Homeಅಂತರಾಷ್ಟ್ರೀಯ4 ಸಾಮಾಜಿಕ ಕಾರ್ಯಕರ್ತರಿಗೆ ’ಆಲ್ಟರ್ನೇಟಿವ್‌ ನೋಬೆಲ್-2020' ಘೋಷಣೆ

4 ಸಾಮಾಜಿಕ ಕಾರ್ಯಕರ್ತರಿಗೆ ’ಆಲ್ಟರ್ನೇಟಿವ್‌ ನೋಬೆಲ್-2020′ ಘೋಷಣೆ

ಕಳೆದ ಬಾರಿ ಈ ಪ್ರಶಸ್ತಿ ಸ್ವೀಡಿಷ್ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ಗೆ ಲಭಿಸಿತ್ತು.

- Advertisement -
- Advertisement -

ಪರ್ಯಾಯ ನೊಬೆಲ್ ಪ್ರಶಸ್ತಿ (ಆಲ್ಟರ್ನೇಟಿವ್‌ ನೋಬೆಲ್) ಎಂದು ಕರೆಯಲ್ಪಡುವ ”ರೈಟ್‌ ಲೈವ್ಲೀಹುಡ್ ಪ್ರಶಸ್ತಿ-2020” ಪ್ರಶಸ್ತಿಯನ್ನು, ಬೆಲಾರಸ್ ದೇಶದ ವಿರೋಧ ಪಕ್ಷದ ನಾಯಕ ಅಲೆಸ್ ಬಿಯಾಲಿಯಾಟ್ಸ್ಕಿ, ಪ್ರಸ್ತುತ ಜೈಲಿನಲ್ಲಿರುವ ಇರಾನಿನ ಮಾನವ ಹಕ್ಕುಗಳ ವಕೀಲೆ ನಸ್ರಿನ್ ಸೊತೌಡೆಹ್, ಅಮೇರಿಕಾದ ಸಾಮಾಜಿಕ ಹೋರಾಟಗಾರ ಬ್ರಿಯಾನ್ ಸ್ಟೀವನ್ಸನ್ ಮತ್ತು ನಿಕರಾಗುವಾದ ಪರಿಸರ ಹಕ್ಕುಗಳ ಹೋರಾಟಗಾರ ಲೊಟ್ಟಿ ಕನ್ನಿಂಗ್ಹ್ಯಾಮ್ ವ್ರೆನ್‌ಗೆ ಘೋಷಣೆಯಾಗಿದೆ.

“ಜಾಗತಿಕವಾಗಿ ಪ್ರಜಾಪ್ರಭುತ್ವಕ್ಕೆ ತೊಡಕುಗಳು ಹೆಚ್ಚುತ್ತಿವೆ. ಇದು ಪ್ರಪಂಚದಾದ್ಯಂತ ಪ್ರಜಾಪ್ರಭುತ್ವವನ್ನು ಬೆಂಬಲಿಸುವವರೆಲ್ಲರೂ ಎದ್ದುನಿಂತು ಪರಸ್ಪರ ಬೆಂಬಲಿಸುವ ಸಮಯ” ಎಂದು ಸ್ವೀಡನ್‌‌ನ “ರೈಟ್ ಲೈವ್ಲೀಹುಲ್ ಪ್ರತಿಷ್ಠಾನ”ದ ಮುಖ್ಯಸ್ಥ ಓಲೆ ವಾನ್ ಯುಕ್ಸ್ಕುಲ್ ಹೇಳಿದ್ದಾರೆ.

ಇದನ್ನೂ ಓದಿ: ಆರೋಗ್ಯ ಕ್ಷೇತ್ರದಲ್ಲಿ ಕೇರಳದ ದಣಿವರಿಯದ ಸೇವೆಗೆ ವಿಶ್ವಸಂಸ್ಥೆಯ ಪ್ರಶಸ್ತಿ

58 ವರ್ಷದ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್ ಬಿಯಾಲಿಯಾಟ್ಸ್ಕಿ, ಈ ಹಿಂದೆ ನೋಬೆಲ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದರು. ಅವರು ದೇಶದ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೊ ಅವರ ನೀತಿಯನ್ನು ಪ್ರಶ್ನಿಸಿದ್ದಕ್ಕಾಗಿ ಬಂಧಿಸಲ್ಪಟ್ಟು ಜೈಲಿನಲ್ಲಿದ್ದ ಸಾವಿರಾರು ಬೆಲರೂಸಿಯನ್ನರಿಗೆ ಕಾನೂನು ನೆರವು ನೀಡಿದ್ದರು.

ಪ್ರಸ್ತುತ ಜೈಲಿನಲ್ಲಿರುವ ಇರಾನಿನ ಮಾನವ ಹಕ್ಕುಗಳ ವಕೀಲೆ ನಸ್ರಿನ್ ಸೊತೌಡೆಹ್‌ಗೆ, ವೈಯಕ್ತಿಕ ಅಪಾಯವನ್ನು ಮೀರಿ, ರಾಜಕೀಯ ಸ್ವಾತಂತ್ರ್ಯ ಮತ್ತು ಮಾನವ ಹಕ್ಕುಗಳನ್ನು ಉತ್ತೇಜಿಸಿದ ಅವರ ನಿರ್ಭೀತ ಕ್ರಿಯಾಶೀಲತೆಗಾಗಿ ಪ್ರಶಸ್ತಿ ಘೋಷಿಸಲಾಗಿದೆ.

2020 ರ ಪ್ರಶಸ್ತಿ ಪಡೆದ ಮೂರನೇ ವ್ಯಕ್ತಿ 60 ವರ್ಷಗಳ ಬ್ರಿಯಾನ್ ಸ್ಟೀವನ್ಸನ್ ಆಗಿದ್ದು, ಇವರು ನಾಗರಿಕ ಹಕ್ಕುಗಳ ವಕೀಲರಾಗಿದ್ದಾರೆ. ಅಮೇರಿಕಾದಲ್ಲಿ ಅಪರಾಧ ನ್ಯಾಯ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಆಘಾತದ ಸಂದರ್ಭದಲ್ಲಿ ಜನಾಂಗೀಯ ಸಾಮರಸ್ಯವನ್ನು ಮುನ್ನಡೆಸಲು ಕೈಗೊಂಡ ಸ್ಪೂರ್ತಿದಾಯಕ ಪ್ರಯತ್ನಕ್ಕಾಗಿ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಇದನ್ನೂ ಓದಿ: ನೊಬೆಲ್​ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರು ಶಿಫಾರಸ್ಸು: ನಾರ್ವೇಯ ಸಂಸತ್ ಸದಸ್ಯ

ನಾಲ್ಕನೇ ವ್ಯಕ್ತಿ ನಿಕರಾಗುವಾದ ಪರಿಸರ ಹಕ್ಕು ಹೋರಾಟಗಾರ ಲೊಟ್ಟಿ ಕನ್ನಿಂಗ್ಹ್ಯಾಮ್ ವ್ರೆನ್ ಆಗಿದ್ದು, ಅವರಿಗೆ ಸ್ಥಳೀಯ ಜಮೀನುಗಳು ಮತ್ತು ಸಮುದಾಯಗಳನ್ನು, ಶೋಷಣೆ ಮತ್ತು ಲೂಟಿಯಿಂದ ರಕ್ಷಿಸಲು ನಿರಂತರವಾಗಿ ಹೋರಾಟ ಮಾಡಿದ್ದಕ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಡಿಸೆಂಬರ್ 3 ರಂದು ಇವರಿಗೆ ಪ್ರಶಸ್ತಿ ಪ್ರದಾನವಾಗಲಿದ್ದು, ಪ್ರಶಸ್ತಿ ವಿಜೇತರು ತಲಾ 1 ಮಿಲಿಯನ್ ಕ್ರೋನರ್ (110,100 ಅಮೇರಿಕಾ ಡಾಲರ್‌) ಬಹುಮಾನವನ್ನು ಪಡೆಯುತ್ತಾರೆ. ಕಳೆದ ಬಾರಿ ಈ ಪ್ರಶಸ್ತಿ ಸ್ವೀಡಿಷ್ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ಗೆ ಲಭಿಸಿತ್ತು.

“ರೈಟ್‌ ಲೈವ್ಲೀಹುಡ್ ಪ್ರಶಸ್ತಿ”ಯನ್ನು 1980 ರಲ್ಲಿ ಪ್ರಾರಂಭಿಸಲಾಯಿತು. ಇದನ್ನು ಸ್ವೀಡಿಷ್-ಜರ್ಮನ್ ಮೂಲದ ಜಾಕೋಬ್ ವಾನ್ ಯುಕ್ಸ್ಕುಲ್ ಪ್ರಾರಂಬಿಸಿದ್ದು, ನೊಬೆಲ್ ಪ್ರಶಸ್ತಿಯಿಂದ ನಿರ್ಲಕ್ಷಿಸಲ್ಪಟ್ಟವರನ್ನು ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಮತ್ತಷ್ಟು ಓದಿಗೆ:  Activists from Belarus, Iran, Nicaragua and US to Receive ‘Alternative Nobel’ Prize

ಇದನ್ನೂ ಓದಿ: ಪದ್ಮಭೂಷಣ ಪ್ರಶಸ್ತಿ ಪಡೆದ ಸಾಹಿತಿಯನ್ನು ’ಬೌದ್ಧಿಕ ಜಿಹಾದಿ’ ಎಂದ ಬಿಜೆಪಿ ಶಾಸಕ: ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...