Homeಮುಖಪುಟನ್ಯಾಯಮೂರ್ತಿಗಳ ಸಂಬಂಧಿಕರಿಗೆ ಹುದ್ದೆ ನೀಡುವ ಕ್ರಮ ಪರಿಶೀಲನೆ : ಕೊಲಿಜಿಯಂ ನಿರ್ಧಾರ ಸ್ವಾಗತಿಸಿದ ಅಭಿಷೇಕ್ ಮನು...

ನ್ಯಾಯಮೂರ್ತಿಗಳ ಸಂಬಂಧಿಕರಿಗೆ ಹುದ್ದೆ ನೀಡುವ ಕ್ರಮ ಪರಿಶೀಲನೆ : ಕೊಲಿಜಿಯಂ ನಿರ್ಧಾರ ಸ್ವಾಗತಿಸಿದ ಅಭಿಷೇಕ್ ಮನು ಸಿಂಘ್ವಿ

- Advertisement -
- Advertisement -

ನ್ಯಾಯಮೂರ್ತಿಗಳ ಸಂಬಂಧಿಕರಿಗೇ ಹುದ್ದೆ ನೀಡುವ ಕ್ರಮ ಪರಿಶೀಲಿಸಲು ಮುಂದಾಗಿರುವ ಸುಪ್ರೀಂ ಕೋರ್ಟ್ ಕೊಲಿಜಿಯಂನ ನಿರ್ಧಾರವನ್ನು ಹಿರಿಯ ವಕೀಲ ಹಾಗೂ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ಅಭಿಷೇಕ್ ಮನು ಸಿಂಘ್ವಿ ಅವರು ಸ್ವಾಗತಿಸಿದ್ದಾರೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಕೊಲಿಜಿಯಂ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನ ಹಾಲಿ ಅಥವಾ ಮಾಜಿ ನ್ಯಾಯಮೂರ್ತಿಗಳ ನಿಕಟ ಸಂಬಂಧಿಗಳನ್ನು ನ್ಯಾಯಮೂರ್ತಿ ಹುದ್ದೆಗೆ ನೇಮಕ ಮಾಡುವ ಸಂಪ್ರಾಯದ ಪರಿಶೀಲನೆಗೆ ಮುಂದಾಗಿದೆ.

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರೊಬ್ಬರ ಪ್ರಸ್ತಾವನೆ ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಪದೋನ್ನತಿ ಸಂಬಂಧ ವಿವಿಧ ಹೈಕೋರ್ಟ್‌ಗಳು ಶಿಫಾರಸು ಮಾಡಿದ ಅಭ್ಯರ್ಥಿಗಳೊಂದಿಗೆ ಕೊಲಿಜಿಯಂ ಸಂವಹನ ನಡೆಸಲೂ ಮುಂದಾಗಿದೆ. ಈ ಎರಡೂ ನಿರ್ಧಾರಗಳು ಅತ್ಯುತ್ತಮವಾಗಿವೆ. ಇವುಗಳನ್ನು ಅತಿ ಬೇಗನೆ ಕಾರ್ಯಗತಗೊಳಿಸಬೇಕು ಎಂದು ಸಿಂಘ್ವಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ರಾಚೀನ ಕಾಲದಲ್ಲಿ ಕೆಲವು ಸುಲ್ತಾನರು ನಿಜವಾದ ಸಮಸ್ಯೆಗಳನ್ನು ಅರಿಯಲು ಮಾಡುತ್ತಿದ್ದಂತೆ, ಕೊಲಿಜಿಯಂ ನ್ಯಾಯಮೂರ್ತಿಗಳು ವೇಷ ಮರೆಸಿಕೊಂಡು ನ್ಯಾಯಮೂರ್ತಿ ಹುದ್ದೆಯ ಅಭ್ಯರ್ಥಿಗಳು ವಿಚಾರಣೆ ನಡೆಸುವ ನ್ಯಾಯಾಲಯದ ಕೊಠಡಿಗಳಲ್ಲಿ ಕೂತು ಮೌಲ್ಯಮಾಪನ ಮಾಡಬೇಕು. ಈ ಬಗ್ಗೆ ನಾನು ದಶಕದ ಹಿಂದೆಯೇ ಬರೆದಿದ್ದೆ ಎಂದು ಸಿಂಘ್ವಿ ಹೇಳಿದ್ದಾರೆ.

ಅಭ್ಯರ್ಥಿಗಳ ಸಿವಿಗೂ ವಾಸ್ತವಿಕತೆಗೂ, ಕಾಗದದ ಮೇಲಿನ ಮೌಲ್ಯಮಾಪನಕ್ಕೂ ಅಭ್ಯರ್ಥಿಗಳ ನ್ಯಾಯಾಲಯ ಕ್ಷಮತೆಗೂ ಇರುವ ವ್ಯತ್ಯಾಸ ಕಂಡು ಆಶ್ಚರ್ಯವಾಗಿದೆ. ಅಭ್ಯರ್ಥಿಗಳ ಬಗ್ಗೆ ನಡೆಸುತ್ತಿರುವ ಸಂದರ್ಶನಗಳು ಉತ್ತಮವಾಗಿಲ್ಲ. ಆದರೆ, ಮಾರುವೇಷದಲ್ಲಿ ದಿಢೀರನೆ ನಡೆಸುವ ಮೌಲ್ಯಮಾಪನ ಸಂಪೂರ್ಣ ಅವಾಸ್ತವಿಕವಲ್ಲ ಎಂದಿದ್ದಾರೆ.

ನ್ಯಾಯಾಂಗ ನೇಮಕಾತಿ ಮೂಲತಃ ಭಾವಿಸಿದ್ದಕ್ಕಿಂತ ಹೆಚ್ಚು ಅಸ್ಪಷ್ಟವಾಗಿದ್ದು, ಅಷ್ಟೇನೂ ವಸ್ತುನಿಷ್ಠವಾಗಿಲ್ಲ. ಸ್ವಜನ ಪಕ್ಷಪಾತ, ವಂಶಪಾರಂಪರ್ಯತೆ ಇತ್ಯಾದಿಗಳು ನ್ಯಾಯಾಧೀಶರಾಗಲು ಬಯಸುವ ಉಳಿದವರನ್ನು ನಿರಾಶೆಗೊಳಿಸುತ್ತಿವೆ. ಇಂತಹ ನೇಮಕಾತಿ ನ್ಯಾಯಾಂಗಕ್ಕೆ ಅಪಖ್ಯಾತಿ ತರುತ್ತಿದೆ. ನ್ಯಾಯಮೂರ್ತಿಗಳ ಸಂಬಂಧಿಕರು ಅದೇ ಹೈಕೋರ್ಟ್‌ನಲ್ಲಿ ಪ್ರಾಕ್ಟೀಸ್‌ ಮಾಡುವಂತಹ ಚಟುವಟಿಕೆಗಳನ್ನು ನಿರ್ಬಂಧಿಸಲು ಸಾಧ್ಯವಾಗುತ್ತಿಲ್ಲ ಎಂದು ಸಿಂಘ್ವಿ ಹೇಳಿದ್ದಾರೆ.

ಪ್ರಸ್ತುತ ಸುಪ್ರೀಂ ಕೋರ್ಟ್ ಕೊಲಿಜಿಯಂನಲ್ಲಿ ಸಿಜೆಐ ಸಂಜೀವ್ ಖನ್ನಾ ಅವರು ಮಾತ್ರವಲ್ಲದೆ ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ, ಸೂರ್ಯ ಕಾಂತ್, ಹೃಷಿಕೇಶ್ ರಾಯ್ ಹಾಗೂ ಎ.ಎಸ್‌ ಓಕಾ ಸದಸ್ಯರಾಗಿದ್ದಾರೆ.

ಇದನ್ನೂ ಓದಿ : ಬಿಜೆಪಿ ಆಡಳಿತದ ರಾಜ್ಯಗಳು ದಲಿತ ದೌರ್ಜನ್ಯ ಪ್ರಯೋಗಶಾಲೆಗಳಾಗಿ ಮಾರ್ಪಟ್ಟಿವೆ: ಕುಮಾರಿ ಸೆಲ್ಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...