Homeಚಳವಳಿರಾಜಸ್ಥಾನದಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಬಿಜೆಪಿ ಬೆಂಬಲಿಗರ ಹಲ್ಲೆ- ಆರೋಪ

ರಾಜಸ್ಥಾನದಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಬಿಜೆಪಿ ಬೆಂಬಲಿಗರ ಹಲ್ಲೆ- ಆರೋಪ

ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡಿರುವ ಪತ್ರಕರ್ತ ಮಂದೀಪ್ ಪುನಿಯಾ, ಇದು ಬಿಜೆಪಿ ಕಾರ್ಯಕರ್ತ, ರಾವ್ ಕುಲ್‌ದೀಪ್ ಯಾದವ್ ನಡೆಸಿರುವ ಹಲ್ಲೆ ಎಂದು ಸಾಕ್ಷಿ ಸಮೇತ ವಿವರಿಸಿದ್ದಾರೆ. 

- Advertisement -
- Advertisement -

ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಅವರ ಬೆಂಗಾವಲಿನ ಮೇಲೆ ರಾಜಸ್ಥಾನದ ಅಲ್ವಾರ್‌ನಲ್ಲಿ ಬಿಜೆಪಿ ಬೆಂಬಲಿಗರು ಶುಕ್ರವಾರ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದಾಳಿಯಲ್ಲಿ ರಾಕೇಶ್ ಟಿಕಾಯತ್ ಅವರ ಕಾರಿನ ಕಿಟಕಿಗಳಿಗೆ ಹಾನಿಯಾಗಿದೆ.

ರಾಕೇಶ್ ಟಿಕಾಯತ್ ಅವರು ಅಲ್ವಾರ್‌ನ ಹರ್ಸೋರಾ ಗ್ರಾಮದಿಂದ ಬನ್ಸೂರ್‌ಗೆ ತೆರಳುತ್ತಿದ್ದಾಗ ದಾಳಿ ನಡೆಸಲಾಗಿದೆ. ಟಿಕಾಯತ್ ಅವರು ಹರ್ಸೋರಾದಲ್ಲಿ ನಡೆದ ರೈತ ಸಭೆ ಮುಗಿಸಿಕೊಂಡು ಬನ್ಸೂರ್‌ಗೆ ತೆರಳುತ್ತಿದ್ದರು. ಅಲ್ವಾರ್ ಜಿಲ್ಲೆಯ ತತಾರ್ಪುರ್ ಗ್ರಾಮದ ಬಳಿ ಟಿಕಾಯತ್ ಬೆಂಗಾವಲಿನ ಮೇಲೆ ಬಿಜೆಪಿ ಬೆಂಬಲಿಗರು ಕಲ್ಲು ಎಸೆಯಲು ಪ್ರಾರಂಭಿಸಿದರು ಎಂದು ಆರೋಪಿಲಾಗಿದೆ.

ರಾಕೇಶ್ ಟಿಕಾಯತ್ ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಈ ಘಟನೆ ಬಗ್ಗೆ ಬರೆದುಕೊಂಡು, ಹಾನಿಗೊಳಗಾದ ಕಾರಿನ ವಿಡಿಯೋ ಹಂಚಿಕೊಂಡಿದ್ದಾರೆ. ಜೊತೆಗೆ, ಈ ದಾಳಿಯನ್ನು “ಬಿಜೆಪಿ ಗೂಂಡಾಗಳು” ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

“ರಾಜಸ್ಥಾನದ ಅಲ್ವಾರ್ ಜಿಲ್ಲೆಯ ತತಾರ್ಪುರದ ಬನ್ಸೂರ್ ರಸ್ತೆಯಲ್ಲಿ ಬಿಜೆಪಿ ಗೂಂಡಾಗಳಿಂದ ದಾಳಿ. ಇದು ಪ್ರಜಾಪ್ರಭುತ್ವದ ಹತ್ಯೆ” ಎಂದು ಟಿಕಾಯತ್ ತಮ್ಮ ಟ್ವೀಟ್‌ನಲ್ಲಿ ಬರೆದಿದ್ದಾರೆ. ದಾಳಿಯ ನಂತರ ಟಿಕಾಯತ್ ಬೆಂಬಲಿಗರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದ್ದಾರೆ.

ಘಟನೆ ಬಗ್ಗೆ ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡಿರುವ ಪತ್ರಕರ್ತ ಮಂದೀಪ್ ಪುನಿಯಾ, ಇದು ಬಿಜೆಪಿ ಕಾರ್ಯಕರ್ತ ನಡೆಸಿರುವ ಹಲ್ಲೆ ಎಂದು ಸಾಕ್ಷಿ ಸಮೇತ ವಿವರಿಸಿದ್ದಾರೆ.

 

ರಾಕೇಶ್ ಟಿಕಾಯತ್ ಅವರ ಮೇಲೆ ನಡೆಸಿರುವವರ ಹಲ್ಲೆ ಬಗ್ಗೆ ಈವರೆಗೆ ನನಗೆ ತಿಳಿದಿರುವ ವಿವರಗಳನ್ನು ಹಂಚಿಕೊಳ್ಳತ್ತಿದ್ದೇನೆ ಎಂದಿರುವ ಮಂದೀಪ್ ಪುನಿಯಾ, ಹಲ್ಲೆ ನಡೆಸಿದ ಕಪ್ಪು ಬಣ್ಣದ ಕಾರು ಬಿಜೆಪಿಯ ರಾವ್ ಕುಲ್‌ದೀಪ್ ಯಾದವ್ ಅವರ ಗಾಡಿ ಎಂಬುದನ್ನು ತಿಳಿಸಿದ್ದಾರೆ.

ಬಿಜೆಪಿಯೊಂದಿಗೆ ನೇರ ಸಂಪರ್ಕದಲ್ಲಿರುವ, ರಾಜಸ್ಥಾನದ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷರಾಗಿರುವ ಸತೀಶ್ ಪುನಿಯಾ ಅವರೊಂದಿಗಿನ ಕವರ್‌ ಫೋಟೋ ಇರುವ ರಾವ್ ಕುಲ್‌ದೀಪ್ ಯಾದವ್ ಅವರ ಫೇಸ್‌ಬುಕ್‌ನಲ್ಲಿ ಈ ಕಾರು ಕಾಣಿಸಿಕೊಂಡಿದೆ.

ಇದನ್ನೂ ಓದಿ: ಇನ್ನು 8 ತಿಂಗಳು ಈ ರೈತ ಹೋರಾಟ ನಡೆಯಲಿದೆ- ರಾಕೇಶ್ ಟಿಕಾಯತ್

ರಾವ್ ಕುಲ್‌ದೀಪ್ ಯಾದವ್, ಎಬಿವಿಪಿ ಸದಸ್ಯನಾಗಿದ್ದು, ಬಿಜೆಪಿಯ ಸಕ್ರೀಯ ಕಾರ್ಯಕರ್ತರಾಗಿದ್ದಾರೆ. ಇವರ ಕಾರನ್ನು ರಾಕೇಶ್ ಟಿಕಾಯತ್ ಮೇಲೆ ನಡೆದ ಹಲ್ಲೆಯಲ್ಲಿ ಬಳಸಲಾಗಿದೆ ಎಂಬುದನ್ನು ಪತ್ರಕರ್ತ ಮಂದೀಪ್ ಪುನಿಯಾ ಸಾಕ್ಷಿಗಳ ಸಮೇತ ವಿವರಿಸಿದ್ದಾರೆ.

ದೆಹಲಿ-ಉತ್ತರ ಪ್ರದೇಶದ ಗಾಜಿಪುರ ಗಡಿಯಲ್ಲಿ ಕೇಂದ್ರದ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬಿಕೆಯು ನಾಯಕ ರಾಕೇಶ್ ಟಿಕಾಯತ್ ಅವರು ನಾಲ್ಕು ತಿಂಗಳಿನಿಂದ ಮುನ್ನಡೆಸುತ್ತಿದ್ದಾರೆ. ದೇಶದಾದ್ಯಂತ ನಡೆಯುತ್ತಿರುವ ರೈತ ಮಹಾಪಂಚಾಯತ್‌ಗಳಲ್ಲಿ ಬಂದು ರೈತರ ಪ್ರತಿಭಟನೆ ಬಗ್ಗೆ, ರೈತ ಹೋರಾಟದ ಪ್ರಾಮುಖ್ಯತೆ ಬಗ್ಗೆ ವಿವರಿಸುತ್ತಿದ್ದಾರೆ.


ಇದನ್ನೂ ಓದಿ: ವಿವಾದಿತ ಕೃಷಿ ಕಾಯ್ದೆಗಳ ಬಗ್ಗೆ ಅಧ್ಯಯನ: ಸುಪ್ರೀಂಕೋರ್ಟ್‌ಗೆ ವರದಿ ಸಲ್ಲಿಸಿದ ಸ್ಥಾಯಿ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...