Homeಕರ್ನಾಟಕಹವಾಮಾನ ವೈಪರೀತ್ಯದಿಂದ ಅಮರನಾಥ ಯಾತ್ರಿಕರಿಗೆ ಸಂಕಷ್ಟ; ಕನ್ನಡಿಗರ ರಕ್ಷಣೆಗೆ ಮುಂದಾದ ರಾಜ್ಯ ಸರ್ಕಾರ

ಹವಾಮಾನ ವೈಪರೀತ್ಯದಿಂದ ಅಮರನಾಥ ಯಾತ್ರಿಕರಿಗೆ ಸಂಕಷ್ಟ; ಕನ್ನಡಿಗರ ರಕ್ಷಣೆಗೆ ಮುಂದಾದ ರಾಜ್ಯ ಸರ್ಕಾರ

- Advertisement -
- Advertisement -

ಹವಾಮಾನ ವೈಪರೀತ್ಯದಿಂದಾಗಿ ಅಮರನಾಥ ಯಾತ್ರೆಗೆ ತೆರಳಿದ್ದ ಕಲಬುರಗಿಯ 27 ಜನರು ಮತ್ತು ಗದಗ ಜಿಲ್ಲೆಯ 23 ಯಾತ್ರಿಕರು ಮಧ್ಯದಲ್ಲೇ ಉಳಿದುಕೊಂಡಿದ್ದು, ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರುವಂತ ಕುಟುಂಬ ವರ್ಗದವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

”ಪವಿತ್ರ ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಾಗಿದೆ. ಗದಗ್ ನಿಂದ ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 km ದೂರದಲ್ಲಿರುವ ಪಂಚತಾರ್ನಿ ಟೆಂಟ್ ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಲಭ್ಯವಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ರಕ್ಷಣಾ ಕಾರ್ಯ ಕೈಗೊಂಡು, ಎಲ್ಲರನ್ನೂ ಸುರಕ್ಷಿತವಾಗಿ ವಾಪಸು ಕರೆತರುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ” ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೂರು ದಿನಗಳ ಹಿಂದೆ ಕಲಬುರಗಿಯಿಂದ 22 ಜನರ ತಂಡವು ರಾಮತೀರ್ಥ ಸೇವಾ ಸಮಿತಿಯ ಮೂಲಕ ಅಮರನಾಥ ಯಾತ್ರೆಗೆ ತೆರಳಿದ್ದರು. ಎಲ್ಲರೂ ಕಲಬುರಗಿ ನಗರದವರಾಗಿದ್ದು, ಸಧ್ಯ ಹವಾಮಾನ ವೈಪರೀತ್ಯದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಮ್ ಸಮೀಪದ ಬಾಲ್‌ ಹಾಲ್ ಶಿಬಿರದಲ್ಲಿ ಉಳಿದುಕೊಂಡಿದ್ದಾರೆ. ಉಳಿದ ಐದು ಜನರ ತಂಡವು ಸೇನಾ ಶಿಬಿರದಲ್ಲಿ ಆಶ್ರಯ ಪಡೆದಿದ್ದಾರೆ ಜುಲೈ 14ರಂದು ವಾಪಸಾಗಲಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ರಾಜಪ್ಪ ತಿಳಿಸಿದ್ದಾರೆ.

ಗದಗದಿಂದ ಹೋಗಿರುವ ವಿನೋದ್ ಸಿ.ಪಟೇಲ್, ನೀತಾ ವಿ.ಪಟೇಲ್, ಚಂದೂಲಾಲ್ ಪಟೇಲ್, ಭಾವನಾ ಪಟೇಲ್‌, ತೇಜಲ್, ಶಾರದಾ, ಭೂಮಿಕಾ, ರಿತೇಶ್, ಪರ್ವಿನ್ ವಿ.ನಿರ್ಮಲ್, ಟೀನಾ ಪಿ. ನಿರ್ಮಲ್, ರಾಜೇಶ್ ಬಿ., ಪಾಲಕ್ ಆಲ್., ವೈಶಾಲಿ ಬಿ., ಯಶ್ ಆರ್., ಪ್ರವೀಣ್ ಸಿ., ಪಿಂಕಿ ಪಿ.. ಪ್ರಣೀತಾ ಪಿ., ವಿನಯ್‌ ಪಿ., ಜಾಹ್ನವಿ ವಿ., ಭವೇಶ್ ಬಿ., ತೃಪ್ತಿ … ದಿವಿತ್ ಬಿ., ಮಾಳವಿಕಾ ಆರ್. ಸಂಘಾನಿ ಅಮರನಾಥದಲ್ಲಿ ಸಿಲುಕಿಕೊಂಡವರು.

ವಿನೋದ್ ಪಟೇಲ್ ಎನ್ನುವವರು ಪತ್ರಿಕೆಯೊಂದರ ಜೊತೆ ಮಾತನಾಡಿದ್ದು, ”ಗುಜರಾತಿ ಸಮಾಜಕ್ಕೆ ಸೇರಿದ ನಾವೆಲ್ಲ ಒಟ್ಟಾಗಿ ಗದಗ ನಗರದಿಂದ ಜುಲೈ 1ರಂದು ಅಮರನಾಥ ಯಾತ್ರೆಗೆ ಬಂದಿದ್ದವು. ಹವಾಮಾನ ವೈಪರೀತ್ಯದ ಕಾರಣದಿಂದಾಗಿ ಮಧ್ಯದಲ್ಲೇ ಸಿಕ್ಕಿಹಾಕಿಕೊಂಡು, ಶಿಬಿರದಲ್ಲಿ ಕುಳಿತಿದ್ದೇವೆ. ಎಲ್ಲರೂ ಸುರಕ್ಷಿತವಾಗಿದ್ದೇವೆ. ಕೆಟ್ಟ ಹವಾಮಾನ ಇನ್ನೂ ಎರಡು ದಿನಗಳ ಕಾಲ ಹೀಗೆ ಇರಲಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಮಾತನಾಡಿ, ”ಆ ದಾರಿಯಲ್ಲಿ ಒಟ್ಟು 15 ಸಾವಿರ ಮಂದಿ ಯಾತ್ರಿಕರು ಇದ್ದಾರೆ. ಕನ್ನಡಿಗರು ಇರುವ ಕ್ಯಾಂಪ್‌ನಲ್ಲಿ 880 ಮಂದಿ ಇದ್ದಾರೆ. ಹವಾಮಾನ ಸರಿಯಿಲ್ಲ ಎಂಬ ಕಾರಣಕ್ಕೆ ಯಾತ್ರಿಕರನ್ನು ಮುಂದಕ್ಕೆ ಬಿಡುತ್ತಿಲ್ಲವಷ್ಟೇ, ಯಾತ್ರಿಕರೆಲ್ಲರೂ ಸುರಕ್ಷಿತವಾಗಿದ್ದಾರೆ. ಅಲ್ಲಿನ ಅಧಿಕಾರಿಗಳು ನಮ್ಮ ಜತೆಗೆ ಸಂಪರ್ಕದಲ್ಲಿದ್ದು, ಯಾತ್ರಿಕರ ಕಾಳಜಿಗೆ ಕ್ರಮವಹಿಸಿದ್ದಾರೆ. ಎರಡು ದಿನಗಳ ಬಳಿಕ ಯಾತ್ರಿಕರು ಸುರಕ್ಷಿತವಾಗಿ ಹಿಂತಿರುಗುವ ಭರವಸೆ ಇದೆ” ಎಂದು ತಿಳಿಸಿದ್ದಾರೆ.

‘ಟೆಂಟ್‌ನಲ್ಲಿ ಸಿಲುಕಿರುವ ಯಾತ್ರಿಕರಿಗೆ ಬೇಕಿರುವ ಅಗತ್ಯ ಸೌಕರ್ಯಗಳನ್ನು ರಾಜ್ಯ ಸರ್ಕಾರದ ವತಿಯಿಂದ ಒದಗಿಸಲಾಗುತ್ತಿದೆ’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ತಿಳಿಸಿದ್ದಾರೆ.

ಭಕ್ತರ ನೆರವಿಗೆ ಸಹಾಯವಾಣಿ ಆರಂಭ

ಸಂಕಷ್ಟದಲ್ಲಿರುವವರ ನೆರವಿಗಾಗಿ ಸಹಾಯವಾಣಿಗಳನ್ನು ಆರಂಭಿಸಲಾಗಿದೆ. ಅಮರನಾಥ ದೇವಸ್ಥಾನ ಮಂಡಳಿಯ ಸಹಾಯವಾಣಿ-14464, 18001807198 (ಟ್ರೋಲ್ ಫ್ರೀ) ಅಥವಾ ಪಂಚತಾರ್ನಿ ಬೇಸ್ ಕ್ಯಾಂಪ್‌ನ ಸಹಾಯವಾಣಿ- 9906037370, 9414121477, 9419123373, ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಸಹಾಯವಾಣಿ- 1070, 080-22253707, 080-22340676 ಗೆ ಸಂಪರ್ಕಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...