Homeಮುಖಪುಟಕೋಗಿಲು ಪ್ರಕರಣ | ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ : ಸಿಎಂ ಸಿದ್ದರಾಮಯ್ಯ

ಕೋಗಿಲು ಪ್ರಕರಣ | ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ : ಸಿಎಂ ಸಿದ್ದರಾಮಯ್ಯ

ಜ.1ರಂದೇ ಹೊಸ ಮನೆಗಳ ಹಂಚಿಕೆ, ಇನ್ನುಮುಂದೆ ಸರ್ಕಾರಿ ಜಮೀನು ಒತ್ತುವರಿಯಾದರೆ ಅಧಿಕಾರಿಗಳ ವಿರುದ್ದ ಕ್ರಮ

- Advertisement -
- Advertisement -

ಕೋಗಿಲು ಬಡಾವಣೆಯಲ್ಲಿ ಜಿಬಿಎ ನಡೆಸಿದ ತೆರವು ಕಾರ್ಯಾಚರಣೆಯಿಂದ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸೋಮವಾರ (ಡಿ.29) ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋಗಿಲು ಬಡಾವಣೆಯ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಸುಮಾರು 167 ಶೆಡ್‌ಗಳನ್ನು ಡಿಸೆಂಬರ್ 20ರಂದು ತೆರವುಗೊಳಿಸಲಾಗಿದೆ. ತೆರವು ಕಾರ್ಯಾಚರಣೆಗೂ ಮುನ್ನ ಅಲ್ಲಿನ ನಿವಾಸಿಗಳಿಗೆ ನೋಟಿಸ್ ನೀಡಿ, ಸರ್ಕಾರದ ಜಾಗವನ್ನು ತೆರವುಗೊಳಿಸುವಂತೆ ಹೇಳಲಾಗಿತ್ತು. ಆದರೂ, ಅವರು ಖಾಲಿ ಮಾಡಿರಲಿಲ್ಲ. ಹಾಗಾಗಿ, ಅಧಿಕಾರಿಗಳು ನಿಯಮದಂತೆ ತೆರವುಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

ನಿನ್ನೆ ವಸತಿ ಸಚಿವರಾದ ಝಮೀರ್ ಅಹ್ಮದ್ ಖಾನ್ ಮತ್ತು ನನ್ನ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರನ್ನು ಸ್ಥಳಕ್ಕೆ ಕಳಿಸಿಕೊಟ್ಟಿದ್ದೆ. ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಅಧಿಕಾರಿಗಳ ಜೊತೆ ಅಲ್ಲಿಗೆ ಭೇಟಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಕಸ ವಿಲೇವಾರಿ ಮಾಡುವ ಉದ್ದೇಶಕ್ಕೆ 15 ಎಕರೆ ಜಮೀನನ್ನು ಜಿಲ್ಲಾಧಿಕಾರಿಗಳು ನಗರ ಪಾಲಿಕೆಗೆ ಹಸ್ತಾಂತರ ಮಾಡಿದ್ದರು. ಬಂಡೆ ಕ್ವಾರಿ ಕೂಡ ಅಲ್ಲಿದೆ. ಪಾಲಿಕೆಯವರು ಕಸ ಹಾಕುತ್ತಿದ್ದು, ಭೂಮಿ‌ ಅವರ ಸ್ವಾಧೀನದಲ್ಲೇ ಇದೆ. ಜನರು 2020-21ರಿಂದ ಅಲ್ಲಿ ಅಕ್ರಮವಾಗಿ ಶೆಡ್‌ಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳದ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವಂತೆ ಸೂಚಿಸಿದ್ದೇನೆ. ತಹಶಿಲ್ದಾರರಿಗೆ, ಶಿರಸ್ಥೆದಾರರಿಗೆ ಗೊತ್ತಿಲ್ಲದೆ ಹೀಗೆ ಒತ್ತುವರಿ ಆಗಲು ಸಾಧ್ಯವಿಲ್ಲ. ಇನ್ನುಮುಂದೆ ಇಂತಹ ಘಟನೆ ಮರುಕಳಿಬಾರದು ಎಂಬ ಕಾರಣಕ್ಕೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ.

ಇನ್ನು ಮುಂದೆ ಯಾವುದೇ ಕಾರಣಕ್ಕೂ ಸರ್ಕಾರಿ ಜಮೀನಿನ ಅಕ್ರಮ‌ ಒತ್ತುವರಿ ಆಗದಂತೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಒಂದು ವೇಳೆ ಮನೆ ಕಟ್ಟಿದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಜವಾಬ್ದಾರಿ ಮಾಡಲಾಗುತ್ತದೆ. ಮನೆ ಕಳೆದುಕೊಂಡವರಲ್ಲಿ ಅರ್ಹರನ್ನು ಗುರುತಿಸಿ ಮುಂದಿನ ಎರಡು ದಿನಗಳಲ್ಲಿ ಪಟ್ಟಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮಾನವೀಯತೆ ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂಬ ತೀರ್ಮಾನಕ್ಕೆ ಸರ್ಕಾರ ಬಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ವಿಚಾರದ ಬಗ್ಗೆ ದೆಹಲಿಯಲ್ಲಿ ಕೆ.ಸಿ.ವೇಣುಗೋಪಾಲ್ ಅವರು ನನ್ನೊಂದಿಗೆ ಮತ್ತು ನಂತರ ಡಿ.ಕೆ.ಶಿವಕುಮಾರ್ ಅವರ ಜೊತೆ ಚರ್ಚೆ ಮಾಡಿದ್ದಾರೆ. ಮನೆ ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡುವ ಭರವಸೆ ನೀಡಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರು, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಿಗೆ ಊಟ, ವಸತಿ, ತಾತ್ಕಾಲಿಕ ಸೂರಿನ ವ್ಯವಸ್ಥೆ ಮಾಡುವಂತೆ ಹೇಳಿದ್ದೆ, ಅದರಂತೆ ಮೂರು ಕಡೆ ಈ ರೀತಿಯ ವ್ಯವಸ್ಥೆ ಮಾಡಿದ್ದರೂ ಅಲ್ಲಿನ ನಿವಾಸಿಗಳು ಹೋಗಿಲ್ಲ. ಡಿ.ಕೆ ಶಿವಕುಮಾರ್, ವಸತಿ ಸಚಿವ ಝಮೀರ್ ಅಹ್ಮದ್, ಸ್ಥಳೀಯ ಶಾಸಕ ಕೃಷ್ಣ ಬೈರೇಗೌಡ ಅವರ ಜೊತೆ ಮಾತನಾಡಿ, ಪರ್ಯಾಯ ವ್ಯವಸ್ಥೆ ಮಾಡುವ ಸಂಬಂಧ ಚರ್ಚಿಸಿದ್ದೇನೆ. ಅಲ್ಲೇ ಸಮೀಪದ ಬೈಯ್ಯಪ್ಪನಹಳ್ಳಿಯ ಸರ್ವೇ ನಂ‌.23 ರಲ್ಲಿ ಸುಮಾರು 1087 ಮನೆಗಳಿವೆ, ಅಧಿಕಾರಿಗಳಿಂದ ಪಟ್ಟಿ ಬಂದ ನಂತರ ಅರ್ಹರಿಗೆ ಬೈಯ್ಯಪ್ಪನಹಳ್ಳಿಯ ಬಹುಮಹಡಿ ಕಟ್ಟಡದಲ್ಲಿ ಮನೆಗಳ ಹಂಚಿಕೆ ಮಾಡುತ್ತೇವೆ ಎಂದಿದ್ದಾರೆ.

ಬೈಯ್ಯಪ್ಪನಹಳ್ಳಿಯ ಜಾಗವು ಕೋಗಿಲು ಪ್ರದೇಶದಿಂದ ಕೇವಲ 7 ಕಿ.ಮೀ ದೂರದಲ್ಲಿದೆ. ಒಂದು ಮನೆಗೆ ಸುಮಾರು 11.20 ಲಕ್ಷ ರೂಪಾಯಿ ವೆಚ್ಚವಾಗಿದ್ದು, ಇವನ್ನು ಕೊಡುತ್ತೇವೆ. ಸಾಮಾನ್ಯವರ್ಗ, ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಬ್ಸಿಡಿ ಲಭ್ಯವಿದೆ, ಜೊತೆಗೆ ಜಿಬಿಎಯಿಂದ ಪ್ರತಿ ಮನೆಗೆ 5 ಲಕ್ಷ ರೂಪಾಯಿ ನೀಡುವಂತೆ ಸೂಚಿಸಿದ್ದೇನೆ. ಸಾಮಾನ್ಯ ವರ್ಗದವರಿಗೆ ಸಬ್ಸಿಡಿ ಸೇರಿ 8 ಲಕ್ಷದ 70 ಸಾವಿರ ರೂಪಾಯಿ ಬರುತ್ತದೆ. ಎಸ್‌ಸಿಎಸ್‌ಟಿಗಳಾದರೆ 9.50 ಲಕ್ಷ ಬರುತ್ತದೆ. ಆಮೇಲೆ ಸಾಮಾನ್ಯ ವರ್ಗದವರು 2.5 ಲಕ್ಷವನ್ನು ಸಾಲದ ರೂಪದಲ್ಲಿ ಕೊಡಬೇಕು, ಎಸ್‌ಸಿಎಸ್‌ಟಿಗೆ 1.70 ಲಕ್ಷ ಸಾಲ. ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಅವರು ಪರಿಶೀಲನೆಯ ನಂತರ ಸಾಲ ಒದಗಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ನಾಳೆ, ನಾಡಿದ್ದು ಎರಡು ದಿನ ಅಧಿಕಾರಿಗಳು ಪರಿಶೀಲನೆ ಮಾಡುತ್ತಾರೆ. ಜನವರಿ 1ರಂದು ಹೊಸ ವರ್ಷ ಪ್ರಾರಂಭದ ದಿನ ಜನರಿಗೆ ಮನೆಯನ್ನು ಒದಗಿಸಿಕೊಡುವ ಜವಾಬ್ದಾರಿಯನ್ನು ಝಮೀರ್‌ ಅಹ್ಮದ್‌ ಅವರಿಗೆ ವಹಿಸಲಾಗಿದೆ. ಅಕ್ರಮವಾಗಿ ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದವರಿಗೂ ಮಾನವೀಯತೆ ದೃಷ್ಟಿಯಿಂದ ವಾಸಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡುತ್ತಿದ್ದೇವೆ. 1 ಲಕ್ಷ ಮನೆಗಳನ್ನು ನಾವು ಕಟ್ಟಿಸಿರುವುದೇ ಬಡವರಿಗೆ ಸೂರು ಒದಗಿಸಿಕೊಡಲೆಂದು ಎಂದಿದ್ದಾರೆ.

ಅಕ್ರಮವಾಗಿ ಮನೆ ಕಟ್ಟಿಕೊಂಡಿರುವವರಿಗೆ ಸರ್ಕಾರದಿಂದಲೇ ಮನೆ ಕಟ್ಟಿಸಿಕೊಡುವುದು ಇದೊಂದು ಪ್ರಕರಣಕ್ಕೆ ಮಾತ್ರ ಅನ್ವಯವಾಗುತ್ತದೆ. ಅಕ್ರಮವಾಗಿ ಶೆಡ್ ನಿರ್ಮಿಸಲು ಬಿಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ಇಂತಹ ಅಕ್ರಮ ನಡೆದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...