Homeಅಂತರಾಷ್ಟ್ರೀಯ4 ಸಾಮಾಜಿಕ ಕಾರ್ಯಕರ್ತರಿಗೆ ’ಆಲ್ಟರ್ನೇಟಿವ್‌ ನೋಬೆಲ್-2020' ಘೋಷಣೆ

4 ಸಾಮಾಜಿಕ ಕಾರ್ಯಕರ್ತರಿಗೆ ’ಆಲ್ಟರ್ನೇಟಿವ್‌ ನೋಬೆಲ್-2020′ ಘೋಷಣೆ

ಕಳೆದ ಬಾರಿ ಈ ಪ್ರಶಸ್ತಿ ಸ್ವೀಡಿಷ್ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ಗೆ ಲಭಿಸಿತ್ತು.

- Advertisement -
- Advertisement -

ಪರ್ಯಾಯ ನೊಬೆಲ್ ಪ್ರಶಸ್ತಿ (ಆಲ್ಟರ್ನೇಟಿವ್‌ ನೋಬೆಲ್) ಎಂದು ಕರೆಯಲ್ಪಡುವ ”ರೈಟ್‌ ಲೈವ್ಲೀಹುಡ್ ಪ್ರಶಸ್ತಿ-2020” ಪ್ರಶಸ್ತಿಯನ್ನು, ಬೆಲಾರಸ್ ದೇಶದ ವಿರೋಧ ಪಕ್ಷದ ನಾಯಕ ಅಲೆಸ್ ಬಿಯಾಲಿಯಾಟ್ಸ್ಕಿ, ಪ್ರಸ್ತುತ ಜೈಲಿನಲ್ಲಿರುವ ಇರಾನಿನ ಮಾನವ ಹಕ್ಕುಗಳ ವಕೀಲೆ ನಸ್ರಿನ್ ಸೊತೌಡೆಹ್, ಅಮೇರಿಕಾದ ಸಾಮಾಜಿಕ ಹೋರಾಟಗಾರ ಬ್ರಿಯಾನ್ ಸ್ಟೀವನ್ಸನ್ ಮತ್ತು ನಿಕರಾಗುವಾದ ಪರಿಸರ ಹಕ್ಕುಗಳ ಹೋರಾಟಗಾರ ಲೊಟ್ಟಿ ಕನ್ನಿಂಗ್ಹ್ಯಾಮ್ ವ್ರೆನ್‌ಗೆ ಘೋಷಣೆಯಾಗಿದೆ.

“ಜಾಗತಿಕವಾಗಿ ಪ್ರಜಾಪ್ರಭುತ್ವಕ್ಕೆ ತೊಡಕುಗಳು ಹೆಚ್ಚುತ್ತಿವೆ. ಇದು ಪ್ರಪಂಚದಾದ್ಯಂತ ಪ್ರಜಾಪ್ರಭುತ್ವವನ್ನು ಬೆಂಬಲಿಸುವವರೆಲ್ಲರೂ ಎದ್ದುನಿಂತು ಪರಸ್ಪರ ಬೆಂಬಲಿಸುವ ಸಮಯ” ಎಂದು ಸ್ವೀಡನ್‌‌ನ “ರೈಟ್ ಲೈವ್ಲೀಹುಲ್ ಪ್ರತಿಷ್ಠಾನ”ದ ಮುಖ್ಯಸ್ಥ ಓಲೆ ವಾನ್ ಯುಕ್ಸ್ಕುಲ್ ಹೇಳಿದ್ದಾರೆ.

ಇದನ್ನೂ ಓದಿ: ಆರೋಗ್ಯ ಕ್ಷೇತ್ರದಲ್ಲಿ ಕೇರಳದ ದಣಿವರಿಯದ ಸೇವೆಗೆ ವಿಶ್ವಸಂಸ್ಥೆಯ ಪ್ರಶಸ್ತಿ

58 ವರ್ಷದ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್ ಬಿಯಾಲಿಯಾಟ್ಸ್ಕಿ, ಈ ಹಿಂದೆ ನೋಬೆಲ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದರು. ಅವರು ದೇಶದ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೊ ಅವರ ನೀತಿಯನ್ನು ಪ್ರಶ್ನಿಸಿದ್ದಕ್ಕಾಗಿ ಬಂಧಿಸಲ್ಪಟ್ಟು ಜೈಲಿನಲ್ಲಿದ್ದ ಸಾವಿರಾರು ಬೆಲರೂಸಿಯನ್ನರಿಗೆ ಕಾನೂನು ನೆರವು ನೀಡಿದ್ದರು.

ಪ್ರಸ್ತುತ ಜೈಲಿನಲ್ಲಿರುವ ಇರಾನಿನ ಮಾನವ ಹಕ್ಕುಗಳ ವಕೀಲೆ ನಸ್ರಿನ್ ಸೊತೌಡೆಹ್‌ಗೆ, ವೈಯಕ್ತಿಕ ಅಪಾಯವನ್ನು ಮೀರಿ, ರಾಜಕೀಯ ಸ್ವಾತಂತ್ರ್ಯ ಮತ್ತು ಮಾನವ ಹಕ್ಕುಗಳನ್ನು ಉತ್ತೇಜಿಸಿದ ಅವರ ನಿರ್ಭೀತ ಕ್ರಿಯಾಶೀಲತೆಗಾಗಿ ಪ್ರಶಸ್ತಿ ಘೋಷಿಸಲಾಗಿದೆ.

2020 ರ ಪ್ರಶಸ್ತಿ ಪಡೆದ ಮೂರನೇ ವ್ಯಕ್ತಿ 60 ವರ್ಷಗಳ ಬ್ರಿಯಾನ್ ಸ್ಟೀವನ್ಸನ್ ಆಗಿದ್ದು, ಇವರು ನಾಗರಿಕ ಹಕ್ಕುಗಳ ವಕೀಲರಾಗಿದ್ದಾರೆ. ಅಮೇರಿಕಾದಲ್ಲಿ ಅಪರಾಧ ನ್ಯಾಯ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಆಘಾತದ ಸಂದರ್ಭದಲ್ಲಿ ಜನಾಂಗೀಯ ಸಾಮರಸ್ಯವನ್ನು ಮುನ್ನಡೆಸಲು ಕೈಗೊಂಡ ಸ್ಪೂರ್ತಿದಾಯಕ ಪ್ರಯತ್ನಕ್ಕಾಗಿ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಇದನ್ನೂ ಓದಿ: ನೊಬೆಲ್​ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರು ಶಿಫಾರಸ್ಸು: ನಾರ್ವೇಯ ಸಂಸತ್ ಸದಸ್ಯ

ನಾಲ್ಕನೇ ವ್ಯಕ್ತಿ ನಿಕರಾಗುವಾದ ಪರಿಸರ ಹಕ್ಕು ಹೋರಾಟಗಾರ ಲೊಟ್ಟಿ ಕನ್ನಿಂಗ್ಹ್ಯಾಮ್ ವ್ರೆನ್ ಆಗಿದ್ದು, ಅವರಿಗೆ ಸ್ಥಳೀಯ ಜಮೀನುಗಳು ಮತ್ತು ಸಮುದಾಯಗಳನ್ನು, ಶೋಷಣೆ ಮತ್ತು ಲೂಟಿಯಿಂದ ರಕ್ಷಿಸಲು ನಿರಂತರವಾಗಿ ಹೋರಾಟ ಮಾಡಿದ್ದಕ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಡಿಸೆಂಬರ್ 3 ರಂದು ಇವರಿಗೆ ಪ್ರಶಸ್ತಿ ಪ್ರದಾನವಾಗಲಿದ್ದು, ಪ್ರಶಸ್ತಿ ವಿಜೇತರು ತಲಾ 1 ಮಿಲಿಯನ್ ಕ್ರೋನರ್ (110,100 ಅಮೇರಿಕಾ ಡಾಲರ್‌) ಬಹುಮಾನವನ್ನು ಪಡೆಯುತ್ತಾರೆ. ಕಳೆದ ಬಾರಿ ಈ ಪ್ರಶಸ್ತಿ ಸ್ವೀಡಿಷ್ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ಗೆ ಲಭಿಸಿತ್ತು.

“ರೈಟ್‌ ಲೈವ್ಲೀಹುಡ್ ಪ್ರಶಸ್ತಿ”ಯನ್ನು 1980 ರಲ್ಲಿ ಪ್ರಾರಂಭಿಸಲಾಯಿತು. ಇದನ್ನು ಸ್ವೀಡಿಷ್-ಜರ್ಮನ್ ಮೂಲದ ಜಾಕೋಬ್ ವಾನ್ ಯುಕ್ಸ್ಕುಲ್ ಪ್ರಾರಂಬಿಸಿದ್ದು, ನೊಬೆಲ್ ಪ್ರಶಸ್ತಿಯಿಂದ ನಿರ್ಲಕ್ಷಿಸಲ್ಪಟ್ಟವರನ್ನು ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಮತ್ತಷ್ಟು ಓದಿಗೆ:  Activists from Belarus, Iran, Nicaragua and US to Receive ‘Alternative Nobel’ Prize

ಇದನ್ನೂ ಓದಿ: ಪದ್ಮಭೂಷಣ ಪ್ರಶಸ್ತಿ ಪಡೆದ ಸಾಹಿತಿಯನ್ನು ’ಬೌದ್ಧಿಕ ಜಿಹಾದಿ’ ಎಂದ ಬಿಜೆಪಿ ಶಾಸಕ: ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...