Homeಸಿನಿಮಾಕ್ರೀಡೆ’ನಾನು ಜನಾಂಗಿಯ ದ್ವೇಷಿಯಲ್ಲ’: ವಿವಾದಕ್ಕೆ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ಸ್ಪಷ್ಟನೆ

’ನಾನು ಜನಾಂಗಿಯ ದ್ವೇಷಿಯಲ್ಲ’: ವಿವಾದಕ್ಕೆ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ಸ್ಪಷ್ಟನೆ

- Advertisement -
- Advertisement -

ಟಿ-20 ವಿಶ್ವಕಪ್ ಕ್ರಿಕೆಟ್‌ನಲ್ಲಿ ಪಂದ್ಯಕ್ಕೂ ಮುನ್ನ ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ (Black Lives Matters) ಚಳವಳಿಗೆ ಬೆಂಬಲ ಸೂಚಿಸುವುದು ನಡೆಯುತ್ತಿದೆ. ಆದರೆ, ಅ.26 ರಂದು ವೆಸ್ಟ್ ಇಂಡೀಸ್ ಮತ್ತು ಸೌತ್ ಆಫ್ರಿಕಾ ನಡುವೆ ನಡೆದ ಪಂದ್ಯದ ವೇಳೆ ಚಳವಳಿಗೆ ಬೆಂಬಲ ಸೂಚಿಸಿ ಮಂಡಿಯೂರಲು ನಿರಾಕರಿಸಿ ವಿವಾದಕ್ಕೆ ಕಾರಣರಾಗಿದ್ದ ಕ್ವಿಂಟನ್ ಡಿ ಕಾಕ್, ’ನಾನು ಜನಾಂಗಿಯ ದ್ವೇಷಿಯಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.

Black Lives Matters ಚಳವಳಿಗೆ ಮಂಡಿಯೂರಿ ಬೆಂಬಲ ನೀಡದಕ್ಕೆ ತಮ್ಮ ಸಹ ಆಟಗಾರರು ಮತ್ತು ಅಭಿಮಾನಿಗಳಲ್ಲಿ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ಕ್ಷಮೆಯಾಚಿಸಿದ್ದಾರೆ.

ಪಂದ್ಯದ ಆರಂಭಕ್ಕೂ ಮುನ್ನ ಬ್ಲ್ಯಾಕ್ ಲೈವ್ಸ್​ ಮ್ಯಾಟರ್ಸ್ ಚಳವಳಿಗೆ ಬೆಂಬಲ ವ್ಯಕ್ತಪಡಿಸಲು ಕ್ರಿಕೆಟ್  ದಕ್ಷಿಣ ಆಫ್ರಿಕಾ ಸೂಚಿಸಿತ್ತು. ಇದನ್ನು ವಿರೋಧಿಸಿ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಪರ ಕ್ವಿಂಟನ್ ಡಿಕಾಕ್ ವೆಸ್ಟ್ ಇಂಡೀಸ್ ವಿರುದ್ದ ಆಡಿರಲಿಲ್ಲ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ‘Black Lives Matters’ ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

ಕ್ರಿಕೆಟ್ ದಕ್ಷಿಣ ಆಫ್ರಿಕಾದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಟ್ವೀಟ್ ಮಾಡಿರುವ ಹೇಳಿಕೆಯಲ್ಲಿ ತಮ್ಮ ಸಹ ಆಟಗಾರರು ಮತ್ತು ಅಭಿಮಾನಿಗಳಲ್ಲಿ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ಕ್ಷಮೆಯಾಚಿಸಿದ್ದಾರೆ.

’ನಿಮಗೆ ನೋವು, ಗೊಂದಲ ಮತ್ತು ಕೋಪ ಉಂಟುಮಾಡಿದಕ್ಕೆ ನನ್ನನ್ನು ಕ್ಷಮಿಸಿ. ವರ್ಣಭೇದ ನೀತಿಯ ವಿರುದ್ಧ ಮಂಡಿಯೂರುವುದರ ಪ್ರಾಮುಖ್ಯತೆಯನ್ನು ತಿಳಿದುಕೊಂಡಿದ್ದೇನೆ. ನಾನು ಮಂಡಿಯೂರುವುದರಿಂದ ಇತರರಿಗೆ ತಿಳುವಳಿಕೆ ಬರುವುದಾದರೇ, ಇತರರ ಜೀವನ ಸುಧಾರಿಸುವುದಾದರೇ ಮಂಡಿಯೂರುವುದನ್ನು ನಾನು ಸಂತೋಷದಿಂದ ಮಾಡುತ್ತೇನೆ’ ಎಂದಿದ್ದಾರೆ.

“ತಪ್ಪು ತಿಳುವಳಿಕೆಯಿಂದಾಗಿ ನನ್ನನ್ನು ಜನಾಂಗೀಯ ದ್ವೇಷಿ ಎಂದು ಕರೆಯುವುದು ನನಗೆ ತುಂಬಾ ನೋವುಂಟುಮಾಡುತ್ತದೆ. ಇದು ನನ್ನ ಕುಟುಂಬವನ್ನು ದುಖಃಕ್ಕೆ ತಳ್ಳುತ್ತದೆ. ನನ್ನ ಗರ್ಭಿಣಿ ಹೆಂಡತಿಗೆ ನೋವುಂಟುಮಾಡುತ್ತದೆ. ನಾನು ಜನಾಂಗೀಯವಾದಿ ಅಲ್ಲ. ಇದು ನನಗೆ ಮತ್ತು ನನ್ನನ್ನು ತಿಳಿದಿರುವವರಿಗೆ ಅರ್ಥವಾಗಿದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ಯುಎಇನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ ಟೂರ್ನಿಯ ಹನ್ನೆರಡರ ಹಂತದಲ್ಲಿ ಭಾನುವಾರ (ಅ.24) ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಣಸಾಡಿದವು. ಪಂದ್ಯದ ಆರಂಭಕ್ಕೂ ಮುನ್ನ ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ Black Lives Matters ಚಳಿವಳಿಗೆ ಬೆಂಬಲ ಸೂಚಿಸಿ ಭಾರತ ಮತ್ತು ಪಾಕ್ ಕ್ರಿಕೆಟ್‌ ತಂಡಗಳು ಮಂಡಿಯೂರಿ ಗಮನ ಸೆಳೆದಿದ್ದವು.

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಮುಂದಾಳತ್ವದಲ್ಲಿ ಭಾರತದ ಆಟಗಾರರು ಮಂಡಿಯೂರಿ ಚಳವಳಿಗೆ ಬೆಂಬಲ ಸೂಚಿಸಿದಾಗ ಪಾಕಿಸ್ತಾನದ ಆಟಗಾರರೂ ತಮ್ಮ ಎದೆಯ ಮೇಲೆ ಕೈಯಿಟ್ಟು ಅದಕ್ಕೆ ಬೆಂಬಲಿಸಿದ್ದರು.


 ಇದನ್ನೂ ಓದಿ:ಸೋಲೆ ಗೆಲುವಿನ ಸೋಪಾನ: T20 ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಹುರಿದುಂಬಿಸಿದ ಬಾಲಿವುಡ್‌ ಮಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...