Homeಮುಖಪುಟಕೋಗಿಲು ಪ್ರಕರಣ | ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ : ಸಿಎಂ ಸಿದ್ದರಾಮಯ್ಯ

ಕೋಗಿಲು ಪ್ರಕರಣ | ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ : ಸಿಎಂ ಸಿದ್ದರಾಮಯ್ಯ

ಜ.1ರಂದೇ ಹೊಸ ಮನೆಗಳ ಹಂಚಿಕೆ, ಇನ್ನುಮುಂದೆ ಸರ್ಕಾರಿ ಜಮೀನು ಒತ್ತುವರಿಯಾದರೆ ಅಧಿಕಾರಿಗಳ ವಿರುದ್ದ ಕ್ರಮ

- Advertisement -
- Advertisement -

ಕೋಗಿಲು ಬಡಾವಣೆಯಲ್ಲಿ ಜಿಬಿಎ ನಡೆಸಿದ ತೆರವು ಕಾರ್ಯಾಚರಣೆಯಿಂದ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸೋಮವಾರ (ಡಿ.29) ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋಗಿಲು ಬಡಾವಣೆಯ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಸುಮಾರು 167 ಶೆಡ್‌ಗಳನ್ನು ಡಿಸೆಂಬರ್ 20ರಂದು ತೆರವುಗೊಳಿಸಲಾಗಿದೆ. ತೆರವು ಕಾರ್ಯಾಚರಣೆಗೂ ಮುನ್ನ ಅಲ್ಲಿನ ನಿವಾಸಿಗಳಿಗೆ ನೋಟಿಸ್ ನೀಡಿ, ಸರ್ಕಾರದ ಜಾಗವನ್ನು ತೆರವುಗೊಳಿಸುವಂತೆ ಹೇಳಲಾಗಿತ್ತು. ಆದರೂ, ಅವರು ಖಾಲಿ ಮಾಡಿರಲಿಲ್ಲ. ಹಾಗಾಗಿ, ಅಧಿಕಾರಿಗಳು ನಿಯಮದಂತೆ ತೆರವುಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

ನಿನ್ನೆ ವಸತಿ ಸಚಿವರಾದ ಝಮೀರ್ ಅಹ್ಮದ್ ಖಾನ್ ಮತ್ತು ನನ್ನ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರನ್ನು ಸ್ಥಳಕ್ಕೆ ಕಳಿಸಿಕೊಟ್ಟಿದ್ದೆ. ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಅಧಿಕಾರಿಗಳ ಜೊತೆ ಅಲ್ಲಿಗೆ ಭೇಟಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಕಸ ವಿಲೇವಾರಿ ಮಾಡುವ ಉದ್ದೇಶಕ್ಕೆ 15 ಎಕರೆ ಜಮೀನನ್ನು ಜಿಲ್ಲಾಧಿಕಾರಿಗಳು ನಗರ ಪಾಲಿಕೆಗೆ ಹಸ್ತಾಂತರ ಮಾಡಿದ್ದರು. ಬಂಡೆ ಕ್ವಾರಿ ಕೂಡ ಅಲ್ಲಿದೆ. ಪಾಲಿಕೆಯವರು ಕಸ ಹಾಕುತ್ತಿದ್ದು, ಭೂಮಿ‌ ಅವರ ಸ್ವಾಧೀನದಲ್ಲೇ ಇದೆ. ಜನರು 2020-21ರಿಂದ ಅಲ್ಲಿ ಅಕ್ರಮವಾಗಿ ಶೆಡ್‌ಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳದ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವಂತೆ ಸೂಚಿಸಿದ್ದೇನೆ. ತಹಶಿಲ್ದಾರರಿಗೆ, ಶಿರಸ್ಥೆದಾರರಿಗೆ ಗೊತ್ತಿಲ್ಲದೆ ಹೀಗೆ ಒತ್ತುವರಿ ಆಗಲು ಸಾಧ್ಯವಿಲ್ಲ. ಇನ್ನುಮುಂದೆ ಇಂತಹ ಘಟನೆ ಮರುಕಳಿಬಾರದು ಎಂಬ ಕಾರಣಕ್ಕೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ.

ಇನ್ನು ಮುಂದೆ ಯಾವುದೇ ಕಾರಣಕ್ಕೂ ಸರ್ಕಾರಿ ಜಮೀನಿನ ಅಕ್ರಮ‌ ಒತ್ತುವರಿ ಆಗದಂತೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಒಂದು ವೇಳೆ ಮನೆ ಕಟ್ಟಿದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಜವಾಬ್ದಾರಿ ಮಾಡಲಾಗುತ್ತದೆ. ಮನೆ ಕಳೆದುಕೊಂಡವರಲ್ಲಿ ಅರ್ಹರನ್ನು ಗುರುತಿಸಿ ಮುಂದಿನ ಎರಡು ದಿನಗಳಲ್ಲಿ ಪಟ್ಟಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮಾನವೀಯತೆ ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂಬ ತೀರ್ಮಾನಕ್ಕೆ ಸರ್ಕಾರ ಬಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ವಿಚಾರದ ಬಗ್ಗೆ ದೆಹಲಿಯಲ್ಲಿ ಕೆ.ಸಿ.ವೇಣುಗೋಪಾಲ್ ಅವರು ನನ್ನೊಂದಿಗೆ ಮತ್ತು ನಂತರ ಡಿ.ಕೆ.ಶಿವಕುಮಾರ್ ಅವರ ಜೊತೆ ಚರ್ಚೆ ಮಾಡಿದ್ದಾರೆ. ಮನೆ ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡುವ ಭರವಸೆ ನೀಡಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರು, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಿಗೆ ಊಟ, ವಸತಿ, ತಾತ್ಕಾಲಿಕ ಸೂರಿನ ವ್ಯವಸ್ಥೆ ಮಾಡುವಂತೆ ಹೇಳಿದ್ದೆ, ಅದರಂತೆ ಮೂರು ಕಡೆ ಈ ರೀತಿಯ ವ್ಯವಸ್ಥೆ ಮಾಡಿದ್ದರೂ ಅಲ್ಲಿನ ನಿವಾಸಿಗಳು ಹೋಗಿಲ್ಲ. ಡಿ.ಕೆ ಶಿವಕುಮಾರ್, ವಸತಿ ಸಚಿವ ಝಮೀರ್ ಅಹ್ಮದ್, ಸ್ಥಳೀಯ ಶಾಸಕ ಕೃಷ್ಣ ಬೈರೇಗೌಡ ಅವರ ಜೊತೆ ಮಾತನಾಡಿ, ಪರ್ಯಾಯ ವ್ಯವಸ್ಥೆ ಮಾಡುವ ಸಂಬಂಧ ಚರ್ಚಿಸಿದ್ದೇನೆ. ಅಲ್ಲೇ ಸಮೀಪದ ಬೈಯ್ಯಪ್ಪನಹಳ್ಳಿಯ ಸರ್ವೇ ನಂ‌.23 ರಲ್ಲಿ ಸುಮಾರು 1087 ಮನೆಗಳಿವೆ, ಅಧಿಕಾರಿಗಳಿಂದ ಪಟ್ಟಿ ಬಂದ ನಂತರ ಅರ್ಹರಿಗೆ ಬೈಯ್ಯಪ್ಪನಹಳ್ಳಿಯ ಬಹುಮಹಡಿ ಕಟ್ಟಡದಲ್ಲಿ ಮನೆಗಳ ಹಂಚಿಕೆ ಮಾಡುತ್ತೇವೆ ಎಂದಿದ್ದಾರೆ.

ಬೈಯ್ಯಪ್ಪನಹಳ್ಳಿಯ ಜಾಗವು ಕೋಗಿಲು ಪ್ರದೇಶದಿಂದ ಕೇವಲ 7 ಕಿ.ಮೀ ದೂರದಲ್ಲಿದೆ. ಒಂದು ಮನೆಗೆ ಸುಮಾರು 11.20 ಲಕ್ಷ ರೂಪಾಯಿ ವೆಚ್ಚವಾಗಿದ್ದು, ಇವನ್ನು ಕೊಡುತ್ತೇವೆ. ಸಾಮಾನ್ಯವರ್ಗ, ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಬ್ಸಿಡಿ ಲಭ್ಯವಿದೆ, ಜೊತೆಗೆ ಜಿಬಿಎಯಿಂದ ಪ್ರತಿ ಮನೆಗೆ 5 ಲಕ್ಷ ರೂಪಾಯಿ ನೀಡುವಂತೆ ಸೂಚಿಸಿದ್ದೇನೆ. ಸಾಮಾನ್ಯ ವರ್ಗದವರಿಗೆ ಸಬ್ಸಿಡಿ ಸೇರಿ 8 ಲಕ್ಷದ 70 ಸಾವಿರ ರೂಪಾಯಿ ಬರುತ್ತದೆ. ಎಸ್‌ಸಿಎಸ್‌ಟಿಗಳಾದರೆ 9.50 ಲಕ್ಷ ಬರುತ್ತದೆ. ಆಮೇಲೆ ಸಾಮಾನ್ಯ ವರ್ಗದವರು 2.5 ಲಕ್ಷವನ್ನು ಸಾಲದ ರೂಪದಲ್ಲಿ ಕೊಡಬೇಕು, ಎಸ್‌ಸಿಎಸ್‌ಟಿಗೆ 1.70 ಲಕ್ಷ ಸಾಲ. ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಅವರು ಪರಿಶೀಲನೆಯ ನಂತರ ಸಾಲ ಒದಗಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ನಾಳೆ, ನಾಡಿದ್ದು ಎರಡು ದಿನ ಅಧಿಕಾರಿಗಳು ಪರಿಶೀಲನೆ ಮಾಡುತ್ತಾರೆ. ಜನವರಿ 1ರಂದು ಹೊಸ ವರ್ಷ ಪ್ರಾರಂಭದ ದಿನ ಜನರಿಗೆ ಮನೆಯನ್ನು ಒದಗಿಸಿಕೊಡುವ ಜವಾಬ್ದಾರಿಯನ್ನು ಝಮೀರ್‌ ಅಹ್ಮದ್‌ ಅವರಿಗೆ ವಹಿಸಲಾಗಿದೆ. ಅಕ್ರಮವಾಗಿ ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದವರಿಗೂ ಮಾನವೀಯತೆ ದೃಷ್ಟಿಯಿಂದ ವಾಸಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡುತ್ತಿದ್ದೇವೆ. 1 ಲಕ್ಷ ಮನೆಗಳನ್ನು ನಾವು ಕಟ್ಟಿಸಿರುವುದೇ ಬಡವರಿಗೆ ಸೂರು ಒದಗಿಸಿಕೊಡಲೆಂದು ಎಂದಿದ್ದಾರೆ.

ಅಕ್ರಮವಾಗಿ ಮನೆ ಕಟ್ಟಿಕೊಂಡಿರುವವರಿಗೆ ಸರ್ಕಾರದಿಂದಲೇ ಮನೆ ಕಟ್ಟಿಸಿಕೊಡುವುದು ಇದೊಂದು ಪ್ರಕರಣಕ್ಕೆ ಮಾತ್ರ ಅನ್ವಯವಾಗುತ್ತದೆ. ಅಕ್ರಮವಾಗಿ ಶೆಡ್ ನಿರ್ಮಿಸಲು ಬಿಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ಇಂತಹ ಅಕ್ರಮ ನಡೆದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...