Homeಮುಖಪುಟಇದು ಪ್ರಜಾಪ್ರಭುತ್ವದ ಬೇರುಗಳ ಮೇಲಿನ ದಾಳಿ: ಕಾಶ್ಮೀರ ವಿಚಾರದಲ್ಲಿ ಮೋದಿ ಸರ್ಕಾರವನ್ನು ಟೀಕಿಸಿದ ನೊಬೆಲ್ ಪುರಸ್ಕೃತ...

ಇದು ಪ್ರಜಾಪ್ರಭುತ್ವದ ಬೇರುಗಳ ಮೇಲಿನ ದಾಳಿ: ಕಾಶ್ಮೀರ ವಿಚಾರದಲ್ಲಿ ಮೋದಿ ಸರ್ಕಾರವನ್ನು ಟೀಕಿಸಿದ ನೊಬೆಲ್ ಪುರಸ್ಕೃತ ಅಮರ್ತ್ಯಸೇನ್

ಪ್ರಜಾಪ್ರಭುತ್ವದ ಹೊರತಾಗಿ ಬೇರಾವುದೆ ಮಾರ್ಗದಿಂದ ನಾವು ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವೇ ಇಲ್ಲವೆನ್ನುವುದು ನನ್ನ ನಂಬಿಕೆ ಎಂದ ಅಮರ್ತ್ಯ ಸೇನ್

- Advertisement -
- Advertisement -

ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯಸೇನ್‌ರು ಜಮ್ಮು-ಕಾಶ್ಮೀರವನ್ನು ಇಬ್ಬಾಗಿಸಿ ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಕಟುವಾಗಿ ಟೀಕಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪ್ರಜಾಪ್ರಭುತ್ವದ ಹೊರತಾಗಿ ಬೇರಾವುದೆ ಮಾರ್ಗದಿಂದ ನಾವು ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವೇ ಇಲ್ಲವೆನ್ನುವುದು ನನ್ನ ನಂಬಿಕೆ ಎಂದಿರುವ 85 ವಯಸ್ಸಿನ ಈ ಅನುಭವಿ ಆರ್ಥಿಕ ತಜ್ಞರು ಮಾನವಹಕ್ಕುಗಳ ರಕ್ಷಣೆಗೆ ವಿರುದ್ಧವಾದ ಕ್ರಮ ಇದು ಎಂದು ಕೇಂದ್ರದ ಕ್ರಮವನ್ನು ಖಂಡಿಸಿದ್ದಾರೆ.

ಒಬ್ಬ ಭಾರತೀಯನಾಗಿ ನನಗೆ ಈ ವಿಚಾರದ ಬಗ್ಗೆ ಹೆಮ್ಮೆ ಎನಿಸುವುದಿಲ್ಲ. ಪ್ರಜಾಪ್ರಭುತ್ವವನ್ನು ಅಳವಡಿಸಿಕೊಂಡ ಮೊದಲ ಪಶ್ಚಿಮೇತ್ತರ ದೇಶ ಎಂಬ ಹೆಗ್ಗಳಿಕೆಯೊಂದಿಗೆ, ಪ್ರಜಾತಾಂತ್ರಿಕ ನಡವಳಿಕೆಗಳು ಹೇಗಿರಬೇಕು ಎಂಬುದಕ್ಕೆ ಒಂದು ಮಾನದಂಡವಾಗಿ ರೂಪುಗೊಂಡಿತ್ತು ನನ್ನ ಭಾರತ. ಇದೀಗ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಈ ಕ್ರಮದಿಂದಾಗಿ ನಾವು ಆ ಘನತೆಯನ್ನೆ ಕಳೆದುಕೊಂಡಿದ್ದೇವೆ ಎಂದಿದ್ದಾರೆ ಸೇನ್. ಅದು ಕಾಶ್ಮೀರಿಗಳಿಗೆ ಸೇರಿರುವ ನೆಲದ ವಿಚಾರವಾಗಿರುವುದರಿಂದ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಕ್ಕೆ ಕಾಶ್ಮೀರಿಗರಿಗೇ ಬಿಡಬೇಕು ಎಂಬ ಮಾತನ್ನೂ ಅವರು ಹೇಳಿದ್ದಾರೆ.

ಜೊತೆಗೆ, ಜಮ್ಮು-ಕಾಶ್ಮೀರದ ರಾಜಕೀಯ ನಾಯಕರನ್ನು ಬಂಧಿಸಿದ ಮತ್ತು ಗೃಹಬಂಧನದಲ್ಲಿರಿಸಿದ ಕೇಂದ್ರ ಸರ್ಕಾರದ ಕ್ರಮವನ್ನೂ ಅವರು ಟೀಕಿಸಿದ್ದಾರೆ. ಜನರ ಪ್ರತಿನಿಧಿಗಳೆನಿಸಿದ ಜನನಾಯಕರ ದನಿಗಳನ್ನು ಕೇಳಿಸಿಕೊಳ್ಳದೆ ನೀವು ಯಾವತ್ತಿಗೂ ನ್ಯಾಯಬದ್ಧ ತೀರ್ಮಾನಕ್ಕೆ ಬರಲಾರಿರಿ ಎಂಬುದು ನನ್ನ ದೃಢವಾದ ನಂಬಿಕೆ. ಹಿಂದೆಲ್ಲ ದೇಶವನ್ನು ಮುನ್ನಡೆಸಿದ ಹಾಗೂ ಸರ್ಕಾರಗಳನ್ನು ರಚಿಸಿದಂತಹ ನಾಯಕರುಗಳನ್ನು ನೀವು ಜೈಲಿನಲ್ಲಿ ಬಂಧಿಸಿಡುವುದರ ಅಥವಾ ಗೃಹಬಂಧನದಲ್ಲಿ ಇಡುವುದರ ಮೂಲಕ ಪ್ರಜಾಪ್ರಭುತ್ವದ ಗಟ್ಟಿಗೊಳಿಸಿದ ಬೇರುಗಳ ಮೇಲೆಯೇ ದಾಳಿ ಮಾಡಿದಂತಾಗಿದೆ ಎಂದವರು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಫರೂಕ್ ಅಬ್ದುಲ್ಲಾ ಮತ್ತು ಮೆಹಬೂಬ ಮುಫ್ತಿ ಸೇರಿದಂತೆ ಪೀಪಲ್ ಕಾನ್ಫರೆನ್ಸ್‌ನ ನಾಯಕರಾದ ಸಜದ್ ಲೋನ್, ಜಮ್ಮುಕಾಶ್ಮೀರ ಪೀಪಲ್ಸ್ ಮೂವ್‌ಮೆಂಟಿನ ನಾಯಕ ಶಾ ಫೇಸಲ್, ರಾಜ್ಯ ಕಾಂಗ್ರೆಸ್ ನಾಯಕ ಗುಲಾಂ ಅಹ್ಮದ್ ಮಿರ್ ಸೇರಿದಂತೆ ಹಲವಾರು ರಾಜಕೀಯ ನಾಯಕರುಗಳನ್ನು ಗೃಹಬಂಧನದಲ್ಲಿ ಇರಿಸಲಾಗಿದೆ.

ತನ್ನ ನಿರ್ಧಾರದ ವಿರುದ್ಧ ಭುಗಿಲೇಳಲಿದ್ದ ಪ್ರತಿಭಟನೆ ಮತ್ತು ಅದರಿಂದ ಉಂಟಾಗಲಿದ್ದ ಜೀವಹಾನಿ ಹಾಗು ಆಸ್ತಿಪಾಸ್ತಿ ನಷ್ಟವನ್ನು ತಪ್ಪಿಸುವ ಸಲುವಾಗಿ ಇಡೀ ರಾಜ್ಯವನ್ನು ಬೃಹತ್ ಸೇನಾ ಹೊದಿಕೆಯಡಿ ಮುಚ್ಚಿಹಾಕಿರುವ ಕೇಂದ್ರದ ಕ್ರಮವನ್ನು ಸೇನ್‌ರವರು ವಸಾಹತುಶಾಹಿ ಪ್ರಮಾದ ಎಂದು ಕರೆದಿದ್ದಾರೆ. ಬ್ರಿಟಿಷರು ಇನ್ನೂರು ವರ್ಷ ಭಾರತವನ್ನು ಆಳಿದ್ದು ಹೀಗೇ ಅಲ್ಲವೇ ಎಂದಿದ್ದಾರೆ.

ಇದನ್ನೂ ಓದಿ: ಓಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಮತ್ತು ಶಾ ಫೈಸಲ್ ಬಂಧನದ ಹಿಂದಿನ ನಿಜ ಕಾರಣಗಳೇನು ಗೊತ್ತೆ?

ಆಗಸ್ಟ್ ೫ರಂದು ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿ, ಅದನ್ನು ಜಮ್ಮು-ಕಾಶ್ಮೀರ ಹಾಗೂ ಲಡಾಕ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತ್ತು. ಸಂಸತ್ತಿನಲ್ಲಿ ಎಂಟು ಪಕ್ಷಗಳು ಸರ್ಕಾರದ ಈ ನಡೆಯನ್ನು ವಿರೋಧಿಸಿದ್ದವು. ಆದಾಗ್ಯೂ ಕಾಂಗ್ರೆಸ್ ನಾಯಕರುಗಳಾದ ಜ್ಯೋತಿರಾದಿತ್ಯ ಸಿಂಧಿಯಾ, ಜನಾರ್ಧನ್ ದ್ವಿವೇದಿ, ಕರಣ್ ಸಿಂಗ್, ಜೈವೀರ್ ಶೆರ್ಗಿಲ್, ಮಿಲಿಂದ್ ದಿಯೋರಾ, ಅದಿತಿ ಸಿಂಗ್ ಮತ್ತು ಭುಬನೇಶ್ವರ್ ಕಲಿತಾ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...