Homeಕರ್ನಾಟಕತುಮಕೂರಿನ ಅಮಾನಿಕೆರೆ ನುಂಗುತ್ತಿದೆ ಅಭಿವೃದ್ಧಿಭೂತ; ಕೆರೆಯಲ್ಲಿ ಸಂತೆ ನಿರ್ಮಾಣಕ್ಕೆ ವ್ಯಾಪಕ ವಿರೋಧ

ತುಮಕೂರಿನ ಅಮಾನಿಕೆರೆ ನುಂಗುತ್ತಿದೆ ಅಭಿವೃದ್ಧಿಭೂತ; ಕೆರೆಯಲ್ಲಿ ಸಂತೆ ನಿರ್ಮಾಣಕ್ಕೆ ವ್ಯಾಪಕ ವಿರೋಧ

ಕೆರೆಯನ್ನು ಅಭಿವೃದ್ದಿ ಹೆಸರಿನಲ್ಲಿ ನುಂಗುತ್ತಾ ಬರಲಾಗುತ್ತಿದೆ. ಇದು ಕೆರೆಯ ಮೂಲಸ್ವರೂಪಕ್ಕೆ ಧಕ್ಕೆ ತರುವಂತಹ ಕೆಲಸ. ಇಂತಹ ಅವೈಜ್ಞಾನಿಕ ಮತ್ತು ಕಾನೂನುಬಾಹಿರ ಕೃತ್ಯವನ್ನು ಜನಪ್ರತಿನಿಧಿಗಳು ಕೈಬಿಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

- Advertisement -
- Advertisement -

ಅಭಿವೃದ್ಧಿಯೆಂಬ ಭೂತ ತುಮಕೂರು ಅಮಾನಿಕೆರೆಯನ್ನು ನುಂಗುತ್ತಲೇ ಹೋಗುತ್ತಿದೆ. 950 ಎಕರೆ ಇದ್ದ ಕೆರೆಯ ವಿಸ್ತೀರ್ಣ ಇಂದು 500 ಎಕರೆಗೆ ಕುಗ್ಗಿದೆ. ರಸ್ತೆ, ಗ್ಲಾಸ್ ಹೌಸ್ ನಿರ್ಮಾಣ, ಉದ್ಯಾನಕ್ಕೆಂದು ಕೆರೆಯನ್ನು ಮತ್ತಷ್ಟು ಒತ್ತುವರಿ ಮಾಡಲಾಗಿದೆ. ಕೆರೆಯ ಮೂಲಸ್ವರೂಪಕ್ಕೆ ಧಕ್ಕೆಯಾಗಬಾರದೆಂಬ ಸುಪ್ರೀಂ, ಹೈಕೋರ್ಟ್‌ಗಳ ಅದೇಶಗಳ ಉಲ್ಲಂಘನೆ ಎಗ್ಗಿಲ್ಲದೆ ಸಾಗಿದೆ. ಸರ್ಕಾರಗಳು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಇಂತಹ ಉಲ್ಲಂಘನೆಯಲ್ಲಿ ತೊಡಗಿ ನ್ಯಾಯಾಂಗ ನಿಂದನೆ ಆಗುತ್ತಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆಕ್ರೋಶ ನಗರದ ನಾಗರಿಕರಿಂದ ವ್ಯಕ್ತವಾಗುತ್ತಿದೆ.

ತುಮಕೂರು ಅಮಾನಿಕೆರೆಯನ್ನು ಸಣ್ಣ ನೀರಾವರಿ ಇಲಾಖೆಗೆ ವರ್ಗಾಯಿಸಲಾಗಿದೆ. ಸಣ್ಣ ನೀರಾವರಿ ಇಲಾಖೆ ಕೆರೆಯ ಜವಾಬ್ದಾರಿ ವಹಿಸಿಕೊಂಡ ಮೇಲೆ ಅಭಿವೃದ್ಧಿ ಹೆಸರಿನಲ್ಲಿ ಆಡಳಿತಯಂತ್ರ ಕೆರೆಯನ್ನು ಕಿರಿದು ಮಾಡುತ್ತಲೇ ಹೋಗುತ್ತಿದೆ. ಈಗ ಮತ್ತೆ ಮುಕ್ಕಾಲು ಎಕರೆಯಲ್ಲಿ “ತುಮಕೂರು ಸಂತೆ” ಮಾಡಲು ಹೊರಟಿರುವುದು ಜನರ ಕೋಪಕ್ಕೆ ಗುರಿಯಾಗಿದೆ. ಗ್ಲಾಸ್ ಹೌಸ್ ಪಕ್ಕದ ಮುಕ್ಕಾಲು ಎಕರೆಯಲ್ಲಿ 1.75 ಕೋಟಿ ವೆಚ್ಚದಲ್ಲಿ ತುಮಕೂರು ಸಂತೆ ನಿರ್ಮಾಣಕ್ಕೆ ಸಿದ್ದತೆ ನಡೆಯುತ್ತಿದೆ. ಕೆರೆಯ ಅಂಗಳದಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ನಡೆಸಬಾರದೆಂಬ ನಿಯಮಗಳನ್ನು ಗಾಳಿಗೆ ತೂರಿ ಕಾಮಗಾರಿ ಕೈಗೊಳ್ಳುವ ತಯಾರಿ ನಡೆಸಲಾಗುತ್ತಿದೆ.

ಭೂ ಸುಧಾರಣಾ
ಇದನ್ನೂ ಓದಿ: ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ಕೆರೆಯ ಅಭಿವೃದ್ದಿಗೆಂದು ಈವರೆಗೆ ಸುಮಾರು 159 ಕೋಟಿ ರೂ ಸುರಿಯಲಾಗಿದೆ. ಕೆರೆಯ ಹೂಳೆತ್ತುವ ನೆಪದಲ್ಲಿ ಹಣ ಫೋಲು ಮಾಡಲಾಯಿತು. ಈಗ 102 ಕೋಟಿ ರೂಪಾಯಿಗಳನ್ನು ಅಭಿವೃದ್ಧಿಗೆಂದು ಮೀಸಲು ಇಡಲಾಗಿದೆ. ಸೆಪ್ಟೆಂಬರ್ 15 ರಂದು ಕೆರೆಯ ಅಂಗಳಕ್ಕೆ ಭೇಟಿ ನೀಡಿರುವ ಶಾಸಕ ಜ್ಯೋತಿಗಣೇಶ್ ಈ ಮಾಹಿತಿ ಹೊರಗೆಡಹಿದ್ದು ಕೆರೆಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಉದ್ದೇಶಿಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಅಮಾನಿಕೆರೆ ಇರುವ ಪ್ರದೇಶದಲ್ಲಿ ಜಿಲ್ಲಾ ನ್ಯಾಯಾಲಯದ ಕಟ್ಟಡಗಳು ಇವೆ. ಜಿಲ್ಲಾಧಿಕಾರಿ ಕಚೇರಿ ಇದೆ.  ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ವೃತ್ತ ಹಲವು ಭಾಗಗಳಿಂದ ಸಂಪರ್ಕವನ್ನು ಕಲ್ಪಿಸುತ್ತದೆ. ಪಾವಗಡ, ಶಿರಾದ ಕಡೆ ಹೋಗುವ ವಾಹನಗಳು ಇದೇ ವೃತ್ತದ ಮೂಲಕ ಹಾದುಹೋಗುತ್ತವೆ. ನಿತ್ಯವೂ ನೂರಾರು-ಸಾವಿರಾರು ಬಸ್, ಲಾರಿ, ಕಾರು, ಟೆಂಪೋ, ದ್ವಿಚಕ್ರವಾಹನಗಳು, ಆಟೋಗಳು ಓಡಾಡುತ್ತವೆ. ಉತ್ತರ ಕರ್ನಾಟಕದ 17 ಜಿಲ್ಲೆಗಳಿಂದ ನಗರದೊಳಗೆ ಖಾಸಗಿ-ಸರ್ಕಾರಿ ಬಸ್ ಗಳು ಬಂದು ಹೋಗುತ್ತವೆ. ವಾಹನಗಳ ದಟ್ಟಣೆ ವಿಪರೀತವಾಗಿದೆ. ಇದ್ಯಾವುದನ್ನೂ ಪಗಿರಣಿಸದೆ ಅವೈಜ್ಞಾನಿಕವಾಗಿ ಕೆರೆಯ ಅಂಗಳದಲ್ಲಿ ಸಂತೆ ನಿರ್ಮಾಣ ಮಾಡುವುದರಿಂದ ಮತ್ತಷ್ಟು ವಾಹನ ದಟ್ಟಣೆ ಅಧಿಕವಾಗುತ್ತದೆ.

ವಿಶೇಷವೆಂದರೆ ಜಿಲ್ಲಾ ನ್ಯಾಯಾಧೀಶರು, ಜಿಲ್ಲಾಧಿಕಾರಿಗಳ ವಸತಿಗಳು ಶಿರಾಗೇಟ್ ನಲ್ಲಿವೆ. ಇವರೂ ಕೂಡ ಈ ವೃತ್ತದ ಮೂಲಕವೇ ಹೋಗಬೇಕು. ಅಂತರಸನಹಳ್ಳಿ, ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಹೋಗುವ ಕಾರ್ಮಿಕರು, ಶಿರಾ ಗೇಟ್‌ನಲ್ಲಿರುವ ಬಡಾವಣೆಗಳಿಗೆ ಹೋಗುವ ಸಾರ್ವಜನಿಕರು ಕೋಟೆ ಆಂಜನೇಯ ವೃತ್ತದಿಂದಲೇ ಹೋಗಬೇಕು. ಈ ರಸ್ತೆ ಬಿಟ್ಟು ಪರ್ಯಾಯ ಮಾರ್ಗವಿಲ್ಲ. ಈಗ ಉದ್ದೇಶಿಸಿರುವ ಹಾಗೆ ಗ್ಲಾಸ್ ಹೌಸ್ ಹಿಂಭಾಗದ ಮುಕ್ಕಾಲು ಎಕರೆ ಜಾಗದಲ್ಲಿ ತುಮಕೂರು ಸಂತೆ ಮಳಿಗೆಗಳನ್ನು ನಿರ್ಮಾಣ ಮಾಡಿದರೆ ಮತ್ತಷ್ಟು ವಾಹನ ದಟ್ಟಣೆಯಾಗುತ್ತದೆ. ಜನರಿಗೆ ತೊಂದರೆಯಾಗಲಿದೆ. ಇದನ್ನು ಜನಪ್ರತಿನಿಧಿಗಳು ಅರ್ಥಮಾಡಿಕೊಂಡಂತೆ ಕಾಣುತ್ತಿಲ್ಲ.

ಇದನ್ನೂ ಓದಿ: ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; ‘ರಸೋಕಿನ’ ತಂಡದಿಂದ ವಿಶಿಷ್ಟ ಪ್ರತಿರೋಧ

ರೈತ ಮುಖಂಡ ಬಿ.ಉಮೇಶ್ ನಾನುಗೌರಿ ಜೊತೆ ಮಾತನಾಡಿ “ಕೆರೆಯಲ್ಲಿ ಸಂತೆ ಮಾಡುವುದು. ವಾಣಿಜ್ಯ ಚಟುವಟಿಕೆಗಳನ್ನು ಕೈಗೊಳ್ಳುವುದು ಅವೈಜ್ಞಾನಿಕ ಮತ್ತು ಕಾನೂನುಬಾಹಿರ. ಕೆರೆಯಲ್ಲಿ ತುಮಕೂರು ಸಂತೆ ಮಾಡುವ ಬದಲು ನಗರದ ಎಂಟು ದಿಕ್ಕಿನಲ್ಲಿ ಕಿರುಮಾರುಕಟ್ಟೆಗಳನ್ನು ನಿರ್ಮಿಸಲಿದೆ. ಭೀಮಸಂದ್ರ, ಶೆಟ್ಟಿಹಳ್ಳಿ ಮುಖ್ಯರಸ್ತೆ, ಕ್ಯಾತ್ಸಂದ್ರ, ಕುಣಿಗಲ್ ರಸ್ತೆ, ವರ್ತುಲ(ರಿಂಗ್) ರಸ್ತೆಯಲ್ಲಿ ನಡೆಯುತ್ತಿರುವ ತರಕಾರಿ ಸಂತೆಗಳನ್ನು ಅಬಿವೃದ್ಧಿಪಡಿಸಲಿ. ಅದು ಬಿಟ್ಟು ಕೆರೆಯಲ್ಲಿ ಸಂತೆ ಮಾಡುವುದು ಬೇಡ. ಇದರಿಂದ ವಾಹನ ದಟ್ಟನೆ ಹೆಚ್ಚಾಗುತ್ತದೆ. ಪರಿಸರ ಮಾಲಿನ್ಯವಾಗುತ್ತದೆ. ಜನದಟ್ಟಣೆ ಆಗುತ್ತದೆ. ಜನರು ವಿನಾಕಾರಣ ತೊಂದರೆಗೆ ಸಿಲುಕುತ್ತಾರೆ. ಹಾಗಾಗಿ ಈ ಯೋಜನೆಯನ್ನು ಕೈಬಿಡಬೇಕು” ಎಂದು ಆಗ್ರಹಿಸಿದರು.

ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಹಿಂಭಾಗದಲ್ಲಿ 10 ಮಳಿಗೆಗಳನ್ನು ನಿರ್ಮಿಸಲಾಗಿದೆ. ಅಲ್ಲಿ ತರಕಾರಿ ಸಂತೆಗೆ ಅವಕಾಶ ಮಾಡಿಕೊಡುವ ಭರವಸೆ ನೀಡಿದ್ದರು. ಅದನ್ನು ಕೈಬಿಟ್ಟರು. ಈಗ ಆ ಮಳಿಗೆಗಳು ಖಾಲಿ ಬಿದ್ದಿವೆ. ಜೊತೆಗೆ ಅಂತರಸನ ಹಳ್ಳಿಯಲ್ಲಿರುವ ಎಪಿಎಂಸಿ ಮಾರುಕಟ್ಟೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಿದರೆ ಒಳ್ಳೆಯದಾಗುತ್ತದೆ. ಜನ-ವಾಹನ ದಟ್ಟಣೆಯೂ ಕಡಿಮೆಯಾಗುತ್ತದೆ. ಕೆರೆ ಸಂರಕ್ಷಣೆ ಮಾಡಬೇಕು. ಜನರ ವಾಯುವಿವಾಹಕ್ಕೆ ಅವಕಾಶ ಕೊಟ್ಟು ಜನರ ಆರೋಗ್ಯ ಕಾಪಾಡಲು ಮುಂದಾಗಬೇಕು. ಕೆರೆಯ ಸುತ್ತಲೂ ಗಿಡಮರಗಳನ್ನು ನೆಟ್ಟು ಶುದ್ದವಾದ ಗಾಳಿ ಸೇವನೆಗೆ ದಾರಿ ಮಾಡಲಿ. ಅದುಬಿಟ್ಟು ಗುತ್ತಿಗೆದಾರರು ಮತ್ತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಆದಾಯ ಹೆಚ್ಚಳಕ್ಕೆ ಮಾರ್ಗ ಮಾಡುತ್ತಿರುವುದು ಖಂಡನೀಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆರೆಯನ್ನು ಅಭಿವೃದ್ದಿ ಹೆಸರಿನಲ್ಲಿ ನುಂಗುತ್ತಾ ಬರಲಾಗುತ್ತಿದೆ. ಇದು ಕೆರೆಯ ಮೂಲಸ್ವರೂಪಕ್ಕೆ ಧಕ್ಕೆ ತರುವಂತಹ ಕೆಲಸ. ಇಂತಹ ಅವೈಜ್ಞಾನಿಕ ಮತ್ತು ಕಾನೂನುಬಾಹಿರ ಕೃತ್ಯವನ್ನು ಜನಪ್ರತಿನಿಧಿಗಳು ಕೈಬಿಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

ಹಿರಿಯ ಪರಿಸರ ಹೋರಾಟಗಾರ ಸಿ.ಯತಿರಾಜು ಮಾತನಾಡಿ, “ಸ್ಮಾರ್ಟ್ ಸಿಟಿಯ ಅಭಿವೃದ್ಧಿ ನೆಪದಲ್ಲಿ ಈಗಾಗಲೆ 13 ಎಕರೆ ಪ್ರದೇಶದಲ್ಲಿ ಪಾರ್ಕ್ ಮಾಡಲಾಗಿದೆ. ಗ್ಲಾಸ್ ಹೌಸ್ ನಿರ್ಮಿಸಿದೆ. ಇದು ಹೈಕೋರ್ಟ್ ಆದೇಶದ ಸ್ಪಷ್ಟ ಉಲ್ಲಂಘನೆ. ಜನಪ್ರತಿನಿಧಿಗಳು, ಅಧಿಕಾರಿಗಳು ಕೋರ್ಟ್ ಆದೇಶ ಉಲ್ಲಂಘಿಸುತ್ತಲೇ ನ್ಯಾಯಾಂಗ ನಿಂದನೆ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಮೌನವಾಗಿದ್ದಾರೆ. ಈ ಬಗ್ಗೆ ಲೋಕ ಅದಾಲತ್‌ಗೆ ಹೋಗುವ ಮೂಲಕ ಅಮಾನಿಕೆರೆ  ಮೂಲಸ್ವರೂಪಕ್ಕೆ ಧಕ್ಕೆಯಾಗದಂತೆ ಕೆರೆಯನ್ನು ಸಂರಕ್ಷಿಸಬೇಕಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಮದಲೂರು ಕೆರೆಗೆ ಹೇಮಾವತಿ ನೀರು; ಬಿಜೆಪಿಗೆ ತಿರುಗುಬಾಣವಾದ ಹಿಂದಿನ ಪತ್ರ!

ವಿಜ್ಞಾನ ಚಳವಳಿಯಲ್ಲಿ ತೊಡಗಿಸಿಕೊಂಡಿರುವ ಎಚ್.ಎಸ್.ನಿರಂಜನಾರಾಧ್ಯ ಮಾತನಾಡಿ “ಕೆರೆಯಲ್ಲಿ ಸಂತೆ ನಿರ್ಮಾಣ ಅಗತ್ಯವಿಲ್ಲ. ಕೆರೆಯಲ್ಲಿ ಹೆಚ್ಚು ನೀರು ಸಂಗ್ರಹವಾಗುವಂತೆ ಮಾಡಿ, ನಗರ ತಂಪಾಗಿರುವಂಥ ವಾತಾವರಣ ನಿರ್ಮಿಸಬೇಕು. ಅಮಾನಿಕೆರೆ ಸಂರಕ್ಷಣೆ ಹೋರಾಟ ಸಮಿತಿಯ ಉದ್ದೇಶವೇ ಅದು. ಇತ್ತೀಚೆಗೆ ಕೆರೆಯನ್ನು ಕಬಳಿಸುವ ಮೂಲಕ ಮೂಲ ಉದ್ದೇಶಕ್ಕೆ ಧಕ್ಕೆ ತರುವಂತಹ ಕೆಲಸ ನಡೆಯುತ್ತಿರುವುದನ್ನು ಪ್ರತಿಯೊಬ್ಬ ನಾಗರಿಕರೂ ವಿರೋಧಿಸಬೇಕು. ಹಿಂದಿನಿಂದಲೂ ಕೆರೆಯನ್ನು ಉಳಿಸಿಕೊಂಡು ಹೋಗುವ ಕುರಿತು ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ಜನರು ಇದನ್ನು ಮನಗಾಣಬೇಕು. ಕೆರೆ ಇದ್ದರೆ ನಗರದ ಸೌಂದರ್ಯ ಹೆಚ್ಚಿಸುತ್ತದೆ. ಅಭಿವೃದ್ಧಿ ಹೆಸರಲ್ಲಿ ಕೆರೆ ಒತ್ತುವರಿಯಾಗಬಾರದು”ಎಂದು ತಿಳಿಸಿದರು.

ತುಮಕೂರು ನಗರದ ಹೊರವಲಯದಲ್ಲಿ ಬರುವ ಶಿರಾ ರಸ್ತೆಯ ಕೋರಾ, ದೇವರಾಯನದುರ್ಗದ ಊರ್ಡಿಗೆರೆ, ಗುಬ್ಬಿ ರಸ್ತೆಯ ಮಲ್ಲಸಂದ್ರ, ಕುಣಿಗಲ್ ರಸ್ತೆ ನಾಗವಲ್ಲಿ, ಬುಗುಡನಹಳ್ಳಿ ರಸ್ತೆಯ ಬೆಳ್ಳಾವಿಯಲ್ಲಿ ಮಾರುಕಟ್ಟೆಗಳು, ಸಂತೆಗಳನ್ನು ನಿರ್ಮಿಸಬೇಕು. ಜನರೇ ರೈತರ ಬಳಿಗೆ ಹೋಗುವಂತಹ ವ್ಯವಸ್ಥೆ ಕಲ್ಪಿಸಬೇಕು. ಚಿತ್ರದುರ್ಗದ ತುರುವನೂರು ಪಟ್ಟಣದಲ್ಲಿ, ವ್ಯವಸ್ಥಿತ ಮಾರುಕಟ್ಟೆ ನಿರ್ಮಿಸಲಾಗಿದೆ ಅದನ್ನು ಮಾದರಿಯಾಗಿಟ್ಟುಕೊಂಡು ತುಮಕೂರಿನಲ್ಲಿ ಅಭಿವೃದ್ಧಿ ಕೆಲಸಗಳು ನಡೆಯಬೇಕು. ಪರಿಸರ ಉಳಿಯಬೇಕು ಎಂದು ಹೇಳುತ್ತಲೇ ಕೆರೆಗಳನ್ನು ಸಂಪೂರ್ಣವಾಗಿ ನಾಶ ಮಾಡುವುದು ಸರಿಯಲ್ಲ ಎಂಬ ಅಭಿಪ್ರಾಯ ಜನರಿಂದ ವ್ಯಕ್ತವಾಗಿದೆ.

 

ಇದನ್ನೂ ಓದಿ: ಬ್ಲೂಫಿಲ್ಮ್ ನೋಡುವುದು ಕೂಡಾ ಡ್ರಗ್ಸ್‌ನಂತೆಯೆ ವ್ಯಸನ: ಡಿಸಿಎಂ ಸವದಿ ಕಾಲೆಳೆದ ಸಾ.ರಾ. ಮಹೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...