Homeಕರೋನಾ ತಲ್ಲಣಕೊರೊನಾ ಪ್ರಕರಣ ಹೆಚ್ಚಾದರೂ, ಲಸಿಕೆ ಕಾರಣಕ್ಕೆ ಸಾವು ನೋವು ಕಡಿಮೆಯಾಗಿದೆ: ICMR ಮುಖ್ಯಸ್ಥ

ಕೊರೊನಾ ಪ್ರಕರಣ ಹೆಚ್ಚಾದರೂ, ಲಸಿಕೆ ಕಾರಣಕ್ಕೆ ಸಾವು ನೋವು ಕಡಿಮೆಯಾಗಿದೆ: ICMR ಮುಖ್ಯಸ್ಥ

- Advertisement -
- Advertisement -

ದೇಶದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದರೂ ಹೆಚ್ಚು ಜನರು ಕೋವಿಡ್ ಲಸಿಕೆ ಪಡೆದ ಪರಿಣಾಮ ತೀವ್ರ ಅನಾರೋಗ್ಯ ಮತ್ತು ಸಾವುಗಳು ಉಂಟಾಗುತ್ತಿಲ್ಲ ಎಂದು ಗುರುವಾರ ಪ್ರತಿಪಾದಿಸಿದ್ದಾರೆ.

ಪ್ರಸ್ತುತ ಕೋವಿಡ್ ಉಲ್ಬಣದ ಕುರಿತು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶಾದ್ಯಂತ ಹೆಚ್ಚಿನ ವ್ಯಾಕ್ಸಿನೇಷನ್ ನಡೆದಿರುವುದರಿಂದ ಮೂರನೇ ಅಲೆಯಲ್ಲಿ ಕೊರೊನಾದಿಂದ ಉಂಟಾಗುವ ತೀವ್ರವಾದ ಕಾಯಿಲೆಗಳು ಮತ್ತು ಸಾವುಗಳನ್ನು ತಡೆಯಲು ನಮಗೆ ಸಾಧ್ಯವಾಯಿತು ಎಂದು ಹೇಳಿದ್ದಾರೆ.

ಲಸಿಕೆ ಪ್ರಯೋಜನಕಾರಿಯಾಗಿದೆ ಮತ್ತು ಎರಡನೇ ಕೊರೊನಾ ಅಲೆಯ ಉಲ್ಬಣಕ್ಕೆ ಹೋಲಿಸಿದರೆ ಸಾವುಗಳು ಗಣನೀಯವಾಗಿ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ದಡಾರ-ರುಬೆಲ್ಲಾ ಲಸಿಕೆ ಅತ್ಯಂತ ಸುರಕ್ಷಿತ; ಬೆಳಗಾವಿ ಮಕ್ಕಳ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಬೇಕು: ಡಾ. ಹಿಮಾಂಶು

“ಭಾರತದಲ್ಲಿ ಲಸಿಕೆಗಳು ಪ್ರಯೋಜನಕಾರಿಯಾಗಿವೆ. ವ್ಯಾಕ್ಸಿನೇಷನ್‌ಗಳಿಂದ ಸಾವುಗಳು ಗಣನೀಯವಾಗಿ ಕಡಿಮೆಯಾಗಿದೆ. ಕೊರೊನಾದ ಈ ಮೂರನೇ ಅಲೆಯ ಉಲ್ಬಣದಲ್ಲಿ, ವ್ಯಾಕ್ಸಿನ್‌ ಕಾರಣದಿಂದಾಗಿ ತೀವ್ರವಾದ ಅನಾರೋಗ್ಯ ಮತ್ತು ಸಾವು ಸಂಭವಿಸುತ್ತಿಲ್ಲ” ಎಂದು ಅವರು ಹೇಳಿದ್ದಾರೆ.

ಆದಾಗ್ಯೂ, ಇತರ ಕಾಯಿಲೆ ಇರುವವರು ತಮ್ಮ ಆರೋಗ್ಯದ ಮೇಲ್ವಿಚಾರಣೆ ಮಾಡಬೇಕು ಮತ್ತು ಯಾವುದೇ ತೊಡಕುಗಳನ್ನು ತಪ್ಪಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

“ಲಸಿಕೆಯು ಸಾವನ್ನು ತಡೆಯುತ್ತದೆ ಮತ್ತು ಆದ್ದರಿಂದ ಇದು ಅತ್ಯಗತ್ಯವಾಗಿದೆ. ಕೋವಿಡ್ ಲಸಿಕೆಗಳನ್ನು ಪಡೆಯುವುದರಿಂದ ಈ ಅಲೆಯಲ್ಲಿ ಸಾವುಗಳು ತುಂಬಾ ಕಡಿಮೆಯಾಗಿದೆ. ದೇಶದ 94% ವಯಸ್ಕರಿಗೆ ಮೊದಲ ಡೋಸ್‌‌ ನೀಡಲಾಗಿದೆ ಮತ್ತು 72% ದಷ್ಟು ವಯಸ್ಕರಿಗೆ ಪೂರ್ಣ ಪ್ರಮಾಣದ ಡೋಸ್ ಆಗಿದೆ” ಎಂದು ಡಾ ಭಾರ್ಗವ ಹೇಳಿದ್ದಾರೆ.

ಇದನ್ನೂ ಓದಿ:ಬಿಜೆಪಿ ಈ ಹಿಂದೆ ರೈತರ ಬೆಂಬಲ ದುರುಪಯೋಗ ಮಾಡಿಕೊಂಡಿದೆ, ಈ ಬಾರಿ ರೈತರು ಬುದ್ದಿ ಕಲಿಸುತ್ತಾರೆ: ನರೇಶ್ ಟಿಕಾಯತ್

ಪ್ರಸ್ತುತ ಉಲ್ಬಣದಲ್ಲಿ ಮನೆಯಲ್ಲೆ ಕೋವಿಡ್ ಪರೀಕ್ಷೆಗಳ ಪ್ರವೃತ್ತಿ ಹೆಚ್ಚುತ್ತಿದೆ, “ಈ ವರ್ಷದ 20 ದಿನಗಳಲ್ಲಿ, ನಾವು 2 ಲಕ್ಷ ಮನೆ ಪರೀಕ್ಷೆಗಳನ್ನು ನೋಡಿದ್ದೇವೆ” ಎಂದು ಅವರು ಕೋವಿಡ್ ಪರೀಕ್ಷೆಗಳ ಕುರಿತು ಹೇಳಿದ್ದಾರೆ.

NITI ಆಯೋಗ(ಆರೋಗ್ಯ) ಸದಸ್ಯ, ಡಾ ವಿ.ಕೆ. ಪೌಲ್, ದೇಶದಲ್ಲಿ ಒಟ್ಟಾರೆ 16% ದಷ್ಟು ಪಾಸಿಟಿವಿಟಿ ದರ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಗೋವಾದಂತಹ ಕೆಲವು ರಾಜ್ಯಗಳಲ್ಲಿ 50% ಕ್ಕಿಂತ ಹೆಚ್ಚು ಪಾಸಿಟಿವಿಟಿ ವರದಿಯಾಗಿವೆ. ಕೇರಳದಲ್ಲಿ 42% ಇದ್ದರೆ, ರಾಜಸ್ಥಾನದಲ್ಲಿ 31%ದಷ್ಟು ಪಾಸಿಟಿವಿಟಿ ಪ್ರಮಾಣವಿದೆ.

ಪಾಸಿಟಿವಿಟಿ ದರ ಎಂದರೆ, ಕೊರೊನಾ ಪರೀಕ್ಷೆ ಮಾಡಿರುವ ಪ್ರತಿ ನೂರು ಜನರಲ್ಲಿ ಎಷ್ಟು ಜನರಿಗೆ ಕೊರೊನಾ ಪಾಸಿಟಿವ್ ಆಗಿದೆ ಎಂಬ ಲೆಕ್ಕಚಾರವಾಗಿದೆ. ಉದಾಹರಣೆಗೆ ಪರೀಕ್ಷೆ ಮಾಡಿದ ನೂರು ಜನರಲ್ಲಿ ಐವತ್ತು ಜನರಿಗೆ ಕೊರೊನಾ ಪಾಸಿಟಿವ್‌ ಆದರೆ, 50% ಪಾಸಿವಿಟಿ ಇದೆ ಎಂದರ್ಥ.

ಇದನ್ನೂ ಓದಿ:ಹಿಜಾಬ್‌ ಧರಿಸುವುದು ಅಶಿಸ್ತು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...