ್ರಾಮೀಣ ಠಾಣೆಯಲ್ಲೂ ಪೂಜೆ ನಡೆಯಿತು. ಈ ಕಾರ್ಯಕ್ರಮದಲ್ಲಿ ನಾನೂ ಪಾಲ್ಗೊಂಡಿದ್ದೇನೆ. ಇದರಲ್ಲಿ ತಪ್ಪೇನಿಲ್ಲ. ನಾಳೆ ಮುಸ್ಲಿಮರು ಕರೆದರೂ ಹೋಗುವೆ, ನಮಾಜ್ ಮಾಡುವೆ” ಎಂದು ಎಚ್.ಡಿ.ಆನಂದಕುಮಾರ್‌ ಸಮರ್ಥಿಸಿಕೊಂಡಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಸರಣಿ ಟ್ವೀಟ್‌

ಸರಣಿ ಟ್ವೀಟ್‌ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪೊಲೀಸರ ಹೊಸ ಅವತಾರವನ್ನು ಸರಣಿ ಟ್ವೀಟ್‌ಗಳ ಮೂಲಕ ಖಂಡಿಸಿದ್ದಾರೆ.

“ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಮುಖ್ಯಮಂತ್ರಿಯವರೇ, ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ‌ ಕನಸು ನನಸಾಗಬಹುದು” ಎಂದಿದ್ದಾರೆ.

ಪೊಲೀಸರು ಕೇಸರಿಧಾರಿಗಳಾಗಿರುವ ಫೋಟೋಗಳೊಂದಿಗೆ ಟ್ವೀಟ್ ಮಾಡಿರುವ ಅವರು, “ಒಂದೆಡೆ ಅಮಾಯಕ ಯುವಕ-ಯುವತಿಯರ ಮೇಲೆ ಅನೈತಿಕ‌ ಪೊಲೀಸ್‌ಗಿರಿಯ ದೌರ್ಜನ್ಯ…. ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ… ಮತ್ತೊಂದೆಡೆ ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ…. ಇದಕ್ಕೆಲ್ಲ ರಾಜ್ಯದ ಮುಖ್ಯಮಂತ್ರಿಯವರ ಬಹಿರಂಗ ಬೆಂಬಲ.. ರಾಜ್ಯದಲ್ಲಿ ಸರ್ಕಾರ ಇದೆಯೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ‘ಮುಖ್ಯಮಂತ್ರಿಯವರೇ ಮತೀಯ ಗೂಂಡಾಗಿರಿ ಸಮರ್ಥಿಸುವುದು ಅಪಾಯಕಾರಿ ಬೆಳವಣಿಗೆ’

“ಗೂಂಡಾಗಿರಿಯನ್ನು ‘ಕ್ರಿಯೆಗೆ ಪ್ರತಿಕ್ರಿಯೆ’ ಎಂದು ಸಮರ್ಥಿಸಿದ ರಾಜ್ಯದ ಮುಖ್ಯಮಂತ್ರಿಯವರ ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ ಕಾಡಿನ‌ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ. ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ” ಎಂದು ಎಚ್ಚರಿಸಿದ್ದಾರೆ.

“ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಯೋಗಿ ಆದಿತ್ಯನಾಥ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ. ಬೊಮ್ಮಾಯಿಯವರೇ, ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ” ಎಂದು ಆಗ್ರಹಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಖಂಡನೆ

ಲೇಖಕ ನಾಗೇಗೌಡ ಕೀಲಾರ ಶಿವಲಿಂಗಯ್ಯ ಅವರು, “ಪೊಲೀಸ್‌‌ ಸ್ಟೇಷನ್ ಮುಂದೆ ಹಿಂಗೇ ಫೋಟೋ ತೆಗೆಸಿಕೊಂಡಿರುವ ಈ ಗುಂಪಿನಲ್ಲಿ ಪೊಲೀಸಿನವರು ಇದ್ದರೆ ಅಂತಹ ಪೋಲಿಸರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಬೇಕು ಅಲ್ಲವೇ, ಕಾರ್ಯಾಂಗದೊಳಗೆ ಈ ರೀತಿಯ symbolism ಮತ್ತು ಮತಾಂಧತೆ ಇರುವುದು ಸಂವಿಧಾನಕ್ಕೆ ಮಾಡುವ ದ್ರೋಹ ಅಲ್ಲವೇ” ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಅವರ ಪೋಸ್ಟ್‌ಗೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ.

“ಮುಖ್ಯಮಂತ್ರಿಗಳೇ ನೈತಿಕ ಪೊಲೀಸ್ ಗಿರಿ ಪರ ಇರುವಾಗ, ಪೊಲೀಸರು ಭಜರಂಗಿ ಯೂನಿಫಾರಂ ಹಾಕೋದರಲ್ಲಿ ತಪ್ಪೇನಿದೆ. ‘ಫಾಲೋ ದ ಬಾಸ್’ ಅಂದಿದಾರೆ ಅವರು ಅಷ್ಟೇ‌” ಎಂದು ಪತ್ರಕರ್ತ ಶಶಿ ಸಂಪಳ್ಳಿ ಕಮೆಂಟ್ ಮಾಡಿದ್ದಾರೆ.

“ನಾನೂ ಶೇಷಾದ್ರಿಪುರಂ ಪೋಲೀಸ್ ಸ್ಟೇಷನ್, ಉಪ್ಪಾರಪೇಟೆ ಮತ್ತು ಶ್ರೀ ರಾಂಪುರ ಪೋಲೀಸ್ ಸ್ಟೇಷನ್ ಮುಂದೆ ಹಾದು ಹೋಗುವಾಗ ಹೆಚ್ಚು ಕಡಿಮೆ ಇದೇ ಸಂಭ್ರಮ ಇತ್ತು ಅದರಲ್ಲೂ ಲೇಡಿ ಪೋಲಿಸಮ್ಮಂದಿರು ಸಾಕ್ಷಾತ್ ನವದುರ್ಗೆಯರ ಅವತಾರದಲ್ಲಿ ಕಂಗೊಳಿಸುತ್ತಿದ್ದರು…” ಎಂದು ಅನಿಲ್‌ಕುಮಾರ್‌ ಎಂ.ಎನ್. ಎಂಬವರು ಪ್ರತಿಕ್ರಿಯಿಸಿದ್ದಾರೆ.

“ಹಾಗೆಯೇ ರಮ್ಝಾನ್ ಬಕ್ರೀದ್ ಕ್ರಿಸ್ಮಸ್ ಹಬ್ಬಗಳು ಸರ್ಕಾರದ ಇಲಾಖೆಯಲ್ಲಿ ಆಚರಿಸೋಕೆ ಬಿಡ್ತಾರಾ?” ಎಂದು ಅಮಾನ್‌ ಸಾಗರ್‌ ಪ್ರಶ್ನಿಸಿದ್ದಾರೆ.

“ಇಷ್ಟು ದಿನ ಮನಸಿನಲ್ಲಿ ಮಾತ್ರ ಇತ್ತು. ಈಗ ದಿರಿಸಿನಲ್ಲೂ ಬಂತು. ಜೈ ಕರ್ನಾಟಕ ಪೊಲೀಸ್” ಎಂದು ಚಿಂತಕ ಶ್ರೀನಿವಾಸ ಕಾರ್ಕಳ ಅವರು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಗುಂಪಿನ ಮೇಲೆ ಕಾರು ಹತ್ತಿಸಿ ಅಪರಿಚಿತ ಪರಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪೊಲೀಸರು ಈ ರೀತಿಯಲ್ಲಿ ಕೇಸರೀಕರಣಗೊಳ್ಳುತ್ತಿರುವುದು ಕಂಡನಾರ್ಹ.

  2. ಜಾತಿ, ಮತ-ಪಂತ ಮೀರಿ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಕಾರ್ಯಾಂಗದ ಅಚ್ಚುಕಟ್ಟಿನ ಸ್ಥಳದಲ್ಲಿರುವ ಪೋಲಿಸರಿಗೆ ಹೀಗಿರಲು ಅವಕಾಶ ಇದೆಯೆ? ಇಲ್ಲ ಎಂದಾದರೆ ಸರ್ಕಾರ ಏನು ಕ್ರಮ ಕೈಗೊಳ್ಳುತ್ತದೆ? ಅಥವಾ ಇದು ಕೇಸರಿಬಾನ್ ಸರ್ಕಾರವೆ?

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...