Homeಅಂತರಾಷ್ಟ್ರೀಯ4 ಸಾಮಾಜಿಕ ಕಾರ್ಯಕರ್ತರಿಗೆ ’ಆಲ್ಟರ್ನೇಟಿವ್‌ ನೋಬೆಲ್-2020' ಘೋಷಣೆ

4 ಸಾಮಾಜಿಕ ಕಾರ್ಯಕರ್ತರಿಗೆ ’ಆಲ್ಟರ್ನೇಟಿವ್‌ ನೋಬೆಲ್-2020′ ಘೋಷಣೆ

ಕಳೆದ ಬಾರಿ ಈ ಪ್ರಶಸ್ತಿ ಸ್ವೀಡಿಷ್ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ಗೆ ಲಭಿಸಿತ್ತು.

- Advertisement -
- Advertisement -

ಪರ್ಯಾಯ ನೊಬೆಲ್ ಪ್ರಶಸ್ತಿ (ಆಲ್ಟರ್ನೇಟಿವ್‌ ನೋಬೆಲ್) ಎಂದು ಕರೆಯಲ್ಪಡುವ ”ರೈಟ್‌ ಲೈವ್ಲೀಹುಡ್ ಪ್ರಶಸ್ತಿ-2020” ಪ್ರಶಸ್ತಿಯನ್ನು, ಬೆಲಾರಸ್ ದೇಶದ ವಿರೋಧ ಪಕ್ಷದ ನಾಯಕ ಅಲೆಸ್ ಬಿಯಾಲಿಯಾಟ್ಸ್ಕಿ, ಪ್ರಸ್ತುತ ಜೈಲಿನಲ್ಲಿರುವ ಇರಾನಿನ ಮಾನವ ಹಕ್ಕುಗಳ ವಕೀಲೆ ನಸ್ರಿನ್ ಸೊತೌಡೆಹ್, ಅಮೇರಿಕಾದ ಸಾಮಾಜಿಕ ಹೋರಾಟಗಾರ ಬ್ರಿಯಾನ್ ಸ್ಟೀವನ್ಸನ್ ಮತ್ತು ನಿಕರಾಗುವಾದ ಪರಿಸರ ಹಕ್ಕುಗಳ ಹೋರಾಟಗಾರ ಲೊಟ್ಟಿ ಕನ್ನಿಂಗ್ಹ್ಯಾಮ್ ವ್ರೆನ್‌ಗೆ ಘೋಷಣೆಯಾಗಿದೆ.

“ಜಾಗತಿಕವಾಗಿ ಪ್ರಜಾಪ್ರಭುತ್ವಕ್ಕೆ ತೊಡಕುಗಳು ಹೆಚ್ಚುತ್ತಿವೆ. ಇದು ಪ್ರಪಂಚದಾದ್ಯಂತ ಪ್ರಜಾಪ್ರಭುತ್ವವನ್ನು ಬೆಂಬಲಿಸುವವರೆಲ್ಲರೂ ಎದ್ದುನಿಂತು ಪರಸ್ಪರ ಬೆಂಬಲಿಸುವ ಸಮಯ” ಎಂದು ಸ್ವೀಡನ್‌‌ನ “ರೈಟ್ ಲೈವ್ಲೀಹುಲ್ ಪ್ರತಿಷ್ಠಾನ”ದ ಮುಖ್ಯಸ್ಥ ಓಲೆ ವಾನ್ ಯುಕ್ಸ್ಕುಲ್ ಹೇಳಿದ್ದಾರೆ.

ಇದನ್ನೂ ಓದಿ: ಆರೋಗ್ಯ ಕ್ಷೇತ್ರದಲ್ಲಿ ಕೇರಳದ ದಣಿವರಿಯದ ಸೇವೆಗೆ ವಿಶ್ವಸಂಸ್ಥೆಯ ಪ್ರಶಸ್ತಿ

58 ವರ್ಷದ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್ ಬಿಯಾಲಿಯಾಟ್ಸ್ಕಿ, ಈ ಹಿಂದೆ ನೋಬೆಲ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದರು. ಅವರು ದೇಶದ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೊ ಅವರ ನೀತಿಯನ್ನು ಪ್ರಶ್ನಿಸಿದ್ದಕ್ಕಾಗಿ ಬಂಧಿಸಲ್ಪಟ್ಟು ಜೈಲಿನಲ್ಲಿದ್ದ ಸಾವಿರಾರು ಬೆಲರೂಸಿಯನ್ನರಿಗೆ ಕಾನೂನು ನೆರವು ನೀಡಿದ್ದರು.

ಪ್ರಸ್ತುತ ಜೈಲಿನಲ್ಲಿರುವ ಇರಾನಿನ ಮಾನವ ಹಕ್ಕುಗಳ ವಕೀಲೆ ನಸ್ರಿನ್ ಸೊತೌಡೆಹ್‌ಗೆ, ವೈಯಕ್ತಿಕ ಅಪಾಯವನ್ನು ಮೀರಿ, ರಾಜಕೀಯ ಸ್ವಾತಂತ್ರ್ಯ ಮತ್ತು ಮಾನವ ಹಕ್ಕುಗಳನ್ನು ಉತ್ತೇಜಿಸಿದ ಅವರ ನಿರ್ಭೀತ ಕ್ರಿಯಾಶೀಲತೆಗಾಗಿ ಪ್ರಶಸ್ತಿ ಘೋಷಿಸಲಾಗಿದೆ.

2020 ರ ಪ್ರಶಸ್ತಿ ಪಡೆದ ಮೂರನೇ ವ್ಯಕ್ತಿ 60 ವರ್ಷಗಳ ಬ್ರಿಯಾನ್ ಸ್ಟೀವನ್ಸನ್ ಆಗಿದ್ದು, ಇವರು ನಾಗರಿಕ ಹಕ್ಕುಗಳ ವಕೀಲರಾಗಿದ್ದಾರೆ. ಅಮೇರಿಕಾದಲ್ಲಿ ಅಪರಾಧ ನ್ಯಾಯ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಆಘಾತದ ಸಂದರ್ಭದಲ್ಲಿ ಜನಾಂಗೀಯ ಸಾಮರಸ್ಯವನ್ನು ಮುನ್ನಡೆಸಲು ಕೈಗೊಂಡ ಸ್ಪೂರ್ತಿದಾಯಕ ಪ್ರಯತ್ನಕ್ಕಾಗಿ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಇದನ್ನೂ ಓದಿ: ನೊಬೆಲ್​ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರು ಶಿಫಾರಸ್ಸು: ನಾರ್ವೇಯ ಸಂಸತ್ ಸದಸ್ಯ

ನಾಲ್ಕನೇ ವ್ಯಕ್ತಿ ನಿಕರಾಗುವಾದ ಪರಿಸರ ಹಕ್ಕು ಹೋರಾಟಗಾರ ಲೊಟ್ಟಿ ಕನ್ನಿಂಗ್ಹ್ಯಾಮ್ ವ್ರೆನ್ ಆಗಿದ್ದು, ಅವರಿಗೆ ಸ್ಥಳೀಯ ಜಮೀನುಗಳು ಮತ್ತು ಸಮುದಾಯಗಳನ್ನು, ಶೋಷಣೆ ಮತ್ತು ಲೂಟಿಯಿಂದ ರಕ್ಷಿಸಲು ನಿರಂತರವಾಗಿ ಹೋರಾಟ ಮಾಡಿದ್ದಕ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಡಿಸೆಂಬರ್ 3 ರಂದು ಇವರಿಗೆ ಪ್ರಶಸ್ತಿ ಪ್ರದಾನವಾಗಲಿದ್ದು, ಪ್ರಶಸ್ತಿ ವಿಜೇತರು ತಲಾ 1 ಮಿಲಿಯನ್ ಕ್ರೋನರ್ (110,100 ಅಮೇರಿಕಾ ಡಾಲರ್‌) ಬಹುಮಾನವನ್ನು ಪಡೆಯುತ್ತಾರೆ. ಕಳೆದ ಬಾರಿ ಈ ಪ್ರಶಸ್ತಿ ಸ್ವೀಡಿಷ್ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ಗೆ ಲಭಿಸಿತ್ತು.

“ರೈಟ್‌ ಲೈವ್ಲೀಹುಡ್ ಪ್ರಶಸ್ತಿ”ಯನ್ನು 1980 ರಲ್ಲಿ ಪ್ರಾರಂಭಿಸಲಾಯಿತು. ಇದನ್ನು ಸ್ವೀಡಿಷ್-ಜರ್ಮನ್ ಮೂಲದ ಜಾಕೋಬ್ ವಾನ್ ಯುಕ್ಸ್ಕುಲ್ ಪ್ರಾರಂಬಿಸಿದ್ದು, ನೊಬೆಲ್ ಪ್ರಶಸ್ತಿಯಿಂದ ನಿರ್ಲಕ್ಷಿಸಲ್ಪಟ್ಟವರನ್ನು ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಮತ್ತಷ್ಟು ಓದಿಗೆ:  Activists from Belarus, Iran, Nicaragua and US to Receive ‘Alternative Nobel’ Prize

ಇದನ್ನೂ ಓದಿ: ಪದ್ಮಭೂಷಣ ಪ್ರಶಸ್ತಿ ಪಡೆದ ಸಾಹಿತಿಯನ್ನು ’ಬೌದ್ಧಿಕ ಜಿಹಾದಿ’ ಎಂದ ಬಿಜೆಪಿ ಶಾಸಕ: ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....