Homeಮುಖಪುಟಅಮರಾವತಿ ಆಂಧ್ರಪ್ರದೇಶದ ಏಕೈಕ ರಾಜಧಾನಿಯಾಗಲಿದೆ: ಚಂದ್ರಬಾಬು ನಾಯ್ಡು

ಅಮರಾವತಿ ಆಂಧ್ರಪ್ರದೇಶದ ಏಕೈಕ ರಾಜಧಾನಿಯಾಗಲಿದೆ: ಚಂದ್ರಬಾಬು ನಾಯ್ಡು

- Advertisement -
- Advertisement -

ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಒಂದು ದಿನದ ಮೊದಲು, ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ರಾಜ್ಯದ ಆಡಳಿತಾತ್ಮಕ ಭವಿಷ್ಯದ ಬಗ್ಗೆ ಮಹತ್ವದ ಘೋಷಣೆ ಮಾಡಿದರು.

ಈ ಕುರಿತು ಮಂಗಳವಾರ ಮಾತನಾಡಿದ ನಾಯ್ಡು, “ಅಮರಾವತಿಯನ್ನು ಆಂಧ್ರಪ್ರದೇಶದ ಏಕೈಕ ರಾಜಧಾನಿಯಾಗಿ ಸ್ಥಾಪಿಸಲಾಗುವುದು” ಎಂದರು.

ಟಿಡಿಪಿ, ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಜನಸೇನಾ ಪಕ್ಷದ ಶಾಸಕರನ್ನು ಒಳಗೊಂಡ ಜಂಟಿ ಸಭೆಯಲ್ಲಿ ಈ ಘೋಷಣೆ ಮಾಡಲಾಗಿದೆ. ಈ ಸಭೆಯಲ್ಲಿ ನಾಯ್ಡು ಅವರು ಆಂಧ್ರಪ್ರದೇಶ ವಿಧಾನಸಭೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದರು. “ನಮ್ಮ ಸರ್ಕಾರದಲ್ಲಿ ಮೂರು ರಾಜಧಾನಿಗಳ ನೆಪದಲ್ಲಿ ಆಟ ನಡೆಯುವುದಿಲ್ಲ. ನಮ್ಮ ರಾಜಧಾನಿ ಅಮರಾವತಿ; ಅಮರಾವತಿಯೇ ರಾಜಧಾನಿ” ಎಂದು ನಾಯ್ಡು ಹೇಳಿದರು.

2014 ಮತ್ತು 2019ರ ನಡುವೆ ವಿಭಜಿತ ಆಂಧ್ರಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ, ಅವರು ರಾಜಧಾನಿಯಾಗಿ ಅಮರಾವತಿಯ ಕಲ್ಪನೆಯನ್ನು ಕಂಡರು. ಆದಾಗ್ಯೂ, 2019 ರಲ್ಲಿ ಟಿಡಿಪಿ ಅಧಿಕಾರವನ್ನು ಕಳೆದುಕೊಂಡಾಗ ಮತ್ತು ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿಪಿ ಭರ್ಜರಿ ಜಯ ಸಾಧಿಸಿದಾಗ ನಾಯ್ಡು ಅವರ ಕನಸಿನ ಕೂಸು ಹಿನ್ನಡೆ ಅನುಭವಿಸಿತು. ರೆಡ್ಡಿ ಅವರು ಅಮರಾವತಿ ರಾಜಧಾನಿ ನಗರ ಯೋಜನೆಗಳ ಮೇಲೆ ತಣ್ಣೀರು ಎರಚಿದರು ಮತ್ತು ಮೂರು ರಾಜಧಾನಿಗಳ ಹೊಸ ಸಿದ್ಧಾಂತವನ್ನು ಪ್ರತಿಪಾದಿಸಿದರು, ನಾಯ್ಡು ಈಗ ಒಂದೇ ರಾಜಧಾನಿಯನ್ನು ಹೊಂದುವ ನಿರ್ಧಾರದೊಂದಿಗೆ ಬದಲಾಯಿಸಿದ್ದಾರೆ.

ಟಿಡಿಪಿ, ಬಿಜೆಪಿ ಮತ್ತು ಜನಸೇನಾ ಎನ್‌ಡಿಎ ಮೈತ್ರಿಕೂಟ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಏಕಕಾಲಿಕ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ 164 ವಿಧಾನಸಭೆ ಮತ್ತು 21 ಲೋಕಸಭೆ ಸ್ಥಾನಗಳ ಬಹುಮತದೊಂದಿಗೆ ಭರ್ಜರಿ ಜಯ ಸಾಧಿಸಿದೆ. ವಿಜಯೋತ್ಸವ ಅಮರಾವತಿ ರಾಜಧಾನಿ ಯೋಜನೆಗೆ ಹೊಸ ಜೀವ ತುಂಬಿದೆ.

ಹೈದರಾಬಾದ್ ಇನ್ನು ಮುಂದೆ ತೆಲಂಗಾಣ ಮತ್ತು ಆಂಧ್ರಪ್ರದೇಶದ ಸಾಮಾನ್ಯ ರಾಜಧಾನಿಯಾಗಿಲ್ಲ.
ಗಮನಾರ್ಹವಾಗಿ, ಹೈದರಾಬಾದ್ ಆಂಧ್ರ ಪ್ರದೇಶ ಮರುಸಂಘಟನೆ ಕಾಯಿದೆ, 2014 ರ ಪ್ರಕಾರ ಜೂನ್ 2 ರಿಂದ ತೆಲಂಗಾಣ ಮತ್ತು ಆಂಧ್ರಪ್ರದೇಶದ ಸಾಮಾನ್ಯ ರಾಜಧಾನಿಯಾಗಿ ಸ್ಥಗಿತಗೊಂಡಿತು. ಅವಿಭಜಿತ ಆಂಧ್ರಪ್ರದೇಶದ ವಿಭಜನೆಯನ್ನು ಕೈಗೊಂಡಾಗ ಹೈದರಾಬಾದ್ ಅನ್ನು 10 ವರ್ಷಗಳ ಕಾಲ ಎರಡು ರಾಜ್ಯಗಳ ರಾಜಧಾನಿಯಾಗಿ ಮಾಡಲಾಯಿತು. ತೆಲಂಗಾಣ ಜೂನ್ 2, 2014 ರಂದು ಅಸ್ತಿತ್ವಕ್ಕೆ ಬಂದಿತು.

“ನಿಗದಿತ ದಿನದಂದು (ಜೂನ್ 2) ಅಸ್ತಿತ್ವದಲ್ಲಿರುವ ಆಂಧ್ರಪ್ರದೇಶದ ಹೈದರಾಬಾದ್, ತೆಲಂಗಾಣ ರಾಜ್ಯ ಮತ್ತು ಆಂಧ್ರಪ್ರದೇಶ ರಾಜ್ಯದ ಸಾಮಾನ್ಯ ರಾಜಧಾನಿಯಾಗಿರುತ್ತದೆ, ಅಂತಹ ಅವಧಿಗೆ ಹತ್ತು ವರ್ಷಗಳನ್ನು ಮೀರಬಾರದು” ಎಂದು ಎಪಿ ಮರುಸಂಘಟನೆ ಕಾಯಿದೆ ಹೇಳುತ್ತದೆ.

ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ:

ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಜೂನ್ 12 ರಂದು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ನಾಲ್ಕನೇ ಭಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೆಸರಪಲ್ಲಿ ಐಟಿ ಪಾರ್ಕ್‌ನಲ್ಲಿ ಬೆಳಗ್ಗೆ 11.27ಕ್ಕೆ ನಾಯ್ಡು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಯ್ಡು ಅವರೊಂದಿಗೆ ಇನ್ನೂ ಕೆಲವು ನಾಯಕರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಅವರಲ್ಲಿ ಟಿಡಿಪಿ ಪ್ರಧಾನ ಕಾರ್ಯದರ್ಶಿ ಮತ್ತು ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಮತ್ತು ಜನಸೇನಾ ನಾಯಕ ಎನ್ ಮನೋಹರ್ ಸೇರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಹಲವು ಗಣ್ಯರು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಇದನ್ನೂ ಓದಿ; ಪ್ರಧಾನಿ ಮೋದಿಗೆ ಭಾರತದ ಜನತೆ ವಿನಯವಂತಿಕೆಯ ಪಾಠ ಕಲಿಸಿದ್ದಾರೆ: ಗೌರವ್ ಗೊಗೊಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...