Homeಸಿನಿಮಾಕ್ರೀಡೆ’ನಾನು ಜನಾಂಗಿಯ ದ್ವೇಷಿಯಲ್ಲ’: ವಿವಾದಕ್ಕೆ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ಸ್ಪಷ್ಟನೆ

’ನಾನು ಜನಾಂಗಿಯ ದ್ವೇಷಿಯಲ್ಲ’: ವಿವಾದಕ್ಕೆ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ಸ್ಪಷ್ಟನೆ

- Advertisement -
- Advertisement -

ಟಿ-20 ವಿಶ್ವಕಪ್ ಕ್ರಿಕೆಟ್‌ನಲ್ಲಿ ಪಂದ್ಯಕ್ಕೂ ಮುನ್ನ ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ (Black Lives Matters) ಚಳವಳಿಗೆ ಬೆಂಬಲ ಸೂಚಿಸುವುದು ನಡೆಯುತ್ತಿದೆ. ಆದರೆ, ಅ.26 ರಂದು ವೆಸ್ಟ್ ಇಂಡೀಸ್ ಮತ್ತು ಸೌತ್ ಆಫ್ರಿಕಾ ನಡುವೆ ನಡೆದ ಪಂದ್ಯದ ವೇಳೆ ಚಳವಳಿಗೆ ಬೆಂಬಲ ಸೂಚಿಸಿ ಮಂಡಿಯೂರಲು ನಿರಾಕರಿಸಿ ವಿವಾದಕ್ಕೆ ಕಾರಣರಾಗಿದ್ದ ಕ್ವಿಂಟನ್ ಡಿ ಕಾಕ್, ’ನಾನು ಜನಾಂಗಿಯ ದ್ವೇಷಿಯಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.

Black Lives Matters ಚಳವಳಿಗೆ ಮಂಡಿಯೂರಿ ಬೆಂಬಲ ನೀಡದಕ್ಕೆ ತಮ್ಮ ಸಹ ಆಟಗಾರರು ಮತ್ತು ಅಭಿಮಾನಿಗಳಲ್ಲಿ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ಕ್ಷಮೆಯಾಚಿಸಿದ್ದಾರೆ.

ಪಂದ್ಯದ ಆರಂಭಕ್ಕೂ ಮುನ್ನ ಬ್ಲ್ಯಾಕ್ ಲೈವ್ಸ್​ ಮ್ಯಾಟರ್ಸ್ ಚಳವಳಿಗೆ ಬೆಂಬಲ ವ್ಯಕ್ತಪಡಿಸಲು ಕ್ರಿಕೆಟ್  ದಕ್ಷಿಣ ಆಫ್ರಿಕಾ ಸೂಚಿಸಿತ್ತು. ಇದನ್ನು ವಿರೋಧಿಸಿ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಪರ ಕ್ವಿಂಟನ್ ಡಿಕಾಕ್ ವೆಸ್ಟ್ ಇಂಡೀಸ್ ವಿರುದ್ದ ಆಡಿರಲಿಲ್ಲ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ‘Black Lives Matters’ ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

ಕ್ರಿಕೆಟ್ ದಕ್ಷಿಣ ಆಫ್ರಿಕಾದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಟ್ವೀಟ್ ಮಾಡಿರುವ ಹೇಳಿಕೆಯಲ್ಲಿ ತಮ್ಮ ಸಹ ಆಟಗಾರರು ಮತ್ತು ಅಭಿಮಾನಿಗಳಲ್ಲಿ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ಕ್ಷಮೆಯಾಚಿಸಿದ್ದಾರೆ.

’ನಿಮಗೆ ನೋವು, ಗೊಂದಲ ಮತ್ತು ಕೋಪ ಉಂಟುಮಾಡಿದಕ್ಕೆ ನನ್ನನ್ನು ಕ್ಷಮಿಸಿ. ವರ್ಣಭೇದ ನೀತಿಯ ವಿರುದ್ಧ ಮಂಡಿಯೂರುವುದರ ಪ್ರಾಮುಖ್ಯತೆಯನ್ನು ತಿಳಿದುಕೊಂಡಿದ್ದೇನೆ. ನಾನು ಮಂಡಿಯೂರುವುದರಿಂದ ಇತರರಿಗೆ ತಿಳುವಳಿಕೆ ಬರುವುದಾದರೇ, ಇತರರ ಜೀವನ ಸುಧಾರಿಸುವುದಾದರೇ ಮಂಡಿಯೂರುವುದನ್ನು ನಾನು ಸಂತೋಷದಿಂದ ಮಾಡುತ್ತೇನೆ’ ಎಂದಿದ್ದಾರೆ.

“ತಪ್ಪು ತಿಳುವಳಿಕೆಯಿಂದಾಗಿ ನನ್ನನ್ನು ಜನಾಂಗೀಯ ದ್ವೇಷಿ ಎಂದು ಕರೆಯುವುದು ನನಗೆ ತುಂಬಾ ನೋವುಂಟುಮಾಡುತ್ತದೆ. ಇದು ನನ್ನ ಕುಟುಂಬವನ್ನು ದುಖಃಕ್ಕೆ ತಳ್ಳುತ್ತದೆ. ನನ್ನ ಗರ್ಭಿಣಿ ಹೆಂಡತಿಗೆ ನೋವುಂಟುಮಾಡುತ್ತದೆ. ನಾನು ಜನಾಂಗೀಯವಾದಿ ಅಲ್ಲ. ಇದು ನನಗೆ ಮತ್ತು ನನ್ನನ್ನು ತಿಳಿದಿರುವವರಿಗೆ ಅರ್ಥವಾಗಿದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ಯುಎಇನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ ಟೂರ್ನಿಯ ಹನ್ನೆರಡರ ಹಂತದಲ್ಲಿ ಭಾನುವಾರ (ಅ.24) ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಣಸಾಡಿದವು. ಪಂದ್ಯದ ಆರಂಭಕ್ಕೂ ಮುನ್ನ ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ Black Lives Matters ಚಳಿವಳಿಗೆ ಬೆಂಬಲ ಸೂಚಿಸಿ ಭಾರತ ಮತ್ತು ಪಾಕ್ ಕ್ರಿಕೆಟ್‌ ತಂಡಗಳು ಮಂಡಿಯೂರಿ ಗಮನ ಸೆಳೆದಿದ್ದವು.

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಮುಂದಾಳತ್ವದಲ್ಲಿ ಭಾರತದ ಆಟಗಾರರು ಮಂಡಿಯೂರಿ ಚಳವಳಿಗೆ ಬೆಂಬಲ ಸೂಚಿಸಿದಾಗ ಪಾಕಿಸ್ತಾನದ ಆಟಗಾರರೂ ತಮ್ಮ ಎದೆಯ ಮೇಲೆ ಕೈಯಿಟ್ಟು ಅದಕ್ಕೆ ಬೆಂಬಲಿಸಿದ್ದರು.


 ಇದನ್ನೂ ಓದಿ:ಸೋಲೆ ಗೆಲುವಿನ ಸೋಪಾನ: T20 ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಹುರಿದುಂಬಿಸಿದ ಬಾಲಿವುಡ್‌ ಮಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...