Homeಕರ್ನಾಟಕ’ದಿಶಾ ಕೆಲಸದ ಬಗ್ಗೆ ಹೆಮ್ಮೆಪಡುತ್ತೇವೆ’: ಬೆನ್ನಿಗೆ ನಿಂತ ’ಮೌಂಟ್ ಕಾರ್ಮೆಲ್ ಹಳೆಯ ವಿದ್ಯಾರ್ಥಿ ಸಂಘ

’ದಿಶಾ ಕೆಲಸದ ಬಗ್ಗೆ ಹೆಮ್ಮೆಪಡುತ್ತೇವೆ’: ಬೆನ್ನಿಗೆ ನಿಂತ ’ಮೌಂಟ್ ಕಾರ್ಮೆಲ್ ಹಳೆಯ ವಿದ್ಯಾರ್ಥಿ ಸಂಘ

ದಿಶಾ ಕೈಗೊಂಡ ಕಾರ್ಯದ ಬಗ್ಗೆ ನಾವು ಹೆಮ್ಮೆಪಡುತ್ತೇವೆ, ಅವರಿಗೆ ಮತ್ತು ಅವರ ಕುಟುಂಬಕ್ಕೆ ಬೇಷರತ್ತಾದ ಬೆಂಬಲ ನೀಡುತ್ತೇವೆ ಎಂದು ಹಳೆಯ ವಿದ್ಯಾರ್ಥಿ ಸಂಘ ಹೇಳಿದೆ

- Advertisement -
- Advertisement -

ರೈತರನ್ನು ಬೆಂಬಲಿಸಿ ಗ್ರೇಟಾ ಥನ್‌ಬರ್ಗ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ಟೂಲ್‌ಕಿಟ್‌ ಅನ್ನು ತಯಾರಿಸಿದ್ದಾರೆ ಎಂಬ ಆರೋಪದಲ್ಲಿ ಬೆಂಗಳೂರಿನ ಹವಾಮಾನ ಕಾರ್ಯಕರ್ತೆ ದಿಶಾ ರವಿ ದೆಹಲಿ ಪೊಲೀಸರು ಭಾನುವಾರ ಬಂಧಿಸಿದ್ದರು. ದೆಹಲಿ ಪೊಲೀಸರ ಈ ಕ್ರಮವನ್ನು ’ಮೌಂಟ್ ಕಾರ್ಮೆಲ್ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘ’ ಖಂಡಿಸಿದ್ದು, ಅವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದೆ.

ಹಳೆಯ ವಿದ್ಯಾರ್ಥಿ ಸಂಘವು ತನ್ನ ಪ್ರಕಟಣೆಯಲ್ಲಿ, “ರೈತ ಹೋರಾಟವನ್ನು ಬೆಂಬಲಿಸುವ ಯುವ ಪ್ರಜೆಯನ್ನು ನಿರ್ದಾಕ್ಷಿಣ್ಯವಾಗಿ ಗುರಿಪಡಿಸುವುದು ಭಯಾನಕ ಮತ್ತು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ದೆಹಲಿ ಪೊಲೀಸರು ಅವರನ್ನು ಬಿಡುಗಡೆ ಮಾಡಬೇಕು. ರಾಜ್ಯದ ಮಹಿಳೆಯ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು ಬೆಂಗಳೂರು ಪೊಲೀಸರು ಮತ್ತು ಕರ್ನಾಟಕ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ದಿಶಾ ಬಂಧನಕ್ಕೂ ಮುನ್ನ ಬೆಂಗಳೂರು ಪೊಲೀಸರಿಗೆ ಮಾಹಿತಿಯೇ ಇಲ್ಲ: ಇದೆಂಥ ಒಕ್ಕೂಟ ವ್ಯವಸ್ಥೆ?

“ದಿಶಾ ರವಿ ಅತ್ಯುತ್ತಮವಾದ ಕಾರ್ಯವನ್ನು ಮಾಡುತ್ತಿದ್ದು, ಹವಾಮಾನ ಬದಲಾವಣೆಯ ಕ್ಷೇತ್ರದಲ್ಲಿ ತನ್ನ ಕ್ರಿಯಾಶೀಲತೆಯ ಮೂಲಕ ಭಾರತದ ಪ್ರಜೆಯಾಗಿ ನಿಜಕ್ಕೂ ಪ್ರಪಂಚದ ಕರ್ತವ್ಯಗಳನ್ನು ಪೂರೈಸುತ್ತಿದ್ದಾರೆ. ಫ್ರೈಡೇಸ್ ಫಾರ್ ಫ್ಯೂಚರ್ ಇನ್ ಇಂಡಿಯಾದ ಸಹ-ಸಂಸ್ಥಾಪಕರಾಗಿ, ರಾಜಕಾರಣಿಗಳು ಮತ್ತು ಸರ್ಕಾರಗಳು ಜನತ್ತಿನ ವಾತಾವರಣ ಹಾಳಾಗದಂತೆ ತಡೆಯುವ ಕ್ರಮಗಳನ್ನು ಕೈಗೊಳ್ಳಲು ವಿಶ್ವದಾದ್ಯಂತದ ಹವಾಮಾನ ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸಿದ್ದಾರೆ” ಎಂದು ಹೇಳಿದ್ದಾರೆ.

“ನಮಗೆಲ್ಲರಿಗೂ ತಿಳಿದಿರುವಂತೆ, ಹವಾಮಾನ ಬದಲಾವಣೆಯ ಭೀಕರ ಪರಿಣಾಮವನ್ನು ನಿರ್ಲಕ್ಷಿಸಲಾಗುವುದಿಲ್ಲ. ಉತ್ತರಾಖಂಡದಲ್ಲಿ ನಡೆಯುತ್ತಿರುವ ಅನಾಹುತ ಕೂಡಾ ಹವಮಾನ ವೈಪರೀತ್ಯದಿಂದಾಗಿಯೇ ಆಗಿದೆ. ಇದನ್ನು ದಿಶಾ ರವಿ ಸಾರ್ವಜನಿಕರ ಗಮನಕ್ಕೆ ತರಲು ಕೆಲಸ ಮಾಡಿದ್ದಾರೆ” ಎಂದು ಸಂಘವು ಹೇಳಿದೆ.

“ದಿಶಾ ರವಿಯ ಇತಿಹಾಸದ ಪ್ರಜ್ಞೆಯು ಗಮನಾರ್ಹವಾಗಿದೆ. ಅವರು ಸ್ವಾತಂತ್ರ್ಯ ಸಂಗ್ರಾಮದಿಂದ ಸ್ಪೂರ್ತಿ ಪಡೆದಿದ್ದಾರೆ. ತನ್ನ ಕೆಲಸದ ಮೂಲಕ ದಿಶಾ ಅನುಕರಣೀಯ ವ್ಯಕ್ತಿಯಾಗಿ ನಿಂತಿದ್ದಾರೆ. ಈ ಸಮಯದಲ್ಲಿ ನಾವು ಅವರ ಮತ್ತು ಅವರ ಕುಟುಂಬಕ್ಕೆ ಬೇಷರತ್ತಾಗಿ ಬೆಂಬಲವನ್ನು ವ್ಯಕ್ತಪಡಿಸುತ್ತೇವೆ. ಅಲ್ಲದೆ ಹವಾಮಾನ ಬದಲಾವಣೆ ಹೋರಾಟದಲ್ಲಿ ಅವರು ಕೈಗೊಂಡ ಕಾರ್ಯದ ಬಗ್ಗೆ ಹೆಮ್ಮೆ ಪಡುತ್ತೇವೆ” ಎಂದು ಮೌಂಟ್ ಕಾರ್ಮೆಲ್ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘ ಹೇಳಿದೆ.

ಸಂಘದ ಹೇಳಿಕೆಗೆ ನೂರಾರು ಹಳೆ ವಿದ್ಯಾರ್ಥಿಗಳು ಸಹಿ ಹಾಕಿದ್ದಾರೆ. ಹೇಳಿಕೆಯ ಪೂರ್ಣ ಪಾಠಕ್ಕೆ ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಬೆಂಗಳೂರಿನಲ್ಲಿ ದಿಶಾ ರವಿ ಸ್ಥಾಪಿಸಿರುವ ‘Fridays For Future’ ಸಂಸ್ಥೆಯ ಬಗ್ಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...