Homeಮುಖಪುಟಇದು ಪ್ರಜಾಪ್ರಭುತ್ವದ ಬೇರುಗಳ ಮೇಲಿನ ದಾಳಿ: ಕಾಶ್ಮೀರ ವಿಚಾರದಲ್ಲಿ ಮೋದಿ ಸರ್ಕಾರವನ್ನು ಟೀಕಿಸಿದ ನೊಬೆಲ್ ಪುರಸ್ಕೃತ...

ಇದು ಪ್ರಜಾಪ್ರಭುತ್ವದ ಬೇರುಗಳ ಮೇಲಿನ ದಾಳಿ: ಕಾಶ್ಮೀರ ವಿಚಾರದಲ್ಲಿ ಮೋದಿ ಸರ್ಕಾರವನ್ನು ಟೀಕಿಸಿದ ನೊಬೆಲ್ ಪುರಸ್ಕೃತ ಅಮರ್ತ್ಯಸೇನ್

ಪ್ರಜಾಪ್ರಭುತ್ವದ ಹೊರತಾಗಿ ಬೇರಾವುದೆ ಮಾರ್ಗದಿಂದ ನಾವು ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವೇ ಇಲ್ಲವೆನ್ನುವುದು ನನ್ನ ನಂಬಿಕೆ ಎಂದ ಅಮರ್ತ್ಯ ಸೇನ್

- Advertisement -
- Advertisement -

ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯಸೇನ್‌ರು ಜಮ್ಮು-ಕಾಶ್ಮೀರವನ್ನು ಇಬ್ಬಾಗಿಸಿ ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಕಟುವಾಗಿ ಟೀಕಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪ್ರಜಾಪ್ರಭುತ್ವದ ಹೊರತಾಗಿ ಬೇರಾವುದೆ ಮಾರ್ಗದಿಂದ ನಾವು ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವೇ ಇಲ್ಲವೆನ್ನುವುದು ನನ್ನ ನಂಬಿಕೆ ಎಂದಿರುವ 85 ವಯಸ್ಸಿನ ಈ ಅನುಭವಿ ಆರ್ಥಿಕ ತಜ್ಞರು ಮಾನವಹಕ್ಕುಗಳ ರಕ್ಷಣೆಗೆ ವಿರುದ್ಧವಾದ ಕ್ರಮ ಇದು ಎಂದು ಕೇಂದ್ರದ ಕ್ರಮವನ್ನು ಖಂಡಿಸಿದ್ದಾರೆ.

ಒಬ್ಬ ಭಾರತೀಯನಾಗಿ ನನಗೆ ಈ ವಿಚಾರದ ಬಗ್ಗೆ ಹೆಮ್ಮೆ ಎನಿಸುವುದಿಲ್ಲ. ಪ್ರಜಾಪ್ರಭುತ್ವವನ್ನು ಅಳವಡಿಸಿಕೊಂಡ ಮೊದಲ ಪಶ್ಚಿಮೇತ್ತರ ದೇಶ ಎಂಬ ಹೆಗ್ಗಳಿಕೆಯೊಂದಿಗೆ, ಪ್ರಜಾತಾಂತ್ರಿಕ ನಡವಳಿಕೆಗಳು ಹೇಗಿರಬೇಕು ಎಂಬುದಕ್ಕೆ ಒಂದು ಮಾನದಂಡವಾಗಿ ರೂಪುಗೊಂಡಿತ್ತು ನನ್ನ ಭಾರತ. ಇದೀಗ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಈ ಕ್ರಮದಿಂದಾಗಿ ನಾವು ಆ ಘನತೆಯನ್ನೆ ಕಳೆದುಕೊಂಡಿದ್ದೇವೆ ಎಂದಿದ್ದಾರೆ ಸೇನ್. ಅದು ಕಾಶ್ಮೀರಿಗಳಿಗೆ ಸೇರಿರುವ ನೆಲದ ವಿಚಾರವಾಗಿರುವುದರಿಂದ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಕ್ಕೆ ಕಾಶ್ಮೀರಿಗರಿಗೇ ಬಿಡಬೇಕು ಎಂಬ ಮಾತನ್ನೂ ಅವರು ಹೇಳಿದ್ದಾರೆ.

ಜೊತೆಗೆ, ಜಮ್ಮು-ಕಾಶ್ಮೀರದ ರಾಜಕೀಯ ನಾಯಕರನ್ನು ಬಂಧಿಸಿದ ಮತ್ತು ಗೃಹಬಂಧನದಲ್ಲಿರಿಸಿದ ಕೇಂದ್ರ ಸರ್ಕಾರದ ಕ್ರಮವನ್ನೂ ಅವರು ಟೀಕಿಸಿದ್ದಾರೆ. ಜನರ ಪ್ರತಿನಿಧಿಗಳೆನಿಸಿದ ಜನನಾಯಕರ ದನಿಗಳನ್ನು ಕೇಳಿಸಿಕೊಳ್ಳದೆ ನೀವು ಯಾವತ್ತಿಗೂ ನ್ಯಾಯಬದ್ಧ ತೀರ್ಮಾನಕ್ಕೆ ಬರಲಾರಿರಿ ಎಂಬುದು ನನ್ನ ದೃಢವಾದ ನಂಬಿಕೆ. ಹಿಂದೆಲ್ಲ ದೇಶವನ್ನು ಮುನ್ನಡೆಸಿದ ಹಾಗೂ ಸರ್ಕಾರಗಳನ್ನು ರಚಿಸಿದಂತಹ ನಾಯಕರುಗಳನ್ನು ನೀವು ಜೈಲಿನಲ್ಲಿ ಬಂಧಿಸಿಡುವುದರ ಅಥವಾ ಗೃಹಬಂಧನದಲ್ಲಿ ಇಡುವುದರ ಮೂಲಕ ಪ್ರಜಾಪ್ರಭುತ್ವದ ಗಟ್ಟಿಗೊಳಿಸಿದ ಬೇರುಗಳ ಮೇಲೆಯೇ ದಾಳಿ ಮಾಡಿದಂತಾಗಿದೆ ಎಂದವರು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಫರೂಕ್ ಅಬ್ದುಲ್ಲಾ ಮತ್ತು ಮೆಹಬೂಬ ಮುಫ್ತಿ ಸೇರಿದಂತೆ ಪೀಪಲ್ ಕಾನ್ಫರೆನ್ಸ್‌ನ ನಾಯಕರಾದ ಸಜದ್ ಲೋನ್, ಜಮ್ಮುಕಾಶ್ಮೀರ ಪೀಪಲ್ಸ್ ಮೂವ್‌ಮೆಂಟಿನ ನಾಯಕ ಶಾ ಫೇಸಲ್, ರಾಜ್ಯ ಕಾಂಗ್ರೆಸ್ ನಾಯಕ ಗುಲಾಂ ಅಹ್ಮದ್ ಮಿರ್ ಸೇರಿದಂತೆ ಹಲವಾರು ರಾಜಕೀಯ ನಾಯಕರುಗಳನ್ನು ಗೃಹಬಂಧನದಲ್ಲಿ ಇರಿಸಲಾಗಿದೆ.

ತನ್ನ ನಿರ್ಧಾರದ ವಿರುದ್ಧ ಭುಗಿಲೇಳಲಿದ್ದ ಪ್ರತಿಭಟನೆ ಮತ್ತು ಅದರಿಂದ ಉಂಟಾಗಲಿದ್ದ ಜೀವಹಾನಿ ಹಾಗು ಆಸ್ತಿಪಾಸ್ತಿ ನಷ್ಟವನ್ನು ತಪ್ಪಿಸುವ ಸಲುವಾಗಿ ಇಡೀ ರಾಜ್ಯವನ್ನು ಬೃಹತ್ ಸೇನಾ ಹೊದಿಕೆಯಡಿ ಮುಚ್ಚಿಹಾಕಿರುವ ಕೇಂದ್ರದ ಕ್ರಮವನ್ನು ಸೇನ್‌ರವರು ವಸಾಹತುಶಾಹಿ ಪ್ರಮಾದ ಎಂದು ಕರೆದಿದ್ದಾರೆ. ಬ್ರಿಟಿಷರು ಇನ್ನೂರು ವರ್ಷ ಭಾರತವನ್ನು ಆಳಿದ್ದು ಹೀಗೇ ಅಲ್ಲವೇ ಎಂದಿದ್ದಾರೆ.

ಇದನ್ನೂ ಓದಿ: ಓಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಮತ್ತು ಶಾ ಫೈಸಲ್ ಬಂಧನದ ಹಿಂದಿನ ನಿಜ ಕಾರಣಗಳೇನು ಗೊತ್ತೆ?

ಆಗಸ್ಟ್ ೫ರಂದು ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿ, ಅದನ್ನು ಜಮ್ಮು-ಕಾಶ್ಮೀರ ಹಾಗೂ ಲಡಾಕ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತ್ತು. ಸಂಸತ್ತಿನಲ್ಲಿ ಎಂಟು ಪಕ್ಷಗಳು ಸರ್ಕಾರದ ಈ ನಡೆಯನ್ನು ವಿರೋಧಿಸಿದ್ದವು. ಆದಾಗ್ಯೂ ಕಾಂಗ್ರೆಸ್ ನಾಯಕರುಗಳಾದ ಜ್ಯೋತಿರಾದಿತ್ಯ ಸಿಂಧಿಯಾ, ಜನಾರ್ಧನ್ ದ್ವಿವೇದಿ, ಕರಣ್ ಸಿಂಗ್, ಜೈವೀರ್ ಶೆರ್ಗಿಲ್, ಮಿಲಿಂದ್ ದಿಯೋರಾ, ಅದಿತಿ ಸಿಂಗ್ ಮತ್ತು ಭುಬನೇಶ್ವರ್ ಕಲಿತಾ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...