Homeಸಿನಿಮಾಕ್ರೀಡೆ’ನಾನು ಜನಾಂಗಿಯ ದ್ವೇಷಿಯಲ್ಲ’: ವಿವಾದಕ್ಕೆ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ಸ್ಪಷ್ಟನೆ

’ನಾನು ಜನಾಂಗಿಯ ದ್ವೇಷಿಯಲ್ಲ’: ವಿವಾದಕ್ಕೆ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ಸ್ಪಷ್ಟನೆ

- Advertisement -
- Advertisement -

ಟಿ-20 ವಿಶ್ವಕಪ್ ಕ್ರಿಕೆಟ್‌ನಲ್ಲಿ ಪಂದ್ಯಕ್ಕೂ ಮುನ್ನ ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ (Black Lives Matters) ಚಳವಳಿಗೆ ಬೆಂಬಲ ಸೂಚಿಸುವುದು ನಡೆಯುತ್ತಿದೆ. ಆದರೆ, ಅ.26 ರಂದು ವೆಸ್ಟ್ ಇಂಡೀಸ್ ಮತ್ತು ಸೌತ್ ಆಫ್ರಿಕಾ ನಡುವೆ ನಡೆದ ಪಂದ್ಯದ ವೇಳೆ ಚಳವಳಿಗೆ ಬೆಂಬಲ ಸೂಚಿಸಿ ಮಂಡಿಯೂರಲು ನಿರಾಕರಿಸಿ ವಿವಾದಕ್ಕೆ ಕಾರಣರಾಗಿದ್ದ ಕ್ವಿಂಟನ್ ಡಿ ಕಾಕ್, ’ನಾನು ಜನಾಂಗಿಯ ದ್ವೇಷಿಯಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.

Black Lives Matters ಚಳವಳಿಗೆ ಮಂಡಿಯೂರಿ ಬೆಂಬಲ ನೀಡದಕ್ಕೆ ತಮ್ಮ ಸಹ ಆಟಗಾರರು ಮತ್ತು ಅಭಿಮಾನಿಗಳಲ್ಲಿ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ಕ್ಷಮೆಯಾಚಿಸಿದ್ದಾರೆ.

ಪಂದ್ಯದ ಆರಂಭಕ್ಕೂ ಮುನ್ನ ಬ್ಲ್ಯಾಕ್ ಲೈವ್ಸ್​ ಮ್ಯಾಟರ್ಸ್ ಚಳವಳಿಗೆ ಬೆಂಬಲ ವ್ಯಕ್ತಪಡಿಸಲು ಕ್ರಿಕೆಟ್  ದಕ್ಷಿಣ ಆಫ್ರಿಕಾ ಸೂಚಿಸಿತ್ತು. ಇದನ್ನು ವಿರೋಧಿಸಿ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಪರ ಕ್ವಿಂಟನ್ ಡಿಕಾಕ್ ವೆಸ್ಟ್ ಇಂಡೀಸ್ ವಿರುದ್ದ ಆಡಿರಲಿಲ್ಲ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ‘Black Lives Matters’ ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

ಕ್ರಿಕೆಟ್ ದಕ್ಷಿಣ ಆಫ್ರಿಕಾದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಟ್ವೀಟ್ ಮಾಡಿರುವ ಹೇಳಿಕೆಯಲ್ಲಿ ತಮ್ಮ ಸಹ ಆಟಗಾರರು ಮತ್ತು ಅಭಿಮಾನಿಗಳಲ್ಲಿ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ಕ್ಷಮೆಯಾಚಿಸಿದ್ದಾರೆ.

’ನಿಮಗೆ ನೋವು, ಗೊಂದಲ ಮತ್ತು ಕೋಪ ಉಂಟುಮಾಡಿದಕ್ಕೆ ನನ್ನನ್ನು ಕ್ಷಮಿಸಿ. ವರ್ಣಭೇದ ನೀತಿಯ ವಿರುದ್ಧ ಮಂಡಿಯೂರುವುದರ ಪ್ರಾಮುಖ್ಯತೆಯನ್ನು ತಿಳಿದುಕೊಂಡಿದ್ದೇನೆ. ನಾನು ಮಂಡಿಯೂರುವುದರಿಂದ ಇತರರಿಗೆ ತಿಳುವಳಿಕೆ ಬರುವುದಾದರೇ, ಇತರರ ಜೀವನ ಸುಧಾರಿಸುವುದಾದರೇ ಮಂಡಿಯೂರುವುದನ್ನು ನಾನು ಸಂತೋಷದಿಂದ ಮಾಡುತ್ತೇನೆ’ ಎಂದಿದ್ದಾರೆ.

“ತಪ್ಪು ತಿಳುವಳಿಕೆಯಿಂದಾಗಿ ನನ್ನನ್ನು ಜನಾಂಗೀಯ ದ್ವೇಷಿ ಎಂದು ಕರೆಯುವುದು ನನಗೆ ತುಂಬಾ ನೋವುಂಟುಮಾಡುತ್ತದೆ. ಇದು ನನ್ನ ಕುಟುಂಬವನ್ನು ದುಖಃಕ್ಕೆ ತಳ್ಳುತ್ತದೆ. ನನ್ನ ಗರ್ಭಿಣಿ ಹೆಂಡತಿಗೆ ನೋವುಂಟುಮಾಡುತ್ತದೆ. ನಾನು ಜನಾಂಗೀಯವಾದಿ ಅಲ್ಲ. ಇದು ನನಗೆ ಮತ್ತು ನನ್ನನ್ನು ತಿಳಿದಿರುವವರಿಗೆ ಅರ್ಥವಾಗಿದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ಯುಎಇನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ ಟೂರ್ನಿಯ ಹನ್ನೆರಡರ ಹಂತದಲ್ಲಿ ಭಾನುವಾರ (ಅ.24) ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಣಸಾಡಿದವು. ಪಂದ್ಯದ ಆರಂಭಕ್ಕೂ ಮುನ್ನ ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ Black Lives Matters ಚಳಿವಳಿಗೆ ಬೆಂಬಲ ಸೂಚಿಸಿ ಭಾರತ ಮತ್ತು ಪಾಕ್ ಕ್ರಿಕೆಟ್‌ ತಂಡಗಳು ಮಂಡಿಯೂರಿ ಗಮನ ಸೆಳೆದಿದ್ದವು.

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಮುಂದಾಳತ್ವದಲ್ಲಿ ಭಾರತದ ಆಟಗಾರರು ಮಂಡಿಯೂರಿ ಚಳವಳಿಗೆ ಬೆಂಬಲ ಸೂಚಿಸಿದಾಗ ಪಾಕಿಸ್ತಾನದ ಆಟಗಾರರೂ ತಮ್ಮ ಎದೆಯ ಮೇಲೆ ಕೈಯಿಟ್ಟು ಅದಕ್ಕೆ ಬೆಂಬಲಿಸಿದ್ದರು.


 ಇದನ್ನೂ ಓದಿ:ಸೋಲೆ ಗೆಲುವಿನ ಸೋಪಾನ: T20 ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಹುರಿದುಂಬಿಸಿದ ಬಾಲಿವುಡ್‌ ಮಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...