Homeಕರ್ನಾಟಕತುಮಕೂರಿನ ಅಮಾನಿಕೆರೆ ನುಂಗುತ್ತಿದೆ ಅಭಿವೃದ್ಧಿಭೂತ; ಕೆರೆಯಲ್ಲಿ ಸಂತೆ ನಿರ್ಮಾಣಕ್ಕೆ ವ್ಯಾಪಕ ವಿರೋಧ

ತುಮಕೂರಿನ ಅಮಾನಿಕೆರೆ ನುಂಗುತ್ತಿದೆ ಅಭಿವೃದ್ಧಿಭೂತ; ಕೆರೆಯಲ್ಲಿ ಸಂತೆ ನಿರ್ಮಾಣಕ್ಕೆ ವ್ಯಾಪಕ ವಿರೋಧ

ಕೆರೆಯನ್ನು ಅಭಿವೃದ್ದಿ ಹೆಸರಿನಲ್ಲಿ ನುಂಗುತ್ತಾ ಬರಲಾಗುತ್ತಿದೆ. ಇದು ಕೆರೆಯ ಮೂಲಸ್ವರೂಪಕ್ಕೆ ಧಕ್ಕೆ ತರುವಂತಹ ಕೆಲಸ. ಇಂತಹ ಅವೈಜ್ಞಾನಿಕ ಮತ್ತು ಕಾನೂನುಬಾಹಿರ ಕೃತ್ಯವನ್ನು ಜನಪ್ರತಿನಿಧಿಗಳು ಕೈಬಿಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

- Advertisement -
- Advertisement -

ಅಭಿವೃದ್ಧಿಯೆಂಬ ಭೂತ ತುಮಕೂರು ಅಮಾನಿಕೆರೆಯನ್ನು ನುಂಗುತ್ತಲೇ ಹೋಗುತ್ತಿದೆ. 950 ಎಕರೆ ಇದ್ದ ಕೆರೆಯ ವಿಸ್ತೀರ್ಣ ಇಂದು 500 ಎಕರೆಗೆ ಕುಗ್ಗಿದೆ. ರಸ್ತೆ, ಗ್ಲಾಸ್ ಹೌಸ್ ನಿರ್ಮಾಣ, ಉದ್ಯಾನಕ್ಕೆಂದು ಕೆರೆಯನ್ನು ಮತ್ತಷ್ಟು ಒತ್ತುವರಿ ಮಾಡಲಾಗಿದೆ. ಕೆರೆಯ ಮೂಲಸ್ವರೂಪಕ್ಕೆ ಧಕ್ಕೆಯಾಗಬಾರದೆಂಬ ಸುಪ್ರೀಂ, ಹೈಕೋರ್ಟ್‌ಗಳ ಅದೇಶಗಳ ಉಲ್ಲಂಘನೆ ಎಗ್ಗಿಲ್ಲದೆ ಸಾಗಿದೆ. ಸರ್ಕಾರಗಳು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಇಂತಹ ಉಲ್ಲಂಘನೆಯಲ್ಲಿ ತೊಡಗಿ ನ್ಯಾಯಾಂಗ ನಿಂದನೆ ಆಗುತ್ತಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆಕ್ರೋಶ ನಗರದ ನಾಗರಿಕರಿಂದ ವ್ಯಕ್ತವಾಗುತ್ತಿದೆ.

ತುಮಕೂರು ಅಮಾನಿಕೆರೆಯನ್ನು ಸಣ್ಣ ನೀರಾವರಿ ಇಲಾಖೆಗೆ ವರ್ಗಾಯಿಸಲಾಗಿದೆ. ಸಣ್ಣ ನೀರಾವರಿ ಇಲಾಖೆ ಕೆರೆಯ ಜವಾಬ್ದಾರಿ ವಹಿಸಿಕೊಂಡ ಮೇಲೆ ಅಭಿವೃದ್ಧಿ ಹೆಸರಿನಲ್ಲಿ ಆಡಳಿತಯಂತ್ರ ಕೆರೆಯನ್ನು ಕಿರಿದು ಮಾಡುತ್ತಲೇ ಹೋಗುತ್ತಿದೆ. ಈಗ ಮತ್ತೆ ಮುಕ್ಕಾಲು ಎಕರೆಯಲ್ಲಿ “ತುಮಕೂರು ಸಂತೆ” ಮಾಡಲು ಹೊರಟಿರುವುದು ಜನರ ಕೋಪಕ್ಕೆ ಗುರಿಯಾಗಿದೆ. ಗ್ಲಾಸ್ ಹೌಸ್ ಪಕ್ಕದ ಮುಕ್ಕಾಲು ಎಕರೆಯಲ್ಲಿ 1.75 ಕೋಟಿ ವೆಚ್ಚದಲ್ಲಿ ತುಮಕೂರು ಸಂತೆ ನಿರ್ಮಾಣಕ್ಕೆ ಸಿದ್ದತೆ ನಡೆಯುತ್ತಿದೆ. ಕೆರೆಯ ಅಂಗಳದಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ನಡೆಸಬಾರದೆಂಬ ನಿಯಮಗಳನ್ನು ಗಾಳಿಗೆ ತೂರಿ ಕಾಮಗಾರಿ ಕೈಗೊಳ್ಳುವ ತಯಾರಿ ನಡೆಸಲಾಗುತ್ತಿದೆ.

ಭೂ ಸುಧಾರಣಾ
ಇದನ್ನೂ ಓದಿ: ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ಕೆರೆಯ ಅಭಿವೃದ್ದಿಗೆಂದು ಈವರೆಗೆ ಸುಮಾರು 159 ಕೋಟಿ ರೂ ಸುರಿಯಲಾಗಿದೆ. ಕೆರೆಯ ಹೂಳೆತ್ತುವ ನೆಪದಲ್ಲಿ ಹಣ ಫೋಲು ಮಾಡಲಾಯಿತು. ಈಗ 102 ಕೋಟಿ ರೂಪಾಯಿಗಳನ್ನು ಅಭಿವೃದ್ಧಿಗೆಂದು ಮೀಸಲು ಇಡಲಾಗಿದೆ. ಸೆಪ್ಟೆಂಬರ್ 15 ರಂದು ಕೆರೆಯ ಅಂಗಳಕ್ಕೆ ಭೇಟಿ ನೀಡಿರುವ ಶಾಸಕ ಜ್ಯೋತಿಗಣೇಶ್ ಈ ಮಾಹಿತಿ ಹೊರಗೆಡಹಿದ್ದು ಕೆರೆಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಉದ್ದೇಶಿಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಅಮಾನಿಕೆರೆ ಇರುವ ಪ್ರದೇಶದಲ್ಲಿ ಜಿಲ್ಲಾ ನ್ಯಾಯಾಲಯದ ಕಟ್ಟಡಗಳು ಇವೆ. ಜಿಲ್ಲಾಧಿಕಾರಿ ಕಚೇರಿ ಇದೆ.  ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ವೃತ್ತ ಹಲವು ಭಾಗಗಳಿಂದ ಸಂಪರ್ಕವನ್ನು ಕಲ್ಪಿಸುತ್ತದೆ. ಪಾವಗಡ, ಶಿರಾದ ಕಡೆ ಹೋಗುವ ವಾಹನಗಳು ಇದೇ ವೃತ್ತದ ಮೂಲಕ ಹಾದುಹೋಗುತ್ತವೆ. ನಿತ್ಯವೂ ನೂರಾರು-ಸಾವಿರಾರು ಬಸ್, ಲಾರಿ, ಕಾರು, ಟೆಂಪೋ, ದ್ವಿಚಕ್ರವಾಹನಗಳು, ಆಟೋಗಳು ಓಡಾಡುತ್ತವೆ. ಉತ್ತರ ಕರ್ನಾಟಕದ 17 ಜಿಲ್ಲೆಗಳಿಂದ ನಗರದೊಳಗೆ ಖಾಸಗಿ-ಸರ್ಕಾರಿ ಬಸ್ ಗಳು ಬಂದು ಹೋಗುತ್ತವೆ. ವಾಹನಗಳ ದಟ್ಟಣೆ ವಿಪರೀತವಾಗಿದೆ. ಇದ್ಯಾವುದನ್ನೂ ಪಗಿರಣಿಸದೆ ಅವೈಜ್ಞಾನಿಕವಾಗಿ ಕೆರೆಯ ಅಂಗಳದಲ್ಲಿ ಸಂತೆ ನಿರ್ಮಾಣ ಮಾಡುವುದರಿಂದ ಮತ್ತಷ್ಟು ವಾಹನ ದಟ್ಟಣೆ ಅಧಿಕವಾಗುತ್ತದೆ.

ವಿಶೇಷವೆಂದರೆ ಜಿಲ್ಲಾ ನ್ಯಾಯಾಧೀಶರು, ಜಿಲ್ಲಾಧಿಕಾರಿಗಳ ವಸತಿಗಳು ಶಿರಾಗೇಟ್ ನಲ್ಲಿವೆ. ಇವರೂ ಕೂಡ ಈ ವೃತ್ತದ ಮೂಲಕವೇ ಹೋಗಬೇಕು. ಅಂತರಸನಹಳ್ಳಿ, ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಹೋಗುವ ಕಾರ್ಮಿಕರು, ಶಿರಾ ಗೇಟ್‌ನಲ್ಲಿರುವ ಬಡಾವಣೆಗಳಿಗೆ ಹೋಗುವ ಸಾರ್ವಜನಿಕರು ಕೋಟೆ ಆಂಜನೇಯ ವೃತ್ತದಿಂದಲೇ ಹೋಗಬೇಕು. ಈ ರಸ್ತೆ ಬಿಟ್ಟು ಪರ್ಯಾಯ ಮಾರ್ಗವಿಲ್ಲ. ಈಗ ಉದ್ದೇಶಿಸಿರುವ ಹಾಗೆ ಗ್ಲಾಸ್ ಹೌಸ್ ಹಿಂಭಾಗದ ಮುಕ್ಕಾಲು ಎಕರೆ ಜಾಗದಲ್ಲಿ ತುಮಕೂರು ಸಂತೆ ಮಳಿಗೆಗಳನ್ನು ನಿರ್ಮಾಣ ಮಾಡಿದರೆ ಮತ್ತಷ್ಟು ವಾಹನ ದಟ್ಟಣೆಯಾಗುತ್ತದೆ. ಜನರಿಗೆ ತೊಂದರೆಯಾಗಲಿದೆ. ಇದನ್ನು ಜನಪ್ರತಿನಿಧಿಗಳು ಅರ್ಥಮಾಡಿಕೊಂಡಂತೆ ಕಾಣುತ್ತಿಲ್ಲ.

ಇದನ್ನೂ ಓದಿ: ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; ‘ರಸೋಕಿನ’ ತಂಡದಿಂದ ವಿಶಿಷ್ಟ ಪ್ರತಿರೋಧ

ರೈತ ಮುಖಂಡ ಬಿ.ಉಮೇಶ್ ನಾನುಗೌರಿ ಜೊತೆ ಮಾತನಾಡಿ “ಕೆರೆಯಲ್ಲಿ ಸಂತೆ ಮಾಡುವುದು. ವಾಣಿಜ್ಯ ಚಟುವಟಿಕೆಗಳನ್ನು ಕೈಗೊಳ್ಳುವುದು ಅವೈಜ್ಞಾನಿಕ ಮತ್ತು ಕಾನೂನುಬಾಹಿರ. ಕೆರೆಯಲ್ಲಿ ತುಮಕೂರು ಸಂತೆ ಮಾಡುವ ಬದಲು ನಗರದ ಎಂಟು ದಿಕ್ಕಿನಲ್ಲಿ ಕಿರುಮಾರುಕಟ್ಟೆಗಳನ್ನು ನಿರ್ಮಿಸಲಿದೆ. ಭೀಮಸಂದ್ರ, ಶೆಟ್ಟಿಹಳ್ಳಿ ಮುಖ್ಯರಸ್ತೆ, ಕ್ಯಾತ್ಸಂದ್ರ, ಕುಣಿಗಲ್ ರಸ್ತೆ, ವರ್ತುಲ(ರಿಂಗ್) ರಸ್ತೆಯಲ್ಲಿ ನಡೆಯುತ್ತಿರುವ ತರಕಾರಿ ಸಂತೆಗಳನ್ನು ಅಬಿವೃದ್ಧಿಪಡಿಸಲಿ. ಅದು ಬಿಟ್ಟು ಕೆರೆಯಲ್ಲಿ ಸಂತೆ ಮಾಡುವುದು ಬೇಡ. ಇದರಿಂದ ವಾಹನ ದಟ್ಟನೆ ಹೆಚ್ಚಾಗುತ್ತದೆ. ಪರಿಸರ ಮಾಲಿನ್ಯವಾಗುತ್ತದೆ. ಜನದಟ್ಟಣೆ ಆಗುತ್ತದೆ. ಜನರು ವಿನಾಕಾರಣ ತೊಂದರೆಗೆ ಸಿಲುಕುತ್ತಾರೆ. ಹಾಗಾಗಿ ಈ ಯೋಜನೆಯನ್ನು ಕೈಬಿಡಬೇಕು” ಎಂದು ಆಗ್ರಹಿಸಿದರು.

ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಹಿಂಭಾಗದಲ್ಲಿ 10 ಮಳಿಗೆಗಳನ್ನು ನಿರ್ಮಿಸಲಾಗಿದೆ. ಅಲ್ಲಿ ತರಕಾರಿ ಸಂತೆಗೆ ಅವಕಾಶ ಮಾಡಿಕೊಡುವ ಭರವಸೆ ನೀಡಿದ್ದರು. ಅದನ್ನು ಕೈಬಿಟ್ಟರು. ಈಗ ಆ ಮಳಿಗೆಗಳು ಖಾಲಿ ಬಿದ್ದಿವೆ. ಜೊತೆಗೆ ಅಂತರಸನ ಹಳ್ಳಿಯಲ್ಲಿರುವ ಎಪಿಎಂಸಿ ಮಾರುಕಟ್ಟೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಿದರೆ ಒಳ್ಳೆಯದಾಗುತ್ತದೆ. ಜನ-ವಾಹನ ದಟ್ಟಣೆಯೂ ಕಡಿಮೆಯಾಗುತ್ತದೆ. ಕೆರೆ ಸಂರಕ್ಷಣೆ ಮಾಡಬೇಕು. ಜನರ ವಾಯುವಿವಾಹಕ್ಕೆ ಅವಕಾಶ ಕೊಟ್ಟು ಜನರ ಆರೋಗ್ಯ ಕಾಪಾಡಲು ಮುಂದಾಗಬೇಕು. ಕೆರೆಯ ಸುತ್ತಲೂ ಗಿಡಮರಗಳನ್ನು ನೆಟ್ಟು ಶುದ್ದವಾದ ಗಾಳಿ ಸೇವನೆಗೆ ದಾರಿ ಮಾಡಲಿ. ಅದುಬಿಟ್ಟು ಗುತ್ತಿಗೆದಾರರು ಮತ್ತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಆದಾಯ ಹೆಚ್ಚಳಕ್ಕೆ ಮಾರ್ಗ ಮಾಡುತ್ತಿರುವುದು ಖಂಡನೀಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆರೆಯನ್ನು ಅಭಿವೃದ್ದಿ ಹೆಸರಿನಲ್ಲಿ ನುಂಗುತ್ತಾ ಬರಲಾಗುತ್ತಿದೆ. ಇದು ಕೆರೆಯ ಮೂಲಸ್ವರೂಪಕ್ಕೆ ಧಕ್ಕೆ ತರುವಂತಹ ಕೆಲಸ. ಇಂತಹ ಅವೈಜ್ಞಾನಿಕ ಮತ್ತು ಕಾನೂನುಬಾಹಿರ ಕೃತ್ಯವನ್ನು ಜನಪ್ರತಿನಿಧಿಗಳು ಕೈಬಿಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

ಹಿರಿಯ ಪರಿಸರ ಹೋರಾಟಗಾರ ಸಿ.ಯತಿರಾಜು ಮಾತನಾಡಿ, “ಸ್ಮಾರ್ಟ್ ಸಿಟಿಯ ಅಭಿವೃದ್ಧಿ ನೆಪದಲ್ಲಿ ಈಗಾಗಲೆ 13 ಎಕರೆ ಪ್ರದೇಶದಲ್ಲಿ ಪಾರ್ಕ್ ಮಾಡಲಾಗಿದೆ. ಗ್ಲಾಸ್ ಹೌಸ್ ನಿರ್ಮಿಸಿದೆ. ಇದು ಹೈಕೋರ್ಟ್ ಆದೇಶದ ಸ್ಪಷ್ಟ ಉಲ್ಲಂಘನೆ. ಜನಪ್ರತಿನಿಧಿಗಳು, ಅಧಿಕಾರಿಗಳು ಕೋರ್ಟ್ ಆದೇಶ ಉಲ್ಲಂಘಿಸುತ್ತಲೇ ನ್ಯಾಯಾಂಗ ನಿಂದನೆ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಮೌನವಾಗಿದ್ದಾರೆ. ಈ ಬಗ್ಗೆ ಲೋಕ ಅದಾಲತ್‌ಗೆ ಹೋಗುವ ಮೂಲಕ ಅಮಾನಿಕೆರೆ  ಮೂಲಸ್ವರೂಪಕ್ಕೆ ಧಕ್ಕೆಯಾಗದಂತೆ ಕೆರೆಯನ್ನು ಸಂರಕ್ಷಿಸಬೇಕಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಮದಲೂರು ಕೆರೆಗೆ ಹೇಮಾವತಿ ನೀರು; ಬಿಜೆಪಿಗೆ ತಿರುಗುಬಾಣವಾದ ಹಿಂದಿನ ಪತ್ರ!

ವಿಜ್ಞಾನ ಚಳವಳಿಯಲ್ಲಿ ತೊಡಗಿಸಿಕೊಂಡಿರುವ ಎಚ್.ಎಸ್.ನಿರಂಜನಾರಾಧ್ಯ ಮಾತನಾಡಿ “ಕೆರೆಯಲ್ಲಿ ಸಂತೆ ನಿರ್ಮಾಣ ಅಗತ್ಯವಿಲ್ಲ. ಕೆರೆಯಲ್ಲಿ ಹೆಚ್ಚು ನೀರು ಸಂಗ್ರಹವಾಗುವಂತೆ ಮಾಡಿ, ನಗರ ತಂಪಾಗಿರುವಂಥ ವಾತಾವರಣ ನಿರ್ಮಿಸಬೇಕು. ಅಮಾನಿಕೆರೆ ಸಂರಕ್ಷಣೆ ಹೋರಾಟ ಸಮಿತಿಯ ಉದ್ದೇಶವೇ ಅದು. ಇತ್ತೀಚೆಗೆ ಕೆರೆಯನ್ನು ಕಬಳಿಸುವ ಮೂಲಕ ಮೂಲ ಉದ್ದೇಶಕ್ಕೆ ಧಕ್ಕೆ ತರುವಂತಹ ಕೆಲಸ ನಡೆಯುತ್ತಿರುವುದನ್ನು ಪ್ರತಿಯೊಬ್ಬ ನಾಗರಿಕರೂ ವಿರೋಧಿಸಬೇಕು. ಹಿಂದಿನಿಂದಲೂ ಕೆರೆಯನ್ನು ಉಳಿಸಿಕೊಂಡು ಹೋಗುವ ಕುರಿತು ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ಜನರು ಇದನ್ನು ಮನಗಾಣಬೇಕು. ಕೆರೆ ಇದ್ದರೆ ನಗರದ ಸೌಂದರ್ಯ ಹೆಚ್ಚಿಸುತ್ತದೆ. ಅಭಿವೃದ್ಧಿ ಹೆಸರಲ್ಲಿ ಕೆರೆ ಒತ್ತುವರಿಯಾಗಬಾರದು”ಎಂದು ತಿಳಿಸಿದರು.

ತುಮಕೂರು ನಗರದ ಹೊರವಲಯದಲ್ಲಿ ಬರುವ ಶಿರಾ ರಸ್ತೆಯ ಕೋರಾ, ದೇವರಾಯನದುರ್ಗದ ಊರ್ಡಿಗೆರೆ, ಗುಬ್ಬಿ ರಸ್ತೆಯ ಮಲ್ಲಸಂದ್ರ, ಕುಣಿಗಲ್ ರಸ್ತೆ ನಾಗವಲ್ಲಿ, ಬುಗುಡನಹಳ್ಳಿ ರಸ್ತೆಯ ಬೆಳ್ಳಾವಿಯಲ್ಲಿ ಮಾರುಕಟ್ಟೆಗಳು, ಸಂತೆಗಳನ್ನು ನಿರ್ಮಿಸಬೇಕು. ಜನರೇ ರೈತರ ಬಳಿಗೆ ಹೋಗುವಂತಹ ವ್ಯವಸ್ಥೆ ಕಲ್ಪಿಸಬೇಕು. ಚಿತ್ರದುರ್ಗದ ತುರುವನೂರು ಪಟ್ಟಣದಲ್ಲಿ, ವ್ಯವಸ್ಥಿತ ಮಾರುಕಟ್ಟೆ ನಿರ್ಮಿಸಲಾಗಿದೆ ಅದನ್ನು ಮಾದರಿಯಾಗಿಟ್ಟುಕೊಂಡು ತುಮಕೂರಿನಲ್ಲಿ ಅಭಿವೃದ್ಧಿ ಕೆಲಸಗಳು ನಡೆಯಬೇಕು. ಪರಿಸರ ಉಳಿಯಬೇಕು ಎಂದು ಹೇಳುತ್ತಲೇ ಕೆರೆಗಳನ್ನು ಸಂಪೂರ್ಣವಾಗಿ ನಾಶ ಮಾಡುವುದು ಸರಿಯಲ್ಲ ಎಂಬ ಅಭಿಪ್ರಾಯ ಜನರಿಂದ ವ್ಯಕ್ತವಾಗಿದೆ.

 

ಇದನ್ನೂ ಓದಿ: ಬ್ಲೂಫಿಲ್ಮ್ ನೋಡುವುದು ಕೂಡಾ ಡ್ರಗ್ಸ್‌ನಂತೆಯೆ ವ್ಯಸನ: ಡಿಸಿಎಂ ಸವದಿ ಕಾಲೆಳೆದ ಸಾ.ರಾ. ಮಹೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...