Homeಮುಖಪುಟಇದು ಪ್ರಜಾಪ್ರಭುತ್ವದ ಬೇರುಗಳ ಮೇಲಿನ ದಾಳಿ: ಕಾಶ್ಮೀರ ವಿಚಾರದಲ್ಲಿ ಮೋದಿ ಸರ್ಕಾರವನ್ನು ಟೀಕಿಸಿದ ನೊಬೆಲ್ ಪುರಸ್ಕೃತ...

ಇದು ಪ್ರಜಾಪ್ರಭುತ್ವದ ಬೇರುಗಳ ಮೇಲಿನ ದಾಳಿ: ಕಾಶ್ಮೀರ ವಿಚಾರದಲ್ಲಿ ಮೋದಿ ಸರ್ಕಾರವನ್ನು ಟೀಕಿಸಿದ ನೊಬೆಲ್ ಪುರಸ್ಕೃತ ಅಮರ್ತ್ಯಸೇನ್

ಪ್ರಜಾಪ್ರಭುತ್ವದ ಹೊರತಾಗಿ ಬೇರಾವುದೆ ಮಾರ್ಗದಿಂದ ನಾವು ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವೇ ಇಲ್ಲವೆನ್ನುವುದು ನನ್ನ ನಂಬಿಕೆ ಎಂದ ಅಮರ್ತ್ಯ ಸೇನ್

- Advertisement -
- Advertisement -

ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯಸೇನ್‌ರು ಜಮ್ಮು-ಕಾಶ್ಮೀರವನ್ನು ಇಬ್ಬಾಗಿಸಿ ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಕಟುವಾಗಿ ಟೀಕಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪ್ರಜಾಪ್ರಭುತ್ವದ ಹೊರತಾಗಿ ಬೇರಾವುದೆ ಮಾರ್ಗದಿಂದ ನಾವು ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವೇ ಇಲ್ಲವೆನ್ನುವುದು ನನ್ನ ನಂಬಿಕೆ ಎಂದಿರುವ 85 ವಯಸ್ಸಿನ ಈ ಅನುಭವಿ ಆರ್ಥಿಕ ತಜ್ಞರು ಮಾನವಹಕ್ಕುಗಳ ರಕ್ಷಣೆಗೆ ವಿರುದ್ಧವಾದ ಕ್ರಮ ಇದು ಎಂದು ಕೇಂದ್ರದ ಕ್ರಮವನ್ನು ಖಂಡಿಸಿದ್ದಾರೆ.

ಒಬ್ಬ ಭಾರತೀಯನಾಗಿ ನನಗೆ ಈ ವಿಚಾರದ ಬಗ್ಗೆ ಹೆಮ್ಮೆ ಎನಿಸುವುದಿಲ್ಲ. ಪ್ರಜಾಪ್ರಭುತ್ವವನ್ನು ಅಳವಡಿಸಿಕೊಂಡ ಮೊದಲ ಪಶ್ಚಿಮೇತ್ತರ ದೇಶ ಎಂಬ ಹೆಗ್ಗಳಿಕೆಯೊಂದಿಗೆ, ಪ್ರಜಾತಾಂತ್ರಿಕ ನಡವಳಿಕೆಗಳು ಹೇಗಿರಬೇಕು ಎಂಬುದಕ್ಕೆ ಒಂದು ಮಾನದಂಡವಾಗಿ ರೂಪುಗೊಂಡಿತ್ತು ನನ್ನ ಭಾರತ. ಇದೀಗ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಈ ಕ್ರಮದಿಂದಾಗಿ ನಾವು ಆ ಘನತೆಯನ್ನೆ ಕಳೆದುಕೊಂಡಿದ್ದೇವೆ ಎಂದಿದ್ದಾರೆ ಸೇನ್. ಅದು ಕಾಶ್ಮೀರಿಗಳಿಗೆ ಸೇರಿರುವ ನೆಲದ ವಿಚಾರವಾಗಿರುವುದರಿಂದ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಕ್ಕೆ ಕಾಶ್ಮೀರಿಗರಿಗೇ ಬಿಡಬೇಕು ಎಂಬ ಮಾತನ್ನೂ ಅವರು ಹೇಳಿದ್ದಾರೆ.

ಜೊತೆಗೆ, ಜಮ್ಮು-ಕಾಶ್ಮೀರದ ರಾಜಕೀಯ ನಾಯಕರನ್ನು ಬಂಧಿಸಿದ ಮತ್ತು ಗೃಹಬಂಧನದಲ್ಲಿರಿಸಿದ ಕೇಂದ್ರ ಸರ್ಕಾರದ ಕ್ರಮವನ್ನೂ ಅವರು ಟೀಕಿಸಿದ್ದಾರೆ. ಜನರ ಪ್ರತಿನಿಧಿಗಳೆನಿಸಿದ ಜನನಾಯಕರ ದನಿಗಳನ್ನು ಕೇಳಿಸಿಕೊಳ್ಳದೆ ನೀವು ಯಾವತ್ತಿಗೂ ನ್ಯಾಯಬದ್ಧ ತೀರ್ಮಾನಕ್ಕೆ ಬರಲಾರಿರಿ ಎಂಬುದು ನನ್ನ ದೃಢವಾದ ನಂಬಿಕೆ. ಹಿಂದೆಲ್ಲ ದೇಶವನ್ನು ಮುನ್ನಡೆಸಿದ ಹಾಗೂ ಸರ್ಕಾರಗಳನ್ನು ರಚಿಸಿದಂತಹ ನಾಯಕರುಗಳನ್ನು ನೀವು ಜೈಲಿನಲ್ಲಿ ಬಂಧಿಸಿಡುವುದರ ಅಥವಾ ಗೃಹಬಂಧನದಲ್ಲಿ ಇಡುವುದರ ಮೂಲಕ ಪ್ರಜಾಪ್ರಭುತ್ವದ ಗಟ್ಟಿಗೊಳಿಸಿದ ಬೇರುಗಳ ಮೇಲೆಯೇ ದಾಳಿ ಮಾಡಿದಂತಾಗಿದೆ ಎಂದವರು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಫರೂಕ್ ಅಬ್ದುಲ್ಲಾ ಮತ್ತು ಮೆಹಬೂಬ ಮುಫ್ತಿ ಸೇರಿದಂತೆ ಪೀಪಲ್ ಕಾನ್ಫರೆನ್ಸ್‌ನ ನಾಯಕರಾದ ಸಜದ್ ಲೋನ್, ಜಮ್ಮುಕಾಶ್ಮೀರ ಪೀಪಲ್ಸ್ ಮೂವ್‌ಮೆಂಟಿನ ನಾಯಕ ಶಾ ಫೇಸಲ್, ರಾಜ್ಯ ಕಾಂಗ್ರೆಸ್ ನಾಯಕ ಗುಲಾಂ ಅಹ್ಮದ್ ಮಿರ್ ಸೇರಿದಂತೆ ಹಲವಾರು ರಾಜಕೀಯ ನಾಯಕರುಗಳನ್ನು ಗೃಹಬಂಧನದಲ್ಲಿ ಇರಿಸಲಾಗಿದೆ.

ತನ್ನ ನಿರ್ಧಾರದ ವಿರುದ್ಧ ಭುಗಿಲೇಳಲಿದ್ದ ಪ್ರತಿಭಟನೆ ಮತ್ತು ಅದರಿಂದ ಉಂಟಾಗಲಿದ್ದ ಜೀವಹಾನಿ ಹಾಗು ಆಸ್ತಿಪಾಸ್ತಿ ನಷ್ಟವನ್ನು ತಪ್ಪಿಸುವ ಸಲುವಾಗಿ ಇಡೀ ರಾಜ್ಯವನ್ನು ಬೃಹತ್ ಸೇನಾ ಹೊದಿಕೆಯಡಿ ಮುಚ್ಚಿಹಾಕಿರುವ ಕೇಂದ್ರದ ಕ್ರಮವನ್ನು ಸೇನ್‌ರವರು ವಸಾಹತುಶಾಹಿ ಪ್ರಮಾದ ಎಂದು ಕರೆದಿದ್ದಾರೆ. ಬ್ರಿಟಿಷರು ಇನ್ನೂರು ವರ್ಷ ಭಾರತವನ್ನು ಆಳಿದ್ದು ಹೀಗೇ ಅಲ್ಲವೇ ಎಂದಿದ್ದಾರೆ.

ಇದನ್ನೂ ಓದಿ: ಓಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಮತ್ತು ಶಾ ಫೈಸಲ್ ಬಂಧನದ ಹಿಂದಿನ ನಿಜ ಕಾರಣಗಳೇನು ಗೊತ್ತೆ?

ಆಗಸ್ಟ್ ೫ರಂದು ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿ, ಅದನ್ನು ಜಮ್ಮು-ಕಾಶ್ಮೀರ ಹಾಗೂ ಲಡಾಕ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತ್ತು. ಸಂಸತ್ತಿನಲ್ಲಿ ಎಂಟು ಪಕ್ಷಗಳು ಸರ್ಕಾರದ ಈ ನಡೆಯನ್ನು ವಿರೋಧಿಸಿದ್ದವು. ಆದಾಗ್ಯೂ ಕಾಂಗ್ರೆಸ್ ನಾಯಕರುಗಳಾದ ಜ್ಯೋತಿರಾದಿತ್ಯ ಸಿಂಧಿಯಾ, ಜನಾರ್ಧನ್ ದ್ವಿವೇದಿ, ಕರಣ್ ಸಿಂಗ್, ಜೈವೀರ್ ಶೆರ್ಗಿಲ್, ಮಿಲಿಂದ್ ದಿಯೋರಾ, ಅದಿತಿ ಸಿಂಗ್ ಮತ್ತು ಭುಬನೇಶ್ವರ್ ಕಲಿತಾ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...