Homeಅಂತರಾಷ್ಟ್ರೀಯ4 ಸಾಮಾಜಿಕ ಕಾರ್ಯಕರ್ತರಿಗೆ ’ಆಲ್ಟರ್ನೇಟಿವ್‌ ನೋಬೆಲ್-2020' ಘೋಷಣೆ

4 ಸಾಮಾಜಿಕ ಕಾರ್ಯಕರ್ತರಿಗೆ ’ಆಲ್ಟರ್ನೇಟಿವ್‌ ನೋಬೆಲ್-2020′ ಘೋಷಣೆ

ಕಳೆದ ಬಾರಿ ಈ ಪ್ರಶಸ್ತಿ ಸ್ವೀಡಿಷ್ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ಗೆ ಲಭಿಸಿತ್ತು.

- Advertisement -
- Advertisement -

ಪರ್ಯಾಯ ನೊಬೆಲ್ ಪ್ರಶಸ್ತಿ (ಆಲ್ಟರ್ನೇಟಿವ್‌ ನೋಬೆಲ್) ಎಂದು ಕರೆಯಲ್ಪಡುವ ”ರೈಟ್‌ ಲೈವ್ಲೀಹುಡ್ ಪ್ರಶಸ್ತಿ-2020” ಪ್ರಶಸ್ತಿಯನ್ನು, ಬೆಲಾರಸ್ ದೇಶದ ವಿರೋಧ ಪಕ್ಷದ ನಾಯಕ ಅಲೆಸ್ ಬಿಯಾಲಿಯಾಟ್ಸ್ಕಿ, ಪ್ರಸ್ತುತ ಜೈಲಿನಲ್ಲಿರುವ ಇರಾನಿನ ಮಾನವ ಹಕ್ಕುಗಳ ವಕೀಲೆ ನಸ್ರಿನ್ ಸೊತೌಡೆಹ್, ಅಮೇರಿಕಾದ ಸಾಮಾಜಿಕ ಹೋರಾಟಗಾರ ಬ್ರಿಯಾನ್ ಸ್ಟೀವನ್ಸನ್ ಮತ್ತು ನಿಕರಾಗುವಾದ ಪರಿಸರ ಹಕ್ಕುಗಳ ಹೋರಾಟಗಾರ ಲೊಟ್ಟಿ ಕನ್ನಿಂಗ್ಹ್ಯಾಮ್ ವ್ರೆನ್‌ಗೆ ಘೋಷಣೆಯಾಗಿದೆ.

“ಜಾಗತಿಕವಾಗಿ ಪ್ರಜಾಪ್ರಭುತ್ವಕ್ಕೆ ತೊಡಕುಗಳು ಹೆಚ್ಚುತ್ತಿವೆ. ಇದು ಪ್ರಪಂಚದಾದ್ಯಂತ ಪ್ರಜಾಪ್ರಭುತ್ವವನ್ನು ಬೆಂಬಲಿಸುವವರೆಲ್ಲರೂ ಎದ್ದುನಿಂತು ಪರಸ್ಪರ ಬೆಂಬಲಿಸುವ ಸಮಯ” ಎಂದು ಸ್ವೀಡನ್‌‌ನ “ರೈಟ್ ಲೈವ್ಲೀಹುಲ್ ಪ್ರತಿಷ್ಠಾನ”ದ ಮುಖ್ಯಸ್ಥ ಓಲೆ ವಾನ್ ಯುಕ್ಸ್ಕುಲ್ ಹೇಳಿದ್ದಾರೆ.

ಇದನ್ನೂ ಓದಿ: ಆರೋಗ್ಯ ಕ್ಷೇತ್ರದಲ್ಲಿ ಕೇರಳದ ದಣಿವರಿಯದ ಸೇವೆಗೆ ವಿಶ್ವಸಂಸ್ಥೆಯ ಪ್ರಶಸ್ತಿ

58 ವರ್ಷದ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್ ಬಿಯಾಲಿಯಾಟ್ಸ್ಕಿ, ಈ ಹಿಂದೆ ನೋಬೆಲ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದರು. ಅವರು ದೇಶದ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೊ ಅವರ ನೀತಿಯನ್ನು ಪ್ರಶ್ನಿಸಿದ್ದಕ್ಕಾಗಿ ಬಂಧಿಸಲ್ಪಟ್ಟು ಜೈಲಿನಲ್ಲಿದ್ದ ಸಾವಿರಾರು ಬೆಲರೂಸಿಯನ್ನರಿಗೆ ಕಾನೂನು ನೆರವು ನೀಡಿದ್ದರು.

ಪ್ರಸ್ತುತ ಜೈಲಿನಲ್ಲಿರುವ ಇರಾನಿನ ಮಾನವ ಹಕ್ಕುಗಳ ವಕೀಲೆ ನಸ್ರಿನ್ ಸೊತೌಡೆಹ್‌ಗೆ, ವೈಯಕ್ತಿಕ ಅಪಾಯವನ್ನು ಮೀರಿ, ರಾಜಕೀಯ ಸ್ವಾತಂತ್ರ್ಯ ಮತ್ತು ಮಾನವ ಹಕ್ಕುಗಳನ್ನು ಉತ್ತೇಜಿಸಿದ ಅವರ ನಿರ್ಭೀತ ಕ್ರಿಯಾಶೀಲತೆಗಾಗಿ ಪ್ರಶಸ್ತಿ ಘೋಷಿಸಲಾಗಿದೆ.

2020 ರ ಪ್ರಶಸ್ತಿ ಪಡೆದ ಮೂರನೇ ವ್ಯಕ್ತಿ 60 ವರ್ಷಗಳ ಬ್ರಿಯಾನ್ ಸ್ಟೀವನ್ಸನ್ ಆಗಿದ್ದು, ಇವರು ನಾಗರಿಕ ಹಕ್ಕುಗಳ ವಕೀಲರಾಗಿದ್ದಾರೆ. ಅಮೇರಿಕಾದಲ್ಲಿ ಅಪರಾಧ ನ್ಯಾಯ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಆಘಾತದ ಸಂದರ್ಭದಲ್ಲಿ ಜನಾಂಗೀಯ ಸಾಮರಸ್ಯವನ್ನು ಮುನ್ನಡೆಸಲು ಕೈಗೊಂಡ ಸ್ಪೂರ್ತಿದಾಯಕ ಪ್ರಯತ್ನಕ್ಕಾಗಿ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಇದನ್ನೂ ಓದಿ: ನೊಬೆಲ್​ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರು ಶಿಫಾರಸ್ಸು: ನಾರ್ವೇಯ ಸಂಸತ್ ಸದಸ್ಯ

ನಾಲ್ಕನೇ ವ್ಯಕ್ತಿ ನಿಕರಾಗುವಾದ ಪರಿಸರ ಹಕ್ಕು ಹೋರಾಟಗಾರ ಲೊಟ್ಟಿ ಕನ್ನಿಂಗ್ಹ್ಯಾಮ್ ವ್ರೆನ್ ಆಗಿದ್ದು, ಅವರಿಗೆ ಸ್ಥಳೀಯ ಜಮೀನುಗಳು ಮತ್ತು ಸಮುದಾಯಗಳನ್ನು, ಶೋಷಣೆ ಮತ್ತು ಲೂಟಿಯಿಂದ ರಕ್ಷಿಸಲು ನಿರಂತರವಾಗಿ ಹೋರಾಟ ಮಾಡಿದ್ದಕ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಡಿಸೆಂಬರ್ 3 ರಂದು ಇವರಿಗೆ ಪ್ರಶಸ್ತಿ ಪ್ರದಾನವಾಗಲಿದ್ದು, ಪ್ರಶಸ್ತಿ ವಿಜೇತರು ತಲಾ 1 ಮಿಲಿಯನ್ ಕ್ರೋನರ್ (110,100 ಅಮೇರಿಕಾ ಡಾಲರ್‌) ಬಹುಮಾನವನ್ನು ಪಡೆಯುತ್ತಾರೆ. ಕಳೆದ ಬಾರಿ ಈ ಪ್ರಶಸ್ತಿ ಸ್ವೀಡಿಷ್ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ಗೆ ಲಭಿಸಿತ್ತು.

“ರೈಟ್‌ ಲೈವ್ಲೀಹುಡ್ ಪ್ರಶಸ್ತಿ”ಯನ್ನು 1980 ರಲ್ಲಿ ಪ್ರಾರಂಭಿಸಲಾಯಿತು. ಇದನ್ನು ಸ್ವೀಡಿಷ್-ಜರ್ಮನ್ ಮೂಲದ ಜಾಕೋಬ್ ವಾನ್ ಯುಕ್ಸ್ಕುಲ್ ಪ್ರಾರಂಬಿಸಿದ್ದು, ನೊಬೆಲ್ ಪ್ರಶಸ್ತಿಯಿಂದ ನಿರ್ಲಕ್ಷಿಸಲ್ಪಟ್ಟವರನ್ನು ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಮತ್ತಷ್ಟು ಓದಿಗೆ:  Activists from Belarus, Iran, Nicaragua and US to Receive ‘Alternative Nobel’ Prize

ಇದನ್ನೂ ಓದಿ: ಪದ್ಮಭೂಷಣ ಪ್ರಶಸ್ತಿ ಪಡೆದ ಸಾಹಿತಿಯನ್ನು ’ಬೌದ್ಧಿಕ ಜಿಹಾದಿ’ ಎಂದ ಬಿಜೆಪಿ ಶಾಸಕ: ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....