Homeಕರ್ನಾಟಕ’ದಿಶಾ ಕೆಲಸದ ಬಗ್ಗೆ ಹೆಮ್ಮೆಪಡುತ್ತೇವೆ’: ಬೆನ್ನಿಗೆ ನಿಂತ ’ಮೌಂಟ್ ಕಾರ್ಮೆಲ್ ಹಳೆಯ ವಿದ್ಯಾರ್ಥಿ ಸಂಘ

’ದಿಶಾ ಕೆಲಸದ ಬಗ್ಗೆ ಹೆಮ್ಮೆಪಡುತ್ತೇವೆ’: ಬೆನ್ನಿಗೆ ನಿಂತ ’ಮೌಂಟ್ ಕಾರ್ಮೆಲ್ ಹಳೆಯ ವಿದ್ಯಾರ್ಥಿ ಸಂಘ

ದಿಶಾ ಕೈಗೊಂಡ ಕಾರ್ಯದ ಬಗ್ಗೆ ನಾವು ಹೆಮ್ಮೆಪಡುತ್ತೇವೆ, ಅವರಿಗೆ ಮತ್ತು ಅವರ ಕುಟುಂಬಕ್ಕೆ ಬೇಷರತ್ತಾದ ಬೆಂಬಲ ನೀಡುತ್ತೇವೆ ಎಂದು ಹಳೆಯ ವಿದ್ಯಾರ್ಥಿ ಸಂಘ ಹೇಳಿದೆ

- Advertisement -
- Advertisement -

ರೈತರನ್ನು ಬೆಂಬಲಿಸಿ ಗ್ರೇಟಾ ಥನ್‌ಬರ್ಗ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ಟೂಲ್‌ಕಿಟ್‌ ಅನ್ನು ತಯಾರಿಸಿದ್ದಾರೆ ಎಂಬ ಆರೋಪದಲ್ಲಿ ಬೆಂಗಳೂರಿನ ಹವಾಮಾನ ಕಾರ್ಯಕರ್ತೆ ದಿಶಾ ರವಿ ದೆಹಲಿ ಪೊಲೀಸರು ಭಾನುವಾರ ಬಂಧಿಸಿದ್ದರು. ದೆಹಲಿ ಪೊಲೀಸರ ಈ ಕ್ರಮವನ್ನು ’ಮೌಂಟ್ ಕಾರ್ಮೆಲ್ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘ’ ಖಂಡಿಸಿದ್ದು, ಅವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದೆ.

ಹಳೆಯ ವಿದ್ಯಾರ್ಥಿ ಸಂಘವು ತನ್ನ ಪ್ರಕಟಣೆಯಲ್ಲಿ, “ರೈತ ಹೋರಾಟವನ್ನು ಬೆಂಬಲಿಸುವ ಯುವ ಪ್ರಜೆಯನ್ನು ನಿರ್ದಾಕ್ಷಿಣ್ಯವಾಗಿ ಗುರಿಪಡಿಸುವುದು ಭಯಾನಕ ಮತ್ತು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ದೆಹಲಿ ಪೊಲೀಸರು ಅವರನ್ನು ಬಿಡುಗಡೆ ಮಾಡಬೇಕು. ರಾಜ್ಯದ ಮಹಿಳೆಯ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು ಬೆಂಗಳೂರು ಪೊಲೀಸರು ಮತ್ತು ಕರ್ನಾಟಕ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ದಿಶಾ ಬಂಧನಕ್ಕೂ ಮುನ್ನ ಬೆಂಗಳೂರು ಪೊಲೀಸರಿಗೆ ಮಾಹಿತಿಯೇ ಇಲ್ಲ: ಇದೆಂಥ ಒಕ್ಕೂಟ ವ್ಯವಸ್ಥೆ?

“ದಿಶಾ ರವಿ ಅತ್ಯುತ್ತಮವಾದ ಕಾರ್ಯವನ್ನು ಮಾಡುತ್ತಿದ್ದು, ಹವಾಮಾನ ಬದಲಾವಣೆಯ ಕ್ಷೇತ್ರದಲ್ಲಿ ತನ್ನ ಕ್ರಿಯಾಶೀಲತೆಯ ಮೂಲಕ ಭಾರತದ ಪ್ರಜೆಯಾಗಿ ನಿಜಕ್ಕೂ ಪ್ರಪಂಚದ ಕರ್ತವ್ಯಗಳನ್ನು ಪೂರೈಸುತ್ತಿದ್ದಾರೆ. ಫ್ರೈಡೇಸ್ ಫಾರ್ ಫ್ಯೂಚರ್ ಇನ್ ಇಂಡಿಯಾದ ಸಹ-ಸಂಸ್ಥಾಪಕರಾಗಿ, ರಾಜಕಾರಣಿಗಳು ಮತ್ತು ಸರ್ಕಾರಗಳು ಜನತ್ತಿನ ವಾತಾವರಣ ಹಾಳಾಗದಂತೆ ತಡೆಯುವ ಕ್ರಮಗಳನ್ನು ಕೈಗೊಳ್ಳಲು ವಿಶ್ವದಾದ್ಯಂತದ ಹವಾಮಾನ ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸಿದ್ದಾರೆ” ಎಂದು ಹೇಳಿದ್ದಾರೆ.

“ನಮಗೆಲ್ಲರಿಗೂ ತಿಳಿದಿರುವಂತೆ, ಹವಾಮಾನ ಬದಲಾವಣೆಯ ಭೀಕರ ಪರಿಣಾಮವನ್ನು ನಿರ್ಲಕ್ಷಿಸಲಾಗುವುದಿಲ್ಲ. ಉತ್ತರಾಖಂಡದಲ್ಲಿ ನಡೆಯುತ್ತಿರುವ ಅನಾಹುತ ಕೂಡಾ ಹವಮಾನ ವೈಪರೀತ್ಯದಿಂದಾಗಿಯೇ ಆಗಿದೆ. ಇದನ್ನು ದಿಶಾ ರವಿ ಸಾರ್ವಜನಿಕರ ಗಮನಕ್ಕೆ ತರಲು ಕೆಲಸ ಮಾಡಿದ್ದಾರೆ” ಎಂದು ಸಂಘವು ಹೇಳಿದೆ.

“ದಿಶಾ ರವಿಯ ಇತಿಹಾಸದ ಪ್ರಜ್ಞೆಯು ಗಮನಾರ್ಹವಾಗಿದೆ. ಅವರು ಸ್ವಾತಂತ್ರ್ಯ ಸಂಗ್ರಾಮದಿಂದ ಸ್ಪೂರ್ತಿ ಪಡೆದಿದ್ದಾರೆ. ತನ್ನ ಕೆಲಸದ ಮೂಲಕ ದಿಶಾ ಅನುಕರಣೀಯ ವ್ಯಕ್ತಿಯಾಗಿ ನಿಂತಿದ್ದಾರೆ. ಈ ಸಮಯದಲ್ಲಿ ನಾವು ಅವರ ಮತ್ತು ಅವರ ಕುಟುಂಬಕ್ಕೆ ಬೇಷರತ್ತಾಗಿ ಬೆಂಬಲವನ್ನು ವ್ಯಕ್ತಪಡಿಸುತ್ತೇವೆ. ಅಲ್ಲದೆ ಹವಾಮಾನ ಬದಲಾವಣೆ ಹೋರಾಟದಲ್ಲಿ ಅವರು ಕೈಗೊಂಡ ಕಾರ್ಯದ ಬಗ್ಗೆ ಹೆಮ್ಮೆ ಪಡುತ್ತೇವೆ” ಎಂದು ಮೌಂಟ್ ಕಾರ್ಮೆಲ್ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘ ಹೇಳಿದೆ.

ಸಂಘದ ಹೇಳಿಕೆಗೆ ನೂರಾರು ಹಳೆ ವಿದ್ಯಾರ್ಥಿಗಳು ಸಹಿ ಹಾಕಿದ್ದಾರೆ. ಹೇಳಿಕೆಯ ಪೂರ್ಣ ಪಾಠಕ್ಕೆ ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಬೆಂಗಳೂರಿನಲ್ಲಿ ದಿಶಾ ರವಿ ಸ್ಥಾಪಿಸಿರುವ ‘Fridays For Future’ ಸಂಸ್ಥೆಯ ಬಗ್ಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...