Homeಸಿನಿಮಾಕ್ರೀಡೆ’ನಾನು ಜನಾಂಗಿಯ ದ್ವೇಷಿಯಲ್ಲ’: ವಿವಾದಕ್ಕೆ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ಸ್ಪಷ್ಟನೆ

’ನಾನು ಜನಾಂಗಿಯ ದ್ವೇಷಿಯಲ್ಲ’: ವಿವಾದಕ್ಕೆ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ಸ್ಪಷ್ಟನೆ

- Advertisement -
- Advertisement -

ಟಿ-20 ವಿಶ್ವಕಪ್ ಕ್ರಿಕೆಟ್‌ನಲ್ಲಿ ಪಂದ್ಯಕ್ಕೂ ಮುನ್ನ ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ (Black Lives Matters) ಚಳವಳಿಗೆ ಬೆಂಬಲ ಸೂಚಿಸುವುದು ನಡೆಯುತ್ತಿದೆ. ಆದರೆ, ಅ.26 ರಂದು ವೆಸ್ಟ್ ಇಂಡೀಸ್ ಮತ್ತು ಸೌತ್ ಆಫ್ರಿಕಾ ನಡುವೆ ನಡೆದ ಪಂದ್ಯದ ವೇಳೆ ಚಳವಳಿಗೆ ಬೆಂಬಲ ಸೂಚಿಸಿ ಮಂಡಿಯೂರಲು ನಿರಾಕರಿಸಿ ವಿವಾದಕ್ಕೆ ಕಾರಣರಾಗಿದ್ದ ಕ್ವಿಂಟನ್ ಡಿ ಕಾಕ್, ’ನಾನು ಜನಾಂಗಿಯ ದ್ವೇಷಿಯಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.

Black Lives Matters ಚಳವಳಿಗೆ ಮಂಡಿಯೂರಿ ಬೆಂಬಲ ನೀಡದಕ್ಕೆ ತಮ್ಮ ಸಹ ಆಟಗಾರರು ಮತ್ತು ಅಭಿಮಾನಿಗಳಲ್ಲಿ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ಕ್ಷಮೆಯಾಚಿಸಿದ್ದಾರೆ.

ಪಂದ್ಯದ ಆರಂಭಕ್ಕೂ ಮುನ್ನ ಬ್ಲ್ಯಾಕ್ ಲೈವ್ಸ್​ ಮ್ಯಾಟರ್ಸ್ ಚಳವಳಿಗೆ ಬೆಂಬಲ ವ್ಯಕ್ತಪಡಿಸಲು ಕ್ರಿಕೆಟ್  ದಕ್ಷಿಣ ಆಫ್ರಿಕಾ ಸೂಚಿಸಿತ್ತು. ಇದನ್ನು ವಿರೋಧಿಸಿ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಪರ ಕ್ವಿಂಟನ್ ಡಿಕಾಕ್ ವೆಸ್ಟ್ ಇಂಡೀಸ್ ವಿರುದ್ದ ಆಡಿರಲಿಲ್ಲ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ‘Black Lives Matters’ ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

ಕ್ರಿಕೆಟ್ ದಕ್ಷಿಣ ಆಫ್ರಿಕಾದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಟ್ವೀಟ್ ಮಾಡಿರುವ ಹೇಳಿಕೆಯಲ್ಲಿ ತಮ್ಮ ಸಹ ಆಟಗಾರರು ಮತ್ತು ಅಭಿಮಾನಿಗಳಲ್ಲಿ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ಕ್ಷಮೆಯಾಚಿಸಿದ್ದಾರೆ.

’ನಿಮಗೆ ನೋವು, ಗೊಂದಲ ಮತ್ತು ಕೋಪ ಉಂಟುಮಾಡಿದಕ್ಕೆ ನನ್ನನ್ನು ಕ್ಷಮಿಸಿ. ವರ್ಣಭೇದ ನೀತಿಯ ವಿರುದ್ಧ ಮಂಡಿಯೂರುವುದರ ಪ್ರಾಮುಖ್ಯತೆಯನ್ನು ತಿಳಿದುಕೊಂಡಿದ್ದೇನೆ. ನಾನು ಮಂಡಿಯೂರುವುದರಿಂದ ಇತರರಿಗೆ ತಿಳುವಳಿಕೆ ಬರುವುದಾದರೇ, ಇತರರ ಜೀವನ ಸುಧಾರಿಸುವುದಾದರೇ ಮಂಡಿಯೂರುವುದನ್ನು ನಾನು ಸಂತೋಷದಿಂದ ಮಾಡುತ್ತೇನೆ’ ಎಂದಿದ್ದಾರೆ.

“ತಪ್ಪು ತಿಳುವಳಿಕೆಯಿಂದಾಗಿ ನನ್ನನ್ನು ಜನಾಂಗೀಯ ದ್ವೇಷಿ ಎಂದು ಕರೆಯುವುದು ನನಗೆ ತುಂಬಾ ನೋವುಂಟುಮಾಡುತ್ತದೆ. ಇದು ನನ್ನ ಕುಟುಂಬವನ್ನು ದುಖಃಕ್ಕೆ ತಳ್ಳುತ್ತದೆ. ನನ್ನ ಗರ್ಭಿಣಿ ಹೆಂಡತಿಗೆ ನೋವುಂಟುಮಾಡುತ್ತದೆ. ನಾನು ಜನಾಂಗೀಯವಾದಿ ಅಲ್ಲ. ಇದು ನನಗೆ ಮತ್ತು ನನ್ನನ್ನು ತಿಳಿದಿರುವವರಿಗೆ ಅರ್ಥವಾಗಿದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ಯುಎಇನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ ಟೂರ್ನಿಯ ಹನ್ನೆರಡರ ಹಂತದಲ್ಲಿ ಭಾನುವಾರ (ಅ.24) ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಣಸಾಡಿದವು. ಪಂದ್ಯದ ಆರಂಭಕ್ಕೂ ಮುನ್ನ ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ Black Lives Matters ಚಳಿವಳಿಗೆ ಬೆಂಬಲ ಸೂಚಿಸಿ ಭಾರತ ಮತ್ತು ಪಾಕ್ ಕ್ರಿಕೆಟ್‌ ತಂಡಗಳು ಮಂಡಿಯೂರಿ ಗಮನ ಸೆಳೆದಿದ್ದವು.

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಮುಂದಾಳತ್ವದಲ್ಲಿ ಭಾರತದ ಆಟಗಾರರು ಮಂಡಿಯೂರಿ ಚಳವಳಿಗೆ ಬೆಂಬಲ ಸೂಚಿಸಿದಾಗ ಪಾಕಿಸ್ತಾನದ ಆಟಗಾರರೂ ತಮ್ಮ ಎದೆಯ ಮೇಲೆ ಕೈಯಿಟ್ಟು ಅದಕ್ಕೆ ಬೆಂಬಲಿಸಿದ್ದರು.


 ಇದನ್ನೂ ಓದಿ:ಸೋಲೆ ಗೆಲುವಿನ ಸೋಪಾನ: T20 ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಹುರಿದುಂಬಿಸಿದ ಬಾಲಿವುಡ್‌ ಮಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....