Homeಕರ್ನಾಟಕಹವಾಮಾನ ವೈಪರೀತ್ಯದಿಂದ ಅಮರನಾಥ ಯಾತ್ರಿಕರಿಗೆ ಸಂಕಷ್ಟ; ಕನ್ನಡಿಗರ ರಕ್ಷಣೆಗೆ ಮುಂದಾದ ರಾಜ್ಯ ಸರ್ಕಾರ

ಹವಾಮಾನ ವೈಪರೀತ್ಯದಿಂದ ಅಮರನಾಥ ಯಾತ್ರಿಕರಿಗೆ ಸಂಕಷ್ಟ; ಕನ್ನಡಿಗರ ರಕ್ಷಣೆಗೆ ಮುಂದಾದ ರಾಜ್ಯ ಸರ್ಕಾರ

- Advertisement -
- Advertisement -

ಹವಾಮಾನ ವೈಪರೀತ್ಯದಿಂದಾಗಿ ಅಮರನಾಥ ಯಾತ್ರೆಗೆ ತೆರಳಿದ್ದ ಕಲಬುರಗಿಯ 27 ಜನರು ಮತ್ತು ಗದಗ ಜಿಲ್ಲೆಯ 23 ಯಾತ್ರಿಕರು ಮಧ್ಯದಲ್ಲೇ ಉಳಿದುಕೊಂಡಿದ್ದು, ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರುವಂತ ಕುಟುಂಬ ವರ್ಗದವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

”ಪವಿತ್ರ ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಾಗಿದೆ. ಗದಗ್ ನಿಂದ ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 km ದೂರದಲ್ಲಿರುವ ಪಂಚತಾರ್ನಿ ಟೆಂಟ್ ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಲಭ್ಯವಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ರಕ್ಷಣಾ ಕಾರ್ಯ ಕೈಗೊಂಡು, ಎಲ್ಲರನ್ನೂ ಸುರಕ್ಷಿತವಾಗಿ ವಾಪಸು ಕರೆತರುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ” ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೂರು ದಿನಗಳ ಹಿಂದೆ ಕಲಬುರಗಿಯಿಂದ 22 ಜನರ ತಂಡವು ರಾಮತೀರ್ಥ ಸೇವಾ ಸಮಿತಿಯ ಮೂಲಕ ಅಮರನಾಥ ಯಾತ್ರೆಗೆ ತೆರಳಿದ್ದರು. ಎಲ್ಲರೂ ಕಲಬುರಗಿ ನಗರದವರಾಗಿದ್ದು, ಸಧ್ಯ ಹವಾಮಾನ ವೈಪರೀತ್ಯದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಮ್ ಸಮೀಪದ ಬಾಲ್‌ ಹಾಲ್ ಶಿಬಿರದಲ್ಲಿ ಉಳಿದುಕೊಂಡಿದ್ದಾರೆ. ಉಳಿದ ಐದು ಜನರ ತಂಡವು ಸೇನಾ ಶಿಬಿರದಲ್ಲಿ ಆಶ್ರಯ ಪಡೆದಿದ್ದಾರೆ ಜುಲೈ 14ರಂದು ವಾಪಸಾಗಲಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ರಾಜಪ್ಪ ತಿಳಿಸಿದ್ದಾರೆ.

ಗದಗದಿಂದ ಹೋಗಿರುವ ವಿನೋದ್ ಸಿ.ಪಟೇಲ್, ನೀತಾ ವಿ.ಪಟೇಲ್, ಚಂದೂಲಾಲ್ ಪಟೇಲ್, ಭಾವನಾ ಪಟೇಲ್‌, ತೇಜಲ್, ಶಾರದಾ, ಭೂಮಿಕಾ, ರಿತೇಶ್, ಪರ್ವಿನ್ ವಿ.ನಿರ್ಮಲ್, ಟೀನಾ ಪಿ. ನಿರ್ಮಲ್, ರಾಜೇಶ್ ಬಿ., ಪಾಲಕ್ ಆಲ್., ವೈಶಾಲಿ ಬಿ., ಯಶ್ ಆರ್., ಪ್ರವೀಣ್ ಸಿ., ಪಿಂಕಿ ಪಿ.. ಪ್ರಣೀತಾ ಪಿ., ವಿನಯ್‌ ಪಿ., ಜಾಹ್ನವಿ ವಿ., ಭವೇಶ್ ಬಿ., ತೃಪ್ತಿ … ದಿವಿತ್ ಬಿ., ಮಾಳವಿಕಾ ಆರ್. ಸಂಘಾನಿ ಅಮರನಾಥದಲ್ಲಿ ಸಿಲುಕಿಕೊಂಡವರು.

ವಿನೋದ್ ಪಟೇಲ್ ಎನ್ನುವವರು ಪತ್ರಿಕೆಯೊಂದರ ಜೊತೆ ಮಾತನಾಡಿದ್ದು, ”ಗುಜರಾತಿ ಸಮಾಜಕ್ಕೆ ಸೇರಿದ ನಾವೆಲ್ಲ ಒಟ್ಟಾಗಿ ಗದಗ ನಗರದಿಂದ ಜುಲೈ 1ರಂದು ಅಮರನಾಥ ಯಾತ್ರೆಗೆ ಬಂದಿದ್ದವು. ಹವಾಮಾನ ವೈಪರೀತ್ಯದ ಕಾರಣದಿಂದಾಗಿ ಮಧ್ಯದಲ್ಲೇ ಸಿಕ್ಕಿಹಾಕಿಕೊಂಡು, ಶಿಬಿರದಲ್ಲಿ ಕುಳಿತಿದ್ದೇವೆ. ಎಲ್ಲರೂ ಸುರಕ್ಷಿತವಾಗಿದ್ದೇವೆ. ಕೆಟ್ಟ ಹವಾಮಾನ ಇನ್ನೂ ಎರಡು ದಿನಗಳ ಕಾಲ ಹೀಗೆ ಇರಲಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಮಾತನಾಡಿ, ”ಆ ದಾರಿಯಲ್ಲಿ ಒಟ್ಟು 15 ಸಾವಿರ ಮಂದಿ ಯಾತ್ರಿಕರು ಇದ್ದಾರೆ. ಕನ್ನಡಿಗರು ಇರುವ ಕ್ಯಾಂಪ್‌ನಲ್ಲಿ 880 ಮಂದಿ ಇದ್ದಾರೆ. ಹವಾಮಾನ ಸರಿಯಿಲ್ಲ ಎಂಬ ಕಾರಣಕ್ಕೆ ಯಾತ್ರಿಕರನ್ನು ಮುಂದಕ್ಕೆ ಬಿಡುತ್ತಿಲ್ಲವಷ್ಟೇ, ಯಾತ್ರಿಕರೆಲ್ಲರೂ ಸುರಕ್ಷಿತವಾಗಿದ್ದಾರೆ. ಅಲ್ಲಿನ ಅಧಿಕಾರಿಗಳು ನಮ್ಮ ಜತೆಗೆ ಸಂಪರ್ಕದಲ್ಲಿದ್ದು, ಯಾತ್ರಿಕರ ಕಾಳಜಿಗೆ ಕ್ರಮವಹಿಸಿದ್ದಾರೆ. ಎರಡು ದಿನಗಳ ಬಳಿಕ ಯಾತ್ರಿಕರು ಸುರಕ್ಷಿತವಾಗಿ ಹಿಂತಿರುಗುವ ಭರವಸೆ ಇದೆ” ಎಂದು ತಿಳಿಸಿದ್ದಾರೆ.

‘ಟೆಂಟ್‌ನಲ್ಲಿ ಸಿಲುಕಿರುವ ಯಾತ್ರಿಕರಿಗೆ ಬೇಕಿರುವ ಅಗತ್ಯ ಸೌಕರ್ಯಗಳನ್ನು ರಾಜ್ಯ ಸರ್ಕಾರದ ವತಿಯಿಂದ ಒದಗಿಸಲಾಗುತ್ತಿದೆ’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ತಿಳಿಸಿದ್ದಾರೆ.

ಭಕ್ತರ ನೆರವಿಗೆ ಸಹಾಯವಾಣಿ ಆರಂಭ

ಸಂಕಷ್ಟದಲ್ಲಿರುವವರ ನೆರವಿಗಾಗಿ ಸಹಾಯವಾಣಿಗಳನ್ನು ಆರಂಭಿಸಲಾಗಿದೆ. ಅಮರನಾಥ ದೇವಸ್ಥಾನ ಮಂಡಳಿಯ ಸಹಾಯವಾಣಿ-14464, 18001807198 (ಟ್ರೋಲ್ ಫ್ರೀ) ಅಥವಾ ಪಂಚತಾರ್ನಿ ಬೇಸ್ ಕ್ಯಾಂಪ್‌ನ ಸಹಾಯವಾಣಿ- 9906037370, 9414121477, 9419123373, ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಸಹಾಯವಾಣಿ- 1070, 080-22253707, 080-22340676 ಗೆ ಸಂಪರ್ಕಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...