Homeಮುಖಪುಟಆಲ್ಟ್‌ನ್ಯೂಸ್‌ ಸಂಸ್ಥಾಪಕರಾದ ಮೊಹಮ್ಮದ್‌ ಜುಬೇರ್‌‌ ಮತ್ತು ಪ್ರತೀಕ್‌ ಸಿನ್ಹಾ ನೋಬೆಲ್‌ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ

ಆಲ್ಟ್‌ನ್ಯೂಸ್‌ ಸಂಸ್ಥಾಪಕರಾದ ಮೊಹಮ್ಮದ್‌ ಜುಬೇರ್‌‌ ಮತ್ತು ಪ್ರತೀಕ್‌ ಸಿನ್ಹಾ ನೋಬೆಲ್‌ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ

- Advertisement -
- Advertisement -

ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕರು ಮತ್ತು ಅಂತಾರಾಷ್ಟ್ರೀಯ ಖ್ಯಾತಿಯ ಪತ್ರಕರ್ತರಾದ ಮೊಹಮ್ಮದ್‌ ಝುಬೇರ್‌ ಹಾಗೂ ಪ್ರತೀಕ್‌ ಸಿನ್ಹಾ ಅವರು 2022ರ ನೊಬೆಲ್‌ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ನೊಬೆಲ್‌ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವವರನ್ನು ಸಮಿತಿಯು ಬಹಿರಂಗಪಡಿಸಿಲ್ಲ. ಮೂಲಗಳ ಪ್ರಕಾರ, ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್, ಪೋಪ್ ಫ್ರಾನ್ಸಿಸ್, ಟುವಾಲು ವಿದೇಶಾಂಗ ಸಚಿವ ಸೈಮನ್ ಕೋಫೆ ಸೇರಿ ಹಲವರು ನಾಮನಿರ್ದೇಶನಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2022ರ ನೊಬೆಲ್ ಶಾಂತಿ ಪ್ರಶಸ್ತಿ ಸ್ಪರ್ಧೆ ಪಟ್ಟಿಯಲ್ಲಿ ಸುಮಾರು 343 ಅಭ್ಯರ್ಥಿಗಳಿದ್ದಾರೆ. ಈ ಪೈಕಿ 251 ವ್ಯಕ್ತಿಗಳು ಮತ್ತು 92 ಸಂಸ್ಥೆಗಳನ್ನು ನಾಮನಿರ್ದೇಶನ ಮಾಡಲಾಗಿದೆ. ಈ ಪಟ್ಟಿಯಲ್ಲಿ ಝುಬೇರ್‌ ಮತ್ತು ಪ್ರತೀಕ್ ಸಿನ್ಹಾ ಹೆಸರು ಸೇರಿರುವುದು ವಿಶೇಷ.

ಇದನ್ನೂ ಓದಿ: ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯರ ಕೆಲಸವನ್ನು ಮಾಧ್ಯಮಗಳೇ ಮಾಡುತ್ತಿವೆ: ಜುಬೇರ್‌

ನೊಬೆಲ್‌ ಪ್ರಶಸ್ತಿಯ 50ನೇ ವಾರ್ಷಿಕೋತ್ಸವ ಇದಾಗಿದ್ದು, ಅಂತಿಮ ಹಂತದವರೆಗೆ ನಾಮನಿರ್ದೇಶನಗೊಂಡಿರುವವರ ಹೆಸರನ್ನು ಬಹಿರಂಗಪಡಿಸಬಾರದು ಎಂಬುದು ನಿಯಮ. ಆದರೆ, ಮೂಲಗಳ ಪ್ರಕಾರ ಸಿನ್ಹಾ ಮತ್ತು ಝುಬೇರ್‌ ಮಾತ್ರವಲ್ಲದೆ, ಉಕ್ರೇನ್‌ ಅಧ್ಯಕ್ಷ ವೊಲೊಡೊಮಿರ್‌ ಝೆಲೆನ್‌ಸ್ಕಿ, ರಷ್ಯಾದ ವಿಪಕ್ಷ ನಾಯಕ ಅಲೆಕ್ಸಿ ನವಲ್ನಿ ಕೂಡ ಸ್ಪರ್ಧಿಗಳಾಗಿದ್ದಾರೆ.

ಅಕ್ಟೋಬರ್‌ 7ರಂದು ಓಸ್ಲೋದಲ್ಲಿ ನಡೆಯುವ ಸಮಾರಂಭದಲ್ಲಿ ನೊಬೆಲ್‌ ಶಾಂತಿ ಪ್ರಶಸ್ತಿಯನ್ನು ವಿತರಿಸಲಾಗುತ್ತದೆ.

ಮುಖ್ಯವಾಗಿ ಬಿಜೆಪಿ ಐಟಿ ಸೆಲ್‌ಗಳಿಂದ ಹೊರ ಬರು‌ತ್ತಿದ್ದ ಸುಳ್ಳು ಸುದ್ದಿಗಳನ್ನು ಬಯಲಿಗೆ ಎಳೆದ ಕಾರಣಕ್ಕೆ ಝುಬೇರ್‌‌ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದ್ದರು. ಜೂನ್‌ ತಿಂಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ದೆಹಲಿ ಪೊಲೀಸರು ಝುಬೇರ್‌ ಅವರನ್ನು ಬಂಧಿಸಿದ್ದರು. ಬಳಿಕ ಝುಬೇರ್‌ ವಿರುದ್ಧ ಉತ್ತರ ಪ್ರದೇಶದಲ್ಲಿ ಆರು ಪ್ರಕರಣಗಳು ದಾಖಲಾಗಿದ್ದವು.

ಇದನ್ನೂ ಓದಿ: ‘ಬಂಧನವನ್ನು ದಂಡಿಸುವ ಸಾಧನವಾಗಿ ಬಳಸುವಂತಿಲ್ಲ’: ಜುಬೇರ್‌‌ ಪ್ರಕರಣದ ವಿವರವಾದ ತೀರ್ಪು ಬಿಡುಗಡೆ

ಪ್ರಕರಣಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಝುಬೇರ್‌ ಅವರಿಗೆ ಜಾಮೀನು ನೀಡಿತ್ತು. ಈ ಸಂದರ್ಭದಲ್ಲಿ ಎಲ್ಲ ಪ್ರಕರಣಗಳನ್ನು ದೆಹಲಿಗೆ ವರ್ಗಾಯಿಸುವಂತೆ ಸೂಚಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...