Homeಮುಖಪುಟರಷ್ಯಾ ಮಾನವೀಯ ಕಾರಿಡಾರ್‌ ಘೋಷಿಸಿದರೂ ಕೈಗೆ ಸಿಕ್ಕ ವಾಹನಗಳಲ್ಲಿ ಸ್ಥಳಾಂತರಗೊಳ್ಳಿ ಎಂದ ಮೋದಿ ನೇತೃತ್ವದ BJP...

ರಷ್ಯಾ ಮಾನವೀಯ ಕಾರಿಡಾರ್‌ ಘೋಷಿಸಿದರೂ ಕೈಗೆ ಸಿಕ್ಕ ವಾಹನಗಳಲ್ಲಿ ಸ್ಥಳಾಂತರಗೊಳ್ಳಿ ಎಂದ ಮೋದಿ ನೇತೃತ್ವದ BJP ಸರ್ಕಾರ!

- Advertisement -
- Advertisement -

ಭುಗಿಲೆದ್ದಿರುವ ಯುದ್ದದ ನಡುವೆ ರಷ್ಯಾವು ಉಕ್ರೇನ್‌‌ನ ವಿವಿಧ ಭಾಗಗಳಲ್ಲಿ ಮಾನವೀಯ ಕಾರಿಡಾರ್‌ ಅನ್ನು ಮಂಗಳವಾರ ಘೋಷಿಸಿದೆ. ಆದರೂ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರ ಉಕ್ರೇನ್‌‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳಿಗೆ, ಲಭ್ಯವಿರುವ ಯಾವುದೆ ಸಾರಿಗೆ ವ್ಯವಸ್ಥೆಗಳನನ್ನು ಬಳಸಿಕೊಂಡು ಸ್ಥಳಾಂತರಗೊಳ್ಳುವಂತೆ ತಿಳಿಸಿದೆ. ಯುದ್ದ ವಿರಾಮ ಘೋಷಿಸಿದರೂ ಭಾರತದ ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಲು ವ್ಯವಸ್ಥೆ ಮಾಡದ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.

ಯುದ್ದ ಪೀಡಿತ ದೇಶದಲ್ಲಿರುವ ಭಾರತೀಯರಿಗೆ ಇಂದು ಸಂಜೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿರುವ ಉಕ್ರೇನ್‌ನ ಭಾರತೀಯ ರಾಯಭಾರ ಕಚೇರಿ, “ಜನರನ್ನು ಸ್ಥಳಾಂತರಿಸಲು ಮಾನವೀಯ ಕಾರಿಡಾರ್ ಅನ್ನು ಉಕ್ರೇನ್‌ನ ವಿವಿಧ ಭಾಗಗಳಲ್ಲಿ 8 ಮಾರ್ಚ್ 2022 ರಂದು ಘೋಷಿಸಲಾಗಿದೆ. ಭದ್ರತಾ ಪರಿಸ್ಥಿತಿಯನ್ನು ಪರಿಗಣಿಸಿ, ಮುಂದೆ ಮಾನವೀಯ ಕಾರಿಡಾರ್ ಆಗುತ್ತದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ” ಎಂದು ಹೇಳಿದೆ.

“ಎಲ್ಲಾ ಭಾರತೀಯ ಪ್ರಜೆಗಳು ಈ ಅವಕಾಶವನ್ನು ಬಳಸಿಕೊಳ್ಳಬೇಕು. ಸುರಕ್ಷತೆಯನ್ನು ಪರಿಗಣನೆಗೆ ತೆಗೆದುಕೊಂಡು ರೈಲುಗಳು ಹಾಗೂ ವಾಹನಗಳು ಅಥವಾ ಲಭ್ಯವಿರುವ ಯಾವುದೇ ಸಾರಿಗೆ ವಿಧಾನಗಳನ್ನು ಬಳಸಿ ಸ್ಥಳಾಂತರವಾಗಬೇಕು” ಎಂದು ರಾಯಭಾರ ಕಚೇರಿ ಹೇಳಿದೆ.

 

ಯುದ್ಧ ಪ್ರಾರಂಭವಾದ ನಂತರ ಅಲ್ಲಿರುವು ಭಾರತೀಯರನ್ನು ಸ್ಥಳಾಂತರಿಸಲು ಕೇಂದ್ರ ಸರ್ಕಾರ ನಾಲ್ಕು ಸಚಿವರನ್ನು ನೇಮಿಸಿದ್ದು, ಅವರು ಉಕ್ರೇನ್‌‌ನ ಗಡಿ ದೇಶಗಳಲ್ಲಿ ಇದ್ದು ಅಲ್ಲಿಂದ ಭಾರತೀಯರನ್ನು ವಾಪಾಸು ಕಳಿಸುತ್ತಿದ್ದಾರೆ. ಆದರೆ, ಅಲ್ಲಿಂದ ವಾಪಾಸು ಬಂದ ಹಲವಾರು ವಿದ್ಯಾರ್ಥಿಗಳು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಯುದ್ದ ಪೀಡಿತ ಪ್ರದೇಶದಿಂದ ಗಡಿಗಳವರೆಗೆ ತಲುಪಲು ಸಹಾಯ ಮಾಡಿ ಎಂದು ಹೇಳಿದ್ದಾರೆ.

ಯುದ್ಧ ಪ್ರಾರಂಭವಾದ ನಂತರ 20 ಲಕ್ಷಕ್ಕೂ ಹೆಚ್ಚು ಜನರು ಉಕ್ರೇನ್ ತೊರೆದಿದ್ದಾರೆ ಎಂದು ವಿಶ್ವಸಂಸ್ಥೆಯ ಹೈ ಕಮಿಷನರ್ ಫಾರ್ ರೆಫ್ಯೂಜೀಸ್ (UNHCR) ಫಿಲಿಪ್ಪೊ ಗ್ರಾಂಡಿ ಟ್ವೀಟ್ ಹೇಳಿದ್ದಾರೆ. “ಇಂದು ಉಕ್ರೇನ್‌ನಿಂದ ವಲಸೆ ಹೊರಟ ನಿರಾಶ್ರಿತರ ಸಂಖ್ಯೆ ಇಪ್ಪತ್ತು ಲಕ್ಷ ತಲುಪಿದೆ” ಎಂದು ಅವರು ಹೇಳಿದ್ದಾರೆ. ಫೆಬ್ರವರಿ 24 ರಿಂದ 20,11,312 ಜನರು ಯುದ್ಧ ಪೀಡಿತ ದೇಶದಿಂದ ಪಲಾಯನ ಮಾಡಿದ್ದಾರೆ ಎಂದು ನಿರಾಶ್ರಿತರ ಸಂಸ್ಥೆ UNHCR ಹೇಳಿದೆ.

ಇದನ್ನೂ ಓದಿ: ಭಾರತೀಯ ವಿದ್ಯಾರ್ಥಿಗಳ ಆತಂಕದ ನಡುವೆ ಸ್ಥಳಾಂತರಕ್ಕಾಗಿ ‘ಮಾನವೀಯ ಕಾರಿಡಾರ್‌’ಗಳನ್ನು ತೆರೆದ ರಷ್ಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...