Homeಚಳವಳಿರಾಜಸ್ಥಾನದಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಬಿಜೆಪಿ ಬೆಂಬಲಿಗರ ಹಲ್ಲೆ- ಆರೋಪ

ರಾಜಸ್ಥಾನದಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಬಿಜೆಪಿ ಬೆಂಬಲಿಗರ ಹಲ್ಲೆ- ಆರೋಪ

ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡಿರುವ ಪತ್ರಕರ್ತ ಮಂದೀಪ್ ಪುನಿಯಾ, ಇದು ಬಿಜೆಪಿ ಕಾರ್ಯಕರ್ತ, ರಾವ್ ಕುಲ್‌ದೀಪ್ ಯಾದವ್ ನಡೆಸಿರುವ ಹಲ್ಲೆ ಎಂದು ಸಾಕ್ಷಿ ಸಮೇತ ವಿವರಿಸಿದ್ದಾರೆ. 

- Advertisement -
- Advertisement -

ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಅವರ ಬೆಂಗಾವಲಿನ ಮೇಲೆ ರಾಜಸ್ಥಾನದ ಅಲ್ವಾರ್‌ನಲ್ಲಿ ಬಿಜೆಪಿ ಬೆಂಬಲಿಗರು ಶುಕ್ರವಾರ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದಾಳಿಯಲ್ಲಿ ರಾಕೇಶ್ ಟಿಕಾಯತ್ ಅವರ ಕಾರಿನ ಕಿಟಕಿಗಳಿಗೆ ಹಾನಿಯಾಗಿದೆ.

ರಾಕೇಶ್ ಟಿಕಾಯತ್ ಅವರು ಅಲ್ವಾರ್‌ನ ಹರ್ಸೋರಾ ಗ್ರಾಮದಿಂದ ಬನ್ಸೂರ್‌ಗೆ ತೆರಳುತ್ತಿದ್ದಾಗ ದಾಳಿ ನಡೆಸಲಾಗಿದೆ. ಟಿಕಾಯತ್ ಅವರು ಹರ್ಸೋರಾದಲ್ಲಿ ನಡೆದ ರೈತ ಸಭೆ ಮುಗಿಸಿಕೊಂಡು ಬನ್ಸೂರ್‌ಗೆ ತೆರಳುತ್ತಿದ್ದರು. ಅಲ್ವಾರ್ ಜಿಲ್ಲೆಯ ತತಾರ್ಪುರ್ ಗ್ರಾಮದ ಬಳಿ ಟಿಕಾಯತ್ ಬೆಂಗಾವಲಿನ ಮೇಲೆ ಬಿಜೆಪಿ ಬೆಂಬಲಿಗರು ಕಲ್ಲು ಎಸೆಯಲು ಪ್ರಾರಂಭಿಸಿದರು ಎಂದು ಆರೋಪಿಲಾಗಿದೆ.

ರಾಕೇಶ್ ಟಿಕಾಯತ್ ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಈ ಘಟನೆ ಬಗ್ಗೆ ಬರೆದುಕೊಂಡು, ಹಾನಿಗೊಳಗಾದ ಕಾರಿನ ವಿಡಿಯೋ ಹಂಚಿಕೊಂಡಿದ್ದಾರೆ. ಜೊತೆಗೆ, ಈ ದಾಳಿಯನ್ನು “ಬಿಜೆಪಿ ಗೂಂಡಾಗಳು” ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

“ರಾಜಸ್ಥಾನದ ಅಲ್ವಾರ್ ಜಿಲ್ಲೆಯ ತತಾರ್ಪುರದ ಬನ್ಸೂರ್ ರಸ್ತೆಯಲ್ಲಿ ಬಿಜೆಪಿ ಗೂಂಡಾಗಳಿಂದ ದಾಳಿ. ಇದು ಪ್ರಜಾಪ್ರಭುತ್ವದ ಹತ್ಯೆ” ಎಂದು ಟಿಕಾಯತ್ ತಮ್ಮ ಟ್ವೀಟ್‌ನಲ್ಲಿ ಬರೆದಿದ್ದಾರೆ. ದಾಳಿಯ ನಂತರ ಟಿಕಾಯತ್ ಬೆಂಬಲಿಗರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದ್ದಾರೆ.

ಘಟನೆ ಬಗ್ಗೆ ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡಿರುವ ಪತ್ರಕರ್ತ ಮಂದೀಪ್ ಪುನಿಯಾ, ಇದು ಬಿಜೆಪಿ ಕಾರ್ಯಕರ್ತ ನಡೆಸಿರುವ ಹಲ್ಲೆ ಎಂದು ಸಾಕ್ಷಿ ಸಮೇತ ವಿವರಿಸಿದ್ದಾರೆ.

 

ರಾಕೇಶ್ ಟಿಕಾಯತ್ ಅವರ ಮೇಲೆ ನಡೆಸಿರುವವರ ಹಲ್ಲೆ ಬಗ್ಗೆ ಈವರೆಗೆ ನನಗೆ ತಿಳಿದಿರುವ ವಿವರಗಳನ್ನು ಹಂಚಿಕೊಳ್ಳತ್ತಿದ್ದೇನೆ ಎಂದಿರುವ ಮಂದೀಪ್ ಪುನಿಯಾ, ಹಲ್ಲೆ ನಡೆಸಿದ ಕಪ್ಪು ಬಣ್ಣದ ಕಾರು ಬಿಜೆಪಿಯ ರಾವ್ ಕುಲ್‌ದೀಪ್ ಯಾದವ್ ಅವರ ಗಾಡಿ ಎಂಬುದನ್ನು ತಿಳಿಸಿದ್ದಾರೆ.

ಬಿಜೆಪಿಯೊಂದಿಗೆ ನೇರ ಸಂಪರ್ಕದಲ್ಲಿರುವ, ರಾಜಸ್ಥಾನದ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷರಾಗಿರುವ ಸತೀಶ್ ಪುನಿಯಾ ಅವರೊಂದಿಗಿನ ಕವರ್‌ ಫೋಟೋ ಇರುವ ರಾವ್ ಕುಲ್‌ದೀಪ್ ಯಾದವ್ ಅವರ ಫೇಸ್‌ಬುಕ್‌ನಲ್ಲಿ ಈ ಕಾರು ಕಾಣಿಸಿಕೊಂಡಿದೆ.

ಇದನ್ನೂ ಓದಿ: ಇನ್ನು 8 ತಿಂಗಳು ಈ ರೈತ ಹೋರಾಟ ನಡೆಯಲಿದೆ- ರಾಕೇಶ್ ಟಿಕಾಯತ್

ರಾವ್ ಕುಲ್‌ದೀಪ್ ಯಾದವ್, ಎಬಿವಿಪಿ ಸದಸ್ಯನಾಗಿದ್ದು, ಬಿಜೆಪಿಯ ಸಕ್ರೀಯ ಕಾರ್ಯಕರ್ತರಾಗಿದ್ದಾರೆ. ಇವರ ಕಾರನ್ನು ರಾಕೇಶ್ ಟಿಕಾಯತ್ ಮೇಲೆ ನಡೆದ ಹಲ್ಲೆಯಲ್ಲಿ ಬಳಸಲಾಗಿದೆ ಎಂಬುದನ್ನು ಪತ್ರಕರ್ತ ಮಂದೀಪ್ ಪುನಿಯಾ ಸಾಕ್ಷಿಗಳ ಸಮೇತ ವಿವರಿಸಿದ್ದಾರೆ.

ದೆಹಲಿ-ಉತ್ತರ ಪ್ರದೇಶದ ಗಾಜಿಪುರ ಗಡಿಯಲ್ಲಿ ಕೇಂದ್ರದ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬಿಕೆಯು ನಾಯಕ ರಾಕೇಶ್ ಟಿಕಾಯತ್ ಅವರು ನಾಲ್ಕು ತಿಂಗಳಿನಿಂದ ಮುನ್ನಡೆಸುತ್ತಿದ್ದಾರೆ. ದೇಶದಾದ್ಯಂತ ನಡೆಯುತ್ತಿರುವ ರೈತ ಮಹಾಪಂಚಾಯತ್‌ಗಳಲ್ಲಿ ಬಂದು ರೈತರ ಪ್ರತಿಭಟನೆ ಬಗ್ಗೆ, ರೈತ ಹೋರಾಟದ ಪ್ರಾಮುಖ್ಯತೆ ಬಗ್ಗೆ ವಿವರಿಸುತ್ತಿದ್ದಾರೆ.


ಇದನ್ನೂ ಓದಿ: ವಿವಾದಿತ ಕೃಷಿ ಕಾಯ್ದೆಗಳ ಬಗ್ಗೆ ಅಧ್ಯಯನ: ಸುಪ್ರೀಂಕೋರ್ಟ್‌ಗೆ ವರದಿ ಸಲ್ಲಿಸಿದ ಸ್ಥಾಯಿ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....