Homeಅಂತರಾಷ್ಟ್ರೀಯ4 ಸಾಮಾಜಿಕ ಕಾರ್ಯಕರ್ತರಿಗೆ ’ಆಲ್ಟರ್ನೇಟಿವ್‌ ನೋಬೆಲ್-2020' ಘೋಷಣೆ

4 ಸಾಮಾಜಿಕ ಕಾರ್ಯಕರ್ತರಿಗೆ ’ಆಲ್ಟರ್ನೇಟಿವ್‌ ನೋಬೆಲ್-2020′ ಘೋಷಣೆ

ಕಳೆದ ಬಾರಿ ಈ ಪ್ರಶಸ್ತಿ ಸ್ವೀಡಿಷ್ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ಗೆ ಲಭಿಸಿತ್ತು.

- Advertisement -
- Advertisement -

ಪರ್ಯಾಯ ನೊಬೆಲ್ ಪ್ರಶಸ್ತಿ (ಆಲ್ಟರ್ನೇಟಿವ್‌ ನೋಬೆಲ್) ಎಂದು ಕರೆಯಲ್ಪಡುವ ”ರೈಟ್‌ ಲೈವ್ಲೀಹುಡ್ ಪ್ರಶಸ್ತಿ-2020” ಪ್ರಶಸ್ತಿಯನ್ನು, ಬೆಲಾರಸ್ ದೇಶದ ವಿರೋಧ ಪಕ್ಷದ ನಾಯಕ ಅಲೆಸ್ ಬಿಯಾಲಿಯಾಟ್ಸ್ಕಿ, ಪ್ರಸ್ತುತ ಜೈಲಿನಲ್ಲಿರುವ ಇರಾನಿನ ಮಾನವ ಹಕ್ಕುಗಳ ವಕೀಲೆ ನಸ್ರಿನ್ ಸೊತೌಡೆಹ್, ಅಮೇರಿಕಾದ ಸಾಮಾಜಿಕ ಹೋರಾಟಗಾರ ಬ್ರಿಯಾನ್ ಸ್ಟೀವನ್ಸನ್ ಮತ್ತು ನಿಕರಾಗುವಾದ ಪರಿಸರ ಹಕ್ಕುಗಳ ಹೋರಾಟಗಾರ ಲೊಟ್ಟಿ ಕನ್ನಿಂಗ್ಹ್ಯಾಮ್ ವ್ರೆನ್‌ಗೆ ಘೋಷಣೆಯಾಗಿದೆ.

“ಜಾಗತಿಕವಾಗಿ ಪ್ರಜಾಪ್ರಭುತ್ವಕ್ಕೆ ತೊಡಕುಗಳು ಹೆಚ್ಚುತ್ತಿವೆ. ಇದು ಪ್ರಪಂಚದಾದ್ಯಂತ ಪ್ರಜಾಪ್ರಭುತ್ವವನ್ನು ಬೆಂಬಲಿಸುವವರೆಲ್ಲರೂ ಎದ್ದುನಿಂತು ಪರಸ್ಪರ ಬೆಂಬಲಿಸುವ ಸಮಯ” ಎಂದು ಸ್ವೀಡನ್‌‌ನ “ರೈಟ್ ಲೈವ್ಲೀಹುಲ್ ಪ್ರತಿಷ್ಠಾನ”ದ ಮುಖ್ಯಸ್ಥ ಓಲೆ ವಾನ್ ಯುಕ್ಸ್ಕುಲ್ ಹೇಳಿದ್ದಾರೆ.

ಇದನ್ನೂ ಓದಿ: ಆರೋಗ್ಯ ಕ್ಷೇತ್ರದಲ್ಲಿ ಕೇರಳದ ದಣಿವರಿಯದ ಸೇವೆಗೆ ವಿಶ್ವಸಂಸ್ಥೆಯ ಪ್ರಶಸ್ತಿ

58 ವರ್ಷದ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್ ಬಿಯಾಲಿಯಾಟ್ಸ್ಕಿ, ಈ ಹಿಂದೆ ನೋಬೆಲ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದರು. ಅವರು ದೇಶದ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೊ ಅವರ ನೀತಿಯನ್ನು ಪ್ರಶ್ನಿಸಿದ್ದಕ್ಕಾಗಿ ಬಂಧಿಸಲ್ಪಟ್ಟು ಜೈಲಿನಲ್ಲಿದ್ದ ಸಾವಿರಾರು ಬೆಲರೂಸಿಯನ್ನರಿಗೆ ಕಾನೂನು ನೆರವು ನೀಡಿದ್ದರು.

ಪ್ರಸ್ತುತ ಜೈಲಿನಲ್ಲಿರುವ ಇರಾನಿನ ಮಾನವ ಹಕ್ಕುಗಳ ವಕೀಲೆ ನಸ್ರಿನ್ ಸೊತೌಡೆಹ್‌ಗೆ, ವೈಯಕ್ತಿಕ ಅಪಾಯವನ್ನು ಮೀರಿ, ರಾಜಕೀಯ ಸ್ವಾತಂತ್ರ್ಯ ಮತ್ತು ಮಾನವ ಹಕ್ಕುಗಳನ್ನು ಉತ್ತೇಜಿಸಿದ ಅವರ ನಿರ್ಭೀತ ಕ್ರಿಯಾಶೀಲತೆಗಾಗಿ ಪ್ರಶಸ್ತಿ ಘೋಷಿಸಲಾಗಿದೆ.

2020 ರ ಪ್ರಶಸ್ತಿ ಪಡೆದ ಮೂರನೇ ವ್ಯಕ್ತಿ 60 ವರ್ಷಗಳ ಬ್ರಿಯಾನ್ ಸ್ಟೀವನ್ಸನ್ ಆಗಿದ್ದು, ಇವರು ನಾಗರಿಕ ಹಕ್ಕುಗಳ ವಕೀಲರಾಗಿದ್ದಾರೆ. ಅಮೇರಿಕಾದಲ್ಲಿ ಅಪರಾಧ ನ್ಯಾಯ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಆಘಾತದ ಸಂದರ್ಭದಲ್ಲಿ ಜನಾಂಗೀಯ ಸಾಮರಸ್ಯವನ್ನು ಮುನ್ನಡೆಸಲು ಕೈಗೊಂಡ ಸ್ಪೂರ್ತಿದಾಯಕ ಪ್ರಯತ್ನಕ್ಕಾಗಿ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಇದನ್ನೂ ಓದಿ: ನೊಬೆಲ್​ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರು ಶಿಫಾರಸ್ಸು: ನಾರ್ವೇಯ ಸಂಸತ್ ಸದಸ್ಯ

ನಾಲ್ಕನೇ ವ್ಯಕ್ತಿ ನಿಕರಾಗುವಾದ ಪರಿಸರ ಹಕ್ಕು ಹೋರಾಟಗಾರ ಲೊಟ್ಟಿ ಕನ್ನಿಂಗ್ಹ್ಯಾಮ್ ವ್ರೆನ್ ಆಗಿದ್ದು, ಅವರಿಗೆ ಸ್ಥಳೀಯ ಜಮೀನುಗಳು ಮತ್ತು ಸಮುದಾಯಗಳನ್ನು, ಶೋಷಣೆ ಮತ್ತು ಲೂಟಿಯಿಂದ ರಕ್ಷಿಸಲು ನಿರಂತರವಾಗಿ ಹೋರಾಟ ಮಾಡಿದ್ದಕ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಡಿಸೆಂಬರ್ 3 ರಂದು ಇವರಿಗೆ ಪ್ರಶಸ್ತಿ ಪ್ರದಾನವಾಗಲಿದ್ದು, ಪ್ರಶಸ್ತಿ ವಿಜೇತರು ತಲಾ 1 ಮಿಲಿಯನ್ ಕ್ರೋನರ್ (110,100 ಅಮೇರಿಕಾ ಡಾಲರ್‌) ಬಹುಮಾನವನ್ನು ಪಡೆಯುತ್ತಾರೆ. ಕಳೆದ ಬಾರಿ ಈ ಪ್ರಶಸ್ತಿ ಸ್ವೀಡಿಷ್ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ಗೆ ಲಭಿಸಿತ್ತು.

“ರೈಟ್‌ ಲೈವ್ಲೀಹುಡ್ ಪ್ರಶಸ್ತಿ”ಯನ್ನು 1980 ರಲ್ಲಿ ಪ್ರಾರಂಭಿಸಲಾಯಿತು. ಇದನ್ನು ಸ್ವೀಡಿಷ್-ಜರ್ಮನ್ ಮೂಲದ ಜಾಕೋಬ್ ವಾನ್ ಯುಕ್ಸ್ಕುಲ್ ಪ್ರಾರಂಬಿಸಿದ್ದು, ನೊಬೆಲ್ ಪ್ರಶಸ್ತಿಯಿಂದ ನಿರ್ಲಕ್ಷಿಸಲ್ಪಟ್ಟವರನ್ನು ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಮತ್ತಷ್ಟು ಓದಿಗೆ:  Activists from Belarus, Iran, Nicaragua and US to Receive ‘Alternative Nobel’ Prize

ಇದನ್ನೂ ಓದಿ: ಪದ್ಮಭೂಷಣ ಪ್ರಶಸ್ತಿ ಪಡೆದ ಸಾಹಿತಿಯನ್ನು ’ಬೌದ್ಧಿಕ ಜಿಹಾದಿ’ ಎಂದ ಬಿಜೆಪಿ ಶಾಸಕ: ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...