Homeಕರ್ನಾಟಕತುಮಕೂರಿನ ಅಮಾನಿಕೆರೆ ನುಂಗುತ್ತಿದೆ ಅಭಿವೃದ್ಧಿಭೂತ; ಕೆರೆಯಲ್ಲಿ ಸಂತೆ ನಿರ್ಮಾಣಕ್ಕೆ ವ್ಯಾಪಕ ವಿರೋಧ

ತುಮಕೂರಿನ ಅಮಾನಿಕೆರೆ ನುಂಗುತ್ತಿದೆ ಅಭಿವೃದ್ಧಿಭೂತ; ಕೆರೆಯಲ್ಲಿ ಸಂತೆ ನಿರ್ಮಾಣಕ್ಕೆ ವ್ಯಾಪಕ ವಿರೋಧ

ಕೆರೆಯನ್ನು ಅಭಿವೃದ್ದಿ ಹೆಸರಿನಲ್ಲಿ ನುಂಗುತ್ತಾ ಬರಲಾಗುತ್ತಿದೆ. ಇದು ಕೆರೆಯ ಮೂಲಸ್ವರೂಪಕ್ಕೆ ಧಕ್ಕೆ ತರುವಂತಹ ಕೆಲಸ. ಇಂತಹ ಅವೈಜ್ಞಾನಿಕ ಮತ್ತು ಕಾನೂನುಬಾಹಿರ ಕೃತ್ಯವನ್ನು ಜನಪ್ರತಿನಿಧಿಗಳು ಕೈಬಿಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

- Advertisement -
- Advertisement -

ಅಭಿವೃದ್ಧಿಯೆಂಬ ಭೂತ ತುಮಕೂರು ಅಮಾನಿಕೆರೆಯನ್ನು ನುಂಗುತ್ತಲೇ ಹೋಗುತ್ತಿದೆ. 950 ಎಕರೆ ಇದ್ದ ಕೆರೆಯ ವಿಸ್ತೀರ್ಣ ಇಂದು 500 ಎಕರೆಗೆ ಕುಗ್ಗಿದೆ. ರಸ್ತೆ, ಗ್ಲಾಸ್ ಹೌಸ್ ನಿರ್ಮಾಣ, ಉದ್ಯಾನಕ್ಕೆಂದು ಕೆರೆಯನ್ನು ಮತ್ತಷ್ಟು ಒತ್ತುವರಿ ಮಾಡಲಾಗಿದೆ. ಕೆರೆಯ ಮೂಲಸ್ವರೂಪಕ್ಕೆ ಧಕ್ಕೆಯಾಗಬಾರದೆಂಬ ಸುಪ್ರೀಂ, ಹೈಕೋರ್ಟ್‌ಗಳ ಅದೇಶಗಳ ಉಲ್ಲಂಘನೆ ಎಗ್ಗಿಲ್ಲದೆ ಸಾಗಿದೆ. ಸರ್ಕಾರಗಳು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಇಂತಹ ಉಲ್ಲಂಘನೆಯಲ್ಲಿ ತೊಡಗಿ ನ್ಯಾಯಾಂಗ ನಿಂದನೆ ಆಗುತ್ತಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆಕ್ರೋಶ ನಗರದ ನಾಗರಿಕರಿಂದ ವ್ಯಕ್ತವಾಗುತ್ತಿದೆ.

ತುಮಕೂರು ಅಮಾನಿಕೆರೆಯನ್ನು ಸಣ್ಣ ನೀರಾವರಿ ಇಲಾಖೆಗೆ ವರ್ಗಾಯಿಸಲಾಗಿದೆ. ಸಣ್ಣ ನೀರಾವರಿ ಇಲಾಖೆ ಕೆರೆಯ ಜವಾಬ್ದಾರಿ ವಹಿಸಿಕೊಂಡ ಮೇಲೆ ಅಭಿವೃದ್ಧಿ ಹೆಸರಿನಲ್ಲಿ ಆಡಳಿತಯಂತ್ರ ಕೆರೆಯನ್ನು ಕಿರಿದು ಮಾಡುತ್ತಲೇ ಹೋಗುತ್ತಿದೆ. ಈಗ ಮತ್ತೆ ಮುಕ್ಕಾಲು ಎಕರೆಯಲ್ಲಿ “ತುಮಕೂರು ಸಂತೆ” ಮಾಡಲು ಹೊರಟಿರುವುದು ಜನರ ಕೋಪಕ್ಕೆ ಗುರಿಯಾಗಿದೆ. ಗ್ಲಾಸ್ ಹೌಸ್ ಪಕ್ಕದ ಮುಕ್ಕಾಲು ಎಕರೆಯಲ್ಲಿ 1.75 ಕೋಟಿ ವೆಚ್ಚದಲ್ಲಿ ತುಮಕೂರು ಸಂತೆ ನಿರ್ಮಾಣಕ್ಕೆ ಸಿದ್ದತೆ ನಡೆಯುತ್ತಿದೆ. ಕೆರೆಯ ಅಂಗಳದಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ನಡೆಸಬಾರದೆಂಬ ನಿಯಮಗಳನ್ನು ಗಾಳಿಗೆ ತೂರಿ ಕಾಮಗಾರಿ ಕೈಗೊಳ್ಳುವ ತಯಾರಿ ನಡೆಸಲಾಗುತ್ತಿದೆ.

ಭೂ ಸುಧಾರಣಾ
ಇದನ್ನೂ ಓದಿ: ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ಕೆರೆಯ ಅಭಿವೃದ್ದಿಗೆಂದು ಈವರೆಗೆ ಸುಮಾರು 159 ಕೋಟಿ ರೂ ಸುರಿಯಲಾಗಿದೆ. ಕೆರೆಯ ಹೂಳೆತ್ತುವ ನೆಪದಲ್ಲಿ ಹಣ ಫೋಲು ಮಾಡಲಾಯಿತು. ಈಗ 102 ಕೋಟಿ ರೂಪಾಯಿಗಳನ್ನು ಅಭಿವೃದ್ಧಿಗೆಂದು ಮೀಸಲು ಇಡಲಾಗಿದೆ. ಸೆಪ್ಟೆಂಬರ್ 15 ರಂದು ಕೆರೆಯ ಅಂಗಳಕ್ಕೆ ಭೇಟಿ ನೀಡಿರುವ ಶಾಸಕ ಜ್ಯೋತಿಗಣೇಶ್ ಈ ಮಾಹಿತಿ ಹೊರಗೆಡಹಿದ್ದು ಕೆರೆಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಉದ್ದೇಶಿಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಅಮಾನಿಕೆರೆ ಇರುವ ಪ್ರದೇಶದಲ್ಲಿ ಜಿಲ್ಲಾ ನ್ಯಾಯಾಲಯದ ಕಟ್ಟಡಗಳು ಇವೆ. ಜಿಲ್ಲಾಧಿಕಾರಿ ಕಚೇರಿ ಇದೆ.  ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ವೃತ್ತ ಹಲವು ಭಾಗಗಳಿಂದ ಸಂಪರ್ಕವನ್ನು ಕಲ್ಪಿಸುತ್ತದೆ. ಪಾವಗಡ, ಶಿರಾದ ಕಡೆ ಹೋಗುವ ವಾಹನಗಳು ಇದೇ ವೃತ್ತದ ಮೂಲಕ ಹಾದುಹೋಗುತ್ತವೆ. ನಿತ್ಯವೂ ನೂರಾರು-ಸಾವಿರಾರು ಬಸ್, ಲಾರಿ, ಕಾರು, ಟೆಂಪೋ, ದ್ವಿಚಕ್ರವಾಹನಗಳು, ಆಟೋಗಳು ಓಡಾಡುತ್ತವೆ. ಉತ್ತರ ಕರ್ನಾಟಕದ 17 ಜಿಲ್ಲೆಗಳಿಂದ ನಗರದೊಳಗೆ ಖಾಸಗಿ-ಸರ್ಕಾರಿ ಬಸ್ ಗಳು ಬಂದು ಹೋಗುತ್ತವೆ. ವಾಹನಗಳ ದಟ್ಟಣೆ ವಿಪರೀತವಾಗಿದೆ. ಇದ್ಯಾವುದನ್ನೂ ಪಗಿರಣಿಸದೆ ಅವೈಜ್ಞಾನಿಕವಾಗಿ ಕೆರೆಯ ಅಂಗಳದಲ್ಲಿ ಸಂತೆ ನಿರ್ಮಾಣ ಮಾಡುವುದರಿಂದ ಮತ್ತಷ್ಟು ವಾಹನ ದಟ್ಟಣೆ ಅಧಿಕವಾಗುತ್ತದೆ.

ವಿಶೇಷವೆಂದರೆ ಜಿಲ್ಲಾ ನ್ಯಾಯಾಧೀಶರು, ಜಿಲ್ಲಾಧಿಕಾರಿಗಳ ವಸತಿಗಳು ಶಿರಾಗೇಟ್ ನಲ್ಲಿವೆ. ಇವರೂ ಕೂಡ ಈ ವೃತ್ತದ ಮೂಲಕವೇ ಹೋಗಬೇಕು. ಅಂತರಸನಹಳ್ಳಿ, ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಹೋಗುವ ಕಾರ್ಮಿಕರು, ಶಿರಾ ಗೇಟ್‌ನಲ್ಲಿರುವ ಬಡಾವಣೆಗಳಿಗೆ ಹೋಗುವ ಸಾರ್ವಜನಿಕರು ಕೋಟೆ ಆಂಜನೇಯ ವೃತ್ತದಿಂದಲೇ ಹೋಗಬೇಕು. ಈ ರಸ್ತೆ ಬಿಟ್ಟು ಪರ್ಯಾಯ ಮಾರ್ಗವಿಲ್ಲ. ಈಗ ಉದ್ದೇಶಿಸಿರುವ ಹಾಗೆ ಗ್ಲಾಸ್ ಹೌಸ್ ಹಿಂಭಾಗದ ಮುಕ್ಕಾಲು ಎಕರೆ ಜಾಗದಲ್ಲಿ ತುಮಕೂರು ಸಂತೆ ಮಳಿಗೆಗಳನ್ನು ನಿರ್ಮಾಣ ಮಾಡಿದರೆ ಮತ್ತಷ್ಟು ವಾಹನ ದಟ್ಟಣೆಯಾಗುತ್ತದೆ. ಜನರಿಗೆ ತೊಂದರೆಯಾಗಲಿದೆ. ಇದನ್ನು ಜನಪ್ರತಿನಿಧಿಗಳು ಅರ್ಥಮಾಡಿಕೊಂಡಂತೆ ಕಾಣುತ್ತಿಲ್ಲ.

ಇದನ್ನೂ ಓದಿ: ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; ‘ರಸೋಕಿನ’ ತಂಡದಿಂದ ವಿಶಿಷ್ಟ ಪ್ರತಿರೋಧ

ರೈತ ಮುಖಂಡ ಬಿ.ಉಮೇಶ್ ನಾನುಗೌರಿ ಜೊತೆ ಮಾತನಾಡಿ “ಕೆರೆಯಲ್ಲಿ ಸಂತೆ ಮಾಡುವುದು. ವಾಣಿಜ್ಯ ಚಟುವಟಿಕೆಗಳನ್ನು ಕೈಗೊಳ್ಳುವುದು ಅವೈಜ್ಞಾನಿಕ ಮತ್ತು ಕಾನೂನುಬಾಹಿರ. ಕೆರೆಯಲ್ಲಿ ತುಮಕೂರು ಸಂತೆ ಮಾಡುವ ಬದಲು ನಗರದ ಎಂಟು ದಿಕ್ಕಿನಲ್ಲಿ ಕಿರುಮಾರುಕಟ್ಟೆಗಳನ್ನು ನಿರ್ಮಿಸಲಿದೆ. ಭೀಮಸಂದ್ರ, ಶೆಟ್ಟಿಹಳ್ಳಿ ಮುಖ್ಯರಸ್ತೆ, ಕ್ಯಾತ್ಸಂದ್ರ, ಕುಣಿಗಲ್ ರಸ್ತೆ, ವರ್ತುಲ(ರಿಂಗ್) ರಸ್ತೆಯಲ್ಲಿ ನಡೆಯುತ್ತಿರುವ ತರಕಾರಿ ಸಂತೆಗಳನ್ನು ಅಬಿವೃದ್ಧಿಪಡಿಸಲಿ. ಅದು ಬಿಟ್ಟು ಕೆರೆಯಲ್ಲಿ ಸಂತೆ ಮಾಡುವುದು ಬೇಡ. ಇದರಿಂದ ವಾಹನ ದಟ್ಟನೆ ಹೆಚ್ಚಾಗುತ್ತದೆ. ಪರಿಸರ ಮಾಲಿನ್ಯವಾಗುತ್ತದೆ. ಜನದಟ್ಟಣೆ ಆಗುತ್ತದೆ. ಜನರು ವಿನಾಕಾರಣ ತೊಂದರೆಗೆ ಸಿಲುಕುತ್ತಾರೆ. ಹಾಗಾಗಿ ಈ ಯೋಜನೆಯನ್ನು ಕೈಬಿಡಬೇಕು” ಎಂದು ಆಗ್ರಹಿಸಿದರು.

ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಹಿಂಭಾಗದಲ್ಲಿ 10 ಮಳಿಗೆಗಳನ್ನು ನಿರ್ಮಿಸಲಾಗಿದೆ. ಅಲ್ಲಿ ತರಕಾರಿ ಸಂತೆಗೆ ಅವಕಾಶ ಮಾಡಿಕೊಡುವ ಭರವಸೆ ನೀಡಿದ್ದರು. ಅದನ್ನು ಕೈಬಿಟ್ಟರು. ಈಗ ಆ ಮಳಿಗೆಗಳು ಖಾಲಿ ಬಿದ್ದಿವೆ. ಜೊತೆಗೆ ಅಂತರಸನ ಹಳ್ಳಿಯಲ್ಲಿರುವ ಎಪಿಎಂಸಿ ಮಾರುಕಟ್ಟೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಿದರೆ ಒಳ್ಳೆಯದಾಗುತ್ತದೆ. ಜನ-ವಾಹನ ದಟ್ಟಣೆಯೂ ಕಡಿಮೆಯಾಗುತ್ತದೆ. ಕೆರೆ ಸಂರಕ್ಷಣೆ ಮಾಡಬೇಕು. ಜನರ ವಾಯುವಿವಾಹಕ್ಕೆ ಅವಕಾಶ ಕೊಟ್ಟು ಜನರ ಆರೋಗ್ಯ ಕಾಪಾಡಲು ಮುಂದಾಗಬೇಕು. ಕೆರೆಯ ಸುತ್ತಲೂ ಗಿಡಮರಗಳನ್ನು ನೆಟ್ಟು ಶುದ್ದವಾದ ಗಾಳಿ ಸೇವನೆಗೆ ದಾರಿ ಮಾಡಲಿ. ಅದುಬಿಟ್ಟು ಗುತ್ತಿಗೆದಾರರು ಮತ್ತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಆದಾಯ ಹೆಚ್ಚಳಕ್ಕೆ ಮಾರ್ಗ ಮಾಡುತ್ತಿರುವುದು ಖಂಡನೀಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆರೆಯನ್ನು ಅಭಿವೃದ್ದಿ ಹೆಸರಿನಲ್ಲಿ ನುಂಗುತ್ತಾ ಬರಲಾಗುತ್ತಿದೆ. ಇದು ಕೆರೆಯ ಮೂಲಸ್ವರೂಪಕ್ಕೆ ಧಕ್ಕೆ ತರುವಂತಹ ಕೆಲಸ. ಇಂತಹ ಅವೈಜ್ಞಾನಿಕ ಮತ್ತು ಕಾನೂನುಬಾಹಿರ ಕೃತ್ಯವನ್ನು ಜನಪ್ರತಿನಿಧಿಗಳು ಕೈಬಿಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

ಹಿರಿಯ ಪರಿಸರ ಹೋರಾಟಗಾರ ಸಿ.ಯತಿರಾಜು ಮಾತನಾಡಿ, “ಸ್ಮಾರ್ಟ್ ಸಿಟಿಯ ಅಭಿವೃದ್ಧಿ ನೆಪದಲ್ಲಿ ಈಗಾಗಲೆ 13 ಎಕರೆ ಪ್ರದೇಶದಲ್ಲಿ ಪಾರ್ಕ್ ಮಾಡಲಾಗಿದೆ. ಗ್ಲಾಸ್ ಹೌಸ್ ನಿರ್ಮಿಸಿದೆ. ಇದು ಹೈಕೋರ್ಟ್ ಆದೇಶದ ಸ್ಪಷ್ಟ ಉಲ್ಲಂಘನೆ. ಜನಪ್ರತಿನಿಧಿಗಳು, ಅಧಿಕಾರಿಗಳು ಕೋರ್ಟ್ ಆದೇಶ ಉಲ್ಲಂಘಿಸುತ್ತಲೇ ನ್ಯಾಯಾಂಗ ನಿಂದನೆ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಮೌನವಾಗಿದ್ದಾರೆ. ಈ ಬಗ್ಗೆ ಲೋಕ ಅದಾಲತ್‌ಗೆ ಹೋಗುವ ಮೂಲಕ ಅಮಾನಿಕೆರೆ  ಮೂಲಸ್ವರೂಪಕ್ಕೆ ಧಕ್ಕೆಯಾಗದಂತೆ ಕೆರೆಯನ್ನು ಸಂರಕ್ಷಿಸಬೇಕಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಮದಲೂರು ಕೆರೆಗೆ ಹೇಮಾವತಿ ನೀರು; ಬಿಜೆಪಿಗೆ ತಿರುಗುಬಾಣವಾದ ಹಿಂದಿನ ಪತ್ರ!

ವಿಜ್ಞಾನ ಚಳವಳಿಯಲ್ಲಿ ತೊಡಗಿಸಿಕೊಂಡಿರುವ ಎಚ್.ಎಸ್.ನಿರಂಜನಾರಾಧ್ಯ ಮಾತನಾಡಿ “ಕೆರೆಯಲ್ಲಿ ಸಂತೆ ನಿರ್ಮಾಣ ಅಗತ್ಯವಿಲ್ಲ. ಕೆರೆಯಲ್ಲಿ ಹೆಚ್ಚು ನೀರು ಸಂಗ್ರಹವಾಗುವಂತೆ ಮಾಡಿ, ನಗರ ತಂಪಾಗಿರುವಂಥ ವಾತಾವರಣ ನಿರ್ಮಿಸಬೇಕು. ಅಮಾನಿಕೆರೆ ಸಂರಕ್ಷಣೆ ಹೋರಾಟ ಸಮಿತಿಯ ಉದ್ದೇಶವೇ ಅದು. ಇತ್ತೀಚೆಗೆ ಕೆರೆಯನ್ನು ಕಬಳಿಸುವ ಮೂಲಕ ಮೂಲ ಉದ್ದೇಶಕ್ಕೆ ಧಕ್ಕೆ ತರುವಂತಹ ಕೆಲಸ ನಡೆಯುತ್ತಿರುವುದನ್ನು ಪ್ರತಿಯೊಬ್ಬ ನಾಗರಿಕರೂ ವಿರೋಧಿಸಬೇಕು. ಹಿಂದಿನಿಂದಲೂ ಕೆರೆಯನ್ನು ಉಳಿಸಿಕೊಂಡು ಹೋಗುವ ಕುರಿತು ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ಜನರು ಇದನ್ನು ಮನಗಾಣಬೇಕು. ಕೆರೆ ಇದ್ದರೆ ನಗರದ ಸೌಂದರ್ಯ ಹೆಚ್ಚಿಸುತ್ತದೆ. ಅಭಿವೃದ್ಧಿ ಹೆಸರಲ್ಲಿ ಕೆರೆ ಒತ್ತುವರಿಯಾಗಬಾರದು”ಎಂದು ತಿಳಿಸಿದರು.

ತುಮಕೂರು ನಗರದ ಹೊರವಲಯದಲ್ಲಿ ಬರುವ ಶಿರಾ ರಸ್ತೆಯ ಕೋರಾ, ದೇವರಾಯನದುರ್ಗದ ಊರ್ಡಿಗೆರೆ, ಗುಬ್ಬಿ ರಸ್ತೆಯ ಮಲ್ಲಸಂದ್ರ, ಕುಣಿಗಲ್ ರಸ್ತೆ ನಾಗವಲ್ಲಿ, ಬುಗುಡನಹಳ್ಳಿ ರಸ್ತೆಯ ಬೆಳ್ಳಾವಿಯಲ್ಲಿ ಮಾರುಕಟ್ಟೆಗಳು, ಸಂತೆಗಳನ್ನು ನಿರ್ಮಿಸಬೇಕು. ಜನರೇ ರೈತರ ಬಳಿಗೆ ಹೋಗುವಂತಹ ವ್ಯವಸ್ಥೆ ಕಲ್ಪಿಸಬೇಕು. ಚಿತ್ರದುರ್ಗದ ತುರುವನೂರು ಪಟ್ಟಣದಲ್ಲಿ, ವ್ಯವಸ್ಥಿತ ಮಾರುಕಟ್ಟೆ ನಿರ್ಮಿಸಲಾಗಿದೆ ಅದನ್ನು ಮಾದರಿಯಾಗಿಟ್ಟುಕೊಂಡು ತುಮಕೂರಿನಲ್ಲಿ ಅಭಿವೃದ್ಧಿ ಕೆಲಸಗಳು ನಡೆಯಬೇಕು. ಪರಿಸರ ಉಳಿಯಬೇಕು ಎಂದು ಹೇಳುತ್ತಲೇ ಕೆರೆಗಳನ್ನು ಸಂಪೂರ್ಣವಾಗಿ ನಾಶ ಮಾಡುವುದು ಸರಿಯಲ್ಲ ಎಂಬ ಅಭಿಪ್ರಾಯ ಜನರಿಂದ ವ್ಯಕ್ತವಾಗಿದೆ.

 

ಇದನ್ನೂ ಓದಿ: ಬ್ಲೂಫಿಲ್ಮ್ ನೋಡುವುದು ಕೂಡಾ ಡ್ರಗ್ಸ್‌ನಂತೆಯೆ ವ್ಯಸನ: ಡಿಸಿಎಂ ಸವದಿ ಕಾಲೆಳೆದ ಸಾ.ರಾ. ಮಹೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...