Homeಮುಖಪುಟಕೋಗಿಲು ಪ್ರಕರಣ | ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ : ಸಿಎಂ ಸಿದ್ದರಾಮಯ್ಯ

ಕೋಗಿಲು ಪ್ರಕರಣ | ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ : ಸಿಎಂ ಸಿದ್ದರಾಮಯ್ಯ

ಜ.1ರಂದೇ ಹೊಸ ಮನೆಗಳ ಹಂಚಿಕೆ, ಇನ್ನುಮುಂದೆ ಸರ್ಕಾರಿ ಜಮೀನು ಒತ್ತುವರಿಯಾದರೆ ಅಧಿಕಾರಿಗಳ ವಿರುದ್ದ ಕ್ರಮ

- Advertisement -
- Advertisement -

ಕೋಗಿಲು ಬಡಾವಣೆಯಲ್ಲಿ ಜಿಬಿಎ ನಡೆಸಿದ ತೆರವು ಕಾರ್ಯಾಚರಣೆಯಿಂದ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸೋಮವಾರ (ಡಿ.29) ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋಗಿಲು ಬಡಾವಣೆಯ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಸುಮಾರು 167 ಶೆಡ್‌ಗಳನ್ನು ಡಿಸೆಂಬರ್ 20ರಂದು ತೆರವುಗೊಳಿಸಲಾಗಿದೆ. ತೆರವು ಕಾರ್ಯಾಚರಣೆಗೂ ಮುನ್ನ ಅಲ್ಲಿನ ನಿವಾಸಿಗಳಿಗೆ ನೋಟಿಸ್ ನೀಡಿ, ಸರ್ಕಾರದ ಜಾಗವನ್ನು ತೆರವುಗೊಳಿಸುವಂತೆ ಹೇಳಲಾಗಿತ್ತು. ಆದರೂ, ಅವರು ಖಾಲಿ ಮಾಡಿರಲಿಲ್ಲ. ಹಾಗಾಗಿ, ಅಧಿಕಾರಿಗಳು ನಿಯಮದಂತೆ ತೆರವುಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

ನಿನ್ನೆ ವಸತಿ ಸಚಿವರಾದ ಝಮೀರ್ ಅಹ್ಮದ್ ಖಾನ್ ಮತ್ತು ನನ್ನ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರನ್ನು ಸ್ಥಳಕ್ಕೆ ಕಳಿಸಿಕೊಟ್ಟಿದ್ದೆ. ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಅಧಿಕಾರಿಗಳ ಜೊತೆ ಅಲ್ಲಿಗೆ ಭೇಟಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಕಸ ವಿಲೇವಾರಿ ಮಾಡುವ ಉದ್ದೇಶಕ್ಕೆ 15 ಎಕರೆ ಜಮೀನನ್ನು ಜಿಲ್ಲಾಧಿಕಾರಿಗಳು ನಗರ ಪಾಲಿಕೆಗೆ ಹಸ್ತಾಂತರ ಮಾಡಿದ್ದರು. ಬಂಡೆ ಕ್ವಾರಿ ಕೂಡ ಅಲ್ಲಿದೆ. ಪಾಲಿಕೆಯವರು ಕಸ ಹಾಕುತ್ತಿದ್ದು, ಭೂಮಿ‌ ಅವರ ಸ್ವಾಧೀನದಲ್ಲೇ ಇದೆ. ಜನರು 2020-21ರಿಂದ ಅಲ್ಲಿ ಅಕ್ರಮವಾಗಿ ಶೆಡ್‌ಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳದ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವಂತೆ ಸೂಚಿಸಿದ್ದೇನೆ. ತಹಶಿಲ್ದಾರರಿಗೆ, ಶಿರಸ್ಥೆದಾರರಿಗೆ ಗೊತ್ತಿಲ್ಲದೆ ಹೀಗೆ ಒತ್ತುವರಿ ಆಗಲು ಸಾಧ್ಯವಿಲ್ಲ. ಇನ್ನುಮುಂದೆ ಇಂತಹ ಘಟನೆ ಮರುಕಳಿಬಾರದು ಎಂಬ ಕಾರಣಕ್ಕೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ.

ಇನ್ನು ಮುಂದೆ ಯಾವುದೇ ಕಾರಣಕ್ಕೂ ಸರ್ಕಾರಿ ಜಮೀನಿನ ಅಕ್ರಮ‌ ಒತ್ತುವರಿ ಆಗದಂತೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಒಂದು ವೇಳೆ ಮನೆ ಕಟ್ಟಿದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಜವಾಬ್ದಾರಿ ಮಾಡಲಾಗುತ್ತದೆ. ಮನೆ ಕಳೆದುಕೊಂಡವರಲ್ಲಿ ಅರ್ಹರನ್ನು ಗುರುತಿಸಿ ಮುಂದಿನ ಎರಡು ದಿನಗಳಲ್ಲಿ ಪಟ್ಟಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮಾನವೀಯತೆ ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂಬ ತೀರ್ಮಾನಕ್ಕೆ ಸರ್ಕಾರ ಬಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ವಿಚಾರದ ಬಗ್ಗೆ ದೆಹಲಿಯಲ್ಲಿ ಕೆ.ಸಿ.ವೇಣುಗೋಪಾಲ್ ಅವರು ನನ್ನೊಂದಿಗೆ ಮತ್ತು ನಂತರ ಡಿ.ಕೆ.ಶಿವಕುಮಾರ್ ಅವರ ಜೊತೆ ಚರ್ಚೆ ಮಾಡಿದ್ದಾರೆ. ಮನೆ ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡುವ ಭರವಸೆ ನೀಡಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರು, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಿಗೆ ಊಟ, ವಸತಿ, ತಾತ್ಕಾಲಿಕ ಸೂರಿನ ವ್ಯವಸ್ಥೆ ಮಾಡುವಂತೆ ಹೇಳಿದ್ದೆ, ಅದರಂತೆ ಮೂರು ಕಡೆ ಈ ರೀತಿಯ ವ್ಯವಸ್ಥೆ ಮಾಡಿದ್ದರೂ ಅಲ್ಲಿನ ನಿವಾಸಿಗಳು ಹೋಗಿಲ್ಲ. ಡಿ.ಕೆ ಶಿವಕುಮಾರ್, ವಸತಿ ಸಚಿವ ಝಮೀರ್ ಅಹ್ಮದ್, ಸ್ಥಳೀಯ ಶಾಸಕ ಕೃಷ್ಣ ಬೈರೇಗೌಡ ಅವರ ಜೊತೆ ಮಾತನಾಡಿ, ಪರ್ಯಾಯ ವ್ಯವಸ್ಥೆ ಮಾಡುವ ಸಂಬಂಧ ಚರ್ಚಿಸಿದ್ದೇನೆ. ಅಲ್ಲೇ ಸಮೀಪದ ಬೈಯ್ಯಪ್ಪನಹಳ್ಳಿಯ ಸರ್ವೇ ನಂ‌.23 ರಲ್ಲಿ ಸುಮಾರು 1087 ಮನೆಗಳಿವೆ, ಅಧಿಕಾರಿಗಳಿಂದ ಪಟ್ಟಿ ಬಂದ ನಂತರ ಅರ್ಹರಿಗೆ ಬೈಯ್ಯಪ್ಪನಹಳ್ಳಿಯ ಬಹುಮಹಡಿ ಕಟ್ಟಡದಲ್ಲಿ ಮನೆಗಳ ಹಂಚಿಕೆ ಮಾಡುತ್ತೇವೆ ಎಂದಿದ್ದಾರೆ.

ಬೈಯ್ಯಪ್ಪನಹಳ್ಳಿಯ ಜಾಗವು ಕೋಗಿಲು ಪ್ರದೇಶದಿಂದ ಕೇವಲ 7 ಕಿ.ಮೀ ದೂರದಲ್ಲಿದೆ. ಒಂದು ಮನೆಗೆ ಸುಮಾರು 11.20 ಲಕ್ಷ ರೂಪಾಯಿ ವೆಚ್ಚವಾಗಿದ್ದು, ಇವನ್ನು ಕೊಡುತ್ತೇವೆ. ಸಾಮಾನ್ಯವರ್ಗ, ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಬ್ಸಿಡಿ ಲಭ್ಯವಿದೆ, ಜೊತೆಗೆ ಜಿಬಿಎಯಿಂದ ಪ್ರತಿ ಮನೆಗೆ 5 ಲಕ್ಷ ರೂಪಾಯಿ ನೀಡುವಂತೆ ಸೂಚಿಸಿದ್ದೇನೆ. ಸಾಮಾನ್ಯ ವರ್ಗದವರಿಗೆ ಸಬ್ಸಿಡಿ ಸೇರಿ 8 ಲಕ್ಷದ 70 ಸಾವಿರ ರೂಪಾಯಿ ಬರುತ್ತದೆ. ಎಸ್‌ಸಿಎಸ್‌ಟಿಗಳಾದರೆ 9.50 ಲಕ್ಷ ಬರುತ್ತದೆ. ಆಮೇಲೆ ಸಾಮಾನ್ಯ ವರ್ಗದವರು 2.5 ಲಕ್ಷವನ್ನು ಸಾಲದ ರೂಪದಲ್ಲಿ ಕೊಡಬೇಕು, ಎಸ್‌ಸಿಎಸ್‌ಟಿಗೆ 1.70 ಲಕ್ಷ ಸಾಲ. ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಅವರು ಪರಿಶೀಲನೆಯ ನಂತರ ಸಾಲ ಒದಗಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ನಾಳೆ, ನಾಡಿದ್ದು ಎರಡು ದಿನ ಅಧಿಕಾರಿಗಳು ಪರಿಶೀಲನೆ ಮಾಡುತ್ತಾರೆ. ಜನವರಿ 1ರಂದು ಹೊಸ ವರ್ಷ ಪ್ರಾರಂಭದ ದಿನ ಜನರಿಗೆ ಮನೆಯನ್ನು ಒದಗಿಸಿಕೊಡುವ ಜವಾಬ್ದಾರಿಯನ್ನು ಝಮೀರ್‌ ಅಹ್ಮದ್‌ ಅವರಿಗೆ ವಹಿಸಲಾಗಿದೆ. ಅಕ್ರಮವಾಗಿ ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದವರಿಗೂ ಮಾನವೀಯತೆ ದೃಷ್ಟಿಯಿಂದ ವಾಸಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡುತ್ತಿದ್ದೇವೆ. 1 ಲಕ್ಷ ಮನೆಗಳನ್ನು ನಾವು ಕಟ್ಟಿಸಿರುವುದೇ ಬಡವರಿಗೆ ಸೂರು ಒದಗಿಸಿಕೊಡಲೆಂದು ಎಂದಿದ್ದಾರೆ.

ಅಕ್ರಮವಾಗಿ ಮನೆ ಕಟ್ಟಿಕೊಂಡಿರುವವರಿಗೆ ಸರ್ಕಾರದಿಂದಲೇ ಮನೆ ಕಟ್ಟಿಸಿಕೊಡುವುದು ಇದೊಂದು ಪ್ರಕರಣಕ್ಕೆ ಮಾತ್ರ ಅನ್ವಯವಾಗುತ್ತದೆ. ಅಕ್ರಮವಾಗಿ ಶೆಡ್ ನಿರ್ಮಿಸಲು ಬಿಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ಇಂತಹ ಅಕ್ರಮ ನಡೆದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....