Homeಅಂತರಾಷ್ಟ್ರೀಯ4 ಸಾಮಾಜಿಕ ಕಾರ್ಯಕರ್ತರಿಗೆ ’ಆಲ್ಟರ್ನೇಟಿವ್‌ ನೋಬೆಲ್-2020' ಘೋಷಣೆ

4 ಸಾಮಾಜಿಕ ಕಾರ್ಯಕರ್ತರಿಗೆ ’ಆಲ್ಟರ್ನೇಟಿವ್‌ ನೋಬೆಲ್-2020′ ಘೋಷಣೆ

ಕಳೆದ ಬಾರಿ ಈ ಪ್ರಶಸ್ತಿ ಸ್ವೀಡಿಷ್ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ಗೆ ಲಭಿಸಿತ್ತು.

- Advertisement -
- Advertisement -

ಪರ್ಯಾಯ ನೊಬೆಲ್ ಪ್ರಶಸ್ತಿ (ಆಲ್ಟರ್ನೇಟಿವ್‌ ನೋಬೆಲ್) ಎಂದು ಕರೆಯಲ್ಪಡುವ ”ರೈಟ್‌ ಲೈವ್ಲೀಹುಡ್ ಪ್ರಶಸ್ತಿ-2020” ಪ್ರಶಸ್ತಿಯನ್ನು, ಬೆಲಾರಸ್ ದೇಶದ ವಿರೋಧ ಪಕ್ಷದ ನಾಯಕ ಅಲೆಸ್ ಬಿಯಾಲಿಯಾಟ್ಸ್ಕಿ, ಪ್ರಸ್ತುತ ಜೈಲಿನಲ್ಲಿರುವ ಇರಾನಿನ ಮಾನವ ಹಕ್ಕುಗಳ ವಕೀಲೆ ನಸ್ರಿನ್ ಸೊತೌಡೆಹ್, ಅಮೇರಿಕಾದ ಸಾಮಾಜಿಕ ಹೋರಾಟಗಾರ ಬ್ರಿಯಾನ್ ಸ್ಟೀವನ್ಸನ್ ಮತ್ತು ನಿಕರಾಗುವಾದ ಪರಿಸರ ಹಕ್ಕುಗಳ ಹೋರಾಟಗಾರ ಲೊಟ್ಟಿ ಕನ್ನಿಂಗ್ಹ್ಯಾಮ್ ವ್ರೆನ್‌ಗೆ ಘೋಷಣೆಯಾಗಿದೆ.

“ಜಾಗತಿಕವಾಗಿ ಪ್ರಜಾಪ್ರಭುತ್ವಕ್ಕೆ ತೊಡಕುಗಳು ಹೆಚ್ಚುತ್ತಿವೆ. ಇದು ಪ್ರಪಂಚದಾದ್ಯಂತ ಪ್ರಜಾಪ್ರಭುತ್ವವನ್ನು ಬೆಂಬಲಿಸುವವರೆಲ್ಲರೂ ಎದ್ದುನಿಂತು ಪರಸ್ಪರ ಬೆಂಬಲಿಸುವ ಸಮಯ” ಎಂದು ಸ್ವೀಡನ್‌‌ನ “ರೈಟ್ ಲೈವ್ಲೀಹುಲ್ ಪ್ರತಿಷ್ಠಾನ”ದ ಮುಖ್ಯಸ್ಥ ಓಲೆ ವಾನ್ ಯುಕ್ಸ್ಕುಲ್ ಹೇಳಿದ್ದಾರೆ.

ಇದನ್ನೂ ಓದಿ: ಆರೋಗ್ಯ ಕ್ಷೇತ್ರದಲ್ಲಿ ಕೇರಳದ ದಣಿವರಿಯದ ಸೇವೆಗೆ ವಿಶ್ವಸಂಸ್ಥೆಯ ಪ್ರಶಸ್ತಿ

58 ವರ್ಷದ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್ ಬಿಯಾಲಿಯಾಟ್ಸ್ಕಿ, ಈ ಹಿಂದೆ ನೋಬೆಲ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದರು. ಅವರು ದೇಶದ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೊ ಅವರ ನೀತಿಯನ್ನು ಪ್ರಶ್ನಿಸಿದ್ದಕ್ಕಾಗಿ ಬಂಧಿಸಲ್ಪಟ್ಟು ಜೈಲಿನಲ್ಲಿದ್ದ ಸಾವಿರಾರು ಬೆಲರೂಸಿಯನ್ನರಿಗೆ ಕಾನೂನು ನೆರವು ನೀಡಿದ್ದರು.

ಪ್ರಸ್ತುತ ಜೈಲಿನಲ್ಲಿರುವ ಇರಾನಿನ ಮಾನವ ಹಕ್ಕುಗಳ ವಕೀಲೆ ನಸ್ರಿನ್ ಸೊತೌಡೆಹ್‌ಗೆ, ವೈಯಕ್ತಿಕ ಅಪಾಯವನ್ನು ಮೀರಿ, ರಾಜಕೀಯ ಸ್ವಾತಂತ್ರ್ಯ ಮತ್ತು ಮಾನವ ಹಕ್ಕುಗಳನ್ನು ಉತ್ತೇಜಿಸಿದ ಅವರ ನಿರ್ಭೀತ ಕ್ರಿಯಾಶೀಲತೆಗಾಗಿ ಪ್ರಶಸ್ತಿ ಘೋಷಿಸಲಾಗಿದೆ.

2020 ರ ಪ್ರಶಸ್ತಿ ಪಡೆದ ಮೂರನೇ ವ್ಯಕ್ತಿ 60 ವರ್ಷಗಳ ಬ್ರಿಯಾನ್ ಸ್ಟೀವನ್ಸನ್ ಆಗಿದ್ದು, ಇವರು ನಾಗರಿಕ ಹಕ್ಕುಗಳ ವಕೀಲರಾಗಿದ್ದಾರೆ. ಅಮೇರಿಕಾದಲ್ಲಿ ಅಪರಾಧ ನ್ಯಾಯ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಆಘಾತದ ಸಂದರ್ಭದಲ್ಲಿ ಜನಾಂಗೀಯ ಸಾಮರಸ್ಯವನ್ನು ಮುನ್ನಡೆಸಲು ಕೈಗೊಂಡ ಸ್ಪೂರ್ತಿದಾಯಕ ಪ್ರಯತ್ನಕ್ಕಾಗಿ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಇದನ್ನೂ ಓದಿ: ನೊಬೆಲ್​ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರು ಶಿಫಾರಸ್ಸು: ನಾರ್ವೇಯ ಸಂಸತ್ ಸದಸ್ಯ

ನಾಲ್ಕನೇ ವ್ಯಕ್ತಿ ನಿಕರಾಗುವಾದ ಪರಿಸರ ಹಕ್ಕು ಹೋರಾಟಗಾರ ಲೊಟ್ಟಿ ಕನ್ನಿಂಗ್ಹ್ಯಾಮ್ ವ್ರೆನ್ ಆಗಿದ್ದು, ಅವರಿಗೆ ಸ್ಥಳೀಯ ಜಮೀನುಗಳು ಮತ್ತು ಸಮುದಾಯಗಳನ್ನು, ಶೋಷಣೆ ಮತ್ತು ಲೂಟಿಯಿಂದ ರಕ್ಷಿಸಲು ನಿರಂತರವಾಗಿ ಹೋರಾಟ ಮಾಡಿದ್ದಕ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಡಿಸೆಂಬರ್ 3 ರಂದು ಇವರಿಗೆ ಪ್ರಶಸ್ತಿ ಪ್ರದಾನವಾಗಲಿದ್ದು, ಪ್ರಶಸ್ತಿ ವಿಜೇತರು ತಲಾ 1 ಮಿಲಿಯನ್ ಕ್ರೋನರ್ (110,100 ಅಮೇರಿಕಾ ಡಾಲರ್‌) ಬಹುಮಾನವನ್ನು ಪಡೆಯುತ್ತಾರೆ. ಕಳೆದ ಬಾರಿ ಈ ಪ್ರಶಸ್ತಿ ಸ್ವೀಡಿಷ್ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ಗೆ ಲಭಿಸಿತ್ತು.

“ರೈಟ್‌ ಲೈವ್ಲೀಹುಡ್ ಪ್ರಶಸ್ತಿ”ಯನ್ನು 1980 ರಲ್ಲಿ ಪ್ರಾರಂಭಿಸಲಾಯಿತು. ಇದನ್ನು ಸ್ವೀಡಿಷ್-ಜರ್ಮನ್ ಮೂಲದ ಜಾಕೋಬ್ ವಾನ್ ಯುಕ್ಸ್ಕುಲ್ ಪ್ರಾರಂಬಿಸಿದ್ದು, ನೊಬೆಲ್ ಪ್ರಶಸ್ತಿಯಿಂದ ನಿರ್ಲಕ್ಷಿಸಲ್ಪಟ್ಟವರನ್ನು ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಮತ್ತಷ್ಟು ಓದಿಗೆ:  Activists from Belarus, Iran, Nicaragua and US to Receive ‘Alternative Nobel’ Prize

ಇದನ್ನೂ ಓದಿ: ಪದ್ಮಭೂಷಣ ಪ್ರಶಸ್ತಿ ಪಡೆದ ಸಾಹಿತಿಯನ್ನು ’ಬೌದ್ಧಿಕ ಜಿಹಾದಿ’ ಎಂದ ಬಿಜೆಪಿ ಶಾಸಕ: ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...