Homeಅಂತರಾಷ್ಟ್ರೀಯ4 ಸಾಮಾಜಿಕ ಕಾರ್ಯಕರ್ತರಿಗೆ ’ಆಲ್ಟರ್ನೇಟಿವ್‌ ನೋಬೆಲ್-2020' ಘೋಷಣೆ

4 ಸಾಮಾಜಿಕ ಕಾರ್ಯಕರ್ತರಿಗೆ ’ಆಲ್ಟರ್ನೇಟಿವ್‌ ನೋಬೆಲ್-2020′ ಘೋಷಣೆ

ಕಳೆದ ಬಾರಿ ಈ ಪ್ರಶಸ್ತಿ ಸ್ವೀಡಿಷ್ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ಗೆ ಲಭಿಸಿತ್ತು.

- Advertisement -
- Advertisement -

ಪರ್ಯಾಯ ನೊಬೆಲ್ ಪ್ರಶಸ್ತಿ (ಆಲ್ಟರ್ನೇಟಿವ್‌ ನೋಬೆಲ್) ಎಂದು ಕರೆಯಲ್ಪಡುವ ”ರೈಟ್‌ ಲೈವ್ಲೀಹುಡ್ ಪ್ರಶಸ್ತಿ-2020” ಪ್ರಶಸ್ತಿಯನ್ನು, ಬೆಲಾರಸ್ ದೇಶದ ವಿರೋಧ ಪಕ್ಷದ ನಾಯಕ ಅಲೆಸ್ ಬಿಯಾಲಿಯಾಟ್ಸ್ಕಿ, ಪ್ರಸ್ತುತ ಜೈಲಿನಲ್ಲಿರುವ ಇರಾನಿನ ಮಾನವ ಹಕ್ಕುಗಳ ವಕೀಲೆ ನಸ್ರಿನ್ ಸೊತೌಡೆಹ್, ಅಮೇರಿಕಾದ ಸಾಮಾಜಿಕ ಹೋರಾಟಗಾರ ಬ್ರಿಯಾನ್ ಸ್ಟೀವನ್ಸನ್ ಮತ್ತು ನಿಕರಾಗುವಾದ ಪರಿಸರ ಹಕ್ಕುಗಳ ಹೋರಾಟಗಾರ ಲೊಟ್ಟಿ ಕನ್ನಿಂಗ್ಹ್ಯಾಮ್ ವ್ರೆನ್‌ಗೆ ಘೋಷಣೆಯಾಗಿದೆ.

“ಜಾಗತಿಕವಾಗಿ ಪ್ರಜಾಪ್ರಭುತ್ವಕ್ಕೆ ತೊಡಕುಗಳು ಹೆಚ್ಚುತ್ತಿವೆ. ಇದು ಪ್ರಪಂಚದಾದ್ಯಂತ ಪ್ರಜಾಪ್ರಭುತ್ವವನ್ನು ಬೆಂಬಲಿಸುವವರೆಲ್ಲರೂ ಎದ್ದುನಿಂತು ಪರಸ್ಪರ ಬೆಂಬಲಿಸುವ ಸಮಯ” ಎಂದು ಸ್ವೀಡನ್‌‌ನ “ರೈಟ್ ಲೈವ್ಲೀಹುಲ್ ಪ್ರತಿಷ್ಠಾನ”ದ ಮುಖ್ಯಸ್ಥ ಓಲೆ ವಾನ್ ಯುಕ್ಸ್ಕುಲ್ ಹೇಳಿದ್ದಾರೆ.

ಇದನ್ನೂ ಓದಿ: ಆರೋಗ್ಯ ಕ್ಷೇತ್ರದಲ್ಲಿ ಕೇರಳದ ದಣಿವರಿಯದ ಸೇವೆಗೆ ವಿಶ್ವಸಂಸ್ಥೆಯ ಪ್ರಶಸ್ತಿ

58 ವರ್ಷದ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್ ಬಿಯಾಲಿಯಾಟ್ಸ್ಕಿ, ಈ ಹಿಂದೆ ನೋಬೆಲ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದರು. ಅವರು ದೇಶದ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೊ ಅವರ ನೀತಿಯನ್ನು ಪ್ರಶ್ನಿಸಿದ್ದಕ್ಕಾಗಿ ಬಂಧಿಸಲ್ಪಟ್ಟು ಜೈಲಿನಲ್ಲಿದ್ದ ಸಾವಿರಾರು ಬೆಲರೂಸಿಯನ್ನರಿಗೆ ಕಾನೂನು ನೆರವು ನೀಡಿದ್ದರು.

ಪ್ರಸ್ತುತ ಜೈಲಿನಲ್ಲಿರುವ ಇರಾನಿನ ಮಾನವ ಹಕ್ಕುಗಳ ವಕೀಲೆ ನಸ್ರಿನ್ ಸೊತೌಡೆಹ್‌ಗೆ, ವೈಯಕ್ತಿಕ ಅಪಾಯವನ್ನು ಮೀರಿ, ರಾಜಕೀಯ ಸ್ವಾತಂತ್ರ್ಯ ಮತ್ತು ಮಾನವ ಹಕ್ಕುಗಳನ್ನು ಉತ್ತೇಜಿಸಿದ ಅವರ ನಿರ್ಭೀತ ಕ್ರಿಯಾಶೀಲತೆಗಾಗಿ ಪ್ರಶಸ್ತಿ ಘೋಷಿಸಲಾಗಿದೆ.

2020 ರ ಪ್ರಶಸ್ತಿ ಪಡೆದ ಮೂರನೇ ವ್ಯಕ್ತಿ 60 ವರ್ಷಗಳ ಬ್ರಿಯಾನ್ ಸ್ಟೀವನ್ಸನ್ ಆಗಿದ್ದು, ಇವರು ನಾಗರಿಕ ಹಕ್ಕುಗಳ ವಕೀಲರಾಗಿದ್ದಾರೆ. ಅಮೇರಿಕಾದಲ್ಲಿ ಅಪರಾಧ ನ್ಯಾಯ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಆಘಾತದ ಸಂದರ್ಭದಲ್ಲಿ ಜನಾಂಗೀಯ ಸಾಮರಸ್ಯವನ್ನು ಮುನ್ನಡೆಸಲು ಕೈಗೊಂಡ ಸ್ಪೂರ್ತಿದಾಯಕ ಪ್ರಯತ್ನಕ್ಕಾಗಿ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಇದನ್ನೂ ಓದಿ: ನೊಬೆಲ್​ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರು ಶಿಫಾರಸ್ಸು: ನಾರ್ವೇಯ ಸಂಸತ್ ಸದಸ್ಯ

ನಾಲ್ಕನೇ ವ್ಯಕ್ತಿ ನಿಕರಾಗುವಾದ ಪರಿಸರ ಹಕ್ಕು ಹೋರಾಟಗಾರ ಲೊಟ್ಟಿ ಕನ್ನಿಂಗ್ಹ್ಯಾಮ್ ವ್ರೆನ್ ಆಗಿದ್ದು, ಅವರಿಗೆ ಸ್ಥಳೀಯ ಜಮೀನುಗಳು ಮತ್ತು ಸಮುದಾಯಗಳನ್ನು, ಶೋಷಣೆ ಮತ್ತು ಲೂಟಿಯಿಂದ ರಕ್ಷಿಸಲು ನಿರಂತರವಾಗಿ ಹೋರಾಟ ಮಾಡಿದ್ದಕ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಡಿಸೆಂಬರ್ 3 ರಂದು ಇವರಿಗೆ ಪ್ರಶಸ್ತಿ ಪ್ರದಾನವಾಗಲಿದ್ದು, ಪ್ರಶಸ್ತಿ ವಿಜೇತರು ತಲಾ 1 ಮಿಲಿಯನ್ ಕ್ರೋನರ್ (110,100 ಅಮೇರಿಕಾ ಡಾಲರ್‌) ಬಹುಮಾನವನ್ನು ಪಡೆಯುತ್ತಾರೆ. ಕಳೆದ ಬಾರಿ ಈ ಪ್ರಶಸ್ತಿ ಸ್ವೀಡಿಷ್ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ಗೆ ಲಭಿಸಿತ್ತು.

“ರೈಟ್‌ ಲೈವ್ಲೀಹುಡ್ ಪ್ರಶಸ್ತಿ”ಯನ್ನು 1980 ರಲ್ಲಿ ಪ್ರಾರಂಭಿಸಲಾಯಿತು. ಇದನ್ನು ಸ್ವೀಡಿಷ್-ಜರ್ಮನ್ ಮೂಲದ ಜಾಕೋಬ್ ವಾನ್ ಯುಕ್ಸ್ಕುಲ್ ಪ್ರಾರಂಬಿಸಿದ್ದು, ನೊಬೆಲ್ ಪ್ರಶಸ್ತಿಯಿಂದ ನಿರ್ಲಕ್ಷಿಸಲ್ಪಟ್ಟವರನ್ನು ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಮತ್ತಷ್ಟು ಓದಿಗೆ:  Activists from Belarus, Iran, Nicaragua and US to Receive ‘Alternative Nobel’ Prize

ಇದನ್ನೂ ಓದಿ: ಪದ್ಮಭೂಷಣ ಪ್ರಶಸ್ತಿ ಪಡೆದ ಸಾಹಿತಿಯನ್ನು ’ಬೌದ್ಧಿಕ ಜಿಹಾದಿ’ ಎಂದ ಬಿಜೆಪಿ ಶಾಸಕ: ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...