Homeಮುಖಪುಟಇದು ಪ್ರಜಾಪ್ರಭುತ್ವದ ಬೇರುಗಳ ಮೇಲಿನ ದಾಳಿ: ಕಾಶ್ಮೀರ ವಿಚಾರದಲ್ಲಿ ಮೋದಿ ಸರ್ಕಾರವನ್ನು ಟೀಕಿಸಿದ ನೊಬೆಲ್ ಪುರಸ್ಕೃತ...

ಇದು ಪ್ರಜಾಪ್ರಭುತ್ವದ ಬೇರುಗಳ ಮೇಲಿನ ದಾಳಿ: ಕಾಶ್ಮೀರ ವಿಚಾರದಲ್ಲಿ ಮೋದಿ ಸರ್ಕಾರವನ್ನು ಟೀಕಿಸಿದ ನೊಬೆಲ್ ಪುರಸ್ಕೃತ ಅಮರ್ತ್ಯಸೇನ್

ಪ್ರಜಾಪ್ರಭುತ್ವದ ಹೊರತಾಗಿ ಬೇರಾವುದೆ ಮಾರ್ಗದಿಂದ ನಾವು ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವೇ ಇಲ್ಲವೆನ್ನುವುದು ನನ್ನ ನಂಬಿಕೆ ಎಂದ ಅಮರ್ತ್ಯ ಸೇನ್

- Advertisement -
- Advertisement -

ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯಸೇನ್‌ರು ಜಮ್ಮು-ಕಾಶ್ಮೀರವನ್ನು ಇಬ್ಬಾಗಿಸಿ ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಕಟುವಾಗಿ ಟೀಕಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪ್ರಜಾಪ್ರಭುತ್ವದ ಹೊರತಾಗಿ ಬೇರಾವುದೆ ಮಾರ್ಗದಿಂದ ನಾವು ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವೇ ಇಲ್ಲವೆನ್ನುವುದು ನನ್ನ ನಂಬಿಕೆ ಎಂದಿರುವ 85 ವಯಸ್ಸಿನ ಈ ಅನುಭವಿ ಆರ್ಥಿಕ ತಜ್ಞರು ಮಾನವಹಕ್ಕುಗಳ ರಕ್ಷಣೆಗೆ ವಿರುದ್ಧವಾದ ಕ್ರಮ ಇದು ಎಂದು ಕೇಂದ್ರದ ಕ್ರಮವನ್ನು ಖಂಡಿಸಿದ್ದಾರೆ.

ಒಬ್ಬ ಭಾರತೀಯನಾಗಿ ನನಗೆ ಈ ವಿಚಾರದ ಬಗ್ಗೆ ಹೆಮ್ಮೆ ಎನಿಸುವುದಿಲ್ಲ. ಪ್ರಜಾಪ್ರಭುತ್ವವನ್ನು ಅಳವಡಿಸಿಕೊಂಡ ಮೊದಲ ಪಶ್ಚಿಮೇತ್ತರ ದೇಶ ಎಂಬ ಹೆಗ್ಗಳಿಕೆಯೊಂದಿಗೆ, ಪ್ರಜಾತಾಂತ್ರಿಕ ನಡವಳಿಕೆಗಳು ಹೇಗಿರಬೇಕು ಎಂಬುದಕ್ಕೆ ಒಂದು ಮಾನದಂಡವಾಗಿ ರೂಪುಗೊಂಡಿತ್ತು ನನ್ನ ಭಾರತ. ಇದೀಗ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಈ ಕ್ರಮದಿಂದಾಗಿ ನಾವು ಆ ಘನತೆಯನ್ನೆ ಕಳೆದುಕೊಂಡಿದ್ದೇವೆ ಎಂದಿದ್ದಾರೆ ಸೇನ್. ಅದು ಕಾಶ್ಮೀರಿಗಳಿಗೆ ಸೇರಿರುವ ನೆಲದ ವಿಚಾರವಾಗಿರುವುದರಿಂದ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಕ್ಕೆ ಕಾಶ್ಮೀರಿಗರಿಗೇ ಬಿಡಬೇಕು ಎಂಬ ಮಾತನ್ನೂ ಅವರು ಹೇಳಿದ್ದಾರೆ.

ಜೊತೆಗೆ, ಜಮ್ಮು-ಕಾಶ್ಮೀರದ ರಾಜಕೀಯ ನಾಯಕರನ್ನು ಬಂಧಿಸಿದ ಮತ್ತು ಗೃಹಬಂಧನದಲ್ಲಿರಿಸಿದ ಕೇಂದ್ರ ಸರ್ಕಾರದ ಕ್ರಮವನ್ನೂ ಅವರು ಟೀಕಿಸಿದ್ದಾರೆ. ಜನರ ಪ್ರತಿನಿಧಿಗಳೆನಿಸಿದ ಜನನಾಯಕರ ದನಿಗಳನ್ನು ಕೇಳಿಸಿಕೊಳ್ಳದೆ ನೀವು ಯಾವತ್ತಿಗೂ ನ್ಯಾಯಬದ್ಧ ತೀರ್ಮಾನಕ್ಕೆ ಬರಲಾರಿರಿ ಎಂಬುದು ನನ್ನ ದೃಢವಾದ ನಂಬಿಕೆ. ಹಿಂದೆಲ್ಲ ದೇಶವನ್ನು ಮುನ್ನಡೆಸಿದ ಹಾಗೂ ಸರ್ಕಾರಗಳನ್ನು ರಚಿಸಿದಂತಹ ನಾಯಕರುಗಳನ್ನು ನೀವು ಜೈಲಿನಲ್ಲಿ ಬಂಧಿಸಿಡುವುದರ ಅಥವಾ ಗೃಹಬಂಧನದಲ್ಲಿ ಇಡುವುದರ ಮೂಲಕ ಪ್ರಜಾಪ್ರಭುತ್ವದ ಗಟ್ಟಿಗೊಳಿಸಿದ ಬೇರುಗಳ ಮೇಲೆಯೇ ದಾಳಿ ಮಾಡಿದಂತಾಗಿದೆ ಎಂದವರು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಫರೂಕ್ ಅಬ್ದುಲ್ಲಾ ಮತ್ತು ಮೆಹಬೂಬ ಮುಫ್ತಿ ಸೇರಿದಂತೆ ಪೀಪಲ್ ಕಾನ್ಫರೆನ್ಸ್‌ನ ನಾಯಕರಾದ ಸಜದ್ ಲೋನ್, ಜಮ್ಮುಕಾಶ್ಮೀರ ಪೀಪಲ್ಸ್ ಮೂವ್‌ಮೆಂಟಿನ ನಾಯಕ ಶಾ ಫೇಸಲ್, ರಾಜ್ಯ ಕಾಂಗ್ರೆಸ್ ನಾಯಕ ಗುಲಾಂ ಅಹ್ಮದ್ ಮಿರ್ ಸೇರಿದಂತೆ ಹಲವಾರು ರಾಜಕೀಯ ನಾಯಕರುಗಳನ್ನು ಗೃಹಬಂಧನದಲ್ಲಿ ಇರಿಸಲಾಗಿದೆ.

ತನ್ನ ನಿರ್ಧಾರದ ವಿರುದ್ಧ ಭುಗಿಲೇಳಲಿದ್ದ ಪ್ರತಿಭಟನೆ ಮತ್ತು ಅದರಿಂದ ಉಂಟಾಗಲಿದ್ದ ಜೀವಹಾನಿ ಹಾಗು ಆಸ್ತಿಪಾಸ್ತಿ ನಷ್ಟವನ್ನು ತಪ್ಪಿಸುವ ಸಲುವಾಗಿ ಇಡೀ ರಾಜ್ಯವನ್ನು ಬೃಹತ್ ಸೇನಾ ಹೊದಿಕೆಯಡಿ ಮುಚ್ಚಿಹಾಕಿರುವ ಕೇಂದ್ರದ ಕ್ರಮವನ್ನು ಸೇನ್‌ರವರು ವಸಾಹತುಶಾಹಿ ಪ್ರಮಾದ ಎಂದು ಕರೆದಿದ್ದಾರೆ. ಬ್ರಿಟಿಷರು ಇನ್ನೂರು ವರ್ಷ ಭಾರತವನ್ನು ಆಳಿದ್ದು ಹೀಗೇ ಅಲ್ಲವೇ ಎಂದಿದ್ದಾರೆ.

ಇದನ್ನೂ ಓದಿ: ಓಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಮತ್ತು ಶಾ ಫೈಸಲ್ ಬಂಧನದ ಹಿಂದಿನ ನಿಜ ಕಾರಣಗಳೇನು ಗೊತ್ತೆ?

ಆಗಸ್ಟ್ ೫ರಂದು ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿ, ಅದನ್ನು ಜಮ್ಮು-ಕಾಶ್ಮೀರ ಹಾಗೂ ಲಡಾಕ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತ್ತು. ಸಂಸತ್ತಿನಲ್ಲಿ ಎಂಟು ಪಕ್ಷಗಳು ಸರ್ಕಾರದ ಈ ನಡೆಯನ್ನು ವಿರೋಧಿಸಿದ್ದವು. ಆದಾಗ್ಯೂ ಕಾಂಗ್ರೆಸ್ ನಾಯಕರುಗಳಾದ ಜ್ಯೋತಿರಾದಿತ್ಯ ಸಿಂಧಿಯಾ, ಜನಾರ್ಧನ್ ದ್ವಿವೇದಿ, ಕರಣ್ ಸಿಂಗ್, ಜೈವೀರ್ ಶೆರ್ಗಿಲ್, ಮಿಲಿಂದ್ ದಿಯೋರಾ, ಅದಿತಿ ಸಿಂಗ್ ಮತ್ತು ಭುಬನೇಶ್ವರ್ ಕಲಿತಾ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...