Homeಕರ್ನಾಟಕ’ದಿಶಾ ಕೆಲಸದ ಬಗ್ಗೆ ಹೆಮ್ಮೆಪಡುತ್ತೇವೆ’: ಬೆನ್ನಿಗೆ ನಿಂತ ’ಮೌಂಟ್ ಕಾರ್ಮೆಲ್ ಹಳೆಯ ವಿದ್ಯಾರ್ಥಿ ಸಂಘ

’ದಿಶಾ ಕೆಲಸದ ಬಗ್ಗೆ ಹೆಮ್ಮೆಪಡುತ್ತೇವೆ’: ಬೆನ್ನಿಗೆ ನಿಂತ ’ಮೌಂಟ್ ಕಾರ್ಮೆಲ್ ಹಳೆಯ ವಿದ್ಯಾರ್ಥಿ ಸಂಘ

ದಿಶಾ ಕೈಗೊಂಡ ಕಾರ್ಯದ ಬಗ್ಗೆ ನಾವು ಹೆಮ್ಮೆಪಡುತ್ತೇವೆ, ಅವರಿಗೆ ಮತ್ತು ಅವರ ಕುಟುಂಬಕ್ಕೆ ಬೇಷರತ್ತಾದ ಬೆಂಬಲ ನೀಡುತ್ತೇವೆ ಎಂದು ಹಳೆಯ ವಿದ್ಯಾರ್ಥಿ ಸಂಘ ಹೇಳಿದೆ

- Advertisement -
- Advertisement -

ರೈತರನ್ನು ಬೆಂಬಲಿಸಿ ಗ್ರೇಟಾ ಥನ್‌ಬರ್ಗ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ಟೂಲ್‌ಕಿಟ್‌ ಅನ್ನು ತಯಾರಿಸಿದ್ದಾರೆ ಎಂಬ ಆರೋಪದಲ್ಲಿ ಬೆಂಗಳೂರಿನ ಹವಾಮಾನ ಕಾರ್ಯಕರ್ತೆ ದಿಶಾ ರವಿ ದೆಹಲಿ ಪೊಲೀಸರು ಭಾನುವಾರ ಬಂಧಿಸಿದ್ದರು. ದೆಹಲಿ ಪೊಲೀಸರ ಈ ಕ್ರಮವನ್ನು ’ಮೌಂಟ್ ಕಾರ್ಮೆಲ್ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘ’ ಖಂಡಿಸಿದ್ದು, ಅವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದೆ.

ಹಳೆಯ ವಿದ್ಯಾರ್ಥಿ ಸಂಘವು ತನ್ನ ಪ್ರಕಟಣೆಯಲ್ಲಿ, “ರೈತ ಹೋರಾಟವನ್ನು ಬೆಂಬಲಿಸುವ ಯುವ ಪ್ರಜೆಯನ್ನು ನಿರ್ದಾಕ್ಷಿಣ್ಯವಾಗಿ ಗುರಿಪಡಿಸುವುದು ಭಯಾನಕ ಮತ್ತು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ದೆಹಲಿ ಪೊಲೀಸರು ಅವರನ್ನು ಬಿಡುಗಡೆ ಮಾಡಬೇಕು. ರಾಜ್ಯದ ಮಹಿಳೆಯ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು ಬೆಂಗಳೂರು ಪೊಲೀಸರು ಮತ್ತು ಕರ್ನಾಟಕ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ದಿಶಾ ಬಂಧನಕ್ಕೂ ಮುನ್ನ ಬೆಂಗಳೂರು ಪೊಲೀಸರಿಗೆ ಮಾಹಿತಿಯೇ ಇಲ್ಲ: ಇದೆಂಥ ಒಕ್ಕೂಟ ವ್ಯವಸ್ಥೆ?

“ದಿಶಾ ರವಿ ಅತ್ಯುತ್ತಮವಾದ ಕಾರ್ಯವನ್ನು ಮಾಡುತ್ತಿದ್ದು, ಹವಾಮಾನ ಬದಲಾವಣೆಯ ಕ್ಷೇತ್ರದಲ್ಲಿ ತನ್ನ ಕ್ರಿಯಾಶೀಲತೆಯ ಮೂಲಕ ಭಾರತದ ಪ್ರಜೆಯಾಗಿ ನಿಜಕ್ಕೂ ಪ್ರಪಂಚದ ಕರ್ತವ್ಯಗಳನ್ನು ಪೂರೈಸುತ್ತಿದ್ದಾರೆ. ಫ್ರೈಡೇಸ್ ಫಾರ್ ಫ್ಯೂಚರ್ ಇನ್ ಇಂಡಿಯಾದ ಸಹ-ಸಂಸ್ಥಾಪಕರಾಗಿ, ರಾಜಕಾರಣಿಗಳು ಮತ್ತು ಸರ್ಕಾರಗಳು ಜನತ್ತಿನ ವಾತಾವರಣ ಹಾಳಾಗದಂತೆ ತಡೆಯುವ ಕ್ರಮಗಳನ್ನು ಕೈಗೊಳ್ಳಲು ವಿಶ್ವದಾದ್ಯಂತದ ಹವಾಮಾನ ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸಿದ್ದಾರೆ” ಎಂದು ಹೇಳಿದ್ದಾರೆ.

“ನಮಗೆಲ್ಲರಿಗೂ ತಿಳಿದಿರುವಂತೆ, ಹವಾಮಾನ ಬದಲಾವಣೆಯ ಭೀಕರ ಪರಿಣಾಮವನ್ನು ನಿರ್ಲಕ್ಷಿಸಲಾಗುವುದಿಲ್ಲ. ಉತ್ತರಾಖಂಡದಲ್ಲಿ ನಡೆಯುತ್ತಿರುವ ಅನಾಹುತ ಕೂಡಾ ಹವಮಾನ ವೈಪರೀತ್ಯದಿಂದಾಗಿಯೇ ಆಗಿದೆ. ಇದನ್ನು ದಿಶಾ ರವಿ ಸಾರ್ವಜನಿಕರ ಗಮನಕ್ಕೆ ತರಲು ಕೆಲಸ ಮಾಡಿದ್ದಾರೆ” ಎಂದು ಸಂಘವು ಹೇಳಿದೆ.

“ದಿಶಾ ರವಿಯ ಇತಿಹಾಸದ ಪ್ರಜ್ಞೆಯು ಗಮನಾರ್ಹವಾಗಿದೆ. ಅವರು ಸ್ವಾತಂತ್ರ್ಯ ಸಂಗ್ರಾಮದಿಂದ ಸ್ಪೂರ್ತಿ ಪಡೆದಿದ್ದಾರೆ. ತನ್ನ ಕೆಲಸದ ಮೂಲಕ ದಿಶಾ ಅನುಕರಣೀಯ ವ್ಯಕ್ತಿಯಾಗಿ ನಿಂತಿದ್ದಾರೆ. ಈ ಸಮಯದಲ್ಲಿ ನಾವು ಅವರ ಮತ್ತು ಅವರ ಕುಟುಂಬಕ್ಕೆ ಬೇಷರತ್ತಾಗಿ ಬೆಂಬಲವನ್ನು ವ್ಯಕ್ತಪಡಿಸುತ್ತೇವೆ. ಅಲ್ಲದೆ ಹವಾಮಾನ ಬದಲಾವಣೆ ಹೋರಾಟದಲ್ಲಿ ಅವರು ಕೈಗೊಂಡ ಕಾರ್ಯದ ಬಗ್ಗೆ ಹೆಮ್ಮೆ ಪಡುತ್ತೇವೆ” ಎಂದು ಮೌಂಟ್ ಕಾರ್ಮೆಲ್ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘ ಹೇಳಿದೆ.

ಸಂಘದ ಹೇಳಿಕೆಗೆ ನೂರಾರು ಹಳೆ ವಿದ್ಯಾರ್ಥಿಗಳು ಸಹಿ ಹಾಕಿದ್ದಾರೆ. ಹೇಳಿಕೆಯ ಪೂರ್ಣ ಪಾಠಕ್ಕೆ ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಬೆಂಗಳೂರಿನಲ್ಲಿ ದಿಶಾ ರವಿ ಸ್ಥಾಪಿಸಿರುವ ‘Fridays For Future’ ಸಂಸ್ಥೆಯ ಬಗ್ಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...