Homeಮುಖಪುಟರಷ್ಯಾ ಮಾನವೀಯ ಕಾರಿಡಾರ್‌ ಘೋಷಿಸಿದರೂ ಕೈಗೆ ಸಿಕ್ಕ ವಾಹನಗಳಲ್ಲಿ ಸ್ಥಳಾಂತರಗೊಳ್ಳಿ ಎಂದ ಮೋದಿ ನೇತೃತ್ವದ BJP...

ರಷ್ಯಾ ಮಾನವೀಯ ಕಾರಿಡಾರ್‌ ಘೋಷಿಸಿದರೂ ಕೈಗೆ ಸಿಕ್ಕ ವಾಹನಗಳಲ್ಲಿ ಸ್ಥಳಾಂತರಗೊಳ್ಳಿ ಎಂದ ಮೋದಿ ನೇತೃತ್ವದ BJP ಸರ್ಕಾರ!

- Advertisement -
- Advertisement -

ಭುಗಿಲೆದ್ದಿರುವ ಯುದ್ದದ ನಡುವೆ ರಷ್ಯಾವು ಉಕ್ರೇನ್‌‌ನ ವಿವಿಧ ಭಾಗಗಳಲ್ಲಿ ಮಾನವೀಯ ಕಾರಿಡಾರ್‌ ಅನ್ನು ಮಂಗಳವಾರ ಘೋಷಿಸಿದೆ. ಆದರೂ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರ ಉಕ್ರೇನ್‌‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳಿಗೆ, ಲಭ್ಯವಿರುವ ಯಾವುದೆ ಸಾರಿಗೆ ವ್ಯವಸ್ಥೆಗಳನನ್ನು ಬಳಸಿಕೊಂಡು ಸ್ಥಳಾಂತರಗೊಳ್ಳುವಂತೆ ತಿಳಿಸಿದೆ. ಯುದ್ದ ವಿರಾಮ ಘೋಷಿಸಿದರೂ ಭಾರತದ ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಲು ವ್ಯವಸ್ಥೆ ಮಾಡದ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.

ಯುದ್ದ ಪೀಡಿತ ದೇಶದಲ್ಲಿರುವ ಭಾರತೀಯರಿಗೆ ಇಂದು ಸಂಜೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿರುವ ಉಕ್ರೇನ್‌ನ ಭಾರತೀಯ ರಾಯಭಾರ ಕಚೇರಿ, “ಜನರನ್ನು ಸ್ಥಳಾಂತರಿಸಲು ಮಾನವೀಯ ಕಾರಿಡಾರ್ ಅನ್ನು ಉಕ್ರೇನ್‌ನ ವಿವಿಧ ಭಾಗಗಳಲ್ಲಿ 8 ಮಾರ್ಚ್ 2022 ರಂದು ಘೋಷಿಸಲಾಗಿದೆ. ಭದ್ರತಾ ಪರಿಸ್ಥಿತಿಯನ್ನು ಪರಿಗಣಿಸಿ, ಮುಂದೆ ಮಾನವೀಯ ಕಾರಿಡಾರ್ ಆಗುತ್ತದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ” ಎಂದು ಹೇಳಿದೆ.

“ಎಲ್ಲಾ ಭಾರತೀಯ ಪ್ರಜೆಗಳು ಈ ಅವಕಾಶವನ್ನು ಬಳಸಿಕೊಳ್ಳಬೇಕು. ಸುರಕ್ಷತೆಯನ್ನು ಪರಿಗಣನೆಗೆ ತೆಗೆದುಕೊಂಡು ರೈಲುಗಳು ಹಾಗೂ ವಾಹನಗಳು ಅಥವಾ ಲಭ್ಯವಿರುವ ಯಾವುದೇ ಸಾರಿಗೆ ವಿಧಾನಗಳನ್ನು ಬಳಸಿ ಸ್ಥಳಾಂತರವಾಗಬೇಕು” ಎಂದು ರಾಯಭಾರ ಕಚೇರಿ ಹೇಳಿದೆ.

 

ಯುದ್ಧ ಪ್ರಾರಂಭವಾದ ನಂತರ ಅಲ್ಲಿರುವು ಭಾರತೀಯರನ್ನು ಸ್ಥಳಾಂತರಿಸಲು ಕೇಂದ್ರ ಸರ್ಕಾರ ನಾಲ್ಕು ಸಚಿವರನ್ನು ನೇಮಿಸಿದ್ದು, ಅವರು ಉಕ್ರೇನ್‌‌ನ ಗಡಿ ದೇಶಗಳಲ್ಲಿ ಇದ್ದು ಅಲ್ಲಿಂದ ಭಾರತೀಯರನ್ನು ವಾಪಾಸು ಕಳಿಸುತ್ತಿದ್ದಾರೆ. ಆದರೆ, ಅಲ್ಲಿಂದ ವಾಪಾಸು ಬಂದ ಹಲವಾರು ವಿದ್ಯಾರ್ಥಿಗಳು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಯುದ್ದ ಪೀಡಿತ ಪ್ರದೇಶದಿಂದ ಗಡಿಗಳವರೆಗೆ ತಲುಪಲು ಸಹಾಯ ಮಾಡಿ ಎಂದು ಹೇಳಿದ್ದಾರೆ.

ಯುದ್ಧ ಪ್ರಾರಂಭವಾದ ನಂತರ 20 ಲಕ್ಷಕ್ಕೂ ಹೆಚ್ಚು ಜನರು ಉಕ್ರೇನ್ ತೊರೆದಿದ್ದಾರೆ ಎಂದು ವಿಶ್ವಸಂಸ್ಥೆಯ ಹೈ ಕಮಿಷನರ್ ಫಾರ್ ರೆಫ್ಯೂಜೀಸ್ (UNHCR) ಫಿಲಿಪ್ಪೊ ಗ್ರಾಂಡಿ ಟ್ವೀಟ್ ಹೇಳಿದ್ದಾರೆ. “ಇಂದು ಉಕ್ರೇನ್‌ನಿಂದ ವಲಸೆ ಹೊರಟ ನಿರಾಶ್ರಿತರ ಸಂಖ್ಯೆ ಇಪ್ಪತ್ತು ಲಕ್ಷ ತಲುಪಿದೆ” ಎಂದು ಅವರು ಹೇಳಿದ್ದಾರೆ. ಫೆಬ್ರವರಿ 24 ರಿಂದ 20,11,312 ಜನರು ಯುದ್ಧ ಪೀಡಿತ ದೇಶದಿಂದ ಪಲಾಯನ ಮಾಡಿದ್ದಾರೆ ಎಂದು ನಿರಾಶ್ರಿತರ ಸಂಸ್ಥೆ UNHCR ಹೇಳಿದೆ.

ಇದನ್ನೂ ಓದಿ: ಭಾರತೀಯ ವಿದ್ಯಾರ್ಥಿಗಳ ಆತಂಕದ ನಡುವೆ ಸ್ಥಳಾಂತರಕ್ಕಾಗಿ ‘ಮಾನವೀಯ ಕಾರಿಡಾರ್‌’ಗಳನ್ನು ತೆರೆದ ರಷ್ಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....