Homeಸಿನಿಮಾಕ್ರೀಡೆ’ನಾನು ಜನಾಂಗಿಯ ದ್ವೇಷಿಯಲ್ಲ’: ವಿವಾದಕ್ಕೆ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ಸ್ಪಷ್ಟನೆ

’ನಾನು ಜನಾಂಗಿಯ ದ್ವೇಷಿಯಲ್ಲ’: ವಿವಾದಕ್ಕೆ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ಸ್ಪಷ್ಟನೆ

- Advertisement -
- Advertisement -

ಟಿ-20 ವಿಶ್ವಕಪ್ ಕ್ರಿಕೆಟ್‌ನಲ್ಲಿ ಪಂದ್ಯಕ್ಕೂ ಮುನ್ನ ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ (Black Lives Matters) ಚಳವಳಿಗೆ ಬೆಂಬಲ ಸೂಚಿಸುವುದು ನಡೆಯುತ್ತಿದೆ. ಆದರೆ, ಅ.26 ರಂದು ವೆಸ್ಟ್ ಇಂಡೀಸ್ ಮತ್ತು ಸೌತ್ ಆಫ್ರಿಕಾ ನಡುವೆ ನಡೆದ ಪಂದ್ಯದ ವೇಳೆ ಚಳವಳಿಗೆ ಬೆಂಬಲ ಸೂಚಿಸಿ ಮಂಡಿಯೂರಲು ನಿರಾಕರಿಸಿ ವಿವಾದಕ್ಕೆ ಕಾರಣರಾಗಿದ್ದ ಕ್ವಿಂಟನ್ ಡಿ ಕಾಕ್, ’ನಾನು ಜನಾಂಗಿಯ ದ್ವೇಷಿಯಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.

Black Lives Matters ಚಳವಳಿಗೆ ಮಂಡಿಯೂರಿ ಬೆಂಬಲ ನೀಡದಕ್ಕೆ ತಮ್ಮ ಸಹ ಆಟಗಾರರು ಮತ್ತು ಅಭಿಮಾನಿಗಳಲ್ಲಿ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ಕ್ಷಮೆಯಾಚಿಸಿದ್ದಾರೆ.

ಪಂದ್ಯದ ಆರಂಭಕ್ಕೂ ಮುನ್ನ ಬ್ಲ್ಯಾಕ್ ಲೈವ್ಸ್​ ಮ್ಯಾಟರ್ಸ್ ಚಳವಳಿಗೆ ಬೆಂಬಲ ವ್ಯಕ್ತಪಡಿಸಲು ಕ್ರಿಕೆಟ್  ದಕ್ಷಿಣ ಆಫ್ರಿಕಾ ಸೂಚಿಸಿತ್ತು. ಇದನ್ನು ವಿರೋಧಿಸಿ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಪರ ಕ್ವಿಂಟನ್ ಡಿಕಾಕ್ ವೆಸ್ಟ್ ಇಂಡೀಸ್ ವಿರುದ್ದ ಆಡಿರಲಿಲ್ಲ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ‘Black Lives Matters’ ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

ಕ್ರಿಕೆಟ್ ದಕ್ಷಿಣ ಆಫ್ರಿಕಾದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಟ್ವೀಟ್ ಮಾಡಿರುವ ಹೇಳಿಕೆಯಲ್ಲಿ ತಮ್ಮ ಸಹ ಆಟಗಾರರು ಮತ್ತು ಅಭಿಮಾನಿಗಳಲ್ಲಿ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ಕ್ಷಮೆಯಾಚಿಸಿದ್ದಾರೆ.

’ನಿಮಗೆ ನೋವು, ಗೊಂದಲ ಮತ್ತು ಕೋಪ ಉಂಟುಮಾಡಿದಕ್ಕೆ ನನ್ನನ್ನು ಕ್ಷಮಿಸಿ. ವರ್ಣಭೇದ ನೀತಿಯ ವಿರುದ್ಧ ಮಂಡಿಯೂರುವುದರ ಪ್ರಾಮುಖ್ಯತೆಯನ್ನು ತಿಳಿದುಕೊಂಡಿದ್ದೇನೆ. ನಾನು ಮಂಡಿಯೂರುವುದರಿಂದ ಇತರರಿಗೆ ತಿಳುವಳಿಕೆ ಬರುವುದಾದರೇ, ಇತರರ ಜೀವನ ಸುಧಾರಿಸುವುದಾದರೇ ಮಂಡಿಯೂರುವುದನ್ನು ನಾನು ಸಂತೋಷದಿಂದ ಮಾಡುತ್ತೇನೆ’ ಎಂದಿದ್ದಾರೆ.

“ತಪ್ಪು ತಿಳುವಳಿಕೆಯಿಂದಾಗಿ ನನ್ನನ್ನು ಜನಾಂಗೀಯ ದ್ವೇಷಿ ಎಂದು ಕರೆಯುವುದು ನನಗೆ ತುಂಬಾ ನೋವುಂಟುಮಾಡುತ್ತದೆ. ಇದು ನನ್ನ ಕುಟುಂಬವನ್ನು ದುಖಃಕ್ಕೆ ತಳ್ಳುತ್ತದೆ. ನನ್ನ ಗರ್ಭಿಣಿ ಹೆಂಡತಿಗೆ ನೋವುಂಟುಮಾಡುತ್ತದೆ. ನಾನು ಜನಾಂಗೀಯವಾದಿ ಅಲ್ಲ. ಇದು ನನಗೆ ಮತ್ತು ನನ್ನನ್ನು ತಿಳಿದಿರುವವರಿಗೆ ಅರ್ಥವಾಗಿದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ಯುಎಇನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ ಟೂರ್ನಿಯ ಹನ್ನೆರಡರ ಹಂತದಲ್ಲಿ ಭಾನುವಾರ (ಅ.24) ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಣಸಾಡಿದವು. ಪಂದ್ಯದ ಆರಂಭಕ್ಕೂ ಮುನ್ನ ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ Black Lives Matters ಚಳಿವಳಿಗೆ ಬೆಂಬಲ ಸೂಚಿಸಿ ಭಾರತ ಮತ್ತು ಪಾಕ್ ಕ್ರಿಕೆಟ್‌ ತಂಡಗಳು ಮಂಡಿಯೂರಿ ಗಮನ ಸೆಳೆದಿದ್ದವು.

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಮುಂದಾಳತ್ವದಲ್ಲಿ ಭಾರತದ ಆಟಗಾರರು ಮಂಡಿಯೂರಿ ಚಳವಳಿಗೆ ಬೆಂಬಲ ಸೂಚಿಸಿದಾಗ ಪಾಕಿಸ್ತಾನದ ಆಟಗಾರರೂ ತಮ್ಮ ಎದೆಯ ಮೇಲೆ ಕೈಯಿಟ್ಟು ಅದಕ್ಕೆ ಬೆಂಬಲಿಸಿದ್ದರು.


 ಇದನ್ನೂ ಓದಿ:ಸೋಲೆ ಗೆಲುವಿನ ಸೋಪಾನ: T20 ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಹುರಿದುಂಬಿಸಿದ ಬಾಲಿವುಡ್‌ ಮಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...