Homeಮುಖಪುಟಕೋಗಿಲು ಪ್ರಕರಣ | ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ : ಸಿಎಂ ಸಿದ್ದರಾಮಯ್ಯ

ಕೋಗಿಲು ಪ್ರಕರಣ | ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ : ಸಿಎಂ ಸಿದ್ದರಾಮಯ್ಯ

ಜ.1ರಂದೇ ಹೊಸ ಮನೆಗಳ ಹಂಚಿಕೆ, ಇನ್ನುಮುಂದೆ ಸರ್ಕಾರಿ ಜಮೀನು ಒತ್ತುವರಿಯಾದರೆ ಅಧಿಕಾರಿಗಳ ವಿರುದ್ದ ಕ್ರಮ

- Advertisement -
- Advertisement -

ಕೋಗಿಲು ಬಡಾವಣೆಯಲ್ಲಿ ಜಿಬಿಎ ನಡೆಸಿದ ತೆರವು ಕಾರ್ಯಾಚರಣೆಯಿಂದ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸೋಮವಾರ (ಡಿ.29) ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋಗಿಲು ಬಡಾವಣೆಯ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಸುಮಾರು 167 ಶೆಡ್‌ಗಳನ್ನು ಡಿಸೆಂಬರ್ 20ರಂದು ತೆರವುಗೊಳಿಸಲಾಗಿದೆ. ತೆರವು ಕಾರ್ಯಾಚರಣೆಗೂ ಮುನ್ನ ಅಲ್ಲಿನ ನಿವಾಸಿಗಳಿಗೆ ನೋಟಿಸ್ ನೀಡಿ, ಸರ್ಕಾರದ ಜಾಗವನ್ನು ತೆರವುಗೊಳಿಸುವಂತೆ ಹೇಳಲಾಗಿತ್ತು. ಆದರೂ, ಅವರು ಖಾಲಿ ಮಾಡಿರಲಿಲ್ಲ. ಹಾಗಾಗಿ, ಅಧಿಕಾರಿಗಳು ನಿಯಮದಂತೆ ತೆರವುಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

ನಿನ್ನೆ ವಸತಿ ಸಚಿವರಾದ ಝಮೀರ್ ಅಹ್ಮದ್ ಖಾನ್ ಮತ್ತು ನನ್ನ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರನ್ನು ಸ್ಥಳಕ್ಕೆ ಕಳಿಸಿಕೊಟ್ಟಿದ್ದೆ. ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಅಧಿಕಾರಿಗಳ ಜೊತೆ ಅಲ್ಲಿಗೆ ಭೇಟಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಕಸ ವಿಲೇವಾರಿ ಮಾಡುವ ಉದ್ದೇಶಕ್ಕೆ 15 ಎಕರೆ ಜಮೀನನ್ನು ಜಿಲ್ಲಾಧಿಕಾರಿಗಳು ನಗರ ಪಾಲಿಕೆಗೆ ಹಸ್ತಾಂತರ ಮಾಡಿದ್ದರು. ಬಂಡೆ ಕ್ವಾರಿ ಕೂಡ ಅಲ್ಲಿದೆ. ಪಾಲಿಕೆಯವರು ಕಸ ಹಾಕುತ್ತಿದ್ದು, ಭೂಮಿ‌ ಅವರ ಸ್ವಾಧೀನದಲ್ಲೇ ಇದೆ. ಜನರು 2020-21ರಿಂದ ಅಲ್ಲಿ ಅಕ್ರಮವಾಗಿ ಶೆಡ್‌ಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳದ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವಂತೆ ಸೂಚಿಸಿದ್ದೇನೆ. ತಹಶಿಲ್ದಾರರಿಗೆ, ಶಿರಸ್ಥೆದಾರರಿಗೆ ಗೊತ್ತಿಲ್ಲದೆ ಹೀಗೆ ಒತ್ತುವರಿ ಆಗಲು ಸಾಧ್ಯವಿಲ್ಲ. ಇನ್ನುಮುಂದೆ ಇಂತಹ ಘಟನೆ ಮರುಕಳಿಬಾರದು ಎಂಬ ಕಾರಣಕ್ಕೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ.

ಇನ್ನು ಮುಂದೆ ಯಾವುದೇ ಕಾರಣಕ್ಕೂ ಸರ್ಕಾರಿ ಜಮೀನಿನ ಅಕ್ರಮ‌ ಒತ್ತುವರಿ ಆಗದಂತೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಒಂದು ವೇಳೆ ಮನೆ ಕಟ್ಟಿದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಜವಾಬ್ದಾರಿ ಮಾಡಲಾಗುತ್ತದೆ. ಮನೆ ಕಳೆದುಕೊಂಡವರಲ್ಲಿ ಅರ್ಹರನ್ನು ಗುರುತಿಸಿ ಮುಂದಿನ ಎರಡು ದಿನಗಳಲ್ಲಿ ಪಟ್ಟಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮಾನವೀಯತೆ ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂಬ ತೀರ್ಮಾನಕ್ಕೆ ಸರ್ಕಾರ ಬಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ವಿಚಾರದ ಬಗ್ಗೆ ದೆಹಲಿಯಲ್ಲಿ ಕೆ.ಸಿ.ವೇಣುಗೋಪಾಲ್ ಅವರು ನನ್ನೊಂದಿಗೆ ಮತ್ತು ನಂತರ ಡಿ.ಕೆ.ಶಿವಕುಮಾರ್ ಅವರ ಜೊತೆ ಚರ್ಚೆ ಮಾಡಿದ್ದಾರೆ. ಮನೆ ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡುವ ಭರವಸೆ ನೀಡಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರು, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಿಗೆ ಊಟ, ವಸತಿ, ತಾತ್ಕಾಲಿಕ ಸೂರಿನ ವ್ಯವಸ್ಥೆ ಮಾಡುವಂತೆ ಹೇಳಿದ್ದೆ, ಅದರಂತೆ ಮೂರು ಕಡೆ ಈ ರೀತಿಯ ವ್ಯವಸ್ಥೆ ಮಾಡಿದ್ದರೂ ಅಲ್ಲಿನ ನಿವಾಸಿಗಳು ಹೋಗಿಲ್ಲ. ಡಿ.ಕೆ ಶಿವಕುಮಾರ್, ವಸತಿ ಸಚಿವ ಝಮೀರ್ ಅಹ್ಮದ್, ಸ್ಥಳೀಯ ಶಾಸಕ ಕೃಷ್ಣ ಬೈರೇಗೌಡ ಅವರ ಜೊತೆ ಮಾತನಾಡಿ, ಪರ್ಯಾಯ ವ್ಯವಸ್ಥೆ ಮಾಡುವ ಸಂಬಂಧ ಚರ್ಚಿಸಿದ್ದೇನೆ. ಅಲ್ಲೇ ಸಮೀಪದ ಬೈಯ್ಯಪ್ಪನಹಳ್ಳಿಯ ಸರ್ವೇ ನಂ‌.23 ರಲ್ಲಿ ಸುಮಾರು 1087 ಮನೆಗಳಿವೆ, ಅಧಿಕಾರಿಗಳಿಂದ ಪಟ್ಟಿ ಬಂದ ನಂತರ ಅರ್ಹರಿಗೆ ಬೈಯ್ಯಪ್ಪನಹಳ್ಳಿಯ ಬಹುಮಹಡಿ ಕಟ್ಟಡದಲ್ಲಿ ಮನೆಗಳ ಹಂಚಿಕೆ ಮಾಡುತ್ತೇವೆ ಎಂದಿದ್ದಾರೆ.

ಬೈಯ್ಯಪ್ಪನಹಳ್ಳಿಯ ಜಾಗವು ಕೋಗಿಲು ಪ್ರದೇಶದಿಂದ ಕೇವಲ 7 ಕಿ.ಮೀ ದೂರದಲ್ಲಿದೆ. ಒಂದು ಮನೆಗೆ ಸುಮಾರು 11.20 ಲಕ್ಷ ರೂಪಾಯಿ ವೆಚ್ಚವಾಗಿದ್ದು, ಇವನ್ನು ಕೊಡುತ್ತೇವೆ. ಸಾಮಾನ್ಯವರ್ಗ, ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಬ್ಸಿಡಿ ಲಭ್ಯವಿದೆ, ಜೊತೆಗೆ ಜಿಬಿಎಯಿಂದ ಪ್ರತಿ ಮನೆಗೆ 5 ಲಕ್ಷ ರೂಪಾಯಿ ನೀಡುವಂತೆ ಸೂಚಿಸಿದ್ದೇನೆ. ಸಾಮಾನ್ಯ ವರ್ಗದವರಿಗೆ ಸಬ್ಸಿಡಿ ಸೇರಿ 8 ಲಕ್ಷದ 70 ಸಾವಿರ ರೂಪಾಯಿ ಬರುತ್ತದೆ. ಎಸ್‌ಸಿಎಸ್‌ಟಿಗಳಾದರೆ 9.50 ಲಕ್ಷ ಬರುತ್ತದೆ. ಆಮೇಲೆ ಸಾಮಾನ್ಯ ವರ್ಗದವರು 2.5 ಲಕ್ಷವನ್ನು ಸಾಲದ ರೂಪದಲ್ಲಿ ಕೊಡಬೇಕು, ಎಸ್‌ಸಿಎಸ್‌ಟಿಗೆ 1.70 ಲಕ್ಷ ಸಾಲ. ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಅವರು ಪರಿಶೀಲನೆಯ ನಂತರ ಸಾಲ ಒದಗಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ನಾಳೆ, ನಾಡಿದ್ದು ಎರಡು ದಿನ ಅಧಿಕಾರಿಗಳು ಪರಿಶೀಲನೆ ಮಾಡುತ್ತಾರೆ. ಜನವರಿ 1ರಂದು ಹೊಸ ವರ್ಷ ಪ್ರಾರಂಭದ ದಿನ ಜನರಿಗೆ ಮನೆಯನ್ನು ಒದಗಿಸಿಕೊಡುವ ಜವಾಬ್ದಾರಿಯನ್ನು ಝಮೀರ್‌ ಅಹ್ಮದ್‌ ಅವರಿಗೆ ವಹಿಸಲಾಗಿದೆ. ಅಕ್ರಮವಾಗಿ ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದವರಿಗೂ ಮಾನವೀಯತೆ ದೃಷ್ಟಿಯಿಂದ ವಾಸಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡುತ್ತಿದ್ದೇವೆ. 1 ಲಕ್ಷ ಮನೆಗಳನ್ನು ನಾವು ಕಟ್ಟಿಸಿರುವುದೇ ಬಡವರಿಗೆ ಸೂರು ಒದಗಿಸಿಕೊಡಲೆಂದು ಎಂದಿದ್ದಾರೆ.

ಅಕ್ರಮವಾಗಿ ಮನೆ ಕಟ್ಟಿಕೊಂಡಿರುವವರಿಗೆ ಸರ್ಕಾರದಿಂದಲೇ ಮನೆ ಕಟ್ಟಿಸಿಕೊಡುವುದು ಇದೊಂದು ಪ್ರಕರಣಕ್ಕೆ ಮಾತ್ರ ಅನ್ವಯವಾಗುತ್ತದೆ. ಅಕ್ರಮವಾಗಿ ಶೆಡ್ ನಿರ್ಮಿಸಲು ಬಿಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ಇಂತಹ ಅಕ್ರಮ ನಡೆದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....