Homeಕರ್ನಾಟಕತುಮಕೂರಿನ ಅಮಾನಿಕೆರೆ ನುಂಗುತ್ತಿದೆ ಅಭಿವೃದ್ಧಿಭೂತ; ಕೆರೆಯಲ್ಲಿ ಸಂತೆ ನಿರ್ಮಾಣಕ್ಕೆ ವ್ಯಾಪಕ ವಿರೋಧ

ತುಮಕೂರಿನ ಅಮಾನಿಕೆರೆ ನುಂಗುತ್ತಿದೆ ಅಭಿವೃದ್ಧಿಭೂತ; ಕೆರೆಯಲ್ಲಿ ಸಂತೆ ನಿರ್ಮಾಣಕ್ಕೆ ವ್ಯಾಪಕ ವಿರೋಧ

ಕೆರೆಯನ್ನು ಅಭಿವೃದ್ದಿ ಹೆಸರಿನಲ್ಲಿ ನುಂಗುತ್ತಾ ಬರಲಾಗುತ್ತಿದೆ. ಇದು ಕೆರೆಯ ಮೂಲಸ್ವರೂಪಕ್ಕೆ ಧಕ್ಕೆ ತರುವಂತಹ ಕೆಲಸ. ಇಂತಹ ಅವೈಜ್ಞಾನಿಕ ಮತ್ತು ಕಾನೂನುಬಾಹಿರ ಕೃತ್ಯವನ್ನು ಜನಪ್ರತಿನಿಧಿಗಳು ಕೈಬಿಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

- Advertisement -
- Advertisement -

ಅಭಿವೃದ್ಧಿಯೆಂಬ ಭೂತ ತುಮಕೂರು ಅಮಾನಿಕೆರೆಯನ್ನು ನುಂಗುತ್ತಲೇ ಹೋಗುತ್ತಿದೆ. 950 ಎಕರೆ ಇದ್ದ ಕೆರೆಯ ವಿಸ್ತೀರ್ಣ ಇಂದು 500 ಎಕರೆಗೆ ಕುಗ್ಗಿದೆ. ರಸ್ತೆ, ಗ್ಲಾಸ್ ಹೌಸ್ ನಿರ್ಮಾಣ, ಉದ್ಯಾನಕ್ಕೆಂದು ಕೆರೆಯನ್ನು ಮತ್ತಷ್ಟು ಒತ್ತುವರಿ ಮಾಡಲಾಗಿದೆ. ಕೆರೆಯ ಮೂಲಸ್ವರೂಪಕ್ಕೆ ಧಕ್ಕೆಯಾಗಬಾರದೆಂಬ ಸುಪ್ರೀಂ, ಹೈಕೋರ್ಟ್‌ಗಳ ಅದೇಶಗಳ ಉಲ್ಲಂಘನೆ ಎಗ್ಗಿಲ್ಲದೆ ಸಾಗಿದೆ. ಸರ್ಕಾರಗಳು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಇಂತಹ ಉಲ್ಲಂಘನೆಯಲ್ಲಿ ತೊಡಗಿ ನ್ಯಾಯಾಂಗ ನಿಂದನೆ ಆಗುತ್ತಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆಕ್ರೋಶ ನಗರದ ನಾಗರಿಕರಿಂದ ವ್ಯಕ್ತವಾಗುತ್ತಿದೆ.

ತುಮಕೂರು ಅಮಾನಿಕೆರೆಯನ್ನು ಸಣ್ಣ ನೀರಾವರಿ ಇಲಾಖೆಗೆ ವರ್ಗಾಯಿಸಲಾಗಿದೆ. ಸಣ್ಣ ನೀರಾವರಿ ಇಲಾಖೆ ಕೆರೆಯ ಜವಾಬ್ದಾರಿ ವಹಿಸಿಕೊಂಡ ಮೇಲೆ ಅಭಿವೃದ್ಧಿ ಹೆಸರಿನಲ್ಲಿ ಆಡಳಿತಯಂತ್ರ ಕೆರೆಯನ್ನು ಕಿರಿದು ಮಾಡುತ್ತಲೇ ಹೋಗುತ್ತಿದೆ. ಈಗ ಮತ್ತೆ ಮುಕ್ಕಾಲು ಎಕರೆಯಲ್ಲಿ “ತುಮಕೂರು ಸಂತೆ” ಮಾಡಲು ಹೊರಟಿರುವುದು ಜನರ ಕೋಪಕ್ಕೆ ಗುರಿಯಾಗಿದೆ. ಗ್ಲಾಸ್ ಹೌಸ್ ಪಕ್ಕದ ಮುಕ್ಕಾಲು ಎಕರೆಯಲ್ಲಿ 1.75 ಕೋಟಿ ವೆಚ್ಚದಲ್ಲಿ ತುಮಕೂರು ಸಂತೆ ನಿರ್ಮಾಣಕ್ಕೆ ಸಿದ್ದತೆ ನಡೆಯುತ್ತಿದೆ. ಕೆರೆಯ ಅಂಗಳದಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ನಡೆಸಬಾರದೆಂಬ ನಿಯಮಗಳನ್ನು ಗಾಳಿಗೆ ತೂರಿ ಕಾಮಗಾರಿ ಕೈಗೊಳ್ಳುವ ತಯಾರಿ ನಡೆಸಲಾಗುತ್ತಿದೆ.

ಭೂ ಸುಧಾರಣಾ
ಇದನ್ನೂ ಓದಿ: ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ಕೆರೆಯ ಅಭಿವೃದ್ದಿಗೆಂದು ಈವರೆಗೆ ಸುಮಾರು 159 ಕೋಟಿ ರೂ ಸುರಿಯಲಾಗಿದೆ. ಕೆರೆಯ ಹೂಳೆತ್ತುವ ನೆಪದಲ್ಲಿ ಹಣ ಫೋಲು ಮಾಡಲಾಯಿತು. ಈಗ 102 ಕೋಟಿ ರೂಪಾಯಿಗಳನ್ನು ಅಭಿವೃದ್ಧಿಗೆಂದು ಮೀಸಲು ಇಡಲಾಗಿದೆ. ಸೆಪ್ಟೆಂಬರ್ 15 ರಂದು ಕೆರೆಯ ಅಂಗಳಕ್ಕೆ ಭೇಟಿ ನೀಡಿರುವ ಶಾಸಕ ಜ್ಯೋತಿಗಣೇಶ್ ಈ ಮಾಹಿತಿ ಹೊರಗೆಡಹಿದ್ದು ಕೆರೆಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಉದ್ದೇಶಿಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಅಮಾನಿಕೆರೆ ಇರುವ ಪ್ರದೇಶದಲ್ಲಿ ಜಿಲ್ಲಾ ನ್ಯಾಯಾಲಯದ ಕಟ್ಟಡಗಳು ಇವೆ. ಜಿಲ್ಲಾಧಿಕಾರಿ ಕಚೇರಿ ಇದೆ.  ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ವೃತ್ತ ಹಲವು ಭಾಗಗಳಿಂದ ಸಂಪರ್ಕವನ್ನು ಕಲ್ಪಿಸುತ್ತದೆ. ಪಾವಗಡ, ಶಿರಾದ ಕಡೆ ಹೋಗುವ ವಾಹನಗಳು ಇದೇ ವೃತ್ತದ ಮೂಲಕ ಹಾದುಹೋಗುತ್ತವೆ. ನಿತ್ಯವೂ ನೂರಾರು-ಸಾವಿರಾರು ಬಸ್, ಲಾರಿ, ಕಾರು, ಟೆಂಪೋ, ದ್ವಿಚಕ್ರವಾಹನಗಳು, ಆಟೋಗಳು ಓಡಾಡುತ್ತವೆ. ಉತ್ತರ ಕರ್ನಾಟಕದ 17 ಜಿಲ್ಲೆಗಳಿಂದ ನಗರದೊಳಗೆ ಖಾಸಗಿ-ಸರ್ಕಾರಿ ಬಸ್ ಗಳು ಬಂದು ಹೋಗುತ್ತವೆ. ವಾಹನಗಳ ದಟ್ಟಣೆ ವಿಪರೀತವಾಗಿದೆ. ಇದ್ಯಾವುದನ್ನೂ ಪಗಿರಣಿಸದೆ ಅವೈಜ್ಞಾನಿಕವಾಗಿ ಕೆರೆಯ ಅಂಗಳದಲ್ಲಿ ಸಂತೆ ನಿರ್ಮಾಣ ಮಾಡುವುದರಿಂದ ಮತ್ತಷ್ಟು ವಾಹನ ದಟ್ಟಣೆ ಅಧಿಕವಾಗುತ್ತದೆ.

ವಿಶೇಷವೆಂದರೆ ಜಿಲ್ಲಾ ನ್ಯಾಯಾಧೀಶರು, ಜಿಲ್ಲಾಧಿಕಾರಿಗಳ ವಸತಿಗಳು ಶಿರಾಗೇಟ್ ನಲ್ಲಿವೆ. ಇವರೂ ಕೂಡ ಈ ವೃತ್ತದ ಮೂಲಕವೇ ಹೋಗಬೇಕು. ಅಂತರಸನಹಳ್ಳಿ, ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಹೋಗುವ ಕಾರ್ಮಿಕರು, ಶಿರಾ ಗೇಟ್‌ನಲ್ಲಿರುವ ಬಡಾವಣೆಗಳಿಗೆ ಹೋಗುವ ಸಾರ್ವಜನಿಕರು ಕೋಟೆ ಆಂಜನೇಯ ವೃತ್ತದಿಂದಲೇ ಹೋಗಬೇಕು. ಈ ರಸ್ತೆ ಬಿಟ್ಟು ಪರ್ಯಾಯ ಮಾರ್ಗವಿಲ್ಲ. ಈಗ ಉದ್ದೇಶಿಸಿರುವ ಹಾಗೆ ಗ್ಲಾಸ್ ಹೌಸ್ ಹಿಂಭಾಗದ ಮುಕ್ಕಾಲು ಎಕರೆ ಜಾಗದಲ್ಲಿ ತುಮಕೂರು ಸಂತೆ ಮಳಿಗೆಗಳನ್ನು ನಿರ್ಮಾಣ ಮಾಡಿದರೆ ಮತ್ತಷ್ಟು ವಾಹನ ದಟ್ಟಣೆಯಾಗುತ್ತದೆ. ಜನರಿಗೆ ತೊಂದರೆಯಾಗಲಿದೆ. ಇದನ್ನು ಜನಪ್ರತಿನಿಧಿಗಳು ಅರ್ಥಮಾಡಿಕೊಂಡಂತೆ ಕಾಣುತ್ತಿಲ್ಲ.

ಇದನ್ನೂ ಓದಿ: ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; ‘ರಸೋಕಿನ’ ತಂಡದಿಂದ ವಿಶಿಷ್ಟ ಪ್ರತಿರೋಧ

ರೈತ ಮುಖಂಡ ಬಿ.ಉಮೇಶ್ ನಾನುಗೌರಿ ಜೊತೆ ಮಾತನಾಡಿ “ಕೆರೆಯಲ್ಲಿ ಸಂತೆ ಮಾಡುವುದು. ವಾಣಿಜ್ಯ ಚಟುವಟಿಕೆಗಳನ್ನು ಕೈಗೊಳ್ಳುವುದು ಅವೈಜ್ಞಾನಿಕ ಮತ್ತು ಕಾನೂನುಬಾಹಿರ. ಕೆರೆಯಲ್ಲಿ ತುಮಕೂರು ಸಂತೆ ಮಾಡುವ ಬದಲು ನಗರದ ಎಂಟು ದಿಕ್ಕಿನಲ್ಲಿ ಕಿರುಮಾರುಕಟ್ಟೆಗಳನ್ನು ನಿರ್ಮಿಸಲಿದೆ. ಭೀಮಸಂದ್ರ, ಶೆಟ್ಟಿಹಳ್ಳಿ ಮುಖ್ಯರಸ್ತೆ, ಕ್ಯಾತ್ಸಂದ್ರ, ಕುಣಿಗಲ್ ರಸ್ತೆ, ವರ್ತುಲ(ರಿಂಗ್) ರಸ್ತೆಯಲ್ಲಿ ನಡೆಯುತ್ತಿರುವ ತರಕಾರಿ ಸಂತೆಗಳನ್ನು ಅಬಿವೃದ್ಧಿಪಡಿಸಲಿ. ಅದು ಬಿಟ್ಟು ಕೆರೆಯಲ್ಲಿ ಸಂತೆ ಮಾಡುವುದು ಬೇಡ. ಇದರಿಂದ ವಾಹನ ದಟ್ಟನೆ ಹೆಚ್ಚಾಗುತ್ತದೆ. ಪರಿಸರ ಮಾಲಿನ್ಯವಾಗುತ್ತದೆ. ಜನದಟ್ಟಣೆ ಆಗುತ್ತದೆ. ಜನರು ವಿನಾಕಾರಣ ತೊಂದರೆಗೆ ಸಿಲುಕುತ್ತಾರೆ. ಹಾಗಾಗಿ ಈ ಯೋಜನೆಯನ್ನು ಕೈಬಿಡಬೇಕು” ಎಂದು ಆಗ್ರಹಿಸಿದರು.

ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಹಿಂಭಾಗದಲ್ಲಿ 10 ಮಳಿಗೆಗಳನ್ನು ನಿರ್ಮಿಸಲಾಗಿದೆ. ಅಲ್ಲಿ ತರಕಾರಿ ಸಂತೆಗೆ ಅವಕಾಶ ಮಾಡಿಕೊಡುವ ಭರವಸೆ ನೀಡಿದ್ದರು. ಅದನ್ನು ಕೈಬಿಟ್ಟರು. ಈಗ ಆ ಮಳಿಗೆಗಳು ಖಾಲಿ ಬಿದ್ದಿವೆ. ಜೊತೆಗೆ ಅಂತರಸನ ಹಳ್ಳಿಯಲ್ಲಿರುವ ಎಪಿಎಂಸಿ ಮಾರುಕಟ್ಟೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಿದರೆ ಒಳ್ಳೆಯದಾಗುತ್ತದೆ. ಜನ-ವಾಹನ ದಟ್ಟಣೆಯೂ ಕಡಿಮೆಯಾಗುತ್ತದೆ. ಕೆರೆ ಸಂರಕ್ಷಣೆ ಮಾಡಬೇಕು. ಜನರ ವಾಯುವಿವಾಹಕ್ಕೆ ಅವಕಾಶ ಕೊಟ್ಟು ಜನರ ಆರೋಗ್ಯ ಕಾಪಾಡಲು ಮುಂದಾಗಬೇಕು. ಕೆರೆಯ ಸುತ್ತಲೂ ಗಿಡಮರಗಳನ್ನು ನೆಟ್ಟು ಶುದ್ದವಾದ ಗಾಳಿ ಸೇವನೆಗೆ ದಾರಿ ಮಾಡಲಿ. ಅದುಬಿಟ್ಟು ಗುತ್ತಿಗೆದಾರರು ಮತ್ತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಆದಾಯ ಹೆಚ್ಚಳಕ್ಕೆ ಮಾರ್ಗ ಮಾಡುತ್ತಿರುವುದು ಖಂಡನೀಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆರೆಯನ್ನು ಅಭಿವೃದ್ದಿ ಹೆಸರಿನಲ್ಲಿ ನುಂಗುತ್ತಾ ಬರಲಾಗುತ್ತಿದೆ. ಇದು ಕೆರೆಯ ಮೂಲಸ್ವರೂಪಕ್ಕೆ ಧಕ್ಕೆ ತರುವಂತಹ ಕೆಲಸ. ಇಂತಹ ಅವೈಜ್ಞಾನಿಕ ಮತ್ತು ಕಾನೂನುಬಾಹಿರ ಕೃತ್ಯವನ್ನು ಜನಪ್ರತಿನಿಧಿಗಳು ಕೈಬಿಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

ಹಿರಿಯ ಪರಿಸರ ಹೋರಾಟಗಾರ ಸಿ.ಯತಿರಾಜು ಮಾತನಾಡಿ, “ಸ್ಮಾರ್ಟ್ ಸಿಟಿಯ ಅಭಿವೃದ್ಧಿ ನೆಪದಲ್ಲಿ ಈಗಾಗಲೆ 13 ಎಕರೆ ಪ್ರದೇಶದಲ್ಲಿ ಪಾರ್ಕ್ ಮಾಡಲಾಗಿದೆ. ಗ್ಲಾಸ್ ಹೌಸ್ ನಿರ್ಮಿಸಿದೆ. ಇದು ಹೈಕೋರ್ಟ್ ಆದೇಶದ ಸ್ಪಷ್ಟ ಉಲ್ಲಂಘನೆ. ಜನಪ್ರತಿನಿಧಿಗಳು, ಅಧಿಕಾರಿಗಳು ಕೋರ್ಟ್ ಆದೇಶ ಉಲ್ಲಂಘಿಸುತ್ತಲೇ ನ್ಯಾಯಾಂಗ ನಿಂದನೆ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಮೌನವಾಗಿದ್ದಾರೆ. ಈ ಬಗ್ಗೆ ಲೋಕ ಅದಾಲತ್‌ಗೆ ಹೋಗುವ ಮೂಲಕ ಅಮಾನಿಕೆರೆ  ಮೂಲಸ್ವರೂಪಕ್ಕೆ ಧಕ್ಕೆಯಾಗದಂತೆ ಕೆರೆಯನ್ನು ಸಂರಕ್ಷಿಸಬೇಕಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಮದಲೂರು ಕೆರೆಗೆ ಹೇಮಾವತಿ ನೀರು; ಬಿಜೆಪಿಗೆ ತಿರುಗುಬಾಣವಾದ ಹಿಂದಿನ ಪತ್ರ!

ವಿಜ್ಞಾನ ಚಳವಳಿಯಲ್ಲಿ ತೊಡಗಿಸಿಕೊಂಡಿರುವ ಎಚ್.ಎಸ್.ನಿರಂಜನಾರಾಧ್ಯ ಮಾತನಾಡಿ “ಕೆರೆಯಲ್ಲಿ ಸಂತೆ ನಿರ್ಮಾಣ ಅಗತ್ಯವಿಲ್ಲ. ಕೆರೆಯಲ್ಲಿ ಹೆಚ್ಚು ನೀರು ಸಂಗ್ರಹವಾಗುವಂತೆ ಮಾಡಿ, ನಗರ ತಂಪಾಗಿರುವಂಥ ವಾತಾವರಣ ನಿರ್ಮಿಸಬೇಕು. ಅಮಾನಿಕೆರೆ ಸಂರಕ್ಷಣೆ ಹೋರಾಟ ಸಮಿತಿಯ ಉದ್ದೇಶವೇ ಅದು. ಇತ್ತೀಚೆಗೆ ಕೆರೆಯನ್ನು ಕಬಳಿಸುವ ಮೂಲಕ ಮೂಲ ಉದ್ದೇಶಕ್ಕೆ ಧಕ್ಕೆ ತರುವಂತಹ ಕೆಲಸ ನಡೆಯುತ್ತಿರುವುದನ್ನು ಪ್ರತಿಯೊಬ್ಬ ನಾಗರಿಕರೂ ವಿರೋಧಿಸಬೇಕು. ಹಿಂದಿನಿಂದಲೂ ಕೆರೆಯನ್ನು ಉಳಿಸಿಕೊಂಡು ಹೋಗುವ ಕುರಿತು ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ಜನರು ಇದನ್ನು ಮನಗಾಣಬೇಕು. ಕೆರೆ ಇದ್ದರೆ ನಗರದ ಸೌಂದರ್ಯ ಹೆಚ್ಚಿಸುತ್ತದೆ. ಅಭಿವೃದ್ಧಿ ಹೆಸರಲ್ಲಿ ಕೆರೆ ಒತ್ತುವರಿಯಾಗಬಾರದು”ಎಂದು ತಿಳಿಸಿದರು.

ತುಮಕೂರು ನಗರದ ಹೊರವಲಯದಲ್ಲಿ ಬರುವ ಶಿರಾ ರಸ್ತೆಯ ಕೋರಾ, ದೇವರಾಯನದುರ್ಗದ ಊರ್ಡಿಗೆರೆ, ಗುಬ್ಬಿ ರಸ್ತೆಯ ಮಲ್ಲಸಂದ್ರ, ಕುಣಿಗಲ್ ರಸ್ತೆ ನಾಗವಲ್ಲಿ, ಬುಗುಡನಹಳ್ಳಿ ರಸ್ತೆಯ ಬೆಳ್ಳಾವಿಯಲ್ಲಿ ಮಾರುಕಟ್ಟೆಗಳು, ಸಂತೆಗಳನ್ನು ನಿರ್ಮಿಸಬೇಕು. ಜನರೇ ರೈತರ ಬಳಿಗೆ ಹೋಗುವಂತಹ ವ್ಯವಸ್ಥೆ ಕಲ್ಪಿಸಬೇಕು. ಚಿತ್ರದುರ್ಗದ ತುರುವನೂರು ಪಟ್ಟಣದಲ್ಲಿ, ವ್ಯವಸ್ಥಿತ ಮಾರುಕಟ್ಟೆ ನಿರ್ಮಿಸಲಾಗಿದೆ ಅದನ್ನು ಮಾದರಿಯಾಗಿಟ್ಟುಕೊಂಡು ತುಮಕೂರಿನಲ್ಲಿ ಅಭಿವೃದ್ಧಿ ಕೆಲಸಗಳು ನಡೆಯಬೇಕು. ಪರಿಸರ ಉಳಿಯಬೇಕು ಎಂದು ಹೇಳುತ್ತಲೇ ಕೆರೆಗಳನ್ನು ಸಂಪೂರ್ಣವಾಗಿ ನಾಶ ಮಾಡುವುದು ಸರಿಯಲ್ಲ ಎಂಬ ಅಭಿಪ್ರಾಯ ಜನರಿಂದ ವ್ಯಕ್ತವಾಗಿದೆ.

 

ಇದನ್ನೂ ಓದಿ: ಬ್ಲೂಫಿಲ್ಮ್ ನೋಡುವುದು ಕೂಡಾ ಡ್ರಗ್ಸ್‌ನಂತೆಯೆ ವ್ಯಸನ: ಡಿಸಿಎಂ ಸವದಿ ಕಾಲೆಳೆದ ಸಾ.ರಾ. ಮಹೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...