Homeಮುಖಪುಟಇದು ಪ್ರಜಾಪ್ರಭುತ್ವದ ಬೇರುಗಳ ಮೇಲಿನ ದಾಳಿ: ಕಾಶ್ಮೀರ ವಿಚಾರದಲ್ಲಿ ಮೋದಿ ಸರ್ಕಾರವನ್ನು ಟೀಕಿಸಿದ ನೊಬೆಲ್ ಪುರಸ್ಕೃತ...

ಇದು ಪ್ರಜಾಪ್ರಭುತ್ವದ ಬೇರುಗಳ ಮೇಲಿನ ದಾಳಿ: ಕಾಶ್ಮೀರ ವಿಚಾರದಲ್ಲಿ ಮೋದಿ ಸರ್ಕಾರವನ್ನು ಟೀಕಿಸಿದ ನೊಬೆಲ್ ಪುರಸ್ಕೃತ ಅಮರ್ತ್ಯಸೇನ್

ಪ್ರಜಾಪ್ರಭುತ್ವದ ಹೊರತಾಗಿ ಬೇರಾವುದೆ ಮಾರ್ಗದಿಂದ ನಾವು ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವೇ ಇಲ್ಲವೆನ್ನುವುದು ನನ್ನ ನಂಬಿಕೆ ಎಂದ ಅಮರ್ತ್ಯ ಸೇನ್

- Advertisement -
- Advertisement -

ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯಸೇನ್‌ರು ಜಮ್ಮು-ಕಾಶ್ಮೀರವನ್ನು ಇಬ್ಬಾಗಿಸಿ ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಕಟುವಾಗಿ ಟೀಕಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪ್ರಜಾಪ್ರಭುತ್ವದ ಹೊರತಾಗಿ ಬೇರಾವುದೆ ಮಾರ್ಗದಿಂದ ನಾವು ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವೇ ಇಲ್ಲವೆನ್ನುವುದು ನನ್ನ ನಂಬಿಕೆ ಎಂದಿರುವ 85 ವಯಸ್ಸಿನ ಈ ಅನುಭವಿ ಆರ್ಥಿಕ ತಜ್ಞರು ಮಾನವಹಕ್ಕುಗಳ ರಕ್ಷಣೆಗೆ ವಿರುದ್ಧವಾದ ಕ್ರಮ ಇದು ಎಂದು ಕೇಂದ್ರದ ಕ್ರಮವನ್ನು ಖಂಡಿಸಿದ್ದಾರೆ.

ಒಬ್ಬ ಭಾರತೀಯನಾಗಿ ನನಗೆ ಈ ವಿಚಾರದ ಬಗ್ಗೆ ಹೆಮ್ಮೆ ಎನಿಸುವುದಿಲ್ಲ. ಪ್ರಜಾಪ್ರಭುತ್ವವನ್ನು ಅಳವಡಿಸಿಕೊಂಡ ಮೊದಲ ಪಶ್ಚಿಮೇತ್ತರ ದೇಶ ಎಂಬ ಹೆಗ್ಗಳಿಕೆಯೊಂದಿಗೆ, ಪ್ರಜಾತಾಂತ್ರಿಕ ನಡವಳಿಕೆಗಳು ಹೇಗಿರಬೇಕು ಎಂಬುದಕ್ಕೆ ಒಂದು ಮಾನದಂಡವಾಗಿ ರೂಪುಗೊಂಡಿತ್ತು ನನ್ನ ಭಾರತ. ಇದೀಗ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಈ ಕ್ರಮದಿಂದಾಗಿ ನಾವು ಆ ಘನತೆಯನ್ನೆ ಕಳೆದುಕೊಂಡಿದ್ದೇವೆ ಎಂದಿದ್ದಾರೆ ಸೇನ್. ಅದು ಕಾಶ್ಮೀರಿಗಳಿಗೆ ಸೇರಿರುವ ನೆಲದ ವಿಚಾರವಾಗಿರುವುದರಿಂದ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಕ್ಕೆ ಕಾಶ್ಮೀರಿಗರಿಗೇ ಬಿಡಬೇಕು ಎಂಬ ಮಾತನ್ನೂ ಅವರು ಹೇಳಿದ್ದಾರೆ.

ಜೊತೆಗೆ, ಜಮ್ಮು-ಕಾಶ್ಮೀರದ ರಾಜಕೀಯ ನಾಯಕರನ್ನು ಬಂಧಿಸಿದ ಮತ್ತು ಗೃಹಬಂಧನದಲ್ಲಿರಿಸಿದ ಕೇಂದ್ರ ಸರ್ಕಾರದ ಕ್ರಮವನ್ನೂ ಅವರು ಟೀಕಿಸಿದ್ದಾರೆ. ಜನರ ಪ್ರತಿನಿಧಿಗಳೆನಿಸಿದ ಜನನಾಯಕರ ದನಿಗಳನ್ನು ಕೇಳಿಸಿಕೊಳ್ಳದೆ ನೀವು ಯಾವತ್ತಿಗೂ ನ್ಯಾಯಬದ್ಧ ತೀರ್ಮಾನಕ್ಕೆ ಬರಲಾರಿರಿ ಎಂಬುದು ನನ್ನ ದೃಢವಾದ ನಂಬಿಕೆ. ಹಿಂದೆಲ್ಲ ದೇಶವನ್ನು ಮುನ್ನಡೆಸಿದ ಹಾಗೂ ಸರ್ಕಾರಗಳನ್ನು ರಚಿಸಿದಂತಹ ನಾಯಕರುಗಳನ್ನು ನೀವು ಜೈಲಿನಲ್ಲಿ ಬಂಧಿಸಿಡುವುದರ ಅಥವಾ ಗೃಹಬಂಧನದಲ್ಲಿ ಇಡುವುದರ ಮೂಲಕ ಪ್ರಜಾಪ್ರಭುತ್ವದ ಗಟ್ಟಿಗೊಳಿಸಿದ ಬೇರುಗಳ ಮೇಲೆಯೇ ದಾಳಿ ಮಾಡಿದಂತಾಗಿದೆ ಎಂದವರು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಫರೂಕ್ ಅಬ್ದುಲ್ಲಾ ಮತ್ತು ಮೆಹಬೂಬ ಮುಫ್ತಿ ಸೇರಿದಂತೆ ಪೀಪಲ್ ಕಾನ್ಫರೆನ್ಸ್‌ನ ನಾಯಕರಾದ ಸಜದ್ ಲೋನ್, ಜಮ್ಮುಕಾಶ್ಮೀರ ಪೀಪಲ್ಸ್ ಮೂವ್‌ಮೆಂಟಿನ ನಾಯಕ ಶಾ ಫೇಸಲ್, ರಾಜ್ಯ ಕಾಂಗ್ರೆಸ್ ನಾಯಕ ಗುಲಾಂ ಅಹ್ಮದ್ ಮಿರ್ ಸೇರಿದಂತೆ ಹಲವಾರು ರಾಜಕೀಯ ನಾಯಕರುಗಳನ್ನು ಗೃಹಬಂಧನದಲ್ಲಿ ಇರಿಸಲಾಗಿದೆ.

ತನ್ನ ನಿರ್ಧಾರದ ವಿರುದ್ಧ ಭುಗಿಲೇಳಲಿದ್ದ ಪ್ರತಿಭಟನೆ ಮತ್ತು ಅದರಿಂದ ಉಂಟಾಗಲಿದ್ದ ಜೀವಹಾನಿ ಹಾಗು ಆಸ್ತಿಪಾಸ್ತಿ ನಷ್ಟವನ್ನು ತಪ್ಪಿಸುವ ಸಲುವಾಗಿ ಇಡೀ ರಾಜ್ಯವನ್ನು ಬೃಹತ್ ಸೇನಾ ಹೊದಿಕೆಯಡಿ ಮುಚ್ಚಿಹಾಕಿರುವ ಕೇಂದ್ರದ ಕ್ರಮವನ್ನು ಸೇನ್‌ರವರು ವಸಾಹತುಶಾಹಿ ಪ್ರಮಾದ ಎಂದು ಕರೆದಿದ್ದಾರೆ. ಬ್ರಿಟಿಷರು ಇನ್ನೂರು ವರ್ಷ ಭಾರತವನ್ನು ಆಳಿದ್ದು ಹೀಗೇ ಅಲ್ಲವೇ ಎಂದಿದ್ದಾರೆ.

ಇದನ್ನೂ ಓದಿ: ಓಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಮತ್ತು ಶಾ ಫೈಸಲ್ ಬಂಧನದ ಹಿಂದಿನ ನಿಜ ಕಾರಣಗಳೇನು ಗೊತ್ತೆ?

ಆಗಸ್ಟ್ ೫ರಂದು ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿ, ಅದನ್ನು ಜಮ್ಮು-ಕಾಶ್ಮೀರ ಹಾಗೂ ಲಡಾಕ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತ್ತು. ಸಂಸತ್ತಿನಲ್ಲಿ ಎಂಟು ಪಕ್ಷಗಳು ಸರ್ಕಾರದ ಈ ನಡೆಯನ್ನು ವಿರೋಧಿಸಿದ್ದವು. ಆದಾಗ್ಯೂ ಕಾಂಗ್ರೆಸ್ ನಾಯಕರುಗಳಾದ ಜ್ಯೋತಿರಾದಿತ್ಯ ಸಿಂಧಿಯಾ, ಜನಾರ್ಧನ್ ದ್ವಿವೇದಿ, ಕರಣ್ ಸಿಂಗ್, ಜೈವೀರ್ ಶೆರ್ಗಿಲ್, ಮಿಲಿಂದ್ ದಿಯೋರಾ, ಅದಿತಿ ಸಿಂಗ್ ಮತ್ತು ಭುಬನೇಶ್ವರ್ ಕಲಿತಾ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...